10:08 AM Wednesday24 - December 2025
ಬ್ರೇಕಿಂಗ್ ನ್ಯೂಸ್
ಸಂಸದ ಯದುವೀರ್‌ ಪ್ರಯತ್ನದ ಫಲಶ್ರುತಿ : ತಂಬಾಕು ಮಾರಾಟಕ್ಕೆ ಅನುಮತಿ ರಾಮೇಶ್ವರಂ ಕೆಫೆ ವಿರುದ್ಧದ ಪ್ರಕರಣದಲ್ಲಿ ಹೆಚ್ಚಿನ ತನಿಖೆಗೆ ಕರ್ನಾಟಕ ಹೈಕೋರ್ಟ್ ವತಿಯಿಂದ ತಡೆಯಾಜ್ಞೆ;… ಅಟಲ್ ಜೀ ವೃಕ್ಷ ಯೋಜನೆಯಡಿ 2240 ಸಸಿ ಸಂರಕ್ಷಣೆ: ವರ್ಷಪೂರ್ತಿ ಅಟಲ್ ಜನ್ಮ… ಗಾಂಧಿ ಭಾರತವನ್ನು ಗೋಡ್ಸೆ ಭಾರತವಾಗಿ ಮಾಡಲು ಬಿಡುವುದಿಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್ ಟಿಪ್ಪರ್ -ಬೊಲೆರೋ ಜೀಪ್ ಡಿಕ್ಕಿ: ಕರ್ತವ್ಯದಲ್ಲಿ ತೆರಳುತ್ತಿದ್ದ ಬಿಎಸ್ಸೆನ್ನೆಲ್ ಸಿಬ್ಬಂದಿಗಳಿಗೆ ಗಾಯ ಹೌದು…ವೈದ್ಯೋ ನಾರಾಯಣೋ ಹರಿ; ಆದರೆ, ದಾದಿಯರು ಎಲೆ ಮರೆಯ ಕಾಯಿ! ಪೌರ ಕಾರ್ಮಿಕರು ಸೇರಿ ಎಲ್ಲ ಕಾರ್ಮಿಕರಿಗೆ ಪಾಲಿಕೆಯಿಂದಲೇ ನೇರ ವೇತನ ಪಾವತಿಗೆ ಕ್ರಮ:… ಕ್ರೆಡಲ್‌ನಿಂದ ರಾಷ್ಟ್ರೀಯ ಇಂಧನ ಸಂರಕ್ಷಣಾ ದಿನಾಚರಣೆ: ಚಿತ್ರ ಬಿಡಿಸಿದ ಪ್ರೌಢಶಾಲೆ ಮಕ್ಕಳು ಮಡಿಕೇರಿ ಹನಿಟ್ರ್ಯಾಪ್ ಪ್ರಕರಣ: ನಾಪತ್ತೆಯಾಗಿದ್ದ ಮತ್ತಿಬ್ಬರು ಆರೋಪಗಳ ಬಂಧನ Belagavi | ಆರೋಗ್ಯ ಸೇತು-ಸಂಚಾರಿ ಆರೋಗ್ಯ ಘಟಕಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ

ಇತ್ತೀಚಿನ ಸುದ್ದಿ

ಕೂಡ್ಲಿಗಿ: ಕಳ್ಳತನ ಪ್ರಕರಣ ಭೇದಿಸಿದ ಪೊಲೀಸರು; ಇಬ್ಬರ ಬಂಧನ; ಸಾಮಗ್ರಿ ಜಪ್ತಿ

03/12/2024, 13:21

ವಿ.ಜಿ.ವೃಷಭೇಂದ್ರ ಕೂಡ್ಲಿಗಿ ವಿಜಯನಗರ
info.reporterkarnataka@gmail.com

ವಿಜಯನಗರ ಜಿಲ್ಲೆಯ ಕೂಡ್ಲಿಗಿ ತಾಲೂಕಿನ ಈಚಲಬೊಮ್ಮನಹಳ್ಳಿ ಹೊರವಲಯದಲ್ಲಿರುವ ಶ್ರೀ ಉಡುಸಲಮ್ಮ ದೇವಿ ದೇವಸ್ಥಾನ ಕಳ್ಳತನ ಪ್ರಕರಣವನ್ನು ಕೂಡ್ಲಿಗಿ ಪೊಲೀಸರು ಭೇದಿಸಿದ್ದು, ಇಬ್ಬರು ಆರೋಪಿಗಳನ್ನು ಬಂಧಿಸಿದ್ದು, ಬಂಧಿತರಿಂದ ಒಟ್ಟು 1.95.839 ರೂ. ಬೆಲೆಯ ಸಾಮಗ್ರಿಗಳನ್ನು ಜಪ್ತಿ ಮಾಡಿದ್ದಾರೆ.


ಈ ವಿಷಯವನ್ನು ಪೊಲೀಸ್ ಠಾಣಾಧಿಕಾರಿ ಸಿಪಿಐ ಸುರೇಶ ತಳವಾರ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಕಳ್ಳತನ ಮಾಡಿದ್ದ ಹೂವಿಹಡಗಲಿ ತಾಲೂಕಿನ, ಕೆಂಚಮಲ್ಲನಹಳ್ಳಿಯ ಹಡಪದ ವೀರೇಶ. ಕೂಡ್ಲಿಗಿ ತಾಲೂಕಿನ ಪಾಲಯ್ಯನಕೋಟೆಯ, ಹನುಮಂತಪ್ಪ ಎಂದು ಗುರುತಿಸಲಾಗಿದೆ.
ಕಳ್ಳತನ ಪ್ರಕರಣ ನ. 23 ರಂದು ರಾತ್ರಿ ಜರುಗಿರುವುದಾಗಿ, ಕೂಡ್ಲಿಗಿ ಪೊಲೀಸ್ ಠಾಣೆಯಲ್ಲಿ ದಾವೆ ದಾಖಲಾಗಿತ್ತು. ವಿಜಯನಗರ ಜಿಲ್ಲಾ ಪೊಲೀಸ್ ವರಿಷ್ಠಾದಿಕಾರಿ ಬಿ.ಎಲ್. ಹರಿಬಾಬು, ಜಿಲ್ಲಾ ಪೊಲೀಸ್ ಹೆಚ್ಚುವರಿ ವರಿಷ್ಠಾದಿಕಾರಿ ಸಲೀಂ ಪಾಷ ರವರ ಸೂಚನೆಯ ಮೇರೆಗೆ. ಕೂಡ್ಲಿಗಿ ಡಿವೈಎಸ್ಪಿ, ಮಲ್ಲೇಶಪ್ಪ ವಿ ಮಲ್ಲಾಪುರವರ ಮಾರ್ಗದರ್ಶನದಲ್ಲಿ. ಸಿಪಿಐ ಸುರೇಶ ಹೆಚ್ ತಳವಾರ ರವರ ನೇತೃತ್ವದಲ್ಲಿ, ಕೂಡ್ಲಿಗಿ ಪಿಎಸ್ಐ ಸಿ.ಪ್ರಕಾಶರವರು. ಅಪರಾಧ ನಿಗ್ರಹ ಹಾಗೂ ಅಪರಾಧಿಗಳ ಪತ್ತೆ ದಳ ಸಿಬ್ಬಂದಿಯವರು, ಕಳ್ಳರ ಪತ್ತೆ ಕಾರ್ಯಚರಣೆ ನಡೆಸಿ ಪ್ರಕರಣ ಭೇದಿಸುವಲ್ಲಿ ಯಶಸ್ವಿಯಾಗಿದ್ದಾರೆ. ಸಿಬ್ಬಂದಿಯವರಾದ ಪೊಲೀಸ್ ಪೇದೆಗಳಾದ ಅಂಜಿನಪ್ಪ, ಹಸನುಲ್ಲಾ, ಜಿ.ಹಂಪಣ್ಣ, ಬಂಡೇ ರಾಘವೇಂದ್ರ, ಪ್ರವೀಣಕುಮಾರ, ಶಿವಕುಮಾರ ರವರು ಪತ್ತೆ ಕಾರ್ಯಚರಣೆಯಲ್ಲಿ ಭಾಗವಹಿಸಿದ್ದರು. ಪತ್ರಿಕಾ ಪ್ರಕಟಣೆ ಸಂದರ್ಭದಲ್ಲಿ, ಎಎಸ್ಐ ಮೋಹನ್ ಕುಮಾರ್ ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು