7:50 AM Sunday30 - November 2025
ಬ್ರೇಕಿಂಗ್ ನ್ಯೂಸ್
ಮಂಗಳೂರಿನ ಫುಡ್ ಡೆಲಿವರಿ ಬಾಯ್ ನಿಂದ ಸೋಮವಾರಪೇಟೆಯಲ್ಲಿ ಸರಗಳ್ಳತನ..! Kodagu | ನೇಣು ಬಿಗಿದು ಅಪ್ರಾಪ್ತ ವಯಸ್ಸಿನ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ Tarikere | ಚಿರತೆ ದಾಳಿಗೆ ಬಾಲಕಿ ಬಲಿಯಾದ ಘಟನೆ ಮಾಸುವ ಮುನ್ನವೇ ಮತ್ತೊಂದು… Kodagu | ಹುಣಸೂರು: ರೈತರ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಸೆರೆ; ನಿಟ್ಟುಸಿರು… Udupi | ನದಿ, ವೃಕ್ಷ ಸಂರಕ್ಷಣೆ ಸೇರಿದಂತೆ ನವ ಸಂಕಲ್ಪಗಳ ಪಾಲನೆಗೆ ಪ್ರಧಾನಿ… Udupi | ಕೃಷ್ಣನಗರಿಯಲ್ಲಿ ಪ್ರಧಾನಿ ಮೋದಿಗೆ ಬೆಳ್ಳಿ ಕಡೆಗೋಲು ಕೊಡುಗೆ Udupi | ‘ಜೈ ಶ್ರೀ ಕೃಷ್ಣ’ ಎಂದು ಕನ್ನಡದಲ್ಲೇ ಭಾಷಣ ಆರಂಭಿಸಿದ ಪ್ರಧಾನಿ… ಪ್ರಧಾನಿ ಮೋದಿ ಇಂದು ಉಡುಪಿಗೆ: ಶ್ರೀಕೃಷ್ಣ ಮಠದ ಲಕ್ಷ ಕಂಠ ಗೀತಾ ಪಾರಾಯಣದಲ್ಲಿ… ಉಡುಪಿಗೆ ಪ್ರಧಾನಿ ಭೇಟಿ: ಎಸ್‌ಪಿಜಿ ಜತೆಗೆ ಖಾಕಿ ಸರ್ಪಗಾವಲು: ನಿಗದಿತ ಸಮಯಕ್ಕೆ ಮುಂಚಿತವಾಗಿಯೇ… ಶಾಲೆಯಂಗಳದಲ್ಲಿ ತಾರಾಲಯ: ಗ್ರಾಮೀಣ ಮಕ್ಕಳಲ್ಲಿ ಖಗೋಳ ವಿಜ್ಞಾನ ಕೌತುಕ ಬಿತ್ತುವ ಗುರಿ; ಮುಖ್ಯಮಂತ್ರಿ…

ಇತ್ತೀಚಿನ ಸುದ್ದಿ

ಕೂಡ್ಲಗಿ ಬಸ್ ನಿಲ್ದಾಣದಲ್ಲಿ 1 ವರ್ಷದಿಂದ ವಾಸವಾಗಿರುವ ಅನಾಥನ ರಕ್ಷಿಸಿದ ಪೊಲೀಸರು; ಅನಾಥಾಶ್ರಮಕ್ಕೆ ಸೇರ್ಪಡೆ

13/09/2021, 09:41

ವಿ.ಜಿ.ವೃಷಭೇಂದ್ರ ಕೂಡ್ಲಿಗಿ ವಿಜಯನಗರ

info.reporterkarnataka@gmail.com

ಜಿಲ್ಲೆಯ ಕೂಡ್ಲಿಗಿ ಪಟ್ಟಣದ ಬಸ್ ನಿಲ್ದಾಣದಲ್ಲಿ ವರ್ಷಗಳಿಂದ ವಾಸವಿದ್ದ ತಮಿಳುನಾಡು ಮೂಲದ ಅನಾಥನನ್ನು ಕೂಡ್ಲಿಗಿ ಡಿವೈಎಸ್ಪಿ ಹರೀಶ್ ನಿರ್ದೇಶನದ ಮೇರೆಗೆ  ಸಿಪಿಐ ವಸಂತ ಅಸೋದೆ ಹಾಗೂ ಪಿಎಸ್ಐ ಶರತ್ ನೇತೃತ್ವದಲ್ಲಿ ಪೊಲೀಸ್ ರು ಸಿಂಧನೂರಿನ ಕರಣಾ ಆಶ್ರಮಕ್ಕೆ ಸೇರಿಸಿದ್ದಾರೆ.

ಪೊಲೀಸರು ನಿಯಮಾನುಸಾರ ತಮಿಳುನಾಡು ಮೂಲದ ಸುಮಾರು 50 ವಯಸ್ಸಿನ ಅನಾಥ ವ್ಯಕ್ತಿಯನ್ನು ರಕ್ಷಿಸಿ ಆತನಿಗೆ ಹೊಸ ಉಡುಪುಗಳನ್ನು ನೀಡಿ ಸತ್ಕರಿಸಿ ಮಾನವೀಯತೆ ಮೆರೆದಿದ್ದಾರೆ.

ಅನಾಥನನ್ನು ಸಿಂಧನೂರಿನ ಕರುಣಾ ಅನಾಥಾಶ್ರಮಕ್ಕೆ ಕಳುಹಿಸಿಕೊಟ್ಟಿದ್ದಾರೆ. ಈ ಮೂಲಕ ಅನಾಥನನ್ನು ರಕ್ಷಣೆ ಮಾಡಿ ಆಶ್ರಯ ಕಲ್ಪಿಸುವಲ್ಲಿ ಕಾಳಜಿ ವಹಿಸಿ ಅನಾಥನ ಪಾಲಿಗೆ ಆಪ್ತ ರಕ್ಷಕರಾಗಿದ್ದಾರೆ ಪೊಲೀಸರು. ಇತ್ತೀಚೆಗೆ ಅನಾಮಧೇಯ ಶವ ಪತ್ತೆ ಪ್ರಕರಣಗಳು ಬೆಳಕಿಗೆ ಬರುತ್ತಿದ್ದು,ಅನಾಥರಿಗೆ ಅನಾಥಾಶ್ರಮದಲ್ಲಿ ಆಶ್ರಯ ಕಲ್ಪಿಸುವುದರಿಂದಾಗಿ ಪ್ರಕರಣಗಳನ್ನು ತಗ್ಗಿಸಬಹುದಾಗಿದೆ. ಈ ನಿಟ್ಟಿನಲ್ಲಿ ತಾವು ಹಾಗೂ ತಮ್ಮ ಸಿಬ್ಬಂದಿ ಪ್ರಾಮಾಣಿಕ ಪ್ರಯತ್ನ ನಡೆಸಿದ್ದು, ಇಲಾಖೆಯೊಂದಿಗೆ ಸಾರ್ವಜನಿಕರ ಸಹಕಾರ ತುಂಬ‍ಾ ಮುಖ್ಯವಾಗಿದೆ ಎಂದು ಸಿಪಿಐ ವಸಂತ ಅಸೋದೆ ತಿಳಿಸಿದ್ದಾರೆ. 

ನಾಗರೀಕ ಹಿತರಕ್ಷಣಾ ವೇದಿಕೆ ಅಧ್ಯಕ್ಷ ವಾಲ್ಮೀಕಿ ಮುಖಂಡ  ಹಾಗೂ ಪಪಂ ಸದಸ್ಯರಾದ ಕಾವಲ್ಲಿ ಶಿವಪ್ಪನಾಯಕ ಮಾತನಾಡಿ, ಎಲ್ಲಿಯಾದರೂ ಯಾರೇ ಅನಾಥರು ಹಾಗೂ ಬುದ್ಧಿಮಾಂಧ್ಯರು  ಕಂಡು ಬಂದಲ್ಲಿ ಅಥವಾ ಅನಾಥ ವೃದ್ಧರು ಕಂಡುಬಂದಲ್ಲಿ, ಶೀಘ್ರವಾಗಿ ಹತ್ತಿರ  ಆಶ್ರಮವನ್ನು ಸಂಪರ್ಕಿಸಬಹುದಾಗಿದೆ ಅಥವಾ ಪೊಲೀಸ್ ಠಾಣೆಗೆ ಮಾಹಿತಿ ನೀಡಬೇಕಿದೆ. ದೂರವಾಣಿ ಮೂಲಕ ಸಂಪರ್ಕಿಸಿ ರಕ್ಷಿಸಬೇಕಿದೆ. ಈ ಮೂಲಕ ಹಿರಿಯ ನಾಗರೀಕರನ್ನ ಬುದ್ದಿಮಾಂಧ್ಯರನ್ನು ರಕ್ಷಿಸಬೇಕು ಹಾಗೂ ಅಪರಾಧ ನಿಯಂತ್ರಿಸುವಲ್ಲಿ ಪೊಲೀಸರೊಂದಿಗೆ ಎಲ್ಲರೂ ಸಹಕರಿಸಬೇಕು ಎಂದು ಅವರು ಕೋರಿದರು.

ಈ ಸಂದರ್ಭದಲ್ಲಿ ಹೊಟೇಲ್ ಮಾಲೀಕ ಬಾಲರಾಜಪ್ಪ, ಮುಖ್ಯ ಪೊಲೀಸ್ ಪೇದೆ ಸತ್ಯಪ್ಪ, ಸಿಂಧನೂರಿನ ಕರುಣಾ ಆಶ್ರಮದ ಸ್ವಯಂ ಸೇವಕ ಪಂಪಯ್ಯಸ್ವಾಮಿ ಸೇರಿದಂತೆ ಆಸ್ರಮದ ಸಿಬ್ಬಂದಿ ಹಾಗೂ ಕೂಡ್ಲಿಗಿ ಪೊಲೀಸ್ ಸಿಬ್ಬಂದಿ ಹಾಗೂ ನಾಗರೀಕರು ಇದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು