5:06 AM Monday21 - April 2025
ಬ್ರೇಕಿಂಗ್ ನ್ಯೂಸ್
Karnataka BJP | ಹಾವೇರಿಯಲ್ಲಿ ಬಿಜೆಪಿ ಜನಾಕ್ರೋಶ ಯಾತ್ರೆ: ಕಾಂಗ್ರೆಸ್ ಸರಕಾರದ ವಿರುದ್ಧ… DCM In Dharmastala | ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಧರ್ಮಸ್ಥಳಕ್ಕೆ ಭೇಟಿ:… Chikkamagaluru | ಜನಿವಾರ ತೆಗೆಸಿದ ಪ್ರಕರಣ: ಶೃಂಗೇರಿಯಲ್ಲಿ ಪೇಜಾವರ ಸ್ವಾಮೀಜಿ ಅಸಮಾಧಾನ Gokarna | ಜನಿವಾರ ಪ್ರಕರಣ: ಸಂಘಟಿತ ಪ್ರತಿಭಟನೆಗೆ ಹೊಸನಗರ ಮಠದ ರಾಘವೇಶ್ವರ ಶ್ರೀ… ಮುಳಿಯ ಗೋಲ್ಡ್ ಆ್ಯಂಡ್ ಡೈಮಂಡ್ ಶೋರೂಮ್ ಗೆ ನಾಳೆ ಪ್ರಸಿದ್ದ ಚಲನಚಿತ್ರ ನಟ… Mangaluru | ವಕ್ಫ್ ತಿದ್ದುಪಡಿ ಕಾಯ್ದೆ ವಿರುದ್ಧ ಬೃಹತ್ ಪ್ರತಿಭಟನೆ; ಅಡ್ಯಾರ್ ಮೈದಾನದಲ್ಲಿ… Karnataka BJP | ಕಲಬುರ್ಗಿಯಲ್ಲಿ ಬಿಜೆಪಿ ಜನಾಕ್ರೋಶ ಯಾತ್ರೆ: ಕಾಂಗ್ರೆಸ್ ತುಘಲಕ್ ದರ್ಬಾರ್… Bagalkote | ಅನುಭವ ಮಂಟಪ-ಬಸವಾದಿ ಶರಣರ ವೈಭವದ ರಥಯಾತ್ರೆ: ಸಿಎಂ ಸಿದ್ದರಾಮಯ್ಯ ಚಾಲನೆ Kolara | ಮಾವು ಸುಗ್ಗಿ ಅಂತ್ಯಕ್ಕೆ ದಿನಗಣನೆ ಆರಂಭ: ಈ ವರ್ಷ ಇಳುವರಿಯೂ… Mangaluru | ಸರಕಾರದ ಆಶಯ ಅರಿತು ಕೆಲಸ ಮಾಡಿ: ಮುಂಗಾರು ಹಂಗಾಮು ಉದ್ಘಾಟಿಸಿ…

ಇತ್ತೀಚಿನ ಸುದ್ದಿ

ಕೂಡ್ಲಿಗಿ: ನಾಗರ ಚೌತಿ ಪ್ರಯುಕ್ತ ಮನೆ ಮನೆಗಳಲ್ಲಿ, ದೇಗುಲಗಳಲ್ಲಿ ನಾಗರ ಮೂರ್ತಿಗೆ ಹಾಲೆರೆದ ಭಕ್ತರ ದಂಡು

01/08/2022, 20:30

ವಿ.ಜಿ.ವೃಷಭೇಂದ್ರ ಕೂಡ್ಲಿಗಿ ವಿಜಯನಗರ

info.reporterkarnataka@gmail.com

ವಿಜಯನಗರ ಜಿಲ್ಲೆಯ ಕೂಡ್ಲಿಗಿ ಪಟ್ಟಣದಲ್ಲಿ ನಾಗರ ಚೌತಿ  ಪ್ರಯುಕ್ತ ನಾಗರ ಮೂರ್ತಿಗೆ ಆಸ್ತಿಕರು ಹಾಲೆರೆಯೋ ಮೂಲಕ ತಮ್ಮ ಭಕ್ತಿ ಸಮರ್ಪಿಸಿದರು. 

ಪಟ್ಟಣದ ಶ್ರೀಬಸವಲಿಂಗೇಶ್ವರ ದೇವಸ್ಥಾನದ ಆವರಣದಲ್ಲಿರುವ ಶ್ರೀ ನಾಗದೇವತೆಯ ಮೂರ್ತಿಗೆ ಭಕ್ತರು ಹಾಲೆರದು ಭಕ್ತಿ ಮೆರೆದರು. ಹಲವರು ತಮ್ಮ ಮನೆಯ ದೇವರ ಜಗುಲಿಯಲ್ಲಿ ನಾಗರ ದೇವರ ಮೂರ್ತಿ ಪ್ರತಿಷ್ಠಾಪಿಸಿ, ನಾಗರ ಮೂರ್ತಿಗೆ ಭಕ್ತಿಯಿಂದ ಹಾಲೆರು ಹಬ್ಬ ಆಚರಿಸಿದರು. ಕೆಲವರು ನಾಗರ ಚೌತಿಯಂದು ಹಾಲೆರದು ಹಬ್ಬ ಆಚರಿಸಿದೆರೆ ಉಳಿದವರು ನಾಗ ಪಂಚಮಿಯಂದು ಹಾಲೆರೆದು ಹಬ್ಬ ಆಚರಿಸುತ್ತಾರೆ. ಕುಟುಂಬ ಸಮೇತರಾಗಿ ಬಂಧು ಬಳಗದೊಂದಿಗೆ ಸಾಮೂಹಿಕವಾಗಿ ಹಾಲೆರೆಯೋ ಸಾಂಪ್ರದಾಯ, ಅವಿಭಕ್ತ ಕುಟುಂಬದಲ್ಲಿ ಈಗಲೂ ಕಾಣಬಹುದಾಗಿದೆ. ಅವಿಭಕ್ತ ಕುಟುಂಬ ಕಾಣೆಯಾಗೋ ಸಂದರ್ಭದಲ್ಲಿ, ವಿಭಕ್ತ ಕುಟುಂಬದ ಸದಸ್ಯರು ಮನೆಯಲ್ಲಿಯೆರ ನಾಗದೇವರ ಆರಾಧನೆ ಮಾಡೋದು ಇತ್ತೀಚೆಗೆ ಸಮಾನ್ಯವಾಗಿದೆ. ನಾಗರ ಪಂಚಮಿ ಪ್ರಯುಕ್ತ ಪಟ್ಟಣ ಸೇರಿದಂತೆ ,ತಾಲೂಕಿನೆಲ್ಲೆಡೆ ನಾಗ ದೇವರಾಧನೆ ಜರುಗಿದೆ. ಮಕ್ಕಳು, ಯುವಕ ಯುವತಿಯರು, ಮಹಿಳೆಯರು, ನಾಗರ ಪಂಚಮಿಯನ್ನು ಬಹಳ ಅರ್ಥಪೂರ್ಣವಾಗಿ ಆಚರಿಸಿದರು. ಅಂತೆಯೇ ಪಟ್ಟಣದ ಶ್ರೀಬಸವ ಲಿಂಗೇಶ್ವರ ದೇವಸ್ಥಾನದ ಆವರಣದಲ್ಲಿ ಪ್ರತಿಷ್ಠಾಪಿಸಿರುವ ನಾಗ ಪ್ರತಿಮೆಗೆ, ಹಾಗೂ ತಮ್ಮ ಮನೆಯ ದೇವರ ಜಗುಲಿಯಲ್ಲಿರುವ ನಾಗ ಪ್ರತಿಮೆಗೆ. ಪುಟಾಣಿ ಅರಣಿ ತನ್ನ ತಾಯಿ ರೇಣುಕಾ ಹಾಗೂ ಸಹೋದರ ವಿನಾಯಕನೊಂದಿಗೆ ನಾಗದೆವತೆಗೆ ಶಾಸ್ತ್ರೋಕ್ತವಾಗಿ ಪೂಜೆಗೈದು ಶ್ರದ್ಧಾ ಭಕ್ತಿಯಿಂದ ಹಾಲೆರದು, ತಮ್ಮ  ಭಕ್ತಿ ಸಮರ್ಪಿಸಿ ಹಬ್ಬಕ್ಕೆ ಮತ್ತಷ್ಟು ಮೆರೆಗುತಂದಿದ್ದಾಳೆ. 

ಇತ್ತೀಚಿನ ಸುದ್ದಿ

ಜಾಹೀರಾತು