10:02 AM Saturday25 - July 2026
ಬ್ರೇಕಿಂಗ್ ನ್ಯೂಸ್
ಮೂಡಿಗೆರೆಯಲ್ಲಿ ಖೋಟಾ ನೋಟು ಚಲಾವಣೆ ಜಾಲ ಭೇದಿಸಿದ ಪೋಲಿಸರು: ಇಬ್ಬರ ಬಂಧನ, ₹18,000… ಕಡೂರು | ತೆಂಗಿನಕಾಯಿ ಕದ್ದ ಆರೋಪ: ಮಹಿಳೆಯ ಬಟ್ಟೆ ಹರಿದು ಮೂವರು ಪುರುಷರಿಂದ… ವಿದ್ಯಾರ್ಥಿಗಳ ಮೇಲೆ ಲಾಠಿಚಾರ್ಜ್ ಖಂಡಿಸಿ ಕೇಂದ್ರದ ವಿರುದ್ಧ ರಾಹುಲ್ ಗಾಂಧಿ ಆಕ್ರೋಶ: 3… ಶಾಸಕ ಪೊನ್ನಣ್ಣ ಕೋರಿಕೆ‌: ಭಾಗಮಂಡಲ ಮೇಲ್ಸೇತುವೆ ಸುತ್ತಲಿನ ಕಾಮಗಾರಿಗೆ 3 ಕೋಟಿ ಅನುದಾನ… ಮುಖ್ಯಮಂತ್ರಿಗಳ ಕಾರ್ಯದರ್ಶಿ ಆಗಿ ಕುಶಾಲನಗರದ ಎಸ್. ಎಸ್. ನಕುಲ್ ನೇಮಕ ವಂದೇ ಮಾತರಂ ಗೀತೆಗೆ ಹೊಸ ರೂಲ್ಸ್: ಸಂಸತ್ ಮುಂಗಾರು ಅಧಿವೇಶನದಲ್ಲಿ ಮಸೂದೆ ಮಂಡನೆ ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರಕ್ಕೆ ಯತ್ನ: ಕಾಮುಕನಿಗೆ ಗ್ರಾಮಸ್ಥರ ಧರ್ಮದೇಟು; ಪೊಲೀಸ್ ವಶಕ್ಕೆ ವಂದೇ ಮಾತರಂ ಗೀತೆಗೆ ಹೊಸ ರೂಲ್ಸ್: ಸಂಸತ್ ಮುಂಗಾರು ಅಧಿವೇಶನದಲ್ಲಿ ಮಸೂದೆ ಮಂಡನೆ ತೀರ್ಥಹಳ್ಳಿ | ಗುಂಡುಗದ್ದೆ ಬಳಿ ಆಟವಾಡುತ್ತಾ ರಸ್ತೆಗೆ ಬಂದ ಮಗು: ಕಾರು ಡಿಕ್ಕಿಯಾಗಿ… ಧಾರವಾಡ ಟು ಬೆಂಗಳೂರು: ಲಾರಿಯಲ್ಲಿ ಸಾಗಿಸುತ್ತಿದ್ದ 100ಕ್ಕೂ ಹೆಚ್ಚು ಗೋವುಗಳ ಮಾಂಸ ವಶ

ಇತ್ತೀಚಿನ ಸುದ್ದಿ

ಕೂಡ್ಲಗಿ: ಕಾಡು ಪ್ರಾಣಿಗಳ ಹಾವಳಿಯಿಂದ ಮೆಕ್ಕೆಜೋಳ, ಶೇಂಗಾ ಬೆಳೆ ಮೊಳಕೆಗೆ ಮುನ್ನವೇ ನಾಶ; ಕಣ್ಣೀರಿನಲ್ಲಿ ಕೈ ತೊಳೆಯುತ್ತಿರುವ ರೈತರು

24/07/2022, 15:02

ವಿ.ಜಿ.ವೃಷಭೇಂದ್ರ ಕೂಡ್ಲಿಗಿ ವಿಜಯನಗರ

info.reporterkarnataka@gmail.com  

ಜಿಲ್ಲೆಯ ಕೂಡ್ಲಿಗಿ ತಾಲೂಕಿನ ಜಂಗಮಸೋವೇನಹಳ್ಳಿ ಗ್ರಾಮದಲ್ಲಿ ಕಾಡು ಹಂದಿಗಳ ಹಿಂಡು ಕೃಷಿಕರ ಜಮೀನಗಳಲ್ಲಿ ಬಿತ್ತನೆ ಮಾಡಿದ ಮೆಕ್ಕೆಜೋಳ ಹಾಗು ಶೇಂಗಾ ಬೆಳೆಗಳನ್ನು ನಾಶಮಾಡುತ್ತಿವೆ.


ಮೆಕ್ಕೆಜೋಳ ಬೆಳೆಯಲು 1 ಎಕರೆ ಜಮೀನಗೆ 2 ಪಾಕೇಟ್ ಬೀಜ,  2 ಚೀಲ ರಾಸಾಯನಿಕ ಗೊಬ್ಬರ, ಬಿತ್ತನೆ ಸೇರಿ ಸುಮಾರು 10 ಸಾವಿರ ರೂಪಾಯಿ ವೆಚ್ಚ ಮಾಡಬೇಕಾಗುತ್ತದೆ. ಆದೇರೀತಿ ಶೇಂಗಾ ಬೆಳೆಯಲು 1ಎಕರೆ ಜಮೀನಗೆ 50kg ಬೀಜ, 2 ಚೀಲ ರಾಸಾಯನಿಕ ಗೊಬ್ಬರ ಬಿತ್ತನೆ ಸೇರಿ ಸೂಮಾರು 12 ಸಾವಿರ ರೂಪಾಯಿ ವೆಚ್ಚ ಮಾಡಿ ಬಿತ್ತನೆ ಮಾಡುತ್ತಾರೆ. ಬಿತ್ತನೆ ಮಾಡಿದ ಹೊಲದಲ್ಲಿ ಮೆಕ್ಕೆಜೋಳ ಹಾಗು ಶೇಂಗಾ ಬೀಜಗಳನ್ನು ಕಾಡುಹಂದಿಗಳು (ಮಿಕ) ನಾಶ (ಗೂರಿ) ಮಾಡಿ ರೈತರನ್ನು ಹೈರಾಣಗಿಸಿವೆ. ಬಹುತೇಕ ಕೃಷಿಕರ ಜಮೀನುಗಳಲ್ಲಿ ಬಿತ್ತನೆ ಮಾಡಿದ ಬೀಜಗಳನ್ನು ಕಾಡು ಹಂದಿಗಳು ನಾಶ ಮಾಡಿವೆ. ಬಿತ್ತನೆ ಮಾಡಿದ ಬೀಜಗಳನ್ನು ರಕ್ಷಣೆ ಮಾಡಲು ರಾತ್ರಿಯಿಡೀ ಕಾಡು ಪ್ರಾಣಿಗಳಾದ ಕರಡಿ ಚಿರತೆ ದಾಳಿಗಳ ಆತಂಕ ನಡುವೆ ಕಾಡುಂದಿಗಳಿಂದ ಬಿತ್ತನೆ ಮಾಡಿದ ದಿನದಿಂದ ಮೊಳಕೆ ಹೊಡೆಯುವತನಕ ಬೀಜಗಳನ್ನು ರಕ್ಷಣೆ ಮಾಡಲು ರಾತ್ರಿಯಿಡೀ ಜಾಗರಣೆ ಮಾಡಿ, ಧ್ವನಿವರ್ಧಕ ಎಣ್ಣೆ ಡಬ್ಬಿಗಳ ಶಬ್ದಗಳ ಮೂಲಕ ಬೆದರಿಸಿ ಬೆಳೆಗಳನ್ನು ರಕ್ಷಣೆ  ಮಾಡಬೇಕಾಗಿದೆ.  ಮೊದಲೆಲ್ಲಾ ಅರಣ್ಯ ದಂಚಿನ ಕೃಷಿ ಜಮೀನುಗಳಲ್ಲಿ ಮಾತ್ರ ಕಾಡು ಪ್ರಾಣಿಗಳ ಬೆಳೆಗಳನ್ನು ನಾಶ ಮಾಡುತ್ತಿದ್ದವು. ಆದರೆ ಈಗ ಎಲ್ಲಾ ಪ್ರದೇಶದ ಜಮೀನುಗಳಲ್ಲಿ ಕಾಡು ಪ್ರಾಣಿಗಳ ಹಾವಳಿ ಕಂಡುಬರುತ್ತದೆ.  ಬಿತ್ತನೆ  ಬೀಜದಿಂದ ಆಧಿಯಾಗಿ ಬೆಳೆಗಳ ಸಂರಕ್ಷಸಲು ಪರಿ ಪರಿಯಾದ ಸಮಸ್ಯೆಗಳು ಕೃಷಿಕರಿಗೆ ತಂದೊಡ್ಧಿದೆ. ಇದು ಬಹಳ ತೆಲೆನೋವಾಗಿ ಕಾಡುತ್ತಿದೆ. ನಾಶವಾದ ಬೆಳೆಗಳಿಗೆ ಪರಿಹಾರ ಸಿಗುತ್ತಿಲ್ಲ. ಸರ್ಕಾರದ ಇನ್ನಿತರ ಸೌಲಭ್ಯ ಗಳು ಮಾಹಿತಿಗಳು ರೈತರಿಗೆ ಸರಿಯಾಗಿ ತಲುಪುತ್ತಿಲ್ಲ. ಕಾರಣ ಮಾಹಿತಿ ಕೊರತೆಯಿಂದ  ಸಂಕಷ್ಟಗಳು ತಪ್ಪಿದ್ದಲ್ಲ. ಅದ್ದರಿಂದ ಸಂಭಂದ ಪಟ್ಟ ಇಲಾಖಾಧಿಕರಿಗಳು, ರೈತರಿಗೆ ಮಾಹಿತಿ ತಿಳಿಸುವುದರ ಜೊತೆಗೆ  ರೈತರ ನೆರವುಗೆ ದಾವಿಸಬೇಕಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು