3:13 PM Thursday5 - March 2026
ಬ್ರೇಕಿಂಗ್ ನ್ಯೂಸ್
ದನದ ಅವಶೇಷ ಪತ್ತೆ: ಕೊಪ್ಪ-ತೀರ್ಥಹಳ್ಳಿ ರಾಷ್ಟಿಯ ಹೆದ್ದಾರಿ ತಡೆದು ಭಜರಂಗ ದಳ ಕಾರ್ಯಕರ್ತರ… ಡಿಕೆಶಿ ಮೇಲೆ ಕಣ್ಗಾವಲು | ಎಚ್ ಡಿಕೆ, ಆರ್. ಅಶೋಕ್ ಹೇಳಿಕೆ ‘’ತಾ… ಚೆನ್ನೈ ವಿಶೇಷ ಸಮಾವೇಶದಲ್ಲಿ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್: ಸಾರ್ವಜನಿಕ ಆರೋಗ್ಯ ಮೂಲಸೌಕರ್ಯ ಕುರಿತು… ಚೆನ್ನಪಟ್ಟಣ | ಕೊಡಗಿನ ಸಾಕಾನೆಗಳ ಯಶಸ್ವಿ ಕಾರ್ಯಾಚರಣೆ: ನಿರಂತರ ಉಪಟಳ ನೀಡುತ್ತಿದ್ದ ಮಕ್ನಾ… ಬೆಂಗಳೂರಿನ ನೈಜೆಲ್ ಫೆರ್ನಾಂಡಿಸ್‌ಗೆ ಅಪರೂಪದ ‘ಪಾಪಲ್ ನೈಟ್‌ಹುಡ್’ ಗೌರವ ಪ್ರದಾನ ತಂತ್ರಜ್ಞಾನ ಕ್ಷೇತ್ರದಲ್ಲಿ ಭಾರತ ಜಾಗತಿಕ ಮುಂಚೂಣಿಯತ್ತ ಸಾಗಿದೆ: ಕೃಷಿ ವಿಜ್ಞಾನಿ ಡಾ. ತಿಮಕಾಪುರ ನಿರಂತರ ಕಾಡಾನೆ ದಾಳಿಗೆ ಕಂಗಾಲಾದ ಮಲೆನಾಡಿಗರು: ಕಳೆದೊಂದು ವರ್ಷದಲ್ಲಿ 9 ಜನ ಕಾಡಾನೆ… ನಾಪೋಕ್ಲು: ಹಿಂದೂ ಸಂಗಮ ಸಮಾವೇಶ ಪ್ರಚಾರ ವೇಳೆ ಮಾತಿನ ಚಕಮಕಿ; ಓರ್ವನಿಗೆ ಗಾಯ ಯೋಗೀಶ್ ಗೌಡ ಕೊಲೆ ಪ್ರಕರಣ: ಶಾಸಕ ವಿನಯ್ ಕುಲಕರ್ಣಿಗೆ ಸುಪ್ರೀಂ ಕೋರ್ಟ್‌ನಿಂದ ಜಾಮೀನು… “ನಾನು ಭ್ರಷ್ಟನಲ್ಲ”: ದಿಲ್ಲಿ ಅಬಕಾರಿ ಪ್ರಕರಣದಲ್ಲಿ ಖುಲಾಸೆಗೊಂಡ ಅರವಿಂದ್ ಕೇಜ್ರಿವಾಲ್ ಕಣ್ಣೀರು

ಇತ್ತೀಚಿನ ಸುದ್ದಿ

ಕೂಡ್ಲಿಗಿ: ಕಳ್ಳತನ ಪ್ರಕರಣ ಭೇದಿಸಿದ ಪೊಲೀಸರು; ಇಬ್ಬರ ಬಂಧನ; ಸಾಮಗ್ರಿ ಜಪ್ತಿ

03/12/2024, 13:21

ವಿ.ಜಿ.ವೃಷಭೇಂದ್ರ ಕೂಡ್ಲಿಗಿ ವಿಜಯನಗರ
info.reporterkarnataka@gmail.com

ವಿಜಯನಗರ ಜಿಲ್ಲೆಯ ಕೂಡ್ಲಿಗಿ ತಾಲೂಕಿನ ಈಚಲಬೊಮ್ಮನಹಳ್ಳಿ ಹೊರವಲಯದಲ್ಲಿರುವ ಶ್ರೀ ಉಡುಸಲಮ್ಮ ದೇವಿ ದೇವಸ್ಥಾನ ಕಳ್ಳತನ ಪ್ರಕರಣವನ್ನು ಕೂಡ್ಲಿಗಿ ಪೊಲೀಸರು ಭೇದಿಸಿದ್ದು, ಇಬ್ಬರು ಆರೋಪಿಗಳನ್ನು ಬಂಧಿಸಿದ್ದು, ಬಂಧಿತರಿಂದ ಒಟ್ಟು 1.95.839 ರೂ. ಬೆಲೆಯ ಸಾಮಗ್ರಿಗಳನ್ನು ಜಪ್ತಿ ಮಾಡಿದ್ದಾರೆ.


ಈ ವಿಷಯವನ್ನು ಪೊಲೀಸ್ ಠಾಣಾಧಿಕಾರಿ ಸಿಪಿಐ ಸುರೇಶ ತಳವಾರ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಕಳ್ಳತನ ಮಾಡಿದ್ದ ಹೂವಿಹಡಗಲಿ ತಾಲೂಕಿನ, ಕೆಂಚಮಲ್ಲನಹಳ್ಳಿಯ ಹಡಪದ ವೀರೇಶ. ಕೂಡ್ಲಿಗಿ ತಾಲೂಕಿನ ಪಾಲಯ್ಯನಕೋಟೆಯ, ಹನುಮಂತಪ್ಪ ಎಂದು ಗುರುತಿಸಲಾಗಿದೆ.
ಕಳ್ಳತನ ಪ್ರಕರಣ ನ. 23 ರಂದು ರಾತ್ರಿ ಜರುಗಿರುವುದಾಗಿ, ಕೂಡ್ಲಿಗಿ ಪೊಲೀಸ್ ಠಾಣೆಯಲ್ಲಿ ದಾವೆ ದಾಖಲಾಗಿತ್ತು. ವಿಜಯನಗರ ಜಿಲ್ಲಾ ಪೊಲೀಸ್ ವರಿಷ್ಠಾದಿಕಾರಿ ಬಿ.ಎಲ್. ಹರಿಬಾಬು, ಜಿಲ್ಲಾ ಪೊಲೀಸ್ ಹೆಚ್ಚುವರಿ ವರಿಷ್ಠಾದಿಕಾರಿ ಸಲೀಂ ಪಾಷ ರವರ ಸೂಚನೆಯ ಮೇರೆಗೆ. ಕೂಡ್ಲಿಗಿ ಡಿವೈಎಸ್ಪಿ, ಮಲ್ಲೇಶಪ್ಪ ವಿ ಮಲ್ಲಾಪುರವರ ಮಾರ್ಗದರ್ಶನದಲ್ಲಿ. ಸಿಪಿಐ ಸುರೇಶ ಹೆಚ್ ತಳವಾರ ರವರ ನೇತೃತ್ವದಲ್ಲಿ, ಕೂಡ್ಲಿಗಿ ಪಿಎಸ್ಐ ಸಿ.ಪ್ರಕಾಶರವರು. ಅಪರಾಧ ನಿಗ್ರಹ ಹಾಗೂ ಅಪರಾಧಿಗಳ ಪತ್ತೆ ದಳ ಸಿಬ್ಬಂದಿಯವರು, ಕಳ್ಳರ ಪತ್ತೆ ಕಾರ್ಯಚರಣೆ ನಡೆಸಿ ಪ್ರಕರಣ ಭೇದಿಸುವಲ್ಲಿ ಯಶಸ್ವಿಯಾಗಿದ್ದಾರೆ. ಸಿಬ್ಬಂದಿಯವರಾದ ಪೊಲೀಸ್ ಪೇದೆಗಳಾದ ಅಂಜಿನಪ್ಪ, ಹಸನುಲ್ಲಾ, ಜಿ.ಹಂಪಣ್ಣ, ಬಂಡೇ ರಾಘವೇಂದ್ರ, ಪ್ರವೀಣಕುಮಾರ, ಶಿವಕುಮಾರ ರವರು ಪತ್ತೆ ಕಾರ್ಯಚರಣೆಯಲ್ಲಿ ಭಾಗವಹಿಸಿದ್ದರು. ಪತ್ರಿಕಾ ಪ್ರಕಟಣೆ ಸಂದರ್ಭದಲ್ಲಿ, ಎಎಸ್ಐ ಮೋಹನ್ ಕುಮಾರ್ ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು