2:51 AM Thursday7 - May 2026
ಬ್ರೇಕಿಂಗ್ ನ್ಯೂಸ್
ರಕ್ತ ಸಂಬಂಧವನ್ನೇ ಮರೆತು ಹಸೆಮಣೆಗೆ ಏರಿದ ಅಕ್ಕ ತಮ್ಮ..! ದುಬಾರೆ | ಅರಣ್ಯ ಸಚಿವರಿಗೆ ಘೇರಾವ್ ಯತ್ನ: ಬಿಜೆಪಿ ಕಾರ್ಯಕರ್ತರು ಪೊಲೀಸ್ ವಶಕ್ಕೆ ಪಶ್ಚಿಮ ಬಂಗಾಳದಲ್ಲಿ ನೂತನ ಸರಕಾರ ರಚನೆ: ಚುನಾವಣಾ ಆಯೋಗ ಅಧಿಸೂಚನೆ ಸಚಿವ ಜಮೀರ್ ಅಹ್ಮದ್ ಖಾನ್ ಮನೆಯಲ್ಲಿ ಕಳ್ಳತನ ಪ್ರಕರಣ : ಇಬ್ಬರು ಆರೋಪಿಗಳು… ಪಶ್ಚಿಮ ಬಂಗಾಳ: ರಾಜೀನಾಮೆ ನೀಡಲು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನಿರಾಕರಣೆ ಧಾರವಾಡದಲ್ಲಿ ಬೌದ್ಧ ಸನ್ಯಾಸಿ ಕೊಲೆ ಪ್ರಕರಣ: ಮಹಾರಾಷ್ಟ್ರದಲ್ಲಿ 3 ಮಂದಿ ಆರೋಪಿಗಳ ಅರೆಸ್ಟ್ ಸಿದ್ದಾಪುರ: ಕಾವೇರಿ ನದಿಯಲ್ಲಿ ಮುಳುಗಿ ವ್ಯಕ್ತಿ ದಾರುಣ ಸಾವು ಕೇವಲ 1 ಮತದಿಂದ ಡಿಎಂಕೆ ಅಭ್ಯರ್ಥಿ ವಿರುದ್ಧ ರೋಚಕ ಗೆಲುವು ಕಂಡ ಟಿವಿಕೆ… ಕೇರಳದಲ್ಲಿ ಯುಡಿಎಫ್‌ ಶತಕ: ಸಿಎಂ ರೇಸ್​ನಲ್ಲಿ ಮೂವರ ಹೆಸರು ಪಶ್ಚಿಮ ಬಂಗಾಳ: ಚುನಾವಣೆ ಫಲಿತಾಂಶ ಬಳಿಕ ಗಲಾಟೆ, ಪೊಲೀಸರಿಂದ ಲಾಠಿಚಾರ್ಜ್

ಇತ್ತೀಚಿನ ಸುದ್ದಿ

ಕೂಡ್ಲಿಗಿ: ಕಳ್ಳತನ ಪ್ರಕರಣ ಭೇದಿಸಿದ ಪೊಲೀಸರು; ಇಬ್ಬರ ಬಂಧನ; ಸಾಮಗ್ರಿ ಜಪ್ತಿ

03/12/2024, 13:21

ವಿ.ಜಿ.ವೃಷಭೇಂದ್ರ ಕೂಡ್ಲಿಗಿ ವಿಜಯನಗರ
info.reporterkarnataka@gmail.com

ವಿಜಯನಗರ ಜಿಲ್ಲೆಯ ಕೂಡ್ಲಿಗಿ ತಾಲೂಕಿನ ಈಚಲಬೊಮ್ಮನಹಳ್ಳಿ ಹೊರವಲಯದಲ್ಲಿರುವ ಶ್ರೀ ಉಡುಸಲಮ್ಮ ದೇವಿ ದೇವಸ್ಥಾನ ಕಳ್ಳತನ ಪ್ರಕರಣವನ್ನು ಕೂಡ್ಲಿಗಿ ಪೊಲೀಸರು ಭೇದಿಸಿದ್ದು, ಇಬ್ಬರು ಆರೋಪಿಗಳನ್ನು ಬಂಧಿಸಿದ್ದು, ಬಂಧಿತರಿಂದ ಒಟ್ಟು 1.95.839 ರೂ. ಬೆಲೆಯ ಸಾಮಗ್ರಿಗಳನ್ನು ಜಪ್ತಿ ಮಾಡಿದ್ದಾರೆ.


ಈ ವಿಷಯವನ್ನು ಪೊಲೀಸ್ ಠಾಣಾಧಿಕಾರಿ ಸಿಪಿಐ ಸುರೇಶ ತಳವಾರ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಕಳ್ಳತನ ಮಾಡಿದ್ದ ಹೂವಿಹಡಗಲಿ ತಾಲೂಕಿನ, ಕೆಂಚಮಲ್ಲನಹಳ್ಳಿಯ ಹಡಪದ ವೀರೇಶ. ಕೂಡ್ಲಿಗಿ ತಾಲೂಕಿನ ಪಾಲಯ್ಯನಕೋಟೆಯ, ಹನುಮಂತಪ್ಪ ಎಂದು ಗುರುತಿಸಲಾಗಿದೆ.
ಕಳ್ಳತನ ಪ್ರಕರಣ ನ. 23 ರಂದು ರಾತ್ರಿ ಜರುಗಿರುವುದಾಗಿ, ಕೂಡ್ಲಿಗಿ ಪೊಲೀಸ್ ಠಾಣೆಯಲ್ಲಿ ದಾವೆ ದಾಖಲಾಗಿತ್ತು. ವಿಜಯನಗರ ಜಿಲ್ಲಾ ಪೊಲೀಸ್ ವರಿಷ್ಠಾದಿಕಾರಿ ಬಿ.ಎಲ್. ಹರಿಬಾಬು, ಜಿಲ್ಲಾ ಪೊಲೀಸ್ ಹೆಚ್ಚುವರಿ ವರಿಷ್ಠಾದಿಕಾರಿ ಸಲೀಂ ಪಾಷ ರವರ ಸೂಚನೆಯ ಮೇರೆಗೆ. ಕೂಡ್ಲಿಗಿ ಡಿವೈಎಸ್ಪಿ, ಮಲ್ಲೇಶಪ್ಪ ವಿ ಮಲ್ಲಾಪುರವರ ಮಾರ್ಗದರ್ಶನದಲ್ಲಿ. ಸಿಪಿಐ ಸುರೇಶ ಹೆಚ್ ತಳವಾರ ರವರ ನೇತೃತ್ವದಲ್ಲಿ, ಕೂಡ್ಲಿಗಿ ಪಿಎಸ್ಐ ಸಿ.ಪ್ರಕಾಶರವರು. ಅಪರಾಧ ನಿಗ್ರಹ ಹಾಗೂ ಅಪರಾಧಿಗಳ ಪತ್ತೆ ದಳ ಸಿಬ್ಬಂದಿಯವರು, ಕಳ್ಳರ ಪತ್ತೆ ಕಾರ್ಯಚರಣೆ ನಡೆಸಿ ಪ್ರಕರಣ ಭೇದಿಸುವಲ್ಲಿ ಯಶಸ್ವಿಯಾಗಿದ್ದಾರೆ. ಸಿಬ್ಬಂದಿಯವರಾದ ಪೊಲೀಸ್ ಪೇದೆಗಳಾದ ಅಂಜಿನಪ್ಪ, ಹಸನುಲ್ಲಾ, ಜಿ.ಹಂಪಣ್ಣ, ಬಂಡೇ ರಾಘವೇಂದ್ರ, ಪ್ರವೀಣಕುಮಾರ, ಶಿವಕುಮಾರ ರವರು ಪತ್ತೆ ಕಾರ್ಯಚರಣೆಯಲ್ಲಿ ಭಾಗವಹಿಸಿದ್ದರು. ಪತ್ರಿಕಾ ಪ್ರಕಟಣೆ ಸಂದರ್ಭದಲ್ಲಿ, ಎಎಸ್ಐ ಮೋಹನ್ ಕುಮಾರ್ ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು