9:17 PM Saturday2 - May 2026
ಬ್ರೇಕಿಂಗ್ ನ್ಯೂಸ್
ಅಂಜನಾದ್ರಿ ದರ್ಶನಕ್ಕೆ ಹೊರಟಿದ್ದ ಭಕ್ತರ ವಾಹನದ ಟಯರ್ ಬ್ಲಾಸ್ಟ್: ಓರ್ವ ಸಾವು, 7… ಶೃಂಗೇರಿ ವಿಧಾನಸಭಾ ಕ್ಷೇತ್ರ: ಮರು ಮತ ಎಣಿಕೆಯಲ್ಲೂ ಕಾಂಗ್ರೆಸ್ ಶಾಸಕ ಟಿ.ಡಿ. ರಾಜೇಗೌಡಗೆ… ರಾಜ್ಯದಲ್ಲಿರುವ ಹೊರ ರಾಜ್ಯ ನೋಂದಣಿ ವಾಹನಗಳಿಗೆ ಹೊಸ ತೆರಿಗೆ: ಸುಗ್ರೀವಾಜ್ಞೆ ಜಾರಿ ಕೃಷಿ ಅಧಿಕಾರಿಗಳ ದಾಳಿ: ಅಕ್ರಮ ಯೂರಿಯಾ ದಾಸ್ತಾನು ಪತ್ತೆ; 399 ಬ್ಯಾಗ್ ರಸಗೊಬ್ಬರ… ಜ್ಯುವೆಲ್ಲರಿ ಶಾಪ್ ಗೋಡೆ ಕೊರೆದು 1.20 ಕೋಟಿ ರೂಪಾಯಿ ಮೌಲ್ಯದ ಬೆಳ್ಳಿ ಆಭರಣ,… Mangaluru | ಪರಪ್ಪನ ಅಗ್ರಹಾರ ಜೈಲ್ ನಲ್ಲಿ ಕೈದಿಯಿಂದ ಮೊಬೈಲ್ ನಲ್ಲೇ ಪತ್ನಿಯ… ಮಗಳ ಮದುವೆ ಸಾಲ ತೀರಿಸಲು ಅಳಿಯನ ಮನೆಗೆ ಅತ್ತೆ ಕನ್ನ: 110 ಗ್ರಾಂ… ಹೇಮಾವತಿ ನಾಲೆಗೆ ಉರುಳಿ ಬಿದ್ದ ಕಾರು: ತಾಯಿ- ಮಗು ಸಾವು; ಧರ್ಮಸ್ಥಳದಿಂದ ದೇವನಹಳ್ಳಿಗೆ… ಧಾರವಾಡದಲ್ಲಿ ಟಿಬೇಟಿಯನ್ ಬಿಕ್ಕು ಹತ್ಯೆ: ಬೇರೆ ಕಡೆ ಕೊಲೆ ಮಾಡಿ ಎಸೆದಿರುವ ಶಂಕೆ ಉದ್ಯೋಗ ಖಾತ್ರಿ ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ವ್ಯಕ್ತಿ ಸಾವು: ಬಿಸಿಲಿನ ತಾಪಮಾನಕ್ಕೆ…

ಇತ್ತೀಚಿನ ಸುದ್ದಿ

ಕೂಡ್ಲಿಗಿ: ಡಾ. ಬಿ.ಆರ್.ಅಂಬೇಡ್ಕರ್ ವಸತಿ ನಿಲಯದ ವಿದ್ಯಾರ್ಥಿಗಳಲ್ಲಿ ವಾಂತಿ ಬೇಧಿ.!?

22/11/2023, 12:47

ವಿ.ಜಿ.ವೃಷಭೇಂದ್ರ ಕೂಡ್ಲಿಗಿ ವಿಜಯನಗರ

info.reporterkarnataka.com

ವಿಜಯನಗರ ಜಿಲ್ಲೆ ಕೂಡ್ಲಿಗಿ ಪಟ್ಟಣದಲ್ಲಿನ ಕೆಲ ಹಾಸ್ಟೆಲ್ ಗಳಲ್ಲಿ ವಾಂತಿ ಬೇದಿ ಪ್ರಕರಣ ಕಂಡು ಬಂದಿದ್ದು, ಮಾಹಿತಿ ತೀರ‍ಾ ತಡವಾಗಿ ಬೆಳಕಿಗೆ ಬಂದಿದೆ.

ಪಟ್ಟಣದ ಡಾ. ಬಿ.ಆರ್.ಅಂಬೇಡ್ಕರ್ ವಸತಿ ಶಾಲೆಯಲ್ಲಿನ ಕೆಲ ವಿದ್ಯಾರ್ಥಿಗಳಿಗೆ, ವಾಂತಿ ಬೇದಿ ಕಾಣಿಸಿಕೊಂಡಿರುವುದಾಗಿ ತಿಳಿದು ಬಂದಿದೆ. ಕಳೆದ ವಾರದಿಂದ ಈವರೆಗೆ ಐದರಿಂದ ಹತ್ತು ವಿದ್ಯಾರ್ಥಿಗಳಿಗೆ ವಾಂತಿ ಬೇಧಿ ಕಾಣಿಸಿಕೊಂಡಿದೆ ಎನ್ನಲಾಗಿದ್ದು, ಅವರನ್ನು ವಸತಿ ನಿಲಯದ ಆರೋಗ್ಯ ಸಿಬ್ಬಂದಿ ಸಾರ್ವಜನಿಕ ಆಸ್ಪತ್ರೆಗೆ ಕರೆದೊಯ್ಯುದು ಚಿಕಿತ್ಸೆ ಒದಗಿಸಿದ್ದಾರೆ. ಕೆಲ ವಿದ್ಯಾರ್ಥಿಗಳ ಪೋಷಕರನ್ನು ಸಂಪರ್ಕಿಸಿ ಮಾಹಿತಿ ನೀಡಿದ್ದು, ಕೆಲ ಪೋಷಕರು ಅಗಮಿಸಿ ಕೆಲ ದಿನಗಳ ಮಟ್ಟಿಗೆ ತಮ್ಮ ಮಕ್ಕಳನ್ನು ತಮ್ಮೊಂದಿಗೆ ಕರೆದುಕೊಂಡೋಗಿದ್ದಾರೆ. ವಸತಿ ನಿಲಯದಲ್ಲಿ ಕಾಣಿಸಿಕೊಂಡಿರುವ ವಾಂತಿ ಬೇದಿ ಪ್ರಕರಣಕ್ಕೆ, ನಿಖರ ಕಾರಣ ತಿಳಿದುಬಂದಿಲ್ಲ. ವಿದ್ಯಾರ್ಥಿಗಳು ಚಿಕಿತ್ಸೆ ಪಡೆದು ಚೇತರಿಸಿಕೊಂಡಿದ್ದು, ಕೆಲವರು ಪ್ರಥಮ ಚಿಕಿತ್ಸೆ ಪಡೆದು ವಸತಿ ನಿಲಯದಲ್ಲಿ ವಿಶ್ರಾಂತಿ ಪಡೆದಿದ್ದು. ಹಲವರು ಪೋಷಕರನ್ನು ಸಂಪರ್ಕಿಸಿ, ಅವರೊಂದಿಗೆ ತಮ್ಮೂರಿಗೆ ವಿಶ್ರ‍ಾಂತಿಗೆಂದು ತೆರಳಿದ್ದಾರೆ. ಕೂಡಲೇ ಸಂಬಂಧಿಸಿದ ಇಲಾಖಾ ಉನ್ನತಾಧಿಕಾರಿಗಳು, ವಸತಿ ನಿಲಯಕ್ಕೆ ಬೇಟಿ ನೀಡಿ ಪರಿಶೀಲನೆ ನಂತರವೇ ಸತ್ಯಾಸತ್ಯತೆ ತಿಳಿಯಲಿದೆ. ಸಂಬಂಧಿಸಿದ ಉನ್ನತಾಧಿಕಾರಿಗಳು ವಸತಿ ನಿಲಯಕ್ಕೆ ತಿಂಗಳ ಹಿಂದೆಯಷ್ಟೆ ಭೇಟಿ ನೀಡಿದ್ದಾರಂತೆ, ಆದರೆ ಅವರು ಹೀಗೆ ಬಂದು ಹಾಗೇ ಹೋದರು ಎಂಬಂತೆ ಬಂದು ಹೋಗುತ್ತಿದ್ದಾರೆ. ಈ ವರೆಗೂ ವಸತಿ ನಿಲಯಕ್ಕೆ ಭೇಟಿ ನೀಡಿರುವ ಬಗ್ಗೆ ಸಂಬಂಧಿಸಿದ ಇಲಾಖೆಯ, ಸ್ಥಳೀಯ ಅಧಿಕಾರಿ ಮಾಧ್ಯಮಗಳಿಗೆ ಯಾವುದೇ ಮಾಹತಿ ನೀಡುವುದಿಲ್ಲ ಇದು ಕೆಲ ಪತ್ರಕರ್ತರಲ್ಲಿ ಹತ್ತಾರು ಅನುಮಾನಗಳನ್ನು ಹುಟ್ಟಿಹಾಕಿದೆ.

ಇತ್ತೀಚಿನ ಸುದ್ದಿ

ಜಾಹೀರಾತು