3:11 PM Sunday5 - July 2026
ಬ್ರೇಕಿಂಗ್ ನ್ಯೂಸ್
ತೀರ್ಥಹಳ್ಳಿ | ಅರಳಾಪುರದ ಕೊಪ್ಪಲು ಗ್ರಾಮದಲ್ಲಿ ಗಾಳಿ ಮಳೆಗೆ ಬಿದ್ದ ಬೃಹತ್ ಮರ:… Raichuru | ಮಸ್ಕಿ: ಅತಿಥಿ ಶಿಕ್ಷಕರ ಭದ್ರತೆ ಸೇರಿದಂತೆ ವಿವಿಧ ಬೇಡಿಕೆ ಆಗ್ರಹಿಸಿ… ಮಡಿಕೇರಿ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಕ್ರಮವಾಗಿ ಜೂಜಾಟ: 28 ಜನರ ಬಂಧನ;… ಮತ ಪರಿಷ್ಕರಣೆ ವಿಚಾರದಲ್ಲಿ ಅಧಿಕಾರಿಗಳ ಕಳ್ಳಾಟ..!?: ಮನೆ ಮನೆಗೆ ಹೋಗುವ ಬದಲಾಗಿ ಜನರನ್ನೇ… ಮುಂದಿನ ಪೀಳಿಗೆಗೆ ಹಿಂಸೆ, ದ್ವೇಷ, ಸುಳ್ಳಿನ ಭಾರತವನ್ನು ಕೊಡಬಾರದು: ಕೆಪಿಸಿಸಿ ಅಧ್ಯಕ್ಷ ಬಿ.ಕೆ.… ಕಾಸು ಬೇಕಾದ್ರೆ ನನ್ನ ಹತ್ರ ಕೇಳೋ: ಲಂಚಕೋರ ಅಧಿಕಾರಿಗೆ ಕುಣಿಗಲ್ ಶಾಸಕ ಡಾ.… Bangalore | ವೇಶ್ಯಾವಾಟಿಕೆ:12 ಮಂದಿ ಬಾಂಗ್ಲಾದೇಶಿ ಪ್ರಜೆಗಳು ಸಿಸಿಬಿ ಪೊಲೀಸರ ವಶಕ್ಕೆ ಶಾಸಕ ಪ್ರದೀಪ್ ಈಶ್ವರ್ ಮೇಲೆ ಹಲ್ಲೆ ಯತ್ನ: ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ… ಬೆಂಗಳೂರು | ನಕಲಿ ಪೊಲೀಸ್ ಅಸಲಿ ಆಟ: ಯೂನಿಫಾರ್ಮ್ ಧರಿಸಿ ಬೈಕ್ ಸವಾರರಿಂದ… Belagavi | ವಿವಾಹಿತೆಯೊಂದಿಗೆ ಪರಾರಿ: ಯುವಕನ ಮನೆ ಧ್ವಂಸ; ಕುರಿಗಳನ್ನೂ ಹೊತ್ತೊಯ್ದು ಭರ್ಜರಿ…

ಇತ್ತೀಚಿನ ಸುದ್ದಿ

ಕೂಡ್ಲಿಗಿ: ಕಳ್ಳತನ ಪ್ರಕರಣ ಭೇದಿಸಿದ ಪೊಲೀಸರು; ಇಬ್ಬರ ಬಂಧನ; ಸಾಮಗ್ರಿ ಜಪ್ತಿ

03/12/2024, 13:21

ವಿ.ಜಿ.ವೃಷಭೇಂದ್ರ ಕೂಡ್ಲಿಗಿ ವಿಜಯನಗರ
info.reporterkarnataka@gmail.com

ವಿಜಯನಗರ ಜಿಲ್ಲೆಯ ಕೂಡ್ಲಿಗಿ ತಾಲೂಕಿನ ಈಚಲಬೊಮ್ಮನಹಳ್ಳಿ ಹೊರವಲಯದಲ್ಲಿರುವ ಶ್ರೀ ಉಡುಸಲಮ್ಮ ದೇವಿ ದೇವಸ್ಥಾನ ಕಳ್ಳತನ ಪ್ರಕರಣವನ್ನು ಕೂಡ್ಲಿಗಿ ಪೊಲೀಸರು ಭೇದಿಸಿದ್ದು, ಇಬ್ಬರು ಆರೋಪಿಗಳನ್ನು ಬಂಧಿಸಿದ್ದು, ಬಂಧಿತರಿಂದ ಒಟ್ಟು 1.95.839 ರೂ. ಬೆಲೆಯ ಸಾಮಗ್ರಿಗಳನ್ನು ಜಪ್ತಿ ಮಾಡಿದ್ದಾರೆ.


ಈ ವಿಷಯವನ್ನು ಪೊಲೀಸ್ ಠಾಣಾಧಿಕಾರಿ ಸಿಪಿಐ ಸುರೇಶ ತಳವಾರ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಕಳ್ಳತನ ಮಾಡಿದ್ದ ಹೂವಿಹಡಗಲಿ ತಾಲೂಕಿನ, ಕೆಂಚಮಲ್ಲನಹಳ್ಳಿಯ ಹಡಪದ ವೀರೇಶ. ಕೂಡ್ಲಿಗಿ ತಾಲೂಕಿನ ಪಾಲಯ್ಯನಕೋಟೆಯ, ಹನುಮಂತಪ್ಪ ಎಂದು ಗುರುತಿಸಲಾಗಿದೆ.
ಕಳ್ಳತನ ಪ್ರಕರಣ ನ. 23 ರಂದು ರಾತ್ರಿ ಜರುಗಿರುವುದಾಗಿ, ಕೂಡ್ಲಿಗಿ ಪೊಲೀಸ್ ಠಾಣೆಯಲ್ಲಿ ದಾವೆ ದಾಖಲಾಗಿತ್ತು. ವಿಜಯನಗರ ಜಿಲ್ಲಾ ಪೊಲೀಸ್ ವರಿಷ್ಠಾದಿಕಾರಿ ಬಿ.ಎಲ್. ಹರಿಬಾಬು, ಜಿಲ್ಲಾ ಪೊಲೀಸ್ ಹೆಚ್ಚುವರಿ ವರಿಷ್ಠಾದಿಕಾರಿ ಸಲೀಂ ಪಾಷ ರವರ ಸೂಚನೆಯ ಮೇರೆಗೆ. ಕೂಡ್ಲಿಗಿ ಡಿವೈಎಸ್ಪಿ, ಮಲ್ಲೇಶಪ್ಪ ವಿ ಮಲ್ಲಾಪುರವರ ಮಾರ್ಗದರ್ಶನದಲ್ಲಿ. ಸಿಪಿಐ ಸುರೇಶ ಹೆಚ್ ತಳವಾರ ರವರ ನೇತೃತ್ವದಲ್ಲಿ, ಕೂಡ್ಲಿಗಿ ಪಿಎಸ್ಐ ಸಿ.ಪ್ರಕಾಶರವರು. ಅಪರಾಧ ನಿಗ್ರಹ ಹಾಗೂ ಅಪರಾಧಿಗಳ ಪತ್ತೆ ದಳ ಸಿಬ್ಬಂದಿಯವರು, ಕಳ್ಳರ ಪತ್ತೆ ಕಾರ್ಯಚರಣೆ ನಡೆಸಿ ಪ್ರಕರಣ ಭೇದಿಸುವಲ್ಲಿ ಯಶಸ್ವಿಯಾಗಿದ್ದಾರೆ. ಸಿಬ್ಬಂದಿಯವರಾದ ಪೊಲೀಸ್ ಪೇದೆಗಳಾದ ಅಂಜಿನಪ್ಪ, ಹಸನುಲ್ಲಾ, ಜಿ.ಹಂಪಣ್ಣ, ಬಂಡೇ ರಾಘವೇಂದ್ರ, ಪ್ರವೀಣಕುಮಾರ, ಶಿವಕುಮಾರ ರವರು ಪತ್ತೆ ಕಾರ್ಯಚರಣೆಯಲ್ಲಿ ಭಾಗವಹಿಸಿದ್ದರು. ಪತ್ರಿಕಾ ಪ್ರಕಟಣೆ ಸಂದರ್ಭದಲ್ಲಿ, ಎಎಸ್ಐ ಮೋಹನ್ ಕುಮಾರ್ ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು