8:06 PM Sunday22 - September 2024
ಬ್ರೇಕಿಂಗ್ ನ್ಯೂಸ್
ಮೂಡಿಗೆರೆ: ಚಾಲಕನ ನಿಯಂತ್ರಣ ತಪ್ಪಿ 30 ಅಡಿ ಎತ್ತರದಿಂದ ಗ್ರಾಪಂ ಆವರಣಕ್ಕೆ ಕಾರು… ವಿಶ್ವ ವಿಜ್ಞಾನಿಗಳ ಪಟ್ಟಿ: ಬಳ್ಳಾರಿಯ ವಿಎಸ್‌ಕೆಯುನ ಮೂವರು ಪ್ರಾಧ್ಯಾಪಕರಿಗೆ ಸ್ಥಾನ ​ ಸರಕಾರದ ನೇಮಕಾತಿಯಲ್ಲಿ ಮೀಸಲಾತಿ ಪರಿಗಣಿಸಿ: ಪಂಪಾಪತಿ ಆಗ್ರಹ ನಂಜನಗೂಡು: 20 ಕೋಟಿ ರೂಪಾಯಿ ವೆಚ್ಚದ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಶಾಸಕರಿಂದ ಚಾಲನೆ ಬೆಂಗಳೂರಿನ ಇಸ್ಕಾನ್ ಶ್ರೀರಾಧಾಕೃಷ್ಣ ದೇವಸ್ಥಾನದಲ್ಲಿ ಬಾಲ್ಯದ ಕ್ಯಾನ್ಸರ್ ಜಾಗೃತಿ ಮಾಸಕ್ಕೆ ಚಿನ್ನದ ಹೊಳಪು ತೀರ್ಥಹಳ್ಳಿ: ಹಿಂದೂ- ಮುಸ್ಲಿಂ ಸೌಹಾರ್ದತೆಗೆ ಸಾಕ್ಷಿಯಾದ ಛತ್ರಕೇರಿ ಗಣೇಶೋತ್ಸವ ಶೋಭಾಯಾತ್ರೆ ಮಿಸ್ಟರ್ ಕರಾವಳಿ, ಮಿಸ್ ಕರಾವಳಿ ಪ್ರಶಸ್ತಿ ರಂಜಿತ್ ಗಾಣಿಗ ಹಾಗೂ ರಿಷಾ ಟಾನ್ಯಾ… ಮೇಯರ್ ಆಯ್ಕೆ ಸಭೆಯಲ್ಲಿ ಬಿಜೆಪಿ- ಕಾಂಗ್ರೆಸ್ ವಾಕ್ಸಮರ: ಕೊನೆಗೆ ನಿರಾಳ, ಕೂಲ್ ಕೂಲ್!! ತೀರ್ಥಹಳ್ಳಿ: ಸರ್ವಧರ್ಮ ಸಮನ್ವಯತೆಯಲ್ಲಿ ಸಂಭ್ರಮ- ಸಡಗರದ ಈದ್ ಮಿಲಾದ್ ಆಚರಣೆ ನಂಜನಗೂಡು: ಮುನಿರತ್ನ ವಿರುದ್ಧ ಜನ ಸಂಗ್ರಾಮ ಪರಿಷತ್ ಪ್ರತಿಭಟನೆ: ಶಾಸಕ ಸ್ಥಾನದಿಂದ ವಜಾಗೊಳಿಸಲು…

ಇತ್ತೀಚಿನ ಸುದ್ದಿ

ಕೂಡ್ಲಗಿ ಬಸ್ ನಿಲ್ದಾಣದಲ್ಲಿ 1 ವರ್ಷದಿಂದ ವಾಸವಾಗಿರುವ ಅನಾಥನ ರಕ್ಷಿಸಿದ ಪೊಲೀಸರು; ಅನಾಥಾಶ್ರಮಕ್ಕೆ ಸೇರ್ಪಡೆ

13/09/2021, 09:41

ವಿ.ಜಿ.ವೃಷಭೇಂದ್ರ ಕೂಡ್ಲಿಗಿ ವಿಜಯನಗರ

info.reporterkarnataka@gmail.com

ಜಿಲ್ಲೆಯ ಕೂಡ್ಲಿಗಿ ಪಟ್ಟಣದ ಬಸ್ ನಿಲ್ದಾಣದಲ್ಲಿ ವರ್ಷಗಳಿಂದ ವಾಸವಿದ್ದ ತಮಿಳುನಾಡು ಮೂಲದ ಅನಾಥನನ್ನು ಕೂಡ್ಲಿಗಿ ಡಿವೈಎಸ್ಪಿ ಹರೀಶ್ ನಿರ್ದೇಶನದ ಮೇರೆಗೆ  ಸಿಪಿಐ ವಸಂತ ಅಸೋದೆ ಹಾಗೂ ಪಿಎಸ್ಐ ಶರತ್ ನೇತೃತ್ವದಲ್ಲಿ ಪೊಲೀಸ್ ರು ಸಿಂಧನೂರಿನ ಕರಣಾ ಆಶ್ರಮಕ್ಕೆ ಸೇರಿಸಿದ್ದಾರೆ.

ಪೊಲೀಸರು ನಿಯಮಾನುಸಾರ ತಮಿಳುನಾಡು ಮೂಲದ ಸುಮಾರು 50 ವಯಸ್ಸಿನ ಅನಾಥ ವ್ಯಕ್ತಿಯನ್ನು ರಕ್ಷಿಸಿ ಆತನಿಗೆ ಹೊಸ ಉಡುಪುಗಳನ್ನು ನೀಡಿ ಸತ್ಕರಿಸಿ ಮಾನವೀಯತೆ ಮೆರೆದಿದ್ದಾರೆ.

ಅನಾಥನನ್ನು ಸಿಂಧನೂರಿನ ಕರುಣಾ ಅನಾಥಾಶ್ರಮಕ್ಕೆ ಕಳುಹಿಸಿಕೊಟ್ಟಿದ್ದಾರೆ. ಈ ಮೂಲಕ ಅನಾಥನನ್ನು ರಕ್ಷಣೆ ಮಾಡಿ ಆಶ್ರಯ ಕಲ್ಪಿಸುವಲ್ಲಿ ಕಾಳಜಿ ವಹಿಸಿ ಅನಾಥನ ಪಾಲಿಗೆ ಆಪ್ತ ರಕ್ಷಕರಾಗಿದ್ದಾರೆ ಪೊಲೀಸರು. ಇತ್ತೀಚೆಗೆ ಅನಾಮಧೇಯ ಶವ ಪತ್ತೆ ಪ್ರಕರಣಗಳು ಬೆಳಕಿಗೆ ಬರುತ್ತಿದ್ದು,ಅನಾಥರಿಗೆ ಅನಾಥಾಶ್ರಮದಲ್ಲಿ ಆಶ್ರಯ ಕಲ್ಪಿಸುವುದರಿಂದಾಗಿ ಪ್ರಕರಣಗಳನ್ನು ತಗ್ಗಿಸಬಹುದಾಗಿದೆ. ಈ ನಿಟ್ಟಿನಲ್ಲಿ ತಾವು ಹಾಗೂ ತಮ್ಮ ಸಿಬ್ಬಂದಿ ಪ್ರಾಮಾಣಿಕ ಪ್ರಯತ್ನ ನಡೆಸಿದ್ದು, ಇಲಾಖೆಯೊಂದಿಗೆ ಸಾರ್ವಜನಿಕರ ಸಹಕಾರ ತುಂಬ‍ಾ ಮುಖ್ಯವಾಗಿದೆ ಎಂದು ಸಿಪಿಐ ವಸಂತ ಅಸೋದೆ ತಿಳಿಸಿದ್ದಾರೆ. 

ನಾಗರೀಕ ಹಿತರಕ್ಷಣಾ ವೇದಿಕೆ ಅಧ್ಯಕ್ಷ ವಾಲ್ಮೀಕಿ ಮುಖಂಡ  ಹಾಗೂ ಪಪಂ ಸದಸ್ಯರಾದ ಕಾವಲ್ಲಿ ಶಿವಪ್ಪನಾಯಕ ಮಾತನಾಡಿ, ಎಲ್ಲಿಯಾದರೂ ಯಾರೇ ಅನಾಥರು ಹಾಗೂ ಬುದ್ಧಿಮಾಂಧ್ಯರು  ಕಂಡು ಬಂದಲ್ಲಿ ಅಥವಾ ಅನಾಥ ವೃದ್ಧರು ಕಂಡುಬಂದಲ್ಲಿ, ಶೀಘ್ರವಾಗಿ ಹತ್ತಿರ  ಆಶ್ರಮವನ್ನು ಸಂಪರ್ಕಿಸಬಹುದಾಗಿದೆ ಅಥವಾ ಪೊಲೀಸ್ ಠಾಣೆಗೆ ಮಾಹಿತಿ ನೀಡಬೇಕಿದೆ. ದೂರವಾಣಿ ಮೂಲಕ ಸಂಪರ್ಕಿಸಿ ರಕ್ಷಿಸಬೇಕಿದೆ. ಈ ಮೂಲಕ ಹಿರಿಯ ನಾಗರೀಕರನ್ನ ಬುದ್ದಿಮಾಂಧ್ಯರನ್ನು ರಕ್ಷಿಸಬೇಕು ಹಾಗೂ ಅಪರಾಧ ನಿಯಂತ್ರಿಸುವಲ್ಲಿ ಪೊಲೀಸರೊಂದಿಗೆ ಎಲ್ಲರೂ ಸಹಕರಿಸಬೇಕು ಎಂದು ಅವರು ಕೋರಿದರು.

ಈ ಸಂದರ್ಭದಲ್ಲಿ ಹೊಟೇಲ್ ಮಾಲೀಕ ಬಾಲರಾಜಪ್ಪ, ಮುಖ್ಯ ಪೊಲೀಸ್ ಪೇದೆ ಸತ್ಯಪ್ಪ, ಸಿಂಧನೂರಿನ ಕರುಣಾ ಆಶ್ರಮದ ಸ್ವಯಂ ಸೇವಕ ಪಂಪಯ್ಯಸ್ವಾಮಿ ಸೇರಿದಂತೆ ಆಸ್ರಮದ ಸಿಬ್ಬಂದಿ ಹಾಗೂ ಕೂಡ್ಲಿಗಿ ಪೊಲೀಸ್ ಸಿಬ್ಬಂದಿ ಹಾಗೂ ನಾಗರೀಕರು ಇದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು