2:34 PM Saturday8 - August 2026
ಬ್ರೇಕಿಂಗ್ ನ್ಯೂಸ್
ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:… *10 ಲಕ್ಷ ರೂ. ಲಂಚಕ್ಕೆ ಬೇಡಿಕೆ; ಲೋಕಾಯುಕ್ತ ಬಲೆಗೆ ಬಿದ್ದ ಹುಣಸೂರು ಉಪವಿಭಾಗಾಧಿಕಾರಿ…

ಇತ್ತೀಚಿನ ಸುದ್ದಿ

ಕೂಡ್ಲಿಗಿ: ಅಕ್ರಮಗಳಿಗೆ ಕುಮ್ಮಕ್ಕು, ಮಮೂಲಿಗಾಗಿ ಬೆದರಿಕೆ.!?; ಇಬ್ಬರು ಪೊಲೀಸರ ವಿರುದ್ಧವೇ ಎಫ್ ಐಆರ್ ದಾಖಲು

03/11/2021, 16:21

ವಿ.ಜಿ.ವೃಷಭೇಂದ್ರ ಕೂಡ್ಲಿಗಿ ವಿಜಯನಗರ

info.reporterkarnataka@gmail.com 

ಜಿಲ್ಲೆಯ ಕೂಡ್ಲಿಗಿಯಲ್ಲಿ ಅಕ್ರಮಗಳಿಗೆ ಕುಮ್ಮಕ್ಕು ನೀಡುತ್ತಿದ್ದು ಮಾಮೂಲು ಕೊಡದಿದ್ದರೆ ಕೇಸ್ ಹಾಕುವುದಾಗಿ ತಮಗೆ ಬೆದರಿಸಿದ್ದಾರೆಂದು ದೂರುದಾರ ನೀಡಿದ ಹೇಳಿಕೆಯಂತೆ ಕೂಡ್ಲಿಗಿ ಪೊಲೀಸ್ ಠಾಣೆಯ ಇಬ್ಬರು ಪೊಲೀಸರ

ವಿರುದ್ಧ ಹೊಸಪೇಟೆ ಚಿತ್ವಾಡ್ಗಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

ದೂರುದಾರ ಕೂಡ್ಲಿಗಿ ತಾಲೂಕು ಈಚಲ ಬೊಮ್ಮನಹಳ್ಳಿ ಗ್ರಾಮದ 

ಸಂತೋಷ ಅವರ ನೀಡಿದ ಹೇಳಿಕೆಯಂತೆ, ಚಿತವಾಡ್ಗಿ ಪೊಲೀಸ್ ಠಾಣೆಯಲ್ಲಿ ಕೂಡ್ಲಿಗಿ ಪೊಲೀಸ್ ಕಾನ್ ಸ್ಟೇಬಲ್ ಗಳಾದ ಪೂಜಾರಹಳ್ಳಿ ಮೂಲದ ಶರಣಪ್ಪಮತ್ತು ಬಣವಿಕಲ್ಲು ಮೂಲದ ಮಂಜುನಾಥ ಎಂಬವರ ವಿರುದ್ಧ ದೂರು ದಾಖಲಾಗಿದೆ. ಈ ಇಬ್ಬರು ಆರೋಪಿತರು ಅಕ್ರಮ ದಂಧೆಗಳಾದ ಅಕ್ರಮ ಮದ್ಯ ಮಾರಾಟ, ಮರಳು ಸಾಗಾಣಿಕೆಗೆ ಕುಮ್ಮಕ್ಕು ನೀಡಿದ್ದು, ಇದರಿಂದ ಬರುವ ಮಾಮೂಲು ವಸೂಲಿ ಮಾಡುತ್ತಾ ಮಾಮೂಲು ಕಮ್ಮಿಯಾದಲ್ಲಿ ತಕ್ಷಣ ಅಕ್ರಮದಲ್ಲಿ ಭಾಗಿಯಾದವರನ್ನು ಕರೆಸಿ ಹಣ ನೀಡದಿದ್ದರೆ ನಿಮ್ಮನ್ನು ಜೈಲಿಗೆ ಕಳುಹಿಸುತ್ತೇವೆ ಅಂತ ಬೆದರಿಸುತ್ತಾರೆಂದು. ಈ ಬಗ್ಗೆ ನ್ಯಾಯ ಕೇಳಿದರೆ ಇವರು ತನಗೆ ಬೆದರಿಕೆ ಹಾಕಿರುವುದಾಗಿ, ಅದಕ್ಕಾಗಿ ತನಗೆ ರಕ್ಷಣೆ ನೀಡಬೇಕೆಂದು ದೂರುದಾರ 

ಸಂತೋಷ ಚಿತ್ವಾಡಗಿ ಪೊಲೀಸ್ ಠಾಣೆಯಲ್ಲಿ ದೂರು  ನೀಡಿದ್ದಾರೆ. ಅವರ ಹೇಳಿಕೆಯನ್ವಯ ಕೂಡ್ಲಿಗಿ ಪೊಲೀಸ್ ಪೇದೆಗಳಾದ ಶರಣಪ್ಪ ಹಾಗೂ ಮಂಜುನಾಥರ ವಿರುದ್ಧ,ಚಿತ್ವಾಡಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು