2:53 AM Friday11 - July 2025
ಬ್ರೇಕಿಂಗ್ ನ್ಯೂಸ್
ಬೆಂಗಳೂರು ಕಾಲ್ತುಳಿತ ಪ್ರಕರಣ: ಮುಖ್ಯಮಂತ್ರಿ ಸಿದ್ದರಾಮಯ್ಯರಿಗೆ ಜಸ್ಟೀಸ್ ಜಾನ್ ಮೈಕೆಲ್ ಡಿ.ಕುನ್ನಾ ವರದಿ… ಚಿಕ್ಕಮಗಳೂರು- ತಿರುಪತಿ ರೈಲಿಗೆ ಚಾಲನೆ: ಕಾಫಿನಾಡಿಗರ ದಶಕಗಳ ಕನಸು ಕೊನೆಗೂ ನನಸು Kodagu | ವಿರಾಜಪೇಟೆ ಕ್ಷೇತ್ರದ 1600 ಆದಿವಾಸಿಗಳಿಗೆ ಜಮೀನು ಹಕ್ಕುಪತ್ರ ವಿತರಣೆಗೆ ಅಸ್ತು:… ಹೆಚ್ಚುತ್ತಿರುವ ಕಾಡಾನೆಗಳ ದಾಂಧಲೆ: ವಿರಾಜಪೇಟೆ ತಿತಿಮತಿ ವ್ಯಾಪ್ತಿಯಲ್ಲಿ ಬಿರುಸುಗೊಂಡ ಕಾಡಿಗಟ್ಟುವ ಕಾರ್ಯಾಚರಣೆ Bangaluru | ನಾಗರಬಾವಿಯ ವಿಟಿಯು ಹಬ್ ಆ್ಯಂಡ್ ಸ್ಪೋಕ್ ಕೇಂದ್ರ ಉದ್ಘಾಟನೆ: ಕೇಂದ್ರ… SCSP-TSP ಯೋಜನೆ | ಅಧಿಕಾರಿಗಳು ಮೈಮರೆತರೆ ಪ್ರಕರಣ ದಾಖಲು ಗ್ಯಾರಂಟಿ: ಸಚಿವ ಡಾ.… New Delhi | ಮಿಸ್ ಯೂನಿವರ್ಸ್ ಕರ್ನಾಟಕ ವಿಜೇತೆ ಚಿಕ್ಕಮಗಳೂರಿನ ವಂಶಿ ಮುಖ್ಯಮಂತ್ರಿ… Kodagu | ಕುಶಾಲನಗರ-ಮಡಿಕೇರಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಲಾರಿ ಡಿಕ್ಕಿ ಹೊಡೆದು ವ್ಯಕ್ತಿ ಸಾವು ಮಂಗಳೂರಿನ ಪೆಟ್ರೋಲಿಯಂ ಕಂಪನಿಗಳ ಸಂಬಂಧಿತ ದುರಂತ ನಿರ್ವಹಣೆಗೆ ಅಗ್ನಿಶಾಮಕ ಇಲಾಖೆಯ ಸಶಕ್ತಗೊಳಿಸಲಾಗಿದೆ: ಗೃಹ… ಕೊಪ್ಪ ಮೊರಾರ್ಜಿ‌ ವಸತಿ ಶಾಲೆಯ ವಿದ್ಯಾರ್ಥಿನಿ ಆತ್ಮಹತ್ಯೆ ಪ್ರಕರಣ: ಪ್ರಿನ್ಸಿಪಾಲ್, ವಾರ್ಡನ್ ಅಮಾನತು:…

ಇತ್ತೀಚಿನ ಸುದ್ದಿ

ಕೂಡ್ಲಿಗಿ: ಕಳ್ಳತನ ಪ್ರಕರಣ ಭೇದಿಸಿದ ಪೊಲೀಸರು; ಇಬ್ಬರ ಬಂಧನ; ಸಾಮಗ್ರಿ ಜಪ್ತಿ

03/12/2024, 13:21

ವಿ.ಜಿ.ವೃಷಭೇಂದ್ರ ಕೂಡ್ಲಿಗಿ ವಿಜಯನಗರ
info.reporterkarnataka@gmail.com

ವಿಜಯನಗರ ಜಿಲ್ಲೆಯ ಕೂಡ್ಲಿಗಿ ತಾಲೂಕಿನ ಈಚಲಬೊಮ್ಮನಹಳ್ಳಿ ಹೊರವಲಯದಲ್ಲಿರುವ ಶ್ರೀ ಉಡುಸಲಮ್ಮ ದೇವಿ ದೇವಸ್ಥಾನ ಕಳ್ಳತನ ಪ್ರಕರಣವನ್ನು ಕೂಡ್ಲಿಗಿ ಪೊಲೀಸರು ಭೇದಿಸಿದ್ದು, ಇಬ್ಬರು ಆರೋಪಿಗಳನ್ನು ಬಂಧಿಸಿದ್ದು, ಬಂಧಿತರಿಂದ ಒಟ್ಟು 1.95.839 ರೂ. ಬೆಲೆಯ ಸಾಮಗ್ರಿಗಳನ್ನು ಜಪ್ತಿ ಮಾಡಿದ್ದಾರೆ.


ಈ ವಿಷಯವನ್ನು ಪೊಲೀಸ್ ಠಾಣಾಧಿಕಾರಿ ಸಿಪಿಐ ಸುರೇಶ ತಳವಾರ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಕಳ್ಳತನ ಮಾಡಿದ್ದ ಹೂವಿಹಡಗಲಿ ತಾಲೂಕಿನ, ಕೆಂಚಮಲ್ಲನಹಳ್ಳಿಯ ಹಡಪದ ವೀರೇಶ. ಕೂಡ್ಲಿಗಿ ತಾಲೂಕಿನ ಪಾಲಯ್ಯನಕೋಟೆಯ, ಹನುಮಂತಪ್ಪ ಎಂದು ಗುರುತಿಸಲಾಗಿದೆ.
ಕಳ್ಳತನ ಪ್ರಕರಣ ನ. 23 ರಂದು ರಾತ್ರಿ ಜರುಗಿರುವುದಾಗಿ, ಕೂಡ್ಲಿಗಿ ಪೊಲೀಸ್ ಠಾಣೆಯಲ್ಲಿ ದಾವೆ ದಾಖಲಾಗಿತ್ತು. ವಿಜಯನಗರ ಜಿಲ್ಲಾ ಪೊಲೀಸ್ ವರಿಷ್ಠಾದಿಕಾರಿ ಬಿ.ಎಲ್. ಹರಿಬಾಬು, ಜಿಲ್ಲಾ ಪೊಲೀಸ್ ಹೆಚ್ಚುವರಿ ವರಿಷ್ಠಾದಿಕಾರಿ ಸಲೀಂ ಪಾಷ ರವರ ಸೂಚನೆಯ ಮೇರೆಗೆ. ಕೂಡ್ಲಿಗಿ ಡಿವೈಎಸ್ಪಿ, ಮಲ್ಲೇಶಪ್ಪ ವಿ ಮಲ್ಲಾಪುರವರ ಮಾರ್ಗದರ್ಶನದಲ್ಲಿ. ಸಿಪಿಐ ಸುರೇಶ ಹೆಚ್ ತಳವಾರ ರವರ ನೇತೃತ್ವದಲ್ಲಿ, ಕೂಡ್ಲಿಗಿ ಪಿಎಸ್ಐ ಸಿ.ಪ್ರಕಾಶರವರು. ಅಪರಾಧ ನಿಗ್ರಹ ಹಾಗೂ ಅಪರಾಧಿಗಳ ಪತ್ತೆ ದಳ ಸಿಬ್ಬಂದಿಯವರು, ಕಳ್ಳರ ಪತ್ತೆ ಕಾರ್ಯಚರಣೆ ನಡೆಸಿ ಪ್ರಕರಣ ಭೇದಿಸುವಲ್ಲಿ ಯಶಸ್ವಿಯಾಗಿದ್ದಾರೆ. ಸಿಬ್ಬಂದಿಯವರಾದ ಪೊಲೀಸ್ ಪೇದೆಗಳಾದ ಅಂಜಿನಪ್ಪ, ಹಸನುಲ್ಲಾ, ಜಿ.ಹಂಪಣ್ಣ, ಬಂಡೇ ರಾಘವೇಂದ್ರ, ಪ್ರವೀಣಕುಮಾರ, ಶಿವಕುಮಾರ ರವರು ಪತ್ತೆ ಕಾರ್ಯಚರಣೆಯಲ್ಲಿ ಭಾಗವಹಿಸಿದ್ದರು. ಪತ್ರಿಕಾ ಪ್ರಕಟಣೆ ಸಂದರ್ಭದಲ್ಲಿ, ಎಎಸ್ಐ ಮೋಹನ್ ಕುಮಾರ್ ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು