8:14 AM Wednesday9 - September 2026
ಬ್ರೇಕಿಂಗ್ ನ್ಯೂಸ್
ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ ಪುತ್ತೂರು ಶಾಸಕರ ಆರೋಪ | ಕೆಆರ್ ಐಡಿಎಲ್ ಸಂಸ್ಥೆಗೆ ಗುತ್ತಿಗೆ: ಉಸ್ತುವಾರಿ ಸಚಿವ… ಕ್ರೈಂ ಡೈರಿ | ಸೆರೆ ಸಿಕ್ಕ ‘ರಿಪ್ಪರ್ ಚಂದ್ರನ್’ ಎಂಬ ಸರಣಿ ಹಂತಕ:… ತುಮಕೂರು-ರಾಯದುರ್ಗ- ಚಿತ್ರದುರ್ಗ | 2027 ಡಿಸೆಂಬರ್ ಅಂತ್ಯಕ್ಕೆ ರೈಲು ಮಾರ್ಗ ಆರಂಭ ಕಸ್ತೂರಿ ರಂಗನ್ ವರದಿ ವಿರೋಧಿಸಿ ನವೆಂಬರ್ 16ರಿಂದ ತೀರ್ಥಹಳ್ಳಿ ಟು ಶಿವಮೊಗ್ಗ ಪಾದಯಾತ್ರೆ:… *ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;… ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ

ಇತ್ತೀಚಿನ ಸುದ್ದಿ

ಕೂಡ್ಲಿಗಿ ಗುಡೇಕೋಟೆ: ನಕಲಿ ಬಂಗಾರ ಮಾರಾಟ ಯತ್ನ; ಆರೋಪಿ ಬಂಧನ

04/02/2022, 23:15

ವಿ.ಜಿ.ವೃಷಭೇಂದ್ರ ಕೂಡ್ಲಿಗಿ ವಿಜಯನಗರ

info.reporterkarnataka@gmail.com 

ಜಿಲ್ಲೆಯ ಕೂಡ್ಲಿಗಿ ತಾಲೂಕು ಗುಡೇಕೋಟೆ ಪೊಲೀಸ್ ಠಾಣಾವ್ಯಾಪ್ತಿಯಲ್ಲಿ ವ್ಯಕ್ತಿಯೋರ್ವ ನಕಲಿ ಬಂಗಾರ ಮಾರಾಟ ಮಾಡುತ್ತಿರುವುದಾಗಿ ಸಂಬಂಧಿಸಿದಂತೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಯನ್ನು ಬಂಧಿಸಲಾಗಿದೆ.

ಆರೋಪಿ ಕೂಡ್ಲಿಗಿ ಪಟ್ಟಣದ ಬಾಪೂಜಿ ನಗರ ನಿವಾಸಿ ನಿರಂಜನ ಎಂದು ಗುರುತಿಸಲಾಗಿದೆ. ದೂರುದಾರ ತಾಲೂಕಿನ ಗುಡೇಕೋಟೆ ಗ್ರಾಮದ ವಿ.ರಾಜ ಎಂಬುವರು ದೂರುದಾರರು.

ದೂರಿನಂತೆ ಗುಡೇಕೋಟೆ ಠಾಣೆಯಲ್ಲಿ ದೂರು ದಾಖಲಾಗಿದೆ. ಆರೋಪಿಯು ಗುಡೇಕೋಟೆ ಕೂಡ್ಲಿಗಿ ಮಾರ್ಗಮದ್ಯದಲ್ಲಿ,ದಾರಿ ಹೋಕರಿಗೆ ತನ್ನಲ್ಲಿದ್ದ ನಕಲಿ ಬಂಗಾರ ಮಾರಾಟ ಮಾಡುವ ದುರುದ್ದೇಶ ಹೊಂದಿದ್ದ ಎನ್ನಲಾಗಿದೆ. ದೂರುದಾರನಿಗೆ ನಕಲಿ ಬಂಗಾರ ಮಾರಿ ಮೋಸ ಮಾಡುವ ದುರುದ್ದೇಶದಿಂದ ಹೊಂಚು ಹಾಕಿದ್ದ ಎಂಬ ದೂರುದಾರನು ನೀಡಿದ ದೂರಿನ ಮೇರೆ ಆರೋಪಿತನ ವಿರುದ್ಧ ಪ್ರಕಣ ದಾಖಲಿಸಲಾಗಿದೆ ಎಂದು ಠಾಣಾಧಿಕಾರಿ ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು