12:57 PM Friday19 - June 2026
ಬ್ರೇಕಿಂಗ್ ನ್ಯೂಸ್
ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ… ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ… ದೆಹಲಿ ಮಟ್ಟದಲ್ಲಿ ಹೈವೋಲ್ಟೇಜ್ ಸಂಧಾನ: ಬೆಂಗಳೂರು ಅಭಿವೃದ್ಧಿ ಸಚಿವರಾಗಿ ಕೃಷ್ಣ ಬೈರೇಗೌಡ ಅಧಿಕಾರ… ತೀರ್ಪು ಮುನ್ನವೇ ಶಂಕಿತ ಉಗ್ರ ಕೊಡಗು ಮೂಲದ ಅಬ್ದುಲ್ ಖಾದರ್ ಸಾವು ಮೈಸೂರು ದುರಂತ: ಅಕ್ರಮ ಪಬ್, ಬಾರ್, ರೆಸ್ಟೋರೆಂಟ್‌ಗಳ ಮೇಲೆ ಕ್ರಮ: ಸಚಿವ ಡಾ.… ವಿಜಯಪುರ | ಭೀಕರ ರಸ್ತೆ ಅಪಘಾತ: ಟಿಪ್ಪರ್-ಬಸ್ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ 3…

ಇತ್ತೀಚಿನ ಸುದ್ದಿ

ಕೂಡ್ಲಿಗಿ ಹಾಗೂ ಕುಪ್ಪನಕೇರಿ: ಶ್ರೀಆಂಜನೇಯ ರಥೋತ್ಸವ; ಲಿಂಗದೀಕ್ಷೆ, ಲಿಂಗಧಾರಣೆ

01/04/2023, 10:06

ವಿ.ಜಿ.ವೃಷಭೇಂದ್ರ ಕೂಡ್ಲಿಗಿ ವಿಜಯನಗರ

info.reporterkarnataka@gmail.com

ರಾಮನವಮಿ ಪ್ರಯುಕ್ತ, ವಿಜಯನಗರ ಜಿಲ್ಲೆ ಕೂಡ್ಲಿಗಿ ಪಟ್ಟಣದ ಶ್ರೀಕೊತ್ತಲಾಂಜನೇಯ ರಥೋತ್ಸವ ಜರುಗಿತು.
ಕೂಡ್ಲಿಗಿ ಪಟ್ಟಣ ಸೇರಿದಂತೆ, ನೆರೆಹೊರೆ ಗ್ರಾಮಗಳಿಂದ ಆಗಮಿಸಿದ್ದರು. ಅಸಂಖ್ಯಾತ ಭಕ್ತರು ರಥೋತ್ಸವದಲ್ಲಿ ಭಾಗಿಯಾಗಿದ್ದರು.
ಸಕಲ ವಾದ್ಯ ವೃಂದಗಳೊಂದಿಗೆ, ರಥೋತ್ಸವ ಬಹು ವಿಜೃಂಭಣೆಯಿಂದ ಜರುಗಿತು.


ಕಳೆದ ವರ್ಷದ ಶ್ರೀಕೊತ್ತಲಾಂಜನೇಯ ರಥೋತ್ಸವದಲ್ಲಿ, ದೇವರ ಪಟವನ್ನು ಪಡೆದಿದ್ದ ಬಂಗಾರು ಹನುಮಂತು ರವರು. ಪಟದ ಹರಾಜಿನ 1.80 ಲಕ್ಷ ರೂ. ಹಣವನ್ನು ದೇವಸ್ಥಾನಕ್ಕೆ ಅರ್ಪಿಸಿದರು. ಈ ಸಾರಿಯೂ ಕೂಡ ಹರಾಜಿನಲ್ಲಿ, ದೇವರ ಪಟವನ್ನು ಬಂಗಾರು ಹನುಮಂತು 2,61,101ರೂ. ಗಳಿಗೆ ಪಡೆದುಕೊಂಡರು. ಅವರು ಸತತವಾಗಿ ಒಂಬತ್ತನೇ ಬಾರಿ ರಥೋತ್ಸವದ,ಪಟದ ಹರಾಜು ಪಡೆಯುತ್ತಿರುವುದು ವಿಶೇಷವಾಗಿದೆ.
ಕುಪ್ಪಿನಕೇರಿಗ್ರಾಮದಲ್ಲಿ ರಥೋತ್ಸವ:ಕೂಡ್ಲಿಗಿ ತಾಲೂಕಿನ ಶ್ರಿಕ್ಷೇತ್ರ ಕುಪ್ಪಿಕೇರಿ ಗ್ರಾಮದಲ್ಲಿ,ಶ್ರೀಆಂಜನೇಯ ಸ್ವಾಮಿ ರಥೋತ್ಸವ ಬಹು ವಿಜೃಂಭಣೆಯಿಂದ ಜರುಗಿತು.

ಶ್ರೀ ಆಂಜನೇಯ ದೇವರಿಗೆ ಶಿವಸಂಭೂತರಾದ ಪಂಚಗಣಾದೀಶ್ವರರು, ಲಿಂಗಧಾರಣೆ ಮಾಡಿ ಲಿಂಗದೀಕ್ಷೆ ನೀಡಿದ್ದಾರೆಂಂಬ ಜಾನಪದೀಯ ಕಥೆಯಿದೆ. ಬೇಡಿದ ಕೊರಿಕೆಗಳ ಆಗು ಹೋಗುಗಳ ಫಲಾನು ಫಲ,ಶುಭ ಅಶುಭ,ಗಳನ್ನು ಸೂಚಿಸುವ ದೇವರ ಹೂ ಕೇಳೋ ಸಂಪ್ರದಾಯಕ್ಕೆ. ಕುಪ್ಪಿಕೇರಿ ಶ್ರೀಆಂಜನೇಯ ಹೆಸರುವಾಸಿಯಾಗಿದ್ದಾನೆ. ಈ ಭಾರಿಯ ಪಟ ಹರಾಜನ್ನು, ಸಂಡೂರು ತಾಲೂಕು ಕಲ್ಕಂಬ ಗ್ರಾಮದ ಷಣ್ಮುಖಪ್ಪನ ಮಗ ಹನುಮಂತಪ್ಪ ಎಂಬುವರು 1.61.101ರೂ ಗೆ ಪಡೆದಿದ್ದಾರೆ.ಕುಪ್ಪನಕೇರಿ ಗ್ರಾಮದ ಗ್ರಾಮಸ್ಥರು, ರಥೋತ್ಸವದಲ್ಲಿ ಕೂಡ್ಲಿಗಿ ಪಟ್ಟಣ ಸೇರಿದಂತೆ, ಕುಪ್ಪಿಕೇರಿಯ ನೆರೆ ಹೊರೆ ಗ್ರಾಮಗಳ ಸಾವಿರಾರು ಭಕ್ತರು ಭಾಗಿಯಾಗಿದ್ದರು. ಸಕಲ ವಾಧ್ಯವೃಂಧಗಳೊಂದಿಗೆ, ರಥೋತ್ಸವ ಬಹು ವಿಜೃಂಭಣೆಯಿಂದ ಜರುಗಿತು.

ಇತ್ತೀಚಿನ ಸುದ್ದಿ

ಜಾಹೀರಾತು