5:12 PM Thursday18 - June 2026
ಬ್ರೇಕಿಂಗ್ ನ್ಯೂಸ್
ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ… ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ… ದೆಹಲಿ ಮಟ್ಟದಲ್ಲಿ ಹೈವೋಲ್ಟೇಜ್ ಸಂಧಾನ: ಬೆಂಗಳೂರು ಅಭಿವೃದ್ಧಿ ಸಚಿವರಾಗಿ ಕೃಷ್ಣ ಬೈರೇಗೌಡ ಅಧಿಕಾರ… ತೀರ್ಪು ಮುನ್ನವೇ ಶಂಕಿತ ಉಗ್ರ ಕೊಡಗು ಮೂಲದ ಅಬ್ದುಲ್ ಖಾದರ್ ಸಾವು ಮೈಸೂರು ದುರಂತ: ಅಕ್ರಮ ಪಬ್, ಬಾರ್, ರೆಸ್ಟೋರೆಂಟ್‌ಗಳ ಮೇಲೆ ಕ್ರಮ: ಸಚಿವ ಡಾ.… ವಿಜಯಪುರ | ಭೀಕರ ರಸ್ತೆ ಅಪಘಾತ: ಟಿಪ್ಪರ್-ಬಸ್ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ 3… ವಿರಾಜಪೇಟೆ ಸಮೀಪದ ರೆಸಾರ್ಟ್ ಈಜುಕೋಳದಲ್ಲಿ ಬಿದ್ದು ಗೋವಾದ ಪ್ರವಾಸಿಗ ಸಾವು

ಇತ್ತೀಚಿನ ಸುದ್ದಿ

ಕೂಡ್ಲಗಿ ಬಸ್ ನಿಲ್ದಾಣದಲ್ಲಿ 1 ವರ್ಷದಿಂದ ವಾಸವಾಗಿರುವ ಅನಾಥನ ರಕ್ಷಿಸಿದ ಪೊಲೀಸರು; ಅನಾಥಾಶ್ರಮಕ್ಕೆ ಸೇರ್ಪಡೆ

13/09/2021, 09:41

ವಿ.ಜಿ.ವೃಷಭೇಂದ್ರ ಕೂಡ್ಲಿಗಿ ವಿಜಯನಗರ

info.reporterkarnataka@gmail.com

ಜಿಲ್ಲೆಯ ಕೂಡ್ಲಿಗಿ ಪಟ್ಟಣದ ಬಸ್ ನಿಲ್ದಾಣದಲ್ಲಿ ವರ್ಷಗಳಿಂದ ವಾಸವಿದ್ದ ತಮಿಳುನಾಡು ಮೂಲದ ಅನಾಥನನ್ನು ಕೂಡ್ಲಿಗಿ ಡಿವೈಎಸ್ಪಿ ಹರೀಶ್ ನಿರ್ದೇಶನದ ಮೇರೆಗೆ  ಸಿಪಿಐ ವಸಂತ ಅಸೋದೆ ಹಾಗೂ ಪಿಎಸ್ಐ ಶರತ್ ನೇತೃತ್ವದಲ್ಲಿ ಪೊಲೀಸ್ ರು ಸಿಂಧನೂರಿನ ಕರಣಾ ಆಶ್ರಮಕ್ಕೆ ಸೇರಿಸಿದ್ದಾರೆ.

ಪೊಲೀಸರು ನಿಯಮಾನುಸಾರ ತಮಿಳುನಾಡು ಮೂಲದ ಸುಮಾರು 50 ವಯಸ್ಸಿನ ಅನಾಥ ವ್ಯಕ್ತಿಯನ್ನು ರಕ್ಷಿಸಿ ಆತನಿಗೆ ಹೊಸ ಉಡುಪುಗಳನ್ನು ನೀಡಿ ಸತ್ಕರಿಸಿ ಮಾನವೀಯತೆ ಮೆರೆದಿದ್ದಾರೆ.

ಅನಾಥನನ್ನು ಸಿಂಧನೂರಿನ ಕರುಣಾ ಅನಾಥಾಶ್ರಮಕ್ಕೆ ಕಳುಹಿಸಿಕೊಟ್ಟಿದ್ದಾರೆ. ಈ ಮೂಲಕ ಅನಾಥನನ್ನು ರಕ್ಷಣೆ ಮಾಡಿ ಆಶ್ರಯ ಕಲ್ಪಿಸುವಲ್ಲಿ ಕಾಳಜಿ ವಹಿಸಿ ಅನಾಥನ ಪಾಲಿಗೆ ಆಪ್ತ ರಕ್ಷಕರಾಗಿದ್ದಾರೆ ಪೊಲೀಸರು. ಇತ್ತೀಚೆಗೆ ಅನಾಮಧೇಯ ಶವ ಪತ್ತೆ ಪ್ರಕರಣಗಳು ಬೆಳಕಿಗೆ ಬರುತ್ತಿದ್ದು,ಅನಾಥರಿಗೆ ಅನಾಥಾಶ್ರಮದಲ್ಲಿ ಆಶ್ರಯ ಕಲ್ಪಿಸುವುದರಿಂದಾಗಿ ಪ್ರಕರಣಗಳನ್ನು ತಗ್ಗಿಸಬಹುದಾಗಿದೆ. ಈ ನಿಟ್ಟಿನಲ್ಲಿ ತಾವು ಹಾಗೂ ತಮ್ಮ ಸಿಬ್ಬಂದಿ ಪ್ರಾಮಾಣಿಕ ಪ್ರಯತ್ನ ನಡೆಸಿದ್ದು, ಇಲಾಖೆಯೊಂದಿಗೆ ಸಾರ್ವಜನಿಕರ ಸಹಕಾರ ತುಂಬ‍ಾ ಮುಖ್ಯವಾಗಿದೆ ಎಂದು ಸಿಪಿಐ ವಸಂತ ಅಸೋದೆ ತಿಳಿಸಿದ್ದಾರೆ. 

ನಾಗರೀಕ ಹಿತರಕ್ಷಣಾ ವೇದಿಕೆ ಅಧ್ಯಕ್ಷ ವಾಲ್ಮೀಕಿ ಮುಖಂಡ  ಹಾಗೂ ಪಪಂ ಸದಸ್ಯರಾದ ಕಾವಲ್ಲಿ ಶಿವಪ್ಪನಾಯಕ ಮಾತನಾಡಿ, ಎಲ್ಲಿಯಾದರೂ ಯಾರೇ ಅನಾಥರು ಹಾಗೂ ಬುದ್ಧಿಮಾಂಧ್ಯರು  ಕಂಡು ಬಂದಲ್ಲಿ ಅಥವಾ ಅನಾಥ ವೃದ್ಧರು ಕಂಡುಬಂದಲ್ಲಿ, ಶೀಘ್ರವಾಗಿ ಹತ್ತಿರ  ಆಶ್ರಮವನ್ನು ಸಂಪರ್ಕಿಸಬಹುದಾಗಿದೆ ಅಥವಾ ಪೊಲೀಸ್ ಠಾಣೆಗೆ ಮಾಹಿತಿ ನೀಡಬೇಕಿದೆ. ದೂರವಾಣಿ ಮೂಲಕ ಸಂಪರ್ಕಿಸಿ ರಕ್ಷಿಸಬೇಕಿದೆ. ಈ ಮೂಲಕ ಹಿರಿಯ ನಾಗರೀಕರನ್ನ ಬುದ್ದಿಮಾಂಧ್ಯರನ್ನು ರಕ್ಷಿಸಬೇಕು ಹಾಗೂ ಅಪರಾಧ ನಿಯಂತ್ರಿಸುವಲ್ಲಿ ಪೊಲೀಸರೊಂದಿಗೆ ಎಲ್ಲರೂ ಸಹಕರಿಸಬೇಕು ಎಂದು ಅವರು ಕೋರಿದರು.

ಈ ಸಂದರ್ಭದಲ್ಲಿ ಹೊಟೇಲ್ ಮಾಲೀಕ ಬಾಲರಾಜಪ್ಪ, ಮುಖ್ಯ ಪೊಲೀಸ್ ಪೇದೆ ಸತ್ಯಪ್ಪ, ಸಿಂಧನೂರಿನ ಕರುಣಾ ಆಶ್ರಮದ ಸ್ವಯಂ ಸೇವಕ ಪಂಪಯ್ಯಸ್ವಾಮಿ ಸೇರಿದಂತೆ ಆಸ್ರಮದ ಸಿಬ್ಬಂದಿ ಹಾಗೂ ಕೂಡ್ಲಿಗಿ ಪೊಲೀಸ್ ಸಿಬ್ಬಂದಿ ಹಾಗೂ ನಾಗರೀಕರು ಇದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು