4:41 AM Sunday28 - December 2025
ಬ್ರೇಕಿಂಗ್ ನ್ಯೂಸ್
ಮೈಸೂರು ಅರಮನೆ ಬಳಿ ಸ್ಫೋಟ: ಸಾವಿನ ಸಂಖ್ಯೆ 3ಕ್ಕೆ ಏರಿಕೆ; ಹೆಚ್ಚಿದ ಆತಂಕ ಮಂಗಳೂರು ಡೇಟಾ ಸೆಂಟರ್ ಭಾರತದ ಅತ್ಯಂತ ವೆಚ್ಚ-ದಕ್ಷ ಕೇಂದ್ರ: ಫೀಸಿಬಿಲಿಟಿ ವರದಿ ಹೊಸ ವರ್ಷಾಚರಣೆ: ರೆಸಾರ್ಟ್, ಹೋಟೆಲ್, ಹೋಂ ಸ್ಟೇ ಮಾಲೀಕರಿಗೆ ಕಟ್ಟುನಿಟ್ಟಿನ ಸೂಚನೆ ಕೊಡಗಿನಲ್ಲಿ ಅರಣ್ಯ ರಕ್ಷಕರಿಂದಲೇ ಮರಗಳ ಲೂಟಿ: ಲೋಡರ್ ಬಂಧನ; ನಾಲ್ವರು ಪರಾರಿ ಖಾಸಗಿ ವಾಹನಕ್ಕೆ ನಾಮಫಲಕ | ಪೊಲೀಸಪ್ಪನಿಂದೇ ಕಾನೂನು ಉಲ್ಲಂಘನೆ: ದಂಡ ಯಾವತ್ತೇ ವಿಧಾನಸಭೆ ಚುನಾವಣೆ ನಡೆದರೂ ಬಿಜೆಪಿಗೆ ಬಹುಮತ: ಪಕ್ಷದ ರಾಜ್ಯಾಧ್ಯಕ್ಷ ವಿಜಯೇಂದ್ರ ವಿಶ್ವಾಸ ಭಾರತ ರತ್ನ ವಾಜಪೇಯಿ ಗ್ರಂಥಾಲಯ: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಉದ್ಘಾಟನೆ ಜಿಲ್ಲಾ ಮತ್ತು ಕ್ಲಸ್ಟರ್ ಮಟ್ಟದಲ್ಲಿ ಡಿಜಿಟಲ್ ಆರ್ಥಿಕತೆಗೆ ಒತ್ತು: ಕೆಡಿಇಎಂ ಮತ್ತು ಎಫ್‌ಕೆಸಿಸಿಐ… ಪ್ರೀತಿಯ ಸಂಸ್ಕೃತಿ ಬೆಳೆಸಿ: ರೊಸಾರಿಯೋ ಕೆಥೆಡ್ರಲ್‌ನಲ್ಲಿ ಬಿಷಪ್ ಡಾ. ಸಲ್ಡಾನರಿಂದ ಕ್ರಿಸ್ಮಸ್ ಸಂದೇಶ ಕಲಬುರ್ಗಿಯಲ್ಲಿ ಟೆಕ್ಸ್ ಟೈಲ್ ಪಾರ್ಕ್ | ಮುಂದಿನ ತಿಂಗಳು ಉನ್ನತ ಮಟ್ಟದ ಸಭೆ:…

ಇತ್ತೀಚಿನ ಸುದ್ದಿ

ಕೂಡ್ಲಗಿ: ಕಾಡು ಪ್ರಾಣಿಗಳ ಹಾವಳಿಯಿಂದ ಮೆಕ್ಕೆಜೋಳ, ಶೇಂಗಾ ಬೆಳೆ ಮೊಳಕೆಗೆ ಮುನ್ನವೇ ನಾಶ; ಕಣ್ಣೀರಿನಲ್ಲಿ ಕೈ ತೊಳೆಯುತ್ತಿರುವ ರೈತರು

24/07/2022, 15:02

ವಿ.ಜಿ.ವೃಷಭೇಂದ್ರ ಕೂಡ್ಲಿಗಿ ವಿಜಯನಗರ

info.reporterkarnataka@gmail.com  

ಜಿಲ್ಲೆಯ ಕೂಡ್ಲಿಗಿ ತಾಲೂಕಿನ ಜಂಗಮಸೋವೇನಹಳ್ಳಿ ಗ್ರಾಮದಲ್ಲಿ ಕಾಡು ಹಂದಿಗಳ ಹಿಂಡು ಕೃಷಿಕರ ಜಮೀನಗಳಲ್ಲಿ ಬಿತ್ತನೆ ಮಾಡಿದ ಮೆಕ್ಕೆಜೋಳ ಹಾಗು ಶೇಂಗಾ ಬೆಳೆಗಳನ್ನು ನಾಶಮಾಡುತ್ತಿವೆ.


ಮೆಕ್ಕೆಜೋಳ ಬೆಳೆಯಲು 1 ಎಕರೆ ಜಮೀನಗೆ 2 ಪಾಕೇಟ್ ಬೀಜ,  2 ಚೀಲ ರಾಸಾಯನಿಕ ಗೊಬ್ಬರ, ಬಿತ್ತನೆ ಸೇರಿ ಸುಮಾರು 10 ಸಾವಿರ ರೂಪಾಯಿ ವೆಚ್ಚ ಮಾಡಬೇಕಾಗುತ್ತದೆ. ಆದೇರೀತಿ ಶೇಂಗಾ ಬೆಳೆಯಲು 1ಎಕರೆ ಜಮೀನಗೆ 50kg ಬೀಜ, 2 ಚೀಲ ರಾಸಾಯನಿಕ ಗೊಬ್ಬರ ಬಿತ್ತನೆ ಸೇರಿ ಸೂಮಾರು 12 ಸಾವಿರ ರೂಪಾಯಿ ವೆಚ್ಚ ಮಾಡಿ ಬಿತ್ತನೆ ಮಾಡುತ್ತಾರೆ. ಬಿತ್ತನೆ ಮಾಡಿದ ಹೊಲದಲ್ಲಿ ಮೆಕ್ಕೆಜೋಳ ಹಾಗು ಶೇಂಗಾ ಬೀಜಗಳನ್ನು ಕಾಡುಹಂದಿಗಳು (ಮಿಕ) ನಾಶ (ಗೂರಿ) ಮಾಡಿ ರೈತರನ್ನು ಹೈರಾಣಗಿಸಿವೆ. ಬಹುತೇಕ ಕೃಷಿಕರ ಜಮೀನುಗಳಲ್ಲಿ ಬಿತ್ತನೆ ಮಾಡಿದ ಬೀಜಗಳನ್ನು ಕಾಡು ಹಂದಿಗಳು ನಾಶ ಮಾಡಿವೆ. ಬಿತ್ತನೆ ಮಾಡಿದ ಬೀಜಗಳನ್ನು ರಕ್ಷಣೆ ಮಾಡಲು ರಾತ್ರಿಯಿಡೀ ಕಾಡು ಪ್ರಾಣಿಗಳಾದ ಕರಡಿ ಚಿರತೆ ದಾಳಿಗಳ ಆತಂಕ ನಡುವೆ ಕಾಡುಂದಿಗಳಿಂದ ಬಿತ್ತನೆ ಮಾಡಿದ ದಿನದಿಂದ ಮೊಳಕೆ ಹೊಡೆಯುವತನಕ ಬೀಜಗಳನ್ನು ರಕ್ಷಣೆ ಮಾಡಲು ರಾತ್ರಿಯಿಡೀ ಜಾಗರಣೆ ಮಾಡಿ, ಧ್ವನಿವರ್ಧಕ ಎಣ್ಣೆ ಡಬ್ಬಿಗಳ ಶಬ್ದಗಳ ಮೂಲಕ ಬೆದರಿಸಿ ಬೆಳೆಗಳನ್ನು ರಕ್ಷಣೆ  ಮಾಡಬೇಕಾಗಿದೆ.  ಮೊದಲೆಲ್ಲಾ ಅರಣ್ಯ ದಂಚಿನ ಕೃಷಿ ಜಮೀನುಗಳಲ್ಲಿ ಮಾತ್ರ ಕಾಡು ಪ್ರಾಣಿಗಳ ಬೆಳೆಗಳನ್ನು ನಾಶ ಮಾಡುತ್ತಿದ್ದವು. ಆದರೆ ಈಗ ಎಲ್ಲಾ ಪ್ರದೇಶದ ಜಮೀನುಗಳಲ್ಲಿ ಕಾಡು ಪ್ರಾಣಿಗಳ ಹಾವಳಿ ಕಂಡುಬರುತ್ತದೆ.  ಬಿತ್ತನೆ  ಬೀಜದಿಂದ ಆಧಿಯಾಗಿ ಬೆಳೆಗಳ ಸಂರಕ್ಷಸಲು ಪರಿ ಪರಿಯಾದ ಸಮಸ್ಯೆಗಳು ಕೃಷಿಕರಿಗೆ ತಂದೊಡ್ಧಿದೆ. ಇದು ಬಹಳ ತೆಲೆನೋವಾಗಿ ಕಾಡುತ್ತಿದೆ. ನಾಶವಾದ ಬೆಳೆಗಳಿಗೆ ಪರಿಹಾರ ಸಿಗುತ್ತಿಲ್ಲ. ಸರ್ಕಾರದ ಇನ್ನಿತರ ಸೌಲಭ್ಯ ಗಳು ಮಾಹಿತಿಗಳು ರೈತರಿಗೆ ಸರಿಯಾಗಿ ತಲುಪುತ್ತಿಲ್ಲ. ಕಾರಣ ಮಾಹಿತಿ ಕೊರತೆಯಿಂದ  ಸಂಕಷ್ಟಗಳು ತಪ್ಪಿದ್ದಲ್ಲ. ಅದ್ದರಿಂದ ಸಂಭಂದ ಪಟ್ಟ ಇಲಾಖಾಧಿಕರಿಗಳು, ರೈತರಿಗೆ ಮಾಹಿತಿ ತಿಳಿಸುವುದರ ಜೊತೆಗೆ  ರೈತರ ನೆರವುಗೆ ದಾವಿಸಬೇಕಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು