12:23 AM Wednesday29 - April 2026
ಬ್ರೇಕಿಂಗ್ ನ್ಯೂಸ್
ಉದ್ಯೋಗ ಖಾತ್ರಿ ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ವ್ಯಕ್ತಿ ಸಾವು: ಬಿಸಿಲಿನ ತಾಪಮಾನಕ್ಕೆ… ರಾಜ್ಯದಲ್ಲಿ ಹೊಸ ಕನಿಷ್ಠ ವೇತನ ಜಾರಿಗೆ ತರಲು ಯತ್ನ: ಸಂಡೂರಿನಲ್ಲಿ ಕಾರ್ಮಿಕ ಸಚಿವ… ಬಿಜೆಪಿ ಪಕ್ಷದಿಂದಲೇ ಮಹಿಳೆಯರಿಗೆ ಶೇ. 30ರಷ್ಟು ಮೀಸಲಾತಿ ಪ್ರಕಟಿಸಲಿ: ಸಚಿವ ಸಂತೋಷ್ ಲಾಡ್… Mangaluru | ಕುಕ್ಕರ್‌ ಬಾಂಬ್‌ ಸ್ಫೋಟದ ಅಪರಾಧಿಗೆ ಜೀವಾವಧಿ ಶಿಕ್ಷೆ ವಿಧಿಸಬೇಕಿತ್ತು: ಸಂತ್ರಸ್ತ… ಗಾದಿ ಪೈಪೋಟಿ | ದೆಹಲಿಗೆ ಹೋಗಲು 50 ಶಾಸಕರ ಟಿಕೆಟ್‌ ಬುಕ್ಕಿಂಗ್‌: ಕೇಂದ್ರ… Koppala | ಕುಷ್ಟಗಿಯಲ್ಲಿ ಗುಡುಗು ಸಹಿತ ಮಳೆ: ಸಿಡಿಲು ಬಡಿದು ವ್ಯಕ್ತಿ ಬಲಿ ಕೊಡಗು-ಮೈಸೂರು ರಾಜ್ಯ ಹೆದ್ದಾರಿ ಬಳಿ ಹುಲಿ ದಾಳಿಗೆ ಹಸು ಬಲಿ: ರೊಚ್ಚಿಗೆದ್ದ ಗ್ರಾಮಸ್ಥರಿಂದ… New Delhi | 228 ಪ್ರಯಾಣಿಕರಿದ್ದ ವಿಮಾನದಲ್ಲಿ ಬೆಂಕಿ: ಸ್ವಲ್ಪದರಲ್ಲೇ ತಪ್ಪಿತು ಮತ್ತೊಂದು… ಶಿಕ್ಷಕರೇ ಇಲ್ಲದ ಶಾಲೆಗಳಿಗೆ ಶೇ. 94 ಬಂದಿದ್ದು ಹೇಗೆ? ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ದೊಡ್ಡ… ತಂದೆ ಬೈದ ಕ್ಷುಲ್ಲಕ ಕಾರಣಕ್ಕೆ ಯುವತಿ ಆತ್ಮಹತ್ಯೆಗೆ ಶರಣು

ಇತ್ತೀಚಿನ ಸುದ್ದಿ

ಕೂಡ್ಲಿಗಿ: ಅಕ್ರಮಗಳಿಗೆ ಕುಮ್ಮಕ್ಕು, ಮಮೂಲಿಗಾಗಿ ಬೆದರಿಕೆ.!?; ಇಬ್ಬರು ಪೊಲೀಸರ ವಿರುದ್ಧವೇ ಎಫ್ ಐಆರ್ ದಾಖಲು

03/11/2021, 16:21

ವಿ.ಜಿ.ವೃಷಭೇಂದ್ರ ಕೂಡ್ಲಿಗಿ ವಿಜಯನಗರ

info.reporterkarnataka@gmail.com 

ಜಿಲ್ಲೆಯ ಕೂಡ್ಲಿಗಿಯಲ್ಲಿ ಅಕ್ರಮಗಳಿಗೆ ಕುಮ್ಮಕ್ಕು ನೀಡುತ್ತಿದ್ದು ಮಾಮೂಲು ಕೊಡದಿದ್ದರೆ ಕೇಸ್ ಹಾಕುವುದಾಗಿ ತಮಗೆ ಬೆದರಿಸಿದ್ದಾರೆಂದು ದೂರುದಾರ ನೀಡಿದ ಹೇಳಿಕೆಯಂತೆ ಕೂಡ್ಲಿಗಿ ಪೊಲೀಸ್ ಠಾಣೆಯ ಇಬ್ಬರು ಪೊಲೀಸರ

ವಿರುದ್ಧ ಹೊಸಪೇಟೆ ಚಿತ್ವಾಡ್ಗಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

ದೂರುದಾರ ಕೂಡ್ಲಿಗಿ ತಾಲೂಕು ಈಚಲ ಬೊಮ್ಮನಹಳ್ಳಿ ಗ್ರಾಮದ 

ಸಂತೋಷ ಅವರ ನೀಡಿದ ಹೇಳಿಕೆಯಂತೆ, ಚಿತವಾಡ್ಗಿ ಪೊಲೀಸ್ ಠಾಣೆಯಲ್ಲಿ ಕೂಡ್ಲಿಗಿ ಪೊಲೀಸ್ ಕಾನ್ ಸ್ಟೇಬಲ್ ಗಳಾದ ಪೂಜಾರಹಳ್ಳಿ ಮೂಲದ ಶರಣಪ್ಪಮತ್ತು ಬಣವಿಕಲ್ಲು ಮೂಲದ ಮಂಜುನಾಥ ಎಂಬವರ ವಿರುದ್ಧ ದೂರು ದಾಖಲಾಗಿದೆ. ಈ ಇಬ್ಬರು ಆರೋಪಿತರು ಅಕ್ರಮ ದಂಧೆಗಳಾದ ಅಕ್ರಮ ಮದ್ಯ ಮಾರಾಟ, ಮರಳು ಸಾಗಾಣಿಕೆಗೆ ಕುಮ್ಮಕ್ಕು ನೀಡಿದ್ದು, ಇದರಿಂದ ಬರುವ ಮಾಮೂಲು ವಸೂಲಿ ಮಾಡುತ್ತಾ ಮಾಮೂಲು ಕಮ್ಮಿಯಾದಲ್ಲಿ ತಕ್ಷಣ ಅಕ್ರಮದಲ್ಲಿ ಭಾಗಿಯಾದವರನ್ನು ಕರೆಸಿ ಹಣ ನೀಡದಿದ್ದರೆ ನಿಮ್ಮನ್ನು ಜೈಲಿಗೆ ಕಳುಹಿಸುತ್ತೇವೆ ಅಂತ ಬೆದರಿಸುತ್ತಾರೆಂದು. ಈ ಬಗ್ಗೆ ನ್ಯಾಯ ಕೇಳಿದರೆ ಇವರು ತನಗೆ ಬೆದರಿಕೆ ಹಾಕಿರುವುದಾಗಿ, ಅದಕ್ಕಾಗಿ ತನಗೆ ರಕ್ಷಣೆ ನೀಡಬೇಕೆಂದು ದೂರುದಾರ 

ಸಂತೋಷ ಚಿತ್ವಾಡಗಿ ಪೊಲೀಸ್ ಠಾಣೆಯಲ್ಲಿ ದೂರು  ನೀಡಿದ್ದಾರೆ. ಅವರ ಹೇಳಿಕೆಯನ್ವಯ ಕೂಡ್ಲಿಗಿ ಪೊಲೀಸ್ ಪೇದೆಗಳಾದ ಶರಣಪ್ಪ ಹಾಗೂ ಮಂಜುನಾಥರ ವಿರುದ್ಧ,ಚಿತ್ವಾಡಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು