6:42 AM Friday13 - March 2026
ಬ್ರೇಕಿಂಗ್ ನ್ಯೂಸ್
ವಿವಿಧ ಬೇಡಿಕೆ ಆಗ್ರಹಿಸಿ ರಾಜ್ಯ ಅನುಮತಿ ಪಡೆದ ವಿದ್ಯುತ್ ಗುತ್ತಿಗೆದಾರರ ಸಂಘದಿಂದ ಫ್ರೀಡಂ… ರಾಯಚೂರು | ಒಳ ಮೀಸಲಾತಿ ಹೋರಾಟ: ಪೆಟ್ರೋಲ್ ಸುರಿದುಕೊಂಡು ಯುವಕ ಆತ್ಮಹತ್ಯೆಗೆ ಯತ್ನ ಮಲೆಮಹದೇಶ್ವರ ಬೆಟ್ಟದ ರಸ್ತೆಯಲ್ಲಿ ಮತ್ತೆ ಚಿರತೆ ಪ್ರತ್ಯಕ್ಷ: ಭಕ್ತರಲ್ಲಿ ಹೆಚ್ಚಿದ ಆತಂಕ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್‌: ಮೌಲ್ಯ 10 ಪಟ್ಟು ಹೆಚ್ಚು,… ಪೆಟಾ ಮೇಲ್ಮನವಿ ವಜಾ: ರಾಜ್ಯದೆಲ್ಲೆಡೆ ಕಂಬಳ ಆಯೋಜನೆಗೆ ಸುಪ್ರೀಂ ಕೋರ್ಟ್ ಗ್ರೀನ್ ಸಿಗ್ನಲ್ ನಿಗಮಗಳಿಗೆ ಅನುದಾನ ಕಡಿತ, ಆಸ್ಪತ್ರೆಗಳಲ್ಲಿ ಔಷಧಿ ಇಲ್ಲ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಟೀಕೆ ಚಿಕ್ಕಮಗಳೂರು: ಹಸುವನ್ನು ತುಳಿದು ಕೊಂದ ಕಾಡಾನೆ; ಮಾಣಿಮಕ್ಕಿ ಗ್ರಾಮಸ್ಥರಲ್ಲಿ ಆತಂಕ ತೀರ್ಥಹಳ್ಳಿ: ಕುವೆಂಪು ಜೈವಿಕ ಅರಣ್ಯದಲ್ಲಿ ಹತ್ತಿಕೊಂಡ ಬೆಂಕಿ; ಅರಣ್ಯಾಧಿಕಾರಿಗಳ ದೌಡು ಝೂ ಅಭಿ ಇನ್ನಿಲ್ಲ: ಕಾಲು ನೋವಿನಿಂದ ಬಳಲುತ್ತಿದ್ದ ಮತ್ತಿಗೋಡು ಶಿಬಿರದ ಸಾಕಾನೆ ವಿವಿಧ ಬೇಡಿಕೆ ಆಗ್ರಹಿಸಿ ವಿದ್ಯುತ್ ಗುತ್ತಿಗೆದಾರರ ಸಂಘದಿಂದ ಮಾ.11ರಂದು ಪ್ರತಿಭಟನೆ

ಇತ್ತೀಚಿನ ಸುದ್ದಿ

ಕೂಡ್ಲಿಗಿ: ಅಕ್ರಮಗಳಿಗೆ ಕುಮ್ಮಕ್ಕು, ಮಮೂಲಿಗಾಗಿ ಬೆದರಿಕೆ.!?; ಇಬ್ಬರು ಪೊಲೀಸರ ವಿರುದ್ಧವೇ ಎಫ್ ಐಆರ್ ದಾಖಲು

03/11/2021, 16:21

ವಿ.ಜಿ.ವೃಷಭೇಂದ್ರ ಕೂಡ್ಲಿಗಿ ವಿಜಯನಗರ

info.reporterkarnataka@gmail.com 

ಜಿಲ್ಲೆಯ ಕೂಡ್ಲಿಗಿಯಲ್ಲಿ ಅಕ್ರಮಗಳಿಗೆ ಕುಮ್ಮಕ್ಕು ನೀಡುತ್ತಿದ್ದು ಮಾಮೂಲು ಕೊಡದಿದ್ದರೆ ಕೇಸ್ ಹಾಕುವುದಾಗಿ ತಮಗೆ ಬೆದರಿಸಿದ್ದಾರೆಂದು ದೂರುದಾರ ನೀಡಿದ ಹೇಳಿಕೆಯಂತೆ ಕೂಡ್ಲಿಗಿ ಪೊಲೀಸ್ ಠಾಣೆಯ ಇಬ್ಬರು ಪೊಲೀಸರ

ವಿರುದ್ಧ ಹೊಸಪೇಟೆ ಚಿತ್ವಾಡ್ಗಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

ದೂರುದಾರ ಕೂಡ್ಲಿಗಿ ತಾಲೂಕು ಈಚಲ ಬೊಮ್ಮನಹಳ್ಳಿ ಗ್ರಾಮದ 

ಸಂತೋಷ ಅವರ ನೀಡಿದ ಹೇಳಿಕೆಯಂತೆ, ಚಿತವಾಡ್ಗಿ ಪೊಲೀಸ್ ಠಾಣೆಯಲ್ಲಿ ಕೂಡ್ಲಿಗಿ ಪೊಲೀಸ್ ಕಾನ್ ಸ್ಟೇಬಲ್ ಗಳಾದ ಪೂಜಾರಹಳ್ಳಿ ಮೂಲದ ಶರಣಪ್ಪಮತ್ತು ಬಣವಿಕಲ್ಲು ಮೂಲದ ಮಂಜುನಾಥ ಎಂಬವರ ವಿರುದ್ಧ ದೂರು ದಾಖಲಾಗಿದೆ. ಈ ಇಬ್ಬರು ಆರೋಪಿತರು ಅಕ್ರಮ ದಂಧೆಗಳಾದ ಅಕ್ರಮ ಮದ್ಯ ಮಾರಾಟ, ಮರಳು ಸಾಗಾಣಿಕೆಗೆ ಕುಮ್ಮಕ್ಕು ನೀಡಿದ್ದು, ಇದರಿಂದ ಬರುವ ಮಾಮೂಲು ವಸೂಲಿ ಮಾಡುತ್ತಾ ಮಾಮೂಲು ಕಮ್ಮಿಯಾದಲ್ಲಿ ತಕ್ಷಣ ಅಕ್ರಮದಲ್ಲಿ ಭಾಗಿಯಾದವರನ್ನು ಕರೆಸಿ ಹಣ ನೀಡದಿದ್ದರೆ ನಿಮ್ಮನ್ನು ಜೈಲಿಗೆ ಕಳುಹಿಸುತ್ತೇವೆ ಅಂತ ಬೆದರಿಸುತ್ತಾರೆಂದು. ಈ ಬಗ್ಗೆ ನ್ಯಾಯ ಕೇಳಿದರೆ ಇವರು ತನಗೆ ಬೆದರಿಕೆ ಹಾಕಿರುವುದಾಗಿ, ಅದಕ್ಕಾಗಿ ತನಗೆ ರಕ್ಷಣೆ ನೀಡಬೇಕೆಂದು ದೂರುದಾರ 

ಸಂತೋಷ ಚಿತ್ವಾಡಗಿ ಪೊಲೀಸ್ ಠಾಣೆಯಲ್ಲಿ ದೂರು  ನೀಡಿದ್ದಾರೆ. ಅವರ ಹೇಳಿಕೆಯನ್ವಯ ಕೂಡ್ಲಿಗಿ ಪೊಲೀಸ್ ಪೇದೆಗಳಾದ ಶರಣಪ್ಪ ಹಾಗೂ ಮಂಜುನಾಥರ ವಿರುದ್ಧ,ಚಿತ್ವಾಡಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು