8:11 PM Tuesday8 - July 2025
ಬ್ರೇಕಿಂಗ್ ನ್ಯೂಸ್
ಪುನರ್ವಸು ಮಳೆ ಅಬ್ಬರ: ಕೊಚ್ಚಿ ಹೋಗುವ ಭೀತಿಯಲ್ಲಿ ತೀರ್ಥಹಳ್ಳಿಯ ಕುನ್ನಿಕೇವಿ ಸೇತುವೆ! ತುಂಗಾ ಕಮಾನು ಸೇತುವೆ ಮೇಲೆ ಹರಿಯುತ್ತಿದೆ ನೀರು!: ಹೆದ್ದಾರಿ ಇಂಜಿನಿಯರ್ ಗಳ ಅದ್ಬುತ… ಶೈಕ್ಷಣಿಕ ಧನ ಸಹಾಯ ಪಾವತಿಸಲು ಆಗ್ರಹಿಸಿ ಜುಲೈ 9ರಂದು ಕಟ್ಟಡ ಕಾರ್ಮಿಕರ ರಾಜ್ಯವ್ಯಾಪಿ… Kodagu | 19 ವರ್ಷದಲ್ಲಿ ದಾಖಲೆ ಸೃಷ್ಟಿಸಿದ ಹಾರಂಗಿ ಡ್ಯಾಮ್: ಜಲಾಶಯಕ್ಕೆ ಹರಿದು… Madikeri | ಕೊಡಗಿನಲ್ಲಿ ವ್ಯಾಪಕ ಅಬ್ಬರದ ಬಿರುಗಾಳಿ ಸಹಿತ ಮಳೆ: ಇಂದು ಶಾಲಾ-… ಕಾಫಿನಾಡು ಪ್ರವೇಶಿಸದಂತೆ ವಿಶ್ವ ಹಿಂದೂ ಪರಿಷತ್ ಮುಖಂಡ ಶರಣ್ ಪಂಪ್ ವೆಲ್ ಗೆ… Madikeri | ಕೊಡಗು ಜಿಲ್ಲೆ: ಜು. 6ರಿಂದ ಆಗಸ್ಟ್ 5ರ ವರೆಗೆ ಭಾರೀ… ಕೊಡವ ಸಮುದಾಯದಿಂದ ಚಿತ್ರರಂಗಕ್ಕೆ ಬಂದಿದ್ದು ನಾನೊಬ್ಬಳೇ ಎಂದ ರಶ್ಮಿಕಾಳಿಗೆ ಟೀಕೆಗಳ ಸುರಿಮಳೆ! ಮೆಟ್ರೋ ಹಳದಿ ಮಾರ್ಗ ಆಗಸ್ಟ್‌ ನಲ್ಲಿ ಸಾರ್ವಜನಿಕ ಸೇವೆಗೆ ಮುಕ್ತವಾಗದಿದ್ದರೆ ಪ್ರತಿಭಟನೆ: ಸಂಸದ… ವಿದ್ಯುತ್ ಆಘಾತಕ್ಕೆ ಯುವಕ ಬಲಿ: ಆಸ್ಪತ್ರೆಗೆ ಭೇಟಿ ನೀಡಿ ಕುಟುಂಬಕ್ಕೆ ಸಾಂತ್ವನ ಹೇಳಿದ…

ಇತ್ತೀಚಿನ ಸುದ್ದಿ

ಕೂಡ್ಲಿಗಿ: ಅಕ್ರಮಗಳಿಗೆ ಕುಮ್ಮಕ್ಕು, ಮಮೂಲಿಗಾಗಿ ಬೆದರಿಕೆ.!?; ಇಬ್ಬರು ಪೊಲೀಸರ ವಿರುದ್ಧವೇ ಎಫ್ ಐಆರ್ ದಾಖಲು

03/11/2021, 16:21

ವಿ.ಜಿ.ವೃಷಭೇಂದ್ರ ಕೂಡ್ಲಿಗಿ ವಿಜಯನಗರ

info.reporterkarnataka@gmail.com 

ಜಿಲ್ಲೆಯ ಕೂಡ್ಲಿಗಿಯಲ್ಲಿ ಅಕ್ರಮಗಳಿಗೆ ಕುಮ್ಮಕ್ಕು ನೀಡುತ್ತಿದ್ದು ಮಾಮೂಲು ಕೊಡದಿದ್ದರೆ ಕೇಸ್ ಹಾಕುವುದಾಗಿ ತಮಗೆ ಬೆದರಿಸಿದ್ದಾರೆಂದು ದೂರುದಾರ ನೀಡಿದ ಹೇಳಿಕೆಯಂತೆ ಕೂಡ್ಲಿಗಿ ಪೊಲೀಸ್ ಠಾಣೆಯ ಇಬ್ಬರು ಪೊಲೀಸರ

ವಿರುದ್ಧ ಹೊಸಪೇಟೆ ಚಿತ್ವಾಡ್ಗಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

ದೂರುದಾರ ಕೂಡ್ಲಿಗಿ ತಾಲೂಕು ಈಚಲ ಬೊಮ್ಮನಹಳ್ಳಿ ಗ್ರಾಮದ 

ಸಂತೋಷ ಅವರ ನೀಡಿದ ಹೇಳಿಕೆಯಂತೆ, ಚಿತವಾಡ್ಗಿ ಪೊಲೀಸ್ ಠಾಣೆಯಲ್ಲಿ ಕೂಡ್ಲಿಗಿ ಪೊಲೀಸ್ ಕಾನ್ ಸ್ಟೇಬಲ್ ಗಳಾದ ಪೂಜಾರಹಳ್ಳಿ ಮೂಲದ ಶರಣಪ್ಪಮತ್ತು ಬಣವಿಕಲ್ಲು ಮೂಲದ ಮಂಜುನಾಥ ಎಂಬವರ ವಿರುದ್ಧ ದೂರು ದಾಖಲಾಗಿದೆ. ಈ ಇಬ್ಬರು ಆರೋಪಿತರು ಅಕ್ರಮ ದಂಧೆಗಳಾದ ಅಕ್ರಮ ಮದ್ಯ ಮಾರಾಟ, ಮರಳು ಸಾಗಾಣಿಕೆಗೆ ಕುಮ್ಮಕ್ಕು ನೀಡಿದ್ದು, ಇದರಿಂದ ಬರುವ ಮಾಮೂಲು ವಸೂಲಿ ಮಾಡುತ್ತಾ ಮಾಮೂಲು ಕಮ್ಮಿಯಾದಲ್ಲಿ ತಕ್ಷಣ ಅಕ್ರಮದಲ್ಲಿ ಭಾಗಿಯಾದವರನ್ನು ಕರೆಸಿ ಹಣ ನೀಡದಿದ್ದರೆ ನಿಮ್ಮನ್ನು ಜೈಲಿಗೆ ಕಳುಹಿಸುತ್ತೇವೆ ಅಂತ ಬೆದರಿಸುತ್ತಾರೆಂದು. ಈ ಬಗ್ಗೆ ನ್ಯಾಯ ಕೇಳಿದರೆ ಇವರು ತನಗೆ ಬೆದರಿಕೆ ಹಾಕಿರುವುದಾಗಿ, ಅದಕ್ಕಾಗಿ ತನಗೆ ರಕ್ಷಣೆ ನೀಡಬೇಕೆಂದು ದೂರುದಾರ 

ಸಂತೋಷ ಚಿತ್ವಾಡಗಿ ಪೊಲೀಸ್ ಠಾಣೆಯಲ್ಲಿ ದೂರು  ನೀಡಿದ್ದಾರೆ. ಅವರ ಹೇಳಿಕೆಯನ್ವಯ ಕೂಡ್ಲಿಗಿ ಪೊಲೀಸ್ ಪೇದೆಗಳಾದ ಶರಣಪ್ಪ ಹಾಗೂ ಮಂಜುನಾಥರ ವಿರುದ್ಧ,ಚಿತ್ವಾಡಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು