2:13 AM Monday1 - December 2025
ಬ್ರೇಕಿಂಗ್ ನ್ಯೂಸ್
ನಶಾಮುಕ್ತ, ದ್ವೇಷಮುಕ್ತ ಸಮಾಜ ನಿರ್ಮಿಸೋಣ: ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಕರೆ ಮಂಗಳೂರಿನ ಫುಡ್ ಡೆಲಿವರಿ ಬಾಯ್ ನಿಂದ ಸೋಮವಾರಪೇಟೆಯಲ್ಲಿ ಸರಗಳ್ಳತನ..! Kodagu | ನೇಣು ಬಿಗಿದು ಅಪ್ರಾಪ್ತ ವಯಸ್ಸಿನ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ Tarikere | ಚಿರತೆ ದಾಳಿಗೆ ಬಾಲಕಿ ಬಲಿಯಾದ ಘಟನೆ ಮಾಸುವ ಮುನ್ನವೇ ಮತ್ತೊಂದು… Kodagu | ಹುಣಸೂರು: ರೈತರ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಸೆರೆ; ನಿಟ್ಟುಸಿರು… Udupi | ನದಿ, ವೃಕ್ಷ ಸಂರಕ್ಷಣೆ ಸೇರಿದಂತೆ ನವ ಸಂಕಲ್ಪಗಳ ಪಾಲನೆಗೆ ಪ್ರಧಾನಿ… Udupi | ಕೃಷ್ಣನಗರಿಯಲ್ಲಿ ಪ್ರಧಾನಿ ಮೋದಿಗೆ ಬೆಳ್ಳಿ ಕಡೆಗೋಲು ಕೊಡುಗೆ Udupi | ‘ಜೈ ಶ್ರೀ ಕೃಷ್ಣ’ ಎಂದು ಕನ್ನಡದಲ್ಲೇ ಭಾಷಣ ಆರಂಭಿಸಿದ ಪ್ರಧಾನಿ… ಪ್ರಧಾನಿ ಮೋದಿ ಇಂದು ಉಡುಪಿಗೆ: ಶ್ರೀಕೃಷ್ಣ ಮಠದ ಲಕ್ಷ ಕಂಠ ಗೀತಾ ಪಾರಾಯಣದಲ್ಲಿ… ಉಡುಪಿಗೆ ಪ್ರಧಾನಿ ಭೇಟಿ: ಎಸ್‌ಪಿಜಿ ಜತೆಗೆ ಖಾಕಿ ಸರ್ಪಗಾವಲು: ನಿಗದಿತ ಸಮಯಕ್ಕೆ ಮುಂಚಿತವಾಗಿಯೇ…

ಇತ್ತೀಚಿನ ಸುದ್ದಿ

ಕೂಡ್ಲಿಗಿ: ನಾಯಿ ಕಚ್ಚಿದರೆ ಸರಕಾರಿ ಆಸ್ಪತ್ರೆಯಲ್ಲಿ ಇಲ್ಲ ಇಂಜೆಕ್ಷನ್ !: ಹೊಣೆಗೇಡಿ ಆರೋಗ್ಯಾಧಿಕಾರಿ

10/12/2021, 14:38

ವಿ.ಜಿ.ವೃಷಭೇಂದ್ರ ಕೂಡ್ಲಿಗಿ ವಿಜಯನಗರ 

info.reporterkarnataka@gmail.com 

ಜಿಲ್ಲೆಯ ಕೂಡ್ಲಿಗಿ ಪಟ್ಟಣದಲ್ಲಿ,ಡಿ. 9ರಂದು ರಾತ್ರಿ  ಡಿ.ನಾಗರಾಜ ಎಂಬ ವ್ಯಕ್ತಿಯೋರ್ವರಿಗೆ ನಾಯಿ ಕಚ್ಚಿದ್ದು, ಪಟ್ಟಣದ ಸಾರ್ವಜನಿಕ ಆಸ್ಪತ್ರೆಗೆ ಚಿಕಿತ್ಸೆಗಾಗಿ ಧಾವಿಸಿದ ಅವರು ಆಸ್ಪತ್ರೆಯಲ್ಲಿ ನಾಯಿ ಕಡಿತಕ್ಕೆ ನೀಡುವ ಇಂಜಕ್ಷನ್ ಲಭ್ಯವಿಲ್ಲದೆ ಪರದಾಡಿದ ಘಟನೆ ನಡೆದಿದೆ.


ಈ ಕುರಿತು ಡಿ. ನಾಗರಾಜ ಎಂಬವರು ದೂರಿದ್ದಾರೆ. ಸಾರ್ವಜನಿಕ ಆಸ್ಪತ್ರೆಯಲ್ಲಿ ನಾಯಿ ಕಡಿತಕ್ಕೆ ಲಸಿಕೆ ಇಲ್ಲದೆ ಸೂಕ್ತ ಚಿಕಿತ್ಸೆ ಸಿಗದೇ ಗಾಯಾಳು ಡಿ.ನಾಗರಾಜ ತೀವ್ರ ಪರದಾಡಿದ್ದಾರೆ. ಅವರು ಮಾತನಾಡಿ ಸಾರ್ವಜನಿಕ ಆಸ್ಪತ್ರೆಯ ಸಿಬ್ಬಂದಿ ರೋಗಿಗಳನ್ನು ಗಮನಿಸುವಲ್ಲಿ ನಿರ್ಲಕ್ಷ್ಯ ಧೋರಣೆ ತಾಳುತಿದ್ದಾರೆಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಹೊಣೆಗೇಡಿ ಆರೋಗ್ಯಾಧಿಕಾರಿ ಹಾಗೂ ಪಪಂ ಅಧಿಕಾರಿ: ಸಾರ್ವಜನಿಕ ಆಸ್ಪತ್ರೆಯಲ್ಲಿ ಅವ್ಯವಸ್ಥೆ ತಾಂಡವಾಡುತ್ತಿದೆ ಅಗತ್ಯ ಲಸಿಕೆಗಳು ಅಲಭ್ಯವಾಗಿದ್ದು ಹೆಸರಿಗಷ್ಟೇ ಸಾರ್ವಜನಿಕ ಆಸ್ಪತ್ರೆ ಎನಿಸಿದೆ. ಈ ಮೂಲಕ ಆರೋಗ್ಯಾಧಿಕಾರಿ ತಮ್ಮ ಹೊಣೆಗೆಡಿತನಕ್ಕೆ ಸಾಕ್ಷಿಯಾಗಿದ್ದಾರೆ. ಪಟ್ಟಣದಲ್ಲಿ ನಿರಂತರ ಬೀದಿನಾಯಿಗಳ ಹಾವಳಿ ಮತ್ತು ದಾಳಿ ಜರುಗುತ್ತಿದ್ದು,ಪಪಂ ಅಧಿಕಾರಿ ಸೂಕ್ತ ಕ್ರಮ ಜರುಗಿಸದೇ ತಮ್ಮ ಹೊಣೆಗೇಡಿತನವನ್ನು ಪ್ರದರ್ಶಿಸಿದ್ದಾರೆ. ಈ ಎರಡೂ ಇಲಾಖೆಗಳ ಅಧಿಕಾರಿಗಳು ಹಾಗೂ ಸಿಬ್ಬಂದಿಯವರು, ಸರ್ಕಾರಿ ಸಂಬಳ ತಿಂದು ಸಾರ್ವಜನಿಕರ ನೋವಿಗೆ ಸ್ಪಂದಿಸುತ್ತಿಲ್ಲ. ಈ ಮೂಲಕ ಹೊಣೆಗೇಡಿತನದ ಅಧಿಕಾರಿಗಳಾಗಿದ್ದಾರೆಂದು ಪಟ್ಟಣದ ನಾಗರೀಕರು ಕೆಲ ಸಂಘಟನೆಗಳ ಪದಾಧಿಕಾರಿಗಳು ಆಕ್ರೋಶ ವ್ಯಕ್ತಪಡಸಿದ್ದಾರೆ. ನಾಯಿ ಹಾಗೂ ಹಾವು ಕಡಿತಕ್ಕೆ ಲಸಿಕೆಗಳಿಲ್ಲ, ಸಿಬ್ಬಂದಿ ರೋಗಿಗಳಿಗೆ ಸಕಾಲಕ್ಕೆ ಸೂಕ್ತ ವಾಗಿ ಚಿಕಿತ್ಸೆ ನೀಡುತ್ತಿಲ್ಲ. ಲಕ್ಷಗಟ್ಟಲೆ ಸರ್ಕಾರಿ ಸಂಬಳ ತಿನ್ನೋ ಕೆಲ ವೈದ್ಯರು ಸಾರ್ವಜನಿಕ ಸೇವೆ ಮಾಡುತ್ತಿಲ್ಲ. ಬದಲ‍‍ಾಗಿ ಗುಂಪುಗಾರಿಕೆ ಮತ್ತು ರಾಜಕೀಯ ಮಾಡುತ್ತಾ, ಕೇವಲ ಪ್ರಭಾವಿಗಳ ಜೀತದಾಳಿನಂತೆ ವರ್ತಿಸುತ್ತಿದ್ದಾರೆಂದು ಅವರು ಆಕ್ರೋಶ ವ್ಯಕ್ತಪಡಸಿದ್ದಾರೆ. ಪ್ರತಿಯೊಂದು ಚಿಕಿತ್ಸೆಯ  ಸಾಮ‍ಾಗ್ರಿಗಳನ್ನು ಹೊರಗಡೆ ತರಿಸುತ್ತಿದ್ದಾರೆ. ಮಾತೆತ್ತಿದರೆ ಬಳ್ಳಾರಿ, ದಾವಣಗೆರೆಗೆ ಕಳುಹಿಸಿ ಕೈತೊಳೆದುಕೊಳ್ಳುತ್ತಿದ್ದಾರೆ. ಸಿಬ್ಬಂದಿ ಸಕಾಲಕ್ಕೆ ರೋಗಿಗಳಿಗೆ ನೀಡುತ್ತಿಲ್ಲ. ಎಲ್ಲದಕ್ಕೂ ಬಳ್ಳಾರಿಗೆ ಕಳುಹಿಸುವ ಇವರು, ಇಲ್ಲಿ ಏಕೆ ಇರಬೇಕು ಎಂದು ನಾಗರಾಜ ಹಾಗೂ ಕನ್ನಡ ಪರ ಸಂಘಟನೆಗಳ ಪದಾಧಿಕಾರಿಗಳು ಪ್ರೆಶ್ನಸಿದ್ದಾರೆ.  ಜಿಲ್ಲಾಧಿಕಾರಿಗಳು ಪರಿಶೀಲಿಸಿ ಕ್ರಮ ಜರುಗಿಸಬೇಕು: ಆರೋಗ್ಯ ಇಲಾಖೆಯ ಕೆಲವು ಅಧಿಕಾರಿಗಳು, ಕೆಲವು ಸಿಬ್ಬಂದಿಗಳು ಹತ್ತಾರು ವರ್ಷಗಳಿಂದ  ತಮ್ಮ ಬೇರು ಬಿಟ್ಟಿದ್ದಾರೆ,ಕಾರಣ ಜಿಲ್ಲಾಧಿಕಾರಿಗಳು ಪರಿಶೀಲಸಿ ಜನಹಿತಕ್ಕಾಗಿ ಸೂಕ್ತ ಕ್ರಮ ಜರುಗಿಸಬೇಕಿದೆ ಎಂದು ಹಲವು ಸಂಘಟನೆಗಳ ಪದಾಧಿಕಾರಿಗಳು, ನಾಗರೀಕರು ಒತ್ತಾಯಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು