3:34 AM Tuesday4 - August 2026
ಬ್ರೇಕಿಂಗ್ ನ್ಯೂಸ್
ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:… *10 ಲಕ್ಷ ರೂ. ಲಂಚಕ್ಕೆ ಬೇಡಿಕೆ; ಲೋಕಾಯುಕ್ತ ಬಲೆಗೆ ಬಿದ್ದ ಹುಣಸೂರು ಉಪವಿಭಾಗಾಧಿಕಾರಿ… ವಿಧಾನ ಪರಿಷತ್‌ ಸಭಾಪತಿ ಸ್ಥಾನಕ್ಕೆ ಬಸವರಾಜ ಹೊರಟ್ಟಿ ರಾಜೀನಾಮೆ ಸಂಪುಟ ವಿಸ್ತರಣೆ | ಕೊನೆ ಕ್ಷಣದಲ್ಲಿ 3 ಬಾರಿ ಪಟ್ಟಿ ಬದಲು: ಗಾಯತ್ರಿ… ಸಂಪುಟ ವಿಸ್ತರಣೆ | ಈ ಬಾರಿಯೂ ಕೊಡಗಿಗೆ ಒಲಿಯದ ಮಂತ್ರಿಗಿರಿ: ವಿರಾಜಪೇಟೆ ಶಾಸಕ… ಮೈಸೂರಿಗೆ ಪ್ರಧಾನಿ ಮೋದಿ: ಸ್ವಾಮಿ ವಿವೇಕಾನಂದ ಸಾಂಸ್ಕೃತಿಕ ಯುವ ಕೇಂದ್ರ ವಿವೇಕ ಸ್ಮಾರಕ… ಭಾರತದ ಭವ್ಯ ಪರಂಪರೆ ಮೈಸೂರಿನ ಕಣಕಣದಲ್ಲಿದೆ: ವಿವೇಕ ಸ್ಮಾರಕ ಉದ್ಘಾಟಿಸಿ ಪ್ರಧಾನಿ ಮೋದಿ… ಸಿದ್ದಾಪುರ: ದೇವಾಲಯ ಆವರಣದಲ್ಲಿ ಗೋರಿ ನಿರ್ಮಾಣ ಪ್ರಕರಣ; 8 ಮಂದಿ ಬಂಧನ ಕಾವೇರಿ ನೀರು ಹಂಚಿಕೆ ವಿವಾದ | ಕಾನೂನು ತಜ್ಞರು, ಪ್ರತಿಪಕ್ಷಗಳ ಸಲಹೆ ಬಳಿಕ…

ಇತ್ತೀಚಿನ ಸುದ್ದಿ

ಕೂಡ್ಲಿಗಿ: ಅಡುಗೆ ಅನಿಲ ಕಾಳಸಂತೆಯಲ್ಲಿ ಮಾರಾಟ, ಅಕ್ರಮ ದಾಸ್ತಾನು; ಕರವೇ ಆರೋಪ

20/11/2021, 21:06

ವಿ.ಜಿ.ವೃಷಭೇಂದ್ರ ಕೂಡ್ಲಿಗಿ ವಿಜಯನಗರ

info.reporterkarnataka@gmail.com  

ಜಿಲ್ಲೆಯ ಕೂಡ್ಲಿಗಿ ಪಟ್ಟಣದಲ್ಲಿ ಕರ್ನಾಟಕ ರಕ್ಷಣಾ ವೇದಿಕೆ ತಾಲೂಕು ಘಟಕದಿಂದ ಅಡುಗೆ ಅನಿಲವನ್ನು ಕಾಳಸಂತೆಯಲ್ಲಿ ಹಾಗೂ ನಿಗದಿತ ದರಕ್ಕಿಂತ ಅತಿ ಹೆಚ್ಚು ದರದಲ್ಲಿ ಮಾರಾಟದಲ್ಲಿ ಮಾರಾಟ ಮಾಡಲಾಗುತ್ತಿದೆ ಎಂದು ತಾಲೂಕಾಡಳಿತಕ್ಕೆ ದೂರು ನೀಡಲಾಯಿತು.ಕನ್ನಡರಕ್ಷಣ ವೇದಿಕೆ ಅಧ್ಯಕ್ಷ ಕಾಟೇರ ಹಾಲೇಶ ನೇತೃತ್ವದಲ್ಲಿ ವಿವಿಧ ಸಂಘಟನೆಗಳ ಮುಖಂಡರು ಹಾಗೂ ಕರವೇ ಕಾಯಕರ್ತರು ತಹಶೀಲ್ದಾರ್ ಟಿ.ಜಗದೀಶ ಅವರಿಗೆ ಮನವಿ ಪತ್ರ ನೀಡಿದರು. ಈ ಸಂದರ್ಭದಲ್ಲಿ ಕಾಟೇರ ಹಾಲೇಶ ಮಾತನಾಡಿ, ಅನಿಲ ಸಿಲಿಂಡರ್ ಕಾಳಸಂತೆಯಲ್ಲಿ ಮಾರಾಟ ಮಾಡಲಾಗುತ್ತಿದೆ ಹಾಗೂ ನಿಗದಿತ ದರಕ್ಕಿಂತ ಅತಿಹೆಚ್ಚು ದರಕ್ಕೆ ಮಾರಾಟ ಮಾಡಲಾಗುತ್ತಿದೆ.

ಸಂಬಂಧಿಸಿದ ಇಲಾಖಾಧಿಕಾರಿಗಳು ಕ್ರಮ ಜರುಗಿಸಿಲ್ಲ ಎಂದು ದೂರಿದ್ದಾರೆ. 

ಪಟ್ಟಣ ಸೇರಿದಂತೆ ತಾಲೂಕಿನ ಬಹುತೇಕ ಗ್ರಾಮಗಳಲ್ಲಿ ಅನಧಿಕೃತವಾಗಿ ಅನಿಲ ತುಂಬಿದ ಸಿಲಿಂಡರ್ ಗಳನ್ನು ದಾಸ್ತಾನು ಮಾಡಲಾಗುತ್ತಿದೆ, ಈ ಮೂಲಕ ಜನರ ಜೀವದ ಜತೆ ಚೆಲ್ಲಾಟವಾಡಲಾಗುತ್ತಿದೆ ಎಂದು ಹೋರಾಟಗಾರರು ಆರೋಪಿಸಿದ್ದಾರೆ.

ಅನಿಲ ಸಿಲಿಂಡರ್ ಅಕ್ರಮ ದಾಸ್ತಾನು  ಮತ್ತು ಮಾರಾಟ ಸಾಗಾಣಿಕೆ ಪಟ್ಟಣ ಸೇರಿದಂತೆ ತಾಲೂಕಿನ ಬಹುತೇಕ ಗ್ರ‍ಾಮಗಳಲ್ಲಿ ಜರುಗುತ್ತಿದ್ದು,ಸಂಬಂಧಿಸಿದಂತೆ ಇಲಾಖಾಧಿಕಾರಿಗಳು ಬೆದರು ಗೊಂಬೆಗಳಂತೆ ವರ್ತಿಸುತ್ತಿದ್ದಾರೆ ಎಂದು ಹಾಲೇಶ ದೂರಿದ್ದಾರೆ. ಅಡುಗೆ ಅನಿಲ ಹೋಟೆಲ್ ಹಾಗೂ ಡಾಬಾ ಮತ್ತು ಖಾಸಗೀ ಯಾಗಿ ಬಳಕೆಗೆ ಮಾರಾಟ ಮಾಡಲಾಗುತ್ತಿದೆ. ಮನೆಗಳಲ್ಲಿ ಅಕ್ರಮವಾಗಿ ದಾಸ್ತಾನು ಮಾಡಲಾಗುತ್ತಿದೆ. ಅಕ್ರಮವಾಗಿ ಸಾಗಿಸಲಾಗುತ್ತಿದೆ ಹಾಗೂ ಕಾಳಸಂತೆಯಲ್ಲಿ ಮಾರಲಾಗುತ್ತಿದೆ ಎಂದು ಹೋರಾಟಗಾರರು ಆರೋಪಿಸಿದ್ದಾರೆ. ಹಾಡಹಗಲೇ ಅನಿಲ ಸಿಲಿಂಡರ್ ಅಕ್ರಮ ಸಾಗಿಸುತ್ತಿದ್ದರೂ ಯಾರೂ ಕ್ರಮ ಜರುಗಿಸಲಾಗುತ್ತಿಲ್ಲ. ಈ ವಿಷಯದಲ್ಲಿ ಅವರು ಅಕ್ರಮ ಅನಿಲ ಸಿಲಿಂಡರ್ ದಾಸ್ತಾನು ಸಾಗಾಣಿಕೆ ಮಾರಾಟದಲ್ಲಿ ಜಾಣ ಕುರುಡುತನ ತೋರಿದ್ದು,ಈ ಮೂಲಕ ಅವರೂ ಈ ದಂಧೆಗೆ ಮೌನ ಸಮ್ಮತಿ ಸೂಚಿಸಿದ್ದಾರೆ. ಅದನ್ನು ಪರೋಕ್ಷವಾಗಿ ಅವರು ಒಪ್ಪಿಕೊಂಡಂತಾಗಿದೆ ಎಂದು ಹೋರಾಟಗಾರರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. 

ಪಟ್ಟಣ ಸೇರಿದಂತೆ ತಾಲೂಕಿನೆಲ್ಲೆಡೆಗಳಲ್ಲಿ ಗಲ್ಲಿ ಗಲ್ಲಿಗಳಲ್ಲಿ ಅನಿಲ ತುಂಬಿರುವ ಸಿಲಿಂಡರ್ ಗಳನ್ನು  ಎಗ್ಗಿಲ್ಲದೇ ಸಾಗಿಸಲಾಗುತ್ತಿದೆ ಮತ್ತು ಅಕ್ರಮವಾಗಿ ದಾಸ್ತಾನು ಮಾಡಲಾಗುತ್ತಿದೆ. ಯ‍ಾವುದೇ ಸುರಕ್ಷತಾ ಕ್ರಮಗಳನ್ನು ಪಾಲಿಸದೇ ದಾಸ್ತಾನು ಮಾಡಲಾಗುತ್ತಿದ್ದು,ಇದು ಬಲು ಅಪಾಯಕಾರಿಯಾದ ಅಕ್ರಮ ದಂಧೆಯಾಗಿದೆ ಇಂತಹವರ ವಿರುದ್ಧ ಸೂಕ್ತ ಕ್ರಮ ಜರುಗಿಸಬೇಕಿದೆ ಎಂದು ದಲಿತ ಮುಖಂಡರಾದ ಗೆದ್ದಲಗಟ್ಟೆ ಹನುಮೇಶ ಒತ್ತಾಯಿಸಿದ್ದಾರೆ. ಮಾಜಿ ಸೈನಿಕ ರಮೇಶ ಸೇರಿದಂತೆ ತಾಲೂಕಿನ ವಿವಿದ ಭಾಗದ ವಿವಿದ ಸಂಘಟನೆಗಳ ಪದಾಧಿಕಾರಿಗಳು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು