6:32 AM Saturday25 - April 2026
ಬ್ರೇಕಿಂಗ್ ನ್ಯೂಸ್
ಬೆಂಗಳೂರಿನಲ್ಲಿ ಭೀಕರ ಅಗ್ನಿ ದುರಂತ: 10 ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ ತುಮಕೂರು: ಒಂದು ವಾರದ ಅಂತರದಲ್ಲಿ 32 ನವಿಲುಗಳು ಸಾವು; ತಾಪಮಾನ ಕಾರಣ? ಬಳ್ಳಾರಿ ಜಿಲ್ಲಾಡಳಿತದಿಂದ ಸರಕಾರಿ ಜಮೀನು ಒತ್ತುವರಿ ವಿರುದ್ಧ 3ನೇ ಹಂತದ ಕಾರ್ಯಾಚರಣೆ Chikkamagaluru | ಸಿಇಟಿ ಬರೆಯಲು ಬಂದ ವಿದ್ಯಾರ್ಥಿನಿಯರಿಗೆ ಶಾಕ್: ಮೂಗುತಿಗೆ ಬಿತ್ತು ಗಮ್… ತಮಿಳುನಾಡಿನಲ್ಲಿ 84% ದಾಟಿದ ಮತದಾನ: ಬಂಗಾಳದಲ್ಲಿ 91% ದಾಖಲೆ ಪ್ರಮಾಣದ ವೋಟಿಂಗ್ ತೀರ್ಥಹಳ್ಳಿ | ಆಗುಂಬೆಯ ಲಕ್ಕುಂದದಲ್ಲಿ ವೃದ್ದೆಯ ಕಟ್ಟಿ ಹಾಕಿ ಲಕ್ಷಾಂತರ ರೂ. ಮೌಲ್ಯದ… ಪಕ್ಷ ಕಟ್ಟಲು ಕಾರ್ಯಕರ್ತರು ಇದ್ದಾರೆ, ಜಮೀರ್ ಜೆಡಿಎಸ್‌ಗೆ ಬರೋ ಅವಶ್ಯಕತೆ ಇಲ್ಲ: ನಿಖಿಲ್… ವಿದೇಶಿ ಮಹಿಳೆಯ ಅತ್ಯಾಚಾರ ದೌರ್ಜನ್ಯ ಪ್ರಕರಣ: ‘ದೇವಿ ವಿಲ್ಲಾ’ ಹೋಂಸ್ಟೇ ಪರವಾನಗಿ ರದ್ದು ಬಸವಕಲ್ಯಾಣ ಬಸವೇಶ್ವರ ರಥೋತ್ಸವದಲ್ಲಿ ಭೀಕರ ದುರಂತ: ರಥದ ಚಕ್ರಕ್ಕೆ ಸಿಲುಕಿ ಭಕ್ತನ ಎರಡು… ತಮಿಳುನಾಡಿನಲ್ಲಿ ಮತದಾನ: ಸಿಎಂ ಸ್ಟಾಲಿನ್, ಸೂಪರ್ ಸ್ಟಾರ್ ರಜನೀಕಾಂತ್, ಪ್ರಸಿದ್ಧ ನಟ ವಿಜಯ್…

ಇತ್ತೀಚಿನ ಸುದ್ದಿ

ಕೂಡ್ಲಿಗಿ: ಲಕ್ಷ್ಮೀಪೂಜೆಯೊಂದಿಗೆ ದೀಪಾವಳಿ ಆಚರಣೆ; ಎಲ್ಲೆಡೆ ಭಾರಿ ಸಂಭ್ರಮಾಚರಣೆ

25/10/2022, 20:27

ವಿ.ಜಿ.ವೃಷಭೇಂದ್ರ ಕೂಡ್ಲಿಗಿ ವಿಜಯನಗರ

info.reporterkarnataka@gmail.com

ವಿಜಯನಗರ ಜಿಲ್ಲೆ ಕೂಡ್ಲಿಗಿ ಪಟ್ಟಣ ಸೇರಿದಂತೆ ತಾಲೂಕಿನಾದ್ಯಂತವ ದೀಪಾವಳಿ ಹಬ್ಬವನ್ಜು ಬಹು ಅರ್ಥಪೂರ್ಣವಾಗಿ ಆಚರಿಸಲಾಯಿತು. ನಾಗರೀಕರು ಹಾಗೂ ಆಸ್ತಿಕರು ತಮ್ಮ ಮನೆಗಳಲ್ಲಿ, ವಿಧಿವತ್ತಾಗಿ ಲಕ್ಷ್ಮೀದೇವಿಯನ್ನು ಪ್ರತಿಷ್ಠಾಪಿಸಿ ಶ್ರದ್ಧಾಭಕ್ತಿಯಿಂದ ಆರಾಧಿಸಿ ಪೂಜಿಸಿ ಹಬ್ಬ ಆಚರಿಸಿದರು. ಲಕ್ಷ್ಮೀದೇವಿಯನ್ನು ವಿಧಿವತ್ತಾಗಿ ಪೂಜೆ ಮಾಡಿ ಧಾರ್ಮಿಕ ಹಾಗೂ ಸಾಂಪ್ರದಾಯಿಕ ಪದ್ಧತಿಯಂತೆ, ನೆರೆ ಹೊರೆಯ ಸುಮಂಗಲಿಯರನ್ನು ಹಾಗೂ ಯುವತಿಯರನ್ನ ಆಹ್ವಾನಿಸಿ ಅವರಿಂದ ಲಕ್ಷ್ಮೀದೇವಿಗೆ ಆರತಿ ಬೆಳಗಿಸಿ ಅವರಿಗೆ ಉಡಿತುಂಬಿ ಹಾರೈಸುವುದು ವಾಡಿಕೆಯಿದೆ. ಹಬ್ಬದ ಪ್ರಯುಕ್ತ ಹೋಳಿಗೆ ಸೇರಿದಂತೆ ಬಗೆ ಬಗೆ ಖಾಧ್ಯಗಳನ್ನು ಲಕ್ಷ್ಮೀದೇವಿಗೆ ಅರ್ಪಿಸಿ,ನಂತರ ಎಲ್ಲರೂ ಒಟ್ಟಾಗಿ ಹಬ್ಬದೂಟ ಸವಿಯೋದು ಹಬ್ಬದ ವಿಶೇಷವಾಗಿದೆ. ದೀಪಾವಳಿ ಎಂದರೆ ಪಟಾಕಿ. ಪಟಾಕಿ ಎಂದರೆ ದೀಪಾವಳಿ ಎಂದರ್ಥ, ಅಂತೆಯೇ ಮಕ್ಕಳು ಮಹಿಳೆಯರು ದೀಪವನ್ನು ಬೆಳಗುತ್ತಾರೆ ಮತ್ತು ಪಟಾಕಿ ಸಿಡಿಸಿ ದೀಪಾವಳಿ ಆಚರಿಸಿ ಸಂಭ್ರಮಿಸುತ್ತಾರೆ. ಅಂತೆಯೇ ಕೂಡ್ಲಿಗಿ ಪಟ್ಟಣದಲ್ಲಿ ದೀಪಾವಳಿಯನ್ನು ನಾಗರೀಕರು ಬಹು ವಿಜೃಂಭಣೆಯಿಂದ ಆಚರಿಸಿದರು.

2ನೇ ವಾರ್ಡಿನವಾಸಿ ರೇಣುಕಾ ಷಣ್ಮುಖಪ್ಪರವರ ಮನೆಯಲ್ಲಿ ದೀಪಾವಳಿಯನ್ನು ಬಹು ಅರ್ಥಪೂರ್ಣವಾಗಿ, ಮಹಿಳೆಯರು ಹಾಗೂ ಮಕ್ಕಳಾದಿಯಾಗಿ ಸಕ್ರೀಯವಾಗಿ ಪಾಲ್ಗೊಂಡಿದ್ದರು. ಈ ಮೂಲಕ ಸಾಂಪ್ರದಾಯಿಕವಾಗಿ ಧಾರ್ಮಿಕ ವಿಧಿ ವಿಧಾನಗಳೊಂದಿಗೆ, ಲಕ್ಷ್ಮೀದೇವಿಯನ್ನ ಆರಾಧಿಸಿ ಪೂಜಿಸಿ ದೀಪಾವಳಿ ಹಬ್ಬ ಆಚರಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು