8:31 PM Sunday8 - February 2026
ಬ್ರೇಕಿಂಗ್ ನ್ಯೂಸ್
ಎಚ್ ಡಿ ಕೋಟೆ | ಕಂಚಮಳ್ಳಿ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಮೇಲೆ ಭಾರೀ… Kodagu | ಕುಶಾಲನಗರ: ರಸ್ತೆಯಲ್ಲೇ ಧಗಧಗನೆ ಹೊತ್ತಿ ಉರಿದ ಕ್ರೇಟಾ ಕಾರು; ಅದೃಷ್ಟವಶಾತ್… ಇ-ಸ್ವತ್ತು ತಂತ್ರಾಂಶದಲ್ಲಿ ಬದಲಾವಣೆ ಮೂಲಕ ಸಾರ್ವಜನಿಕರಿಗೆ ತ್ವರಿತ ಸೇವೆಗೆ ಕ್ರಮ: ಗ್ರಾಮೀಣಾಭಿವೃದ್ಧಿ ಸಚಿವ… ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ ಕೃಷ್ಣಾ ನದಿ ನೀರು; ಶೀಘ್ರವೇ ಆಂಧ್ರ ಸಿಎಂ ಜತೆ… ರಾಜ್ಯ ಸರ್ಕಾರ ಎಲ್ಲ ರೈತರ ಸಾಲದ ಮೇಲಿನ ಬಡ್ಡಿ ಮನ್ನಾ ಮಾಡಲಿ: ಮಾಜಿ… NDPS ಕಾಯ್ದೆ: ಅಬಕಾರಿ ಅಧಿಕಾರಿಗಳು ವಶಪಡಿಸಿಕೊಂಡಿದ್ದ 5.71 ಕೋಟಿ ಮೌಲ್ಯದ ಮಾದಕ ವಸ್ತುಗಳು… Mangaluru | ಮೆಟ್ರೋ ದರ ಏರಿಕೆ ಬಗ್ಗೆ ಕೇಂದ್ರ ನಮ್ಮ ಅಭಿಪ್ರಾಯ ಕೇಳಿಲ್ಲ:… ಕಾಂಗ್ರೆಸ್‌ನ ಲೂಟಿ ನೋಡಿ ಗಾಂಧೀಜಿಯ ಕೈಗೆ ಕೋಲು ಬಂದಿದೆ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ರಾಜ್ಯ ಆಹಾರ ಆಯೋಗದ ಅಧ್ಯಕ್ಷರ ತಂಡದಿಂದ ವಿವಿಧೆಡೆ ದಿಢೀರ್ ಭೇಟಿ: ಪರಿಶೀಲನೆ *ಕರಾವಳಿವರೆಗೆ ವಂದೇ ಭಾರತ್ ವಿಸ್ತರಿಸುವಂತೆ ರೈಲ್ವೆ ಸಚಿವರಿಗೆ ಸಂಸದ ಶ್ರೀನಿವಾಸ ಪೂಜಾರಿ ಮನವಿ*

ಇತ್ತೀಚಿನ ಸುದ್ದಿ

ಕೂಡ್ಲಿಗಿ: ಬೀದಿ ನಾಯಿಗಳ ಹಾವಳಿ, ಪಟ್ಟಣ ಪಂಚಾಯಿತಿ ಆಡಳಿತ ನಿರ್ಲಕ್ಷ್ಯ; ನಾಗರಿಕರ ಆಕ್ರೋಶ

26/06/2022, 16:57

ವಿ.ಜಿ.ವೃಷಭೇಂದ್ರ ಕೂಡ್ಲಿಗಿ ವಿಜಯನಗರ

info.reporterkarnataka@gmail.com

ವಿಜಯನಗರ  ಜಿಲ್ಲೆ ಕೂಡ್ಲಿಗಿ ಪಟ್ಟಣದ 3ನೇ ವಾರ್ಡ್ ನಲ್ಲಿ, ಬಾಲಕನ ಮೇಲೆ ಬೀದಿನಾಯಿ ದಾಳಿಯಿಂದಾಗಿ ಬಾಲಕ ಎಮುನಪ್ಪ ತೀವ್ರ ಗಾಯಗೊಂಡಿರುವ ಹೃದಯ ವಿದ್ರಾವಕ ಘಟನೆ ಜರುಗಿದೆ. 


ನಾಯಿಗಳು ಒಟ್ಟಗೇ ದಾಳಿ ಮಾಡಿದ್ದು, ಹಂದಿಯಂತೆ ಬಾಲಕನನ್ನು ಹಿಡಿದೆಳೆದಾಡಿವೆ. ಅದೃಷ್ಟ  ಅರುಣ ಎಂಬುವರು ಬಾಲಕನನ್ನು ನಾಯಿಗಳಿಂದ ಕಾಪಾಡಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ಬಾಲಕರ ಪೋಷಕರು ಹಾಗೂ ನಾಗರೀಕರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ, ಬಯಲು ಅರ್ಕಸಾಲಿ ಪಕ್ಕೀಪ್ಪರವರ ಮಗ ಎಮುನಪ್ಪ  ಬಾಲಕ ಬೀದಿ ನಾಯಿಗಳ ದಾಳಿ ತೀವ್ರ ಗಾಯಗೊಂಡಿದ್ದಾನೆ. ಇದು ಕೇವಲ 2ನೇ ವಾರ್ಡಿನ ಸಮಸ್ಯೆ ಮಾತ್ರವಲ್ಲ, ಬೀದಿ ನಾಯಿಗಳ ಹಾವಳಿ ಪಟ್ಟಣದ ಗಲ್ಲಿ ಗಲ್ಲಿ ಗಳಲ್ಲಿದ್ದು, ನಾಗರೀಕರು ತಮ್ಮ ದೂರುಗಳನ್ನು ಸಾಕಷ್ಟು ಬಾರಿ  ಪಟ್ಟಣ ಪಂಚಾಯ್ತಿ ಗೆ ನೀಡಿದ್ದು. ನಿರ್ಲಕ್ಷ್ಯಕ್ಕೆ  ಸಂಬಂದಿಸಿದಂತೆ ನಾಗರೀಕರು ತೀವ್ರ ಆಕ್ರೋಶ ವ್ಯೆಕ್ತಪಡಿಸಿದ್ದಾರೆ. ಪಟ್ಟಣದ ಪ್ರಮುಖ ರಸ್ತೆಗಳಲ್ಲಿ ಹಾಗೂ ಪ್ರಮಖ ವೃತ್ತ ಗಳಲ್ಲಿ, ಪ್ರತಿ ಗಲ್ಲಿಗಳಲ್ಲಿ ಹತ್ತಾರು ನಾಯಿಗಳಿದ್ದು ಸಂಚಾರಕ್ಕೆ ತೀವ್ರ ಅಡತಡೆ ಯಾಗುತ್ತಿದೆ. ಕೆಲ ಗಲ್ಲಿಗಳಲ್ಲಿ ಬೀದಿ ನಾಯಿಗಳ ಹಾವಳಿ  ಮಿತಿ ಮೀರಿದ್ದು, ಮಕ್ಕಳ ಮೇಲೆ ದಾಳಿ ಮಾಡಿರುವ ಘಟನೆಗಳು ಸಾಕಷ್ಟು ಬಾರಿ ಜರುಗಿದ್ದು ತಡವಾಗಿ ಬೆಳಕಿಗೆ ಬಂದಿವೆ. ಸಂಬಂಧಿಸಿದಂತೆ ನಾಗರೀಕರು ಕೆಲ ಪಪಂ ಜನಪ್ರತಿನಿಧಿಗಳಲ್ಲಿ ತಮ್ಮ ಅಳಲನ್ನು ತೋಡಿಕೊಂಡಿದ್ದಾರೆ, ತಾವುದೇ ಪ್ರಯೋಜನವಾಗಿಲ್ಲ ಎಂದು ದೂರಿದ್ದಾರೆ. ಬೀದಿ ನಾಯಿಗಳ ಮಿತಿ ಮೀರಿದ ಹಾವಳಿಯಿಂದಾಗಿ ನಾಗರೀಕರು ತೀವ್ರ ಆತಂಕ ದಿಂದ ಜೀವಿಸುವಂತಾಗಿದೆ, ಪಟ್ಟಣ ಪಂಚಾಯ್ತಿ ಮುಖ್ಯಾಧಿಕಾರಿ ಫೀರೋಜ್ ಖಾನ್ ನಿರ್ಲಕ್ಷ್ಯ ಮನೋಭಾವ ತೋರುತ್ತಿದ್ದಾರೆ, ಇದು ಪಪಂ ಅಮಾನವೀಯ ನಡೆಯಾಗಿದೆ ಎಂದು ಕಠೋರವಾಗಿ ಖಂಡಿಸಿದ್ದಾರೆ.ಇದು ಹೀಗೆ ಮುಂದುವರೆದಲ್ಲಿ ಮಾನವ ಹಕ್ಕು ಆಯೋಗಕ್ಕೆ ದೂರು ನೀಡಲಾಗುವುದು, ಹಾಗೂ ನ್ಯಾಯಾಲಯದಲ್ಲಿ ನಾಗರೀಕ ಹಿತಾಸಕ್ತಿ ಖಾಸಗೀ ದೂರು ದಾಖಲಿಸಲಾಗುವುದೆಂದು ಕೆಲ ಸಂಘಟನೆಗಳ ಹೋರಾಟಗಾರರು ಎಚ್ಚರಿಸಿದ್ದಾರೆ.ಈ ಸಂದರ್ಭದಲ್ಲಿ ಸಿಐಟಿಯು ಮುಖಂಡ ಗುನ್ನಳ್ಳಿ ರಾಘವೇಂದ್ರ, ವಾಲ್ಮೀಕಿ ಮುಖಂಡರಾದ ಕಡ್ಡಿ ಮಂಜುನಾಥ, ಬಾಣದ ಶಿವಶಂಕರ,ಈಶಪ್ಪ,ಮಂಜುನಾಥ, ನಾಗರಾಜ, ಕುರುಬರ ಕೊಟ್ರಮ್ಮ,ವೀರಣ್ಣ, ವಂದೇ ಮಾತರಂ ಜಾಗೃತಿ ವೇದಿಕೆ ಜೂಗುಲರ ಸೊಲ್ಲೇಶ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು. 

ಇತ್ತೀಚಿನ ಸುದ್ದಿ

ಜಾಹೀರಾತು