12:39 AM Wednesday19 - August 2026
ಬ್ರೇಕಿಂಗ್ ನ್ಯೂಸ್
ವಿಜಯನಗರ: ಒಂದೇ ಕುಟುಂಬದ ಮೂವರು ಯುವಕರು ನೀರುಪಾಲು ದಾವಣಗೆರೆ: ಮಹಿಳೆಯ 9 ತಿಂಗಳ ಕೆಮ್ಮಿನ ರಹಸ್ಯ ಬಯಲಿಗೆಳೆದ ಆದಿಚುಂಚನಗಿರಿ ಆಸ್ಪತ್ರೆ ವೈದ್ಯರು ಕೊಡಗಿನಲ್ಲಿ ಮತ್ತೆ ಕಾಡಾನೆ ದಾಳಿ: ಕಾರ್ಮಿಕ ಬಲಿ; ಮತ್ತೋರ್ವ ಗಂಭೀರ ಗಾಯ ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ…

ಇತ್ತೀಚಿನ ಸುದ್ದಿ

ಕೂಡ್ಲಿಗಿ: ಕಳ್ಳತನ ಪ್ರಕರಣ ಭೇದಿಸಿದ ಪೊಲೀಸರು; ಇಬ್ಬರ ಬಂಧನ; ಸಾಮಗ್ರಿ ಜಪ್ತಿ

03/12/2024, 13:21

ವಿ.ಜಿ.ವೃಷಭೇಂದ್ರ ಕೂಡ್ಲಿಗಿ ವಿಜಯನಗರ
info.reporterkarnataka@gmail.com

ವಿಜಯನಗರ ಜಿಲ್ಲೆಯ ಕೂಡ್ಲಿಗಿ ತಾಲೂಕಿನ ಈಚಲಬೊಮ್ಮನಹಳ್ಳಿ ಹೊರವಲಯದಲ್ಲಿರುವ ಶ್ರೀ ಉಡುಸಲಮ್ಮ ದೇವಿ ದೇವಸ್ಥಾನ ಕಳ್ಳತನ ಪ್ರಕರಣವನ್ನು ಕೂಡ್ಲಿಗಿ ಪೊಲೀಸರು ಭೇದಿಸಿದ್ದು, ಇಬ್ಬರು ಆರೋಪಿಗಳನ್ನು ಬಂಧಿಸಿದ್ದು, ಬಂಧಿತರಿಂದ ಒಟ್ಟು 1.95.839 ರೂ. ಬೆಲೆಯ ಸಾಮಗ್ರಿಗಳನ್ನು ಜಪ್ತಿ ಮಾಡಿದ್ದಾರೆ.


ಈ ವಿಷಯವನ್ನು ಪೊಲೀಸ್ ಠಾಣಾಧಿಕಾರಿ ಸಿಪಿಐ ಸುರೇಶ ತಳವಾರ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಕಳ್ಳತನ ಮಾಡಿದ್ದ ಹೂವಿಹಡಗಲಿ ತಾಲೂಕಿನ, ಕೆಂಚಮಲ್ಲನಹಳ್ಳಿಯ ಹಡಪದ ವೀರೇಶ. ಕೂಡ್ಲಿಗಿ ತಾಲೂಕಿನ ಪಾಲಯ್ಯನಕೋಟೆಯ, ಹನುಮಂತಪ್ಪ ಎಂದು ಗುರುತಿಸಲಾಗಿದೆ.
ಕಳ್ಳತನ ಪ್ರಕರಣ ನ. 23 ರಂದು ರಾತ್ರಿ ಜರುಗಿರುವುದಾಗಿ, ಕೂಡ್ಲಿಗಿ ಪೊಲೀಸ್ ಠಾಣೆಯಲ್ಲಿ ದಾವೆ ದಾಖಲಾಗಿತ್ತು. ವಿಜಯನಗರ ಜಿಲ್ಲಾ ಪೊಲೀಸ್ ವರಿಷ್ಠಾದಿಕಾರಿ ಬಿ.ಎಲ್. ಹರಿಬಾಬು, ಜಿಲ್ಲಾ ಪೊಲೀಸ್ ಹೆಚ್ಚುವರಿ ವರಿಷ್ಠಾದಿಕಾರಿ ಸಲೀಂ ಪಾಷ ರವರ ಸೂಚನೆಯ ಮೇರೆಗೆ. ಕೂಡ್ಲಿಗಿ ಡಿವೈಎಸ್ಪಿ, ಮಲ್ಲೇಶಪ್ಪ ವಿ ಮಲ್ಲಾಪುರವರ ಮಾರ್ಗದರ್ಶನದಲ್ಲಿ. ಸಿಪಿಐ ಸುರೇಶ ಹೆಚ್ ತಳವಾರ ರವರ ನೇತೃತ್ವದಲ್ಲಿ, ಕೂಡ್ಲಿಗಿ ಪಿಎಸ್ಐ ಸಿ.ಪ್ರಕಾಶರವರು. ಅಪರಾಧ ನಿಗ್ರಹ ಹಾಗೂ ಅಪರಾಧಿಗಳ ಪತ್ತೆ ದಳ ಸಿಬ್ಬಂದಿಯವರು, ಕಳ್ಳರ ಪತ್ತೆ ಕಾರ್ಯಚರಣೆ ನಡೆಸಿ ಪ್ರಕರಣ ಭೇದಿಸುವಲ್ಲಿ ಯಶಸ್ವಿಯಾಗಿದ್ದಾರೆ. ಸಿಬ್ಬಂದಿಯವರಾದ ಪೊಲೀಸ್ ಪೇದೆಗಳಾದ ಅಂಜಿನಪ್ಪ, ಹಸನುಲ್ಲಾ, ಜಿ.ಹಂಪಣ್ಣ, ಬಂಡೇ ರಾಘವೇಂದ್ರ, ಪ್ರವೀಣಕುಮಾರ, ಶಿವಕುಮಾರ ರವರು ಪತ್ತೆ ಕಾರ್ಯಚರಣೆಯಲ್ಲಿ ಭಾಗವಹಿಸಿದ್ದರು. ಪತ್ರಿಕಾ ಪ್ರಕಟಣೆ ಸಂದರ್ಭದಲ್ಲಿ, ಎಎಸ್ಐ ಮೋಹನ್ ಕುಮಾರ್ ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು