7:00 AM Friday13 - February 2026
ಬ್ರೇಕಿಂಗ್ ನ್ಯೂಸ್
ಮಾಜಿ ಪ್ರಧಾನಿ ಎಚ್ಡಿಡಿ ಮಧ್ಯಪ್ರವೇಶ: ಕಾಫಿ ತೋಟಗಳ ಆನ್-ಲೈನ್ ಹರಾಜು ತಕ್ಷಣವೇ ಸ್ಥತಿತಗೊಳಿಸುವಂತೆ… ಕಾಲವೇ ಉತ್ತರ ಕೊಡುತ್ತೆ: ಸೋನಿಯಾ, ರಾಹುಲ್, ಪ್ರಿಯಾಂಕ ಭೇಟಿ ಬಳಿಕ ಡಿಸಿಎಂ ಡಿಕೆಶಿ… ಶಿವಣ್ಣನ ಶಿವಭಕ್ತಿ: ಶಿವರಾತ್ರಿಯ ಅಂಗವಾಗಿ 37 ವರ್ಷಗಳಿಂದ ಬೆಂಗಳೂರಿನಿಂದ ಧರ್ಮಸ್ಥಳಕ್ಕೆ ಪಾದಯಾತ್ರೆ! ದಕ್ಷಿಣ ಕೊಡಗಿನಲ್ಲಿ ಆತಂಕದ ಸೃಷ್ಟಿಸಿದ್ದ ವ್ಯಾಘ್ರ ಕೊನೆಗೂ ಸೆರೆ: ಬಲೆಗೆ ಬಿದ್ದ ಗಂಡು… ತೇಜಸ್ವಿ ಸೂರ್ಯ ಬಂಧನ ಮಾಡಿಸಿದ ಸಿದ್ದರಾಮಯ್ಯ ಪುಕ್ಕಲ ಸಿಎಂ: ಪ್ರತಾಪ್‌ ಸಿಂಹ ಕಿಡಿ ಚಿಕ್ಕಮಗಳೂರು: ಕಾಫಿ ತೋಟದ ಇಬ್ಬರು ಮಹಿಳಾ ಕಾರ್ಮಿಕರ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ… ಎಚ್ ಡಿ ಕೋಟೆ | ಕಂಚಮಳ್ಳಿ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಮೇಲೆ ಭಾರೀ… Kodagu | ಕುಶಾಲನಗರ: ರಸ್ತೆಯಲ್ಲೇ ಧಗಧಗನೆ ಹೊತ್ತಿ ಉರಿದ ಕ್ರೇಟಾ ಕಾರು; ಅದೃಷ್ಟವಶಾತ್… ಇ-ಸ್ವತ್ತು ತಂತ್ರಾಂಶದಲ್ಲಿ ಬದಲಾವಣೆ ಮೂಲಕ ಸಾರ್ವಜನಿಕರಿಗೆ ತ್ವರಿತ ಸೇವೆಗೆ ಕ್ರಮ: ಗ್ರಾಮೀಣಾಭಿವೃದ್ಧಿ ಸಚಿವ… ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ ಕೃಷ್ಣಾ ನದಿ ನೀರು; ಶೀಘ್ರವೇ ಆಂಧ್ರ ಸಿಎಂ ಜತೆ…

ಇತ್ತೀಚಿನ ಸುದ್ದಿ

ಕೂಡ್ಲಿಗಿ: ಅಡುಗೆ ಅನಿಲ ಕಾಳಸಂತೆಯಲ್ಲಿ ಮಾರಾಟ, ಅಕ್ರಮ ದಾಸ್ತಾನು; ಕರವೇ ಆರೋಪ

20/11/2021, 21:06

ವಿ.ಜಿ.ವೃಷಭೇಂದ್ರ ಕೂಡ್ಲಿಗಿ ವಿಜಯನಗರ

info.reporterkarnataka@gmail.com  

ಜಿಲ್ಲೆಯ ಕೂಡ್ಲಿಗಿ ಪಟ್ಟಣದಲ್ಲಿ ಕರ್ನಾಟಕ ರಕ್ಷಣಾ ವೇದಿಕೆ ತಾಲೂಕು ಘಟಕದಿಂದ ಅಡುಗೆ ಅನಿಲವನ್ನು ಕಾಳಸಂತೆಯಲ್ಲಿ ಹಾಗೂ ನಿಗದಿತ ದರಕ್ಕಿಂತ ಅತಿ ಹೆಚ್ಚು ದರದಲ್ಲಿ ಮಾರಾಟದಲ್ಲಿ ಮಾರಾಟ ಮಾಡಲಾಗುತ್ತಿದೆ ಎಂದು ತಾಲೂಕಾಡಳಿತಕ್ಕೆ ದೂರು ನೀಡಲಾಯಿತು.ಕನ್ನಡರಕ್ಷಣ ವೇದಿಕೆ ಅಧ್ಯಕ್ಷ ಕಾಟೇರ ಹಾಲೇಶ ನೇತೃತ್ವದಲ್ಲಿ ವಿವಿಧ ಸಂಘಟನೆಗಳ ಮುಖಂಡರು ಹಾಗೂ ಕರವೇ ಕಾಯಕರ್ತರು ತಹಶೀಲ್ದಾರ್ ಟಿ.ಜಗದೀಶ ಅವರಿಗೆ ಮನವಿ ಪತ್ರ ನೀಡಿದರು. ಈ ಸಂದರ್ಭದಲ್ಲಿ ಕಾಟೇರ ಹಾಲೇಶ ಮಾತನಾಡಿ, ಅನಿಲ ಸಿಲಿಂಡರ್ ಕಾಳಸಂತೆಯಲ್ಲಿ ಮಾರಾಟ ಮಾಡಲಾಗುತ್ತಿದೆ ಹಾಗೂ ನಿಗದಿತ ದರಕ್ಕಿಂತ ಅತಿಹೆಚ್ಚು ದರಕ್ಕೆ ಮಾರಾಟ ಮಾಡಲಾಗುತ್ತಿದೆ.

ಸಂಬಂಧಿಸಿದ ಇಲಾಖಾಧಿಕಾರಿಗಳು ಕ್ರಮ ಜರುಗಿಸಿಲ್ಲ ಎಂದು ದೂರಿದ್ದಾರೆ. 

ಪಟ್ಟಣ ಸೇರಿದಂತೆ ತಾಲೂಕಿನ ಬಹುತೇಕ ಗ್ರಾಮಗಳಲ್ಲಿ ಅನಧಿಕೃತವಾಗಿ ಅನಿಲ ತುಂಬಿದ ಸಿಲಿಂಡರ್ ಗಳನ್ನು ದಾಸ್ತಾನು ಮಾಡಲಾಗುತ್ತಿದೆ, ಈ ಮೂಲಕ ಜನರ ಜೀವದ ಜತೆ ಚೆಲ್ಲಾಟವಾಡಲಾಗುತ್ತಿದೆ ಎಂದು ಹೋರಾಟಗಾರರು ಆರೋಪಿಸಿದ್ದಾರೆ.

ಅನಿಲ ಸಿಲಿಂಡರ್ ಅಕ್ರಮ ದಾಸ್ತಾನು  ಮತ್ತು ಮಾರಾಟ ಸಾಗಾಣಿಕೆ ಪಟ್ಟಣ ಸೇರಿದಂತೆ ತಾಲೂಕಿನ ಬಹುತೇಕ ಗ್ರ‍ಾಮಗಳಲ್ಲಿ ಜರುಗುತ್ತಿದ್ದು,ಸಂಬಂಧಿಸಿದಂತೆ ಇಲಾಖಾಧಿಕಾರಿಗಳು ಬೆದರು ಗೊಂಬೆಗಳಂತೆ ವರ್ತಿಸುತ್ತಿದ್ದಾರೆ ಎಂದು ಹಾಲೇಶ ದೂರಿದ್ದಾರೆ. ಅಡುಗೆ ಅನಿಲ ಹೋಟೆಲ್ ಹಾಗೂ ಡಾಬಾ ಮತ್ತು ಖಾಸಗೀ ಯಾಗಿ ಬಳಕೆಗೆ ಮಾರಾಟ ಮಾಡಲಾಗುತ್ತಿದೆ. ಮನೆಗಳಲ್ಲಿ ಅಕ್ರಮವಾಗಿ ದಾಸ್ತಾನು ಮಾಡಲಾಗುತ್ತಿದೆ. ಅಕ್ರಮವಾಗಿ ಸಾಗಿಸಲಾಗುತ್ತಿದೆ ಹಾಗೂ ಕಾಳಸಂತೆಯಲ್ಲಿ ಮಾರಲಾಗುತ್ತಿದೆ ಎಂದು ಹೋರಾಟಗಾರರು ಆರೋಪಿಸಿದ್ದಾರೆ. ಹಾಡಹಗಲೇ ಅನಿಲ ಸಿಲಿಂಡರ್ ಅಕ್ರಮ ಸಾಗಿಸುತ್ತಿದ್ದರೂ ಯಾರೂ ಕ್ರಮ ಜರುಗಿಸಲಾಗುತ್ತಿಲ್ಲ. ಈ ವಿಷಯದಲ್ಲಿ ಅವರು ಅಕ್ರಮ ಅನಿಲ ಸಿಲಿಂಡರ್ ದಾಸ್ತಾನು ಸಾಗಾಣಿಕೆ ಮಾರಾಟದಲ್ಲಿ ಜಾಣ ಕುರುಡುತನ ತೋರಿದ್ದು,ಈ ಮೂಲಕ ಅವರೂ ಈ ದಂಧೆಗೆ ಮೌನ ಸಮ್ಮತಿ ಸೂಚಿಸಿದ್ದಾರೆ. ಅದನ್ನು ಪರೋಕ್ಷವಾಗಿ ಅವರು ಒಪ್ಪಿಕೊಂಡಂತಾಗಿದೆ ಎಂದು ಹೋರಾಟಗಾರರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. 

ಪಟ್ಟಣ ಸೇರಿದಂತೆ ತಾಲೂಕಿನೆಲ್ಲೆಡೆಗಳಲ್ಲಿ ಗಲ್ಲಿ ಗಲ್ಲಿಗಳಲ್ಲಿ ಅನಿಲ ತುಂಬಿರುವ ಸಿಲಿಂಡರ್ ಗಳನ್ನು  ಎಗ್ಗಿಲ್ಲದೇ ಸಾಗಿಸಲಾಗುತ್ತಿದೆ ಮತ್ತು ಅಕ್ರಮವಾಗಿ ದಾಸ್ತಾನು ಮಾಡಲಾಗುತ್ತಿದೆ. ಯ‍ಾವುದೇ ಸುರಕ್ಷತಾ ಕ್ರಮಗಳನ್ನು ಪಾಲಿಸದೇ ದಾಸ್ತಾನು ಮಾಡಲಾಗುತ್ತಿದ್ದು,ಇದು ಬಲು ಅಪಾಯಕಾರಿಯಾದ ಅಕ್ರಮ ದಂಧೆಯಾಗಿದೆ ಇಂತಹವರ ವಿರುದ್ಧ ಸೂಕ್ತ ಕ್ರಮ ಜರುಗಿಸಬೇಕಿದೆ ಎಂದು ದಲಿತ ಮುಖಂಡರಾದ ಗೆದ್ದಲಗಟ್ಟೆ ಹನುಮೇಶ ಒತ್ತಾಯಿಸಿದ್ದಾರೆ. ಮಾಜಿ ಸೈನಿಕ ರಮೇಶ ಸೇರಿದಂತೆ ತಾಲೂಕಿನ ವಿವಿದ ಭಾಗದ ವಿವಿದ ಸಂಘಟನೆಗಳ ಪದಾಧಿಕಾರಿಗಳು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು