12:10 AM Thursday25 - December 2025
ಬ್ರೇಕಿಂಗ್ ನ್ಯೂಸ್
ಯಾವತ್ತೇ ವಿಧಾನಸಭೆ ಚುನಾವಣೆ ನಡೆದರೂ ಬಿಜೆಪಿಗೆ ಬಹುಮತ: ಪಕ್ಷದ ರಾಜ್ಯಾಧ್ಯಕ್ಷ ವಿಜಯೇಂದ್ರ ವಿಶ್ವಾಸ ಭಾರತ ರತ್ನ ವಾಜಪೇಯಿ ಗ್ರಂಥಾಲಯ: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಉದ್ಘಾಟನೆ ಜಿಲ್ಲಾ ಮತ್ತು ಕ್ಲಸ್ಟರ್ ಮಟ್ಟದಲ್ಲಿ ಡಿಜಿಟಲ್ ಆರ್ಥಿಕತೆಗೆ ಒತ್ತು: ಕೆಡಿಇಎಂ ಮತ್ತು ಎಫ್‌ಕೆಸಿಸಿಐ… ಪ್ರೀತಿಯ ಸಂಸ್ಕೃತಿ ಬೆಳೆಸಿ: ರೊಸಾರಿಯೋ ಕೆಥೆಡ್ರಲ್‌ನಲ್ಲಿ ಬಿಷಪ್ ಡಾ. ಸಲ್ಡಾನರಿಂದ ಕ್ರಿಸ್ಮಸ್ ಸಂದೇಶ ಕಲಬುರ್ಗಿಯಲ್ಲಿ ಟೆಕ್ಸ್ ಟೈಲ್ ಪಾರ್ಕ್ | ಮುಂದಿನ ತಿಂಗಳು ಉನ್ನತ ಮಟ್ಟದ ಸಭೆ:… ಮೂಡಿಗೆರೆ ತಾಪಂ ಇಒ ದರ್ಬಾರ್‌: ಸರ್ಕಾರಿ ಜೀಪ್‌ ಖಾಸಗಿಯಾಗಿ ದುರ್ಬಳಕೆ; ನಿತ್ಯ 60… ಸಂಸದ ಯದುವೀರ್‌ ಪ್ರಯತ್ನದ ಫಲಶ್ರುತಿ : ತಂಬಾಕು ಮಾರಾಟಕ್ಕೆ ಅನುಮತಿ ರಾಮೇಶ್ವರಂ ಕೆಫೆ ವಿರುದ್ಧದ ಪ್ರಕರಣದಲ್ಲಿ ಹೆಚ್ಚಿನ ತನಿಖೆಗೆ ಕರ್ನಾಟಕ ಹೈಕೋರ್ಟ್ ವತಿಯಿಂದ ತಡೆಯಾಜ್ಞೆ;… ಅಟಲ್ ಜೀ ವೃಕ್ಷ ಯೋಜನೆಯಡಿ 2240 ಸಸಿ ಸಂರಕ್ಷಣೆ: ವರ್ಷಪೂರ್ತಿ ಅಟಲ್ ಜನ್ಮ… ಗಾಂಧಿ ಭಾರತವನ್ನು ಗೋಡ್ಸೆ ಭಾರತವಾಗಿ ಮಾಡಲು ಬಿಡುವುದಿಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್

ಇತ್ತೀಚಿನ ಸುದ್ದಿ

ಕೂಡ್ಲಿಗಿ: ಮಿನಿ ವಿಧಾನಸೌಧ ಉದ್ಘಾಟನೆ ಕಾರ್ಯಕ್ರಮ ಪೂರ್ವ ಸಭೆ; ಭಾರೀ ಸಿದ್ಧತೆ

21/09/2022, 13:15

ವಿ.ಜಿ.ವೃಷಭೇಂದ್ರ ಕೂಡ್ಲಿಗಿ ವಿಜಯನಗರ

info.reporterkarnataka@gmail.com  

ಕೂಡ್ಲಿಗಿಯಲ್ಲಿ ಮಿನಿ ವಿಧಾನಸೌಧ ಉದ್ಘಾಟನೆ ಕಾರ್ಯಕ್ರಮಕ್ಕೆ ಪೂರ್ವ ಸಭೆ ಪ್ರವಾಸಿ ಮಂದಿರದಲ್ಲಿ ನಡೆಯಿತು.

ಸೆ. 26 ರಂದು ಪಟ್ಟಣದ ಮಿನಿ ವಿಧಾನಸೌಧ, ಪಪಂ ಕಚೇರಿ ಹಾಗೂ ಮಹಾದೇವ ಮೈಲಾರ ಕ್ರೀಡಾಂಗಣ ಸೇರಿದಂತೆ ವಿವಿಧ ಕಾಮಗಾರಿಗಳನ್ನು ಲೋಕಾರ್ಪಣೆ ಮಾಡಲಾಗುವುದು ಎಂದು ಶಾಸಕ ಎನ್.ವೈ.ಗೋಪಾಲಕೃಷ್ಣ ಹೇಳಿದರು. 

ಸಚಿವರುಗಳಾದ ಆರ್.ಅಶೋಕ, ಸೋಮಣ್ಣ, ಬಿ‌.ಶ್ರೀರಾಮುಲು, ಎಂ.ಟಿ.ಬಿ.ನಾಗರಾಜ್, ಶಶಿಕಲಾ ಜೊಲ್ಲೆ ಹಾಗೂ ಆನಂದ್ ಸಿಂಗ್  ಈ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದು, ಕ್ಷೇತ್ರದ ಸಕ್ರೀಯ ಕಾರ್ಯಕರ್ತರು ಕಾರ್ಯಕ್ರಮಕ್ಕೆ ಸಾಕ್ಷಿಯಾಗಬೇಕು ಎಂದು ತಿಳಿಸಿದರು. 

ಐತಿಹಾಸಿಕ ಕಾರ್ಯಕ್ರಮವನ್ನು ಆಯೋಜಿಸಲು ಇನ್ನೂ ಸ್ಥಳ ನಿಗದಿ ಬಗ್ಗೆ ಎಲ್ಲರೊಂದಿಗೆ ಚರ್ಚಿಸಿ ತಿಳಿಸಲಾಗುವುದು ಎಂದು ನುಡಿದರು. 

ಸುಮಾರು 5 ಸಾವಿರಕ್ಕೂ ಹೆಚ್ಚು ಜನರು ಕಾರ್ಯಕ್ರಮದಲ್ಲಿ ಭಾಗಿಯಾಗಬಹುದು ಎಂದು ತಿಳಿಸಿದರು. ಅದಕ್ಕಾಗಿ ಸರ್ವ ರೀತಿಯ ತಯಾರಿಯನ್ನು ಮುಖಂಡರುಗಳು ಜವಾಬ್ದಾರಿ ತೆಗೆದುಕೊಂಡು ಎಲ್ಲಿಯೂ ಲೋಪವಾಗದಂತೆ ರೂಪು ರೇಖೆಗಳನ್ನು ಕೈಗೊಳ್ಳಬೇಕು ಎಂದು ಸಭೆಗೆ ತಿಳಿಸಿದರು. ಕಾರ್ಯಕ್ರಮಕ್ಕೆ ಕಂದಾಯ, ವಸತಿ, ಪೌರಾಡಳಿತ,ಸಾರಿಗೆ ಸಚಿವರು ಸೇರಿದಂತೆ ಇತರೆ ಸಚಿವ ಸಂಪುಟದ ಸಹೋದ್ಯೋಗಿಗಳು ಆಗಮಿಸುವ ಹಿನ್ನಲೆಯಲ್ಲಿ ಕ್ಷೇತ್ರದ ಇನ್ನೂಳಿದ ಅಭಿವೃದ್ಧಿಯ ಬಗ್ಗೆ  ಮನವಿ ಸಲ್ಲಿಸಲಾಗುವುದು ಎಂದು ತಿಳಿಸಿದರು.  ಕಾರ್ಯಕ್ರಮದ ರೂಪುರೇಷೆಗೆ ತಾಲೂಕು ಮಟ್ಟದ ಅಧಿಕಾರಿಗಳೊಂದಿಗೆ ಚರ್ಚಿಸಲು ಜಿಲ್ಲಾಧಿಕಾರಿ ಅನಿರುದ್ ಶ್ರವಣ್ ಆಗಮಿಸಿ ಮುಂದಿನ ಕಾರ್ಯಗಳ ಬಗ್ಗೆ ಅಧಿಕಾರಿಗಳಿಗೆ ತಿಳಿಸಲಿದ್ದಾರೆ ಎಂದರು.ಈ ಸಾರ್ವಜನಿಕ ಕಾರ್ಯಕ್ರಮದಲ್ಲಿ ಪಕ್ಷಾತೀತವಾಗಿ ಎಲ್ಲ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು ಭಾಗಿಯಾಗಲಿದ್ದಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು. ಸಭೆಯಲ್ಲಿ ತಹಸೀಲ್ದರ್ ಟಿ.ಜಗದೀಶ್, ತಾಪಂ ಇಒ ರವಿಕುಮಾರ್, ಬಿಜೆಪಿ ಮಂಡಲ ಅಧ್ಯಕ್ಷ ಚೆನ್ನಪ್ಪ, ಬಿಡಿಸಿಸಿ ಬ್ಯಾಂಕ್ ಉಪಾಧ್ಯಕ್ಷ ಗುಂಡುಮುಣುಗು ತಿಪ್ಪೇಸ್ವಾಮಿ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸೂರ್ಯಪಾಪಣ್ಣ, ಮುಖಂಡರಾದ ಕೆ‌.ಎಚ್.ವೀರನಗೌಡ,ಕೆ.ಎಂ.ತಿಪ್ಪೇಸ್ವಾಮಿ, ಟಿ.ಜಿ.ಮಲ್ಲಿಕಾರ್ಜುನ ಗೌಡ, ದೀನಾ ಮಂಜುನಾಥ, ಬಿ.ಭೀಮೇಶ್, ಕಾವಲಿ ಶಿವಪ್ಪನಾಯಕ, ಸಿರಬಿ ಮಂಜುನಾಥ, ಕೆ.ಈಶಪ್ಪ, ತಳಾಸ್ ವೆಂಕಟೇಶ, ಹೊಂಬಾಳೆ ರೇವಣ್ಣ,ಎಸ್.ಪಿ.ಪ್ರಕಾಶ್, ಬಿ.ಪಿ.ಚಂದ್ರಮೌಳಿ,ಎನ್.ಪಿ.ಮಂಜುನಾಥ ಸೇರಿದಂತೆ ಅನೇಕ ಮುಖಂಡರು ಇದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು