5:19 AM Thursday26 - February 2026
ಬ್ರೇಕಿಂಗ್ ನ್ಯೂಸ್
ಮಸ್ಕಿ ಇರಕಲ್ ಶ್ರೀ ಮಠದ ಜಾತ್ರಾ ಮಹೋತ್ಸವ: ಹಸೆಮಣೆ ಏರಿದ 12 ಜೋಡಿಗಳು ಜವಾಹರಲಾಲ್ ನೆಹರು ತಾರಾಲಯದಲ್ಲಿ ರಾಷ್ಟ್ರೀಯ ವಿಜ್ಞಾನ ದಿನಾಚರಣೆ ಸಂಭ್ರಮ; ವೈಜ್ಞಾನಿಕ ಮನೋಭಾವಕ್ಕೆ ಸಚಿವ… ಖಾಲಿಯಿರುವ ಹುದ್ದೆಗಳ ಹಂತ ಹಂತವಾಗಿ ಭರ್ತಿ: ಕಾರ್ಕಳದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸಿಎಂ, ಡಿಸಿಎಂ ಕುರ್ಚಿ ಕಾಳಗದಲ್ಲಿ ಬ್ಯುಸಿ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಹೊನ್ನಾರು ರಂಗೋತ್ಸವ: 26ರ ವರೆಗೆ ಕಲಾಸಕ್ತರಿಗೆ ನಾಟಕ ವೀಕ್ಷಿಸುವ ಸದಾವಕಾಶ ಇಬ್ಬರು ಅಂತರ್ ರಾಜ್ಯ ಗಾಂಜಾ ಮಾರಾಟಗಾರರ ಸಹಿತ 4 ಮಂದಿ ಬಂಧನ: 12… ಯುವ ಕಾಂಗ್ರೆಸ್ಸಿಗರು ಬೇಷರತ್ ಕ್ಷಮೆ ಕೇಳಲಿ: ಬಿಜೆಪಿ ಯುವ ಮೋರ್ಚಾ ಅಧ್ಯಕ್ಷ ಧೀರಜ್… ಸಿದ್ದಾಪುರ: ವಾಹನಗಳ ಮೇಲೆ ಮುಂದುವರೆದ ಕಾಡಾನೆ ದಾಳಿ; ಕೂದಲು ಎಳೆ ಅಂತರದಲ್ಲಿ ಕಾರ್ಮಿಕರು… ಪಿರಿಯಾಪಟ್ಟಣದ ರಾಷ್ಟ್ರೀಯ ಹೆದ್ದಾರಿ 275 ನಲ್ಲಿ ಅರಣ್ಯ ಬೆಂಕಿಗೆ ಅಹುತಿ:ಅಪಾರ ಪ್ರಮಾಣದ ಬಿದಿರು… ಸಿದ್ದಾಪುರ ಸಮೀಪದ ಕರಡಿಗೋಡು ಗ್ರಾಮದಲ್ಲಿ ವಾಹನ ಡಿಕ್ಕಿ: ಕಾಡುಕೋಣ ಕಾಲು ಮುರಿತ

ಇತ್ತೀಚಿನ ಸುದ್ದಿ

ಕೂಡ್ಲಗಿ: ಕಾಡು ಪ್ರಾಣಿಗಳ ಹಾವಳಿಯಿಂದ ಮೆಕ್ಕೆಜೋಳ, ಶೇಂಗಾ ಬೆಳೆ ಮೊಳಕೆಗೆ ಮುನ್ನವೇ ನಾಶ; ಕಣ್ಣೀರಿನಲ್ಲಿ ಕೈ ತೊಳೆಯುತ್ತಿರುವ ರೈತರು

24/07/2022, 15:02

ವಿ.ಜಿ.ವೃಷಭೇಂದ್ರ ಕೂಡ್ಲಿಗಿ ವಿಜಯನಗರ

info.reporterkarnataka@gmail.com  

ಜಿಲ್ಲೆಯ ಕೂಡ್ಲಿಗಿ ತಾಲೂಕಿನ ಜಂಗಮಸೋವೇನಹಳ್ಳಿ ಗ್ರಾಮದಲ್ಲಿ ಕಾಡು ಹಂದಿಗಳ ಹಿಂಡು ಕೃಷಿಕರ ಜಮೀನಗಳಲ್ಲಿ ಬಿತ್ತನೆ ಮಾಡಿದ ಮೆಕ್ಕೆಜೋಳ ಹಾಗು ಶೇಂಗಾ ಬೆಳೆಗಳನ್ನು ನಾಶಮಾಡುತ್ತಿವೆ.


ಮೆಕ್ಕೆಜೋಳ ಬೆಳೆಯಲು 1 ಎಕರೆ ಜಮೀನಗೆ 2 ಪಾಕೇಟ್ ಬೀಜ,  2 ಚೀಲ ರಾಸಾಯನಿಕ ಗೊಬ್ಬರ, ಬಿತ್ತನೆ ಸೇರಿ ಸುಮಾರು 10 ಸಾವಿರ ರೂಪಾಯಿ ವೆಚ್ಚ ಮಾಡಬೇಕಾಗುತ್ತದೆ. ಆದೇರೀತಿ ಶೇಂಗಾ ಬೆಳೆಯಲು 1ಎಕರೆ ಜಮೀನಗೆ 50kg ಬೀಜ, 2 ಚೀಲ ರಾಸಾಯನಿಕ ಗೊಬ್ಬರ ಬಿತ್ತನೆ ಸೇರಿ ಸೂಮಾರು 12 ಸಾವಿರ ರೂಪಾಯಿ ವೆಚ್ಚ ಮಾಡಿ ಬಿತ್ತನೆ ಮಾಡುತ್ತಾರೆ. ಬಿತ್ತನೆ ಮಾಡಿದ ಹೊಲದಲ್ಲಿ ಮೆಕ್ಕೆಜೋಳ ಹಾಗು ಶೇಂಗಾ ಬೀಜಗಳನ್ನು ಕಾಡುಹಂದಿಗಳು (ಮಿಕ) ನಾಶ (ಗೂರಿ) ಮಾಡಿ ರೈತರನ್ನು ಹೈರಾಣಗಿಸಿವೆ. ಬಹುತೇಕ ಕೃಷಿಕರ ಜಮೀನುಗಳಲ್ಲಿ ಬಿತ್ತನೆ ಮಾಡಿದ ಬೀಜಗಳನ್ನು ಕಾಡು ಹಂದಿಗಳು ನಾಶ ಮಾಡಿವೆ. ಬಿತ್ತನೆ ಮಾಡಿದ ಬೀಜಗಳನ್ನು ರಕ್ಷಣೆ ಮಾಡಲು ರಾತ್ರಿಯಿಡೀ ಕಾಡು ಪ್ರಾಣಿಗಳಾದ ಕರಡಿ ಚಿರತೆ ದಾಳಿಗಳ ಆತಂಕ ನಡುವೆ ಕಾಡುಂದಿಗಳಿಂದ ಬಿತ್ತನೆ ಮಾಡಿದ ದಿನದಿಂದ ಮೊಳಕೆ ಹೊಡೆಯುವತನಕ ಬೀಜಗಳನ್ನು ರಕ್ಷಣೆ ಮಾಡಲು ರಾತ್ರಿಯಿಡೀ ಜಾಗರಣೆ ಮಾಡಿ, ಧ್ವನಿವರ್ಧಕ ಎಣ್ಣೆ ಡಬ್ಬಿಗಳ ಶಬ್ದಗಳ ಮೂಲಕ ಬೆದರಿಸಿ ಬೆಳೆಗಳನ್ನು ರಕ್ಷಣೆ  ಮಾಡಬೇಕಾಗಿದೆ.  ಮೊದಲೆಲ್ಲಾ ಅರಣ್ಯ ದಂಚಿನ ಕೃಷಿ ಜಮೀನುಗಳಲ್ಲಿ ಮಾತ್ರ ಕಾಡು ಪ್ರಾಣಿಗಳ ಬೆಳೆಗಳನ್ನು ನಾಶ ಮಾಡುತ್ತಿದ್ದವು. ಆದರೆ ಈಗ ಎಲ್ಲಾ ಪ್ರದೇಶದ ಜಮೀನುಗಳಲ್ಲಿ ಕಾಡು ಪ್ರಾಣಿಗಳ ಹಾವಳಿ ಕಂಡುಬರುತ್ತದೆ.  ಬಿತ್ತನೆ  ಬೀಜದಿಂದ ಆಧಿಯಾಗಿ ಬೆಳೆಗಳ ಸಂರಕ್ಷಸಲು ಪರಿ ಪರಿಯಾದ ಸಮಸ್ಯೆಗಳು ಕೃಷಿಕರಿಗೆ ತಂದೊಡ್ಧಿದೆ. ಇದು ಬಹಳ ತೆಲೆನೋವಾಗಿ ಕಾಡುತ್ತಿದೆ. ನಾಶವಾದ ಬೆಳೆಗಳಿಗೆ ಪರಿಹಾರ ಸಿಗುತ್ತಿಲ್ಲ. ಸರ್ಕಾರದ ಇನ್ನಿತರ ಸೌಲಭ್ಯ ಗಳು ಮಾಹಿತಿಗಳು ರೈತರಿಗೆ ಸರಿಯಾಗಿ ತಲುಪುತ್ತಿಲ್ಲ. ಕಾರಣ ಮಾಹಿತಿ ಕೊರತೆಯಿಂದ  ಸಂಕಷ್ಟಗಳು ತಪ್ಪಿದ್ದಲ್ಲ. ಅದ್ದರಿಂದ ಸಂಭಂದ ಪಟ್ಟ ಇಲಾಖಾಧಿಕರಿಗಳು, ರೈತರಿಗೆ ಮಾಹಿತಿ ತಿಳಿಸುವುದರ ಜೊತೆಗೆ  ರೈತರ ನೆರವುಗೆ ದಾವಿಸಬೇಕಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು