5:04 PM Saturday23 - May 2026
ಬ್ರೇಕಿಂಗ್ ನ್ಯೂಸ್
ಚಿಕ್ಕಮಗಳೂರು: ಕೈ ಕೈ ಮಿಲಾಯಿಸುವ ಮಟ್ಟಿಗೆ ತಲುಪಿದ ಕಾಂಗ್ರೆಸ್ – ಬಿಜೆಪಿ ಕಾರ್ಯಕರ್ತರ… ಮಂಗಳೂರು ವಿಮಾನ ದುರಂತ | ಕಾಕ್‌ಪಿಟ್‌ನಲ್ಲಿ ಹಾರಾಟದ ವೇಳೆ 1 ಗಂಟೆ 40… ಭಾರತೀಯರ ರಕ್ತಕ್ಕೆ ಪಾಕ್​ನಲ್ಲಿ ಪ್ರತೀಕಾರ: ಪುಲ್ವಾಮಾ ದಾಳಿ ಮಾಸ್ಟರ್‌ ಮೈಂಡ್ ಹಮ್ಜಾ ಬುರ್ಹಾನ್… ದ್ವಿತೀಯ ಪಿಯುಸಿ ಪರೀಕ್ಷೆ-2 ಫಲಿತಾಂಶ ಪ್ರಕಟ: 80,535 ವಿದ್ಯಾರ್ಥಿಗಳ ಪೈಕಿ 36,764 ಮಂದಿ… ತಜ್ಞರ ಸಮಿತಿ ವರದಿಯನ್ನು ನಿರ್ಲಕ್ಷಿಸಿದ್ದೇ ದುಬಾರೆ ದುರ್ಘಟನೆ ಕಾರಣ? ನಂಜನಗೂಡು | ಯಡಿಯಾಲ ಸುತ್ತಮುತ್ತ ಹುಲಿ ಹೆಜ್ಜೆ ಪತ್ತೆ: ಗ್ರಾಮಸ್ಥರಲ್ಲಿ ಆತಂಕ ದುಬಾರೆ ಆನೆ ಶಿಬಿರದಲ್ಲಿ ಮಾರ್ಗಸೂಚಿ ಪಾಲಿಸಲು ಸೂಚನೆ: ಕೊಡಗು ಉಸ್ತುವಾರಿ ಸಚಿವ ಬೋಸರಾಜು ಒಂದು ದೇಶ – ಒಂದು ಚುನಾವಣೆ: ವಿವಿಧ ವರ್ಗಗಳ ಅಭಿಪ್ರಾಯ ಆಲಿಸಿದ ಜಂಟಿ… ದುಬಾರೆಯಲ್ಲಿ ಆನೆಗಳ ಸ್ನಾನ ನಾಳೆಯಿಂದ 100 ಅಡಿ ದೂರದಲ್ಲಿ ನಿಂತು ನೋಡಲಷ್ಟೇ ಅವಕಾಶ:… ಕೊಡಗಿನ ತಮ್ಮ ಕಾಫಿ ಎಸ್ಟೇಟ್‌ಗೆ ನುಗ್ಗಿದ ಆನೆಗಳ ಹಿಂಡಿನ ವಿಡಿಯೋ ಹಂಚಿಕೊಂಡ ಉದ್ಯಮಿ…

ಇತ್ತೀಚಿನ ಸುದ್ದಿ

ಕೂಡ್ಲಿಗಿ: ಕಳ್ಳತನ ಪ್ರಕರಣ ಭೇದಿಸಿದ ಪೊಲೀಸರು; ಇಬ್ಬರ ಬಂಧನ; ಸಾಮಗ್ರಿ ಜಪ್ತಿ

03/12/2024, 13:21

ವಿ.ಜಿ.ವೃಷಭೇಂದ್ರ ಕೂಡ್ಲಿಗಿ ವಿಜಯನಗರ
info.reporterkarnataka@gmail.com

ವಿಜಯನಗರ ಜಿಲ್ಲೆಯ ಕೂಡ್ಲಿಗಿ ತಾಲೂಕಿನ ಈಚಲಬೊಮ್ಮನಹಳ್ಳಿ ಹೊರವಲಯದಲ್ಲಿರುವ ಶ್ರೀ ಉಡುಸಲಮ್ಮ ದೇವಿ ದೇವಸ್ಥಾನ ಕಳ್ಳತನ ಪ್ರಕರಣವನ್ನು ಕೂಡ್ಲಿಗಿ ಪೊಲೀಸರು ಭೇದಿಸಿದ್ದು, ಇಬ್ಬರು ಆರೋಪಿಗಳನ್ನು ಬಂಧಿಸಿದ್ದು, ಬಂಧಿತರಿಂದ ಒಟ್ಟು 1.95.839 ರೂ. ಬೆಲೆಯ ಸಾಮಗ್ರಿಗಳನ್ನು ಜಪ್ತಿ ಮಾಡಿದ್ದಾರೆ.


ಈ ವಿಷಯವನ್ನು ಪೊಲೀಸ್ ಠಾಣಾಧಿಕಾರಿ ಸಿಪಿಐ ಸುರೇಶ ತಳವಾರ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಕಳ್ಳತನ ಮಾಡಿದ್ದ ಹೂವಿಹಡಗಲಿ ತಾಲೂಕಿನ, ಕೆಂಚಮಲ್ಲನಹಳ್ಳಿಯ ಹಡಪದ ವೀರೇಶ. ಕೂಡ್ಲಿಗಿ ತಾಲೂಕಿನ ಪಾಲಯ್ಯನಕೋಟೆಯ, ಹನುಮಂತಪ್ಪ ಎಂದು ಗುರುತಿಸಲಾಗಿದೆ.
ಕಳ್ಳತನ ಪ್ರಕರಣ ನ. 23 ರಂದು ರಾತ್ರಿ ಜರುಗಿರುವುದಾಗಿ, ಕೂಡ್ಲಿಗಿ ಪೊಲೀಸ್ ಠಾಣೆಯಲ್ಲಿ ದಾವೆ ದಾಖಲಾಗಿತ್ತು. ವಿಜಯನಗರ ಜಿಲ್ಲಾ ಪೊಲೀಸ್ ವರಿಷ್ಠಾದಿಕಾರಿ ಬಿ.ಎಲ್. ಹರಿಬಾಬು, ಜಿಲ್ಲಾ ಪೊಲೀಸ್ ಹೆಚ್ಚುವರಿ ವರಿಷ್ಠಾದಿಕಾರಿ ಸಲೀಂ ಪಾಷ ರವರ ಸೂಚನೆಯ ಮೇರೆಗೆ. ಕೂಡ್ಲಿಗಿ ಡಿವೈಎಸ್ಪಿ, ಮಲ್ಲೇಶಪ್ಪ ವಿ ಮಲ್ಲಾಪುರವರ ಮಾರ್ಗದರ್ಶನದಲ್ಲಿ. ಸಿಪಿಐ ಸುರೇಶ ಹೆಚ್ ತಳವಾರ ರವರ ನೇತೃತ್ವದಲ್ಲಿ, ಕೂಡ್ಲಿಗಿ ಪಿಎಸ್ಐ ಸಿ.ಪ್ರಕಾಶರವರು. ಅಪರಾಧ ನಿಗ್ರಹ ಹಾಗೂ ಅಪರಾಧಿಗಳ ಪತ್ತೆ ದಳ ಸಿಬ್ಬಂದಿಯವರು, ಕಳ್ಳರ ಪತ್ತೆ ಕಾರ್ಯಚರಣೆ ನಡೆಸಿ ಪ್ರಕರಣ ಭೇದಿಸುವಲ್ಲಿ ಯಶಸ್ವಿಯಾಗಿದ್ದಾರೆ. ಸಿಬ್ಬಂದಿಯವರಾದ ಪೊಲೀಸ್ ಪೇದೆಗಳಾದ ಅಂಜಿನಪ್ಪ, ಹಸನುಲ್ಲಾ, ಜಿ.ಹಂಪಣ್ಣ, ಬಂಡೇ ರಾಘವೇಂದ್ರ, ಪ್ರವೀಣಕುಮಾರ, ಶಿವಕುಮಾರ ರವರು ಪತ್ತೆ ಕಾರ್ಯಚರಣೆಯಲ್ಲಿ ಭಾಗವಹಿಸಿದ್ದರು. ಪತ್ರಿಕಾ ಪ್ರಕಟಣೆ ಸಂದರ್ಭದಲ್ಲಿ, ಎಎಸ್ಐ ಮೋಹನ್ ಕುಮಾರ್ ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು