9:57 PM Sunday12 - October 2025
ಬ್ರೇಕಿಂಗ್ ನ್ಯೂಸ್
ಹಾಸನಾಂಬ ದರ್ಶನಕ್ಕೆ ಜನರಿಗೆ ತಮ್ಮ ಗುರುತಿನ ಚೀಟಿ ನೀಡಿದ ಇಬ್ಬರು ಅಧಿಕಾರಿಗಳು ಸಸ್ಪೆಂಡ್ ಕೃಷಿ ಅಭಿವೃದ್ಧಿಯಾದರೆ ಮಾತ್ರ ದೇಶದ ಅಭಿವೃದ್ಧಿ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಕೃಷಿ ಅಭಿವೃದ್ಧಿಯಾದರೆ ಮಾತ್ರ ದೇಶದ ಅಭಿವೃದ್ಧಿ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಮಡಿಕೇರಿಯಲ್ಲಿ ಡಿಜಿಟಲ್ ಸ್ಟುಡಿಯೋ ಕಳ್ಳತನ ಪ್ರಕರಣ: ಐವರು ಚೋರರ ಬಂಧನ ಆಶ್ರಮ ಶಾಲೆಯಲ್ಲಿ ಬೆಂಕಿ ಅವಘಡ: ಮೃತ ವಿದ್ಯಾರ್ಥಿ ಪುಷ್ಪಕ್ ಕುಟುಂಬಕ್ಕೆ 5 ಲಕ್ಷ… ಕಾವೇರಿ ಸಂಕ್ರಮಣ: ಅ. 17ರಂದು ಕೊಡಗು ಜಿಲ್ಲೆಯಲ್ಲಿ ಸಾರ್ವತ್ರಿಕ ರಜೆ; ಮಧ್ಯಾಹ್ನ 1.44ಕ್ಕೆ… 2005ರ ಪೂರ್ವ ಅರಣ್ಯಭೂಮಿಯಲ್ಲಿ ಬದುಕು ಕಟ್ಟಿಕೊಂಡವರಿಗೆ ಭೂಮಿಯ ಹಕ್ಕು: ಮುಖ್ಯಮಂತ್ರಿ ಸಿದ್ದರಾಮಯ್ಯ ‘ನೀರಿದ್ದರೆ ನಾಳೆ – ವಾಟರ್ ಇಸ್ ಫ್ಯೂಚರ್’: ಯೋಜನೆಗೆ ಚಾಲನೆ’: ಬರುವ ಡಿಸೆಂಬರ್… ಸೌಜನ್ಯ ಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ನಿರೀಕ್ಷಣಾ ಜಾಮೀನು ಅರ್ಜಿ ವಜಾ Chikkamagaluru | ಮೂಡಿಗೆರೆ: ‘PRESS’ ಎಂದು ಬರೆದ ಬೈಕ್ ನಲ್ಲಿ ಶ್ರೀಗಂಧ ಕಳ್ಳಸಾಗಣೆ;…

ಇತ್ತೀಚಿನ ಸುದ್ದಿ

ಕೂಡ್ಲಿಗಿ: ನಾಗರ ಚೌತಿ ಪ್ರಯುಕ್ತ ಮನೆ ಮನೆಗಳಲ್ಲಿ, ದೇಗುಲಗಳಲ್ಲಿ ನಾಗರ ಮೂರ್ತಿಗೆ ಹಾಲೆರೆದ ಭಕ್ತರ ದಂಡು

01/08/2022, 20:30

ವಿ.ಜಿ.ವೃಷಭೇಂದ್ರ ಕೂಡ್ಲಿಗಿ ವಿಜಯನಗರ

info.reporterkarnataka@gmail.com

ವಿಜಯನಗರ ಜಿಲ್ಲೆಯ ಕೂಡ್ಲಿಗಿ ಪಟ್ಟಣದಲ್ಲಿ ನಾಗರ ಚೌತಿ  ಪ್ರಯುಕ್ತ ನಾಗರ ಮೂರ್ತಿಗೆ ಆಸ್ತಿಕರು ಹಾಲೆರೆಯೋ ಮೂಲಕ ತಮ್ಮ ಭಕ್ತಿ ಸಮರ್ಪಿಸಿದರು. 

ಪಟ್ಟಣದ ಶ್ರೀಬಸವಲಿಂಗೇಶ್ವರ ದೇವಸ್ಥಾನದ ಆವರಣದಲ್ಲಿರುವ ಶ್ರೀ ನಾಗದೇವತೆಯ ಮೂರ್ತಿಗೆ ಭಕ್ತರು ಹಾಲೆರದು ಭಕ್ತಿ ಮೆರೆದರು. ಹಲವರು ತಮ್ಮ ಮನೆಯ ದೇವರ ಜಗುಲಿಯಲ್ಲಿ ನಾಗರ ದೇವರ ಮೂರ್ತಿ ಪ್ರತಿಷ್ಠಾಪಿಸಿ, ನಾಗರ ಮೂರ್ತಿಗೆ ಭಕ್ತಿಯಿಂದ ಹಾಲೆರು ಹಬ್ಬ ಆಚರಿಸಿದರು. ಕೆಲವರು ನಾಗರ ಚೌತಿಯಂದು ಹಾಲೆರದು ಹಬ್ಬ ಆಚರಿಸಿದೆರೆ ಉಳಿದವರು ನಾಗ ಪಂಚಮಿಯಂದು ಹಾಲೆರೆದು ಹಬ್ಬ ಆಚರಿಸುತ್ತಾರೆ. ಕುಟುಂಬ ಸಮೇತರಾಗಿ ಬಂಧು ಬಳಗದೊಂದಿಗೆ ಸಾಮೂಹಿಕವಾಗಿ ಹಾಲೆರೆಯೋ ಸಾಂಪ್ರದಾಯ, ಅವಿಭಕ್ತ ಕುಟುಂಬದಲ್ಲಿ ಈಗಲೂ ಕಾಣಬಹುದಾಗಿದೆ. ಅವಿಭಕ್ತ ಕುಟುಂಬ ಕಾಣೆಯಾಗೋ ಸಂದರ್ಭದಲ್ಲಿ, ವಿಭಕ್ತ ಕುಟುಂಬದ ಸದಸ್ಯರು ಮನೆಯಲ್ಲಿಯೆರ ನಾಗದೇವರ ಆರಾಧನೆ ಮಾಡೋದು ಇತ್ತೀಚೆಗೆ ಸಮಾನ್ಯವಾಗಿದೆ. ನಾಗರ ಪಂಚಮಿ ಪ್ರಯುಕ್ತ ಪಟ್ಟಣ ಸೇರಿದಂತೆ ,ತಾಲೂಕಿನೆಲ್ಲೆಡೆ ನಾಗ ದೇವರಾಧನೆ ಜರುಗಿದೆ. ಮಕ್ಕಳು, ಯುವಕ ಯುವತಿಯರು, ಮಹಿಳೆಯರು, ನಾಗರ ಪಂಚಮಿಯನ್ನು ಬಹಳ ಅರ್ಥಪೂರ್ಣವಾಗಿ ಆಚರಿಸಿದರು. ಅಂತೆಯೇ ಪಟ್ಟಣದ ಶ್ರೀಬಸವ ಲಿಂಗೇಶ್ವರ ದೇವಸ್ಥಾನದ ಆವರಣದಲ್ಲಿ ಪ್ರತಿಷ್ಠಾಪಿಸಿರುವ ನಾಗ ಪ್ರತಿಮೆಗೆ, ಹಾಗೂ ತಮ್ಮ ಮನೆಯ ದೇವರ ಜಗುಲಿಯಲ್ಲಿರುವ ನಾಗ ಪ್ರತಿಮೆಗೆ. ಪುಟಾಣಿ ಅರಣಿ ತನ್ನ ತಾಯಿ ರೇಣುಕಾ ಹಾಗೂ ಸಹೋದರ ವಿನಾಯಕನೊಂದಿಗೆ ನಾಗದೆವತೆಗೆ ಶಾಸ್ತ್ರೋಕ್ತವಾಗಿ ಪೂಜೆಗೈದು ಶ್ರದ್ಧಾ ಭಕ್ತಿಯಿಂದ ಹಾಲೆರದು, ತಮ್ಮ  ಭಕ್ತಿ ಸಮರ್ಪಿಸಿ ಹಬ್ಬಕ್ಕೆ ಮತ್ತಷ್ಟು ಮೆರೆಗುತಂದಿದ್ದಾಳೆ. 

ಇತ್ತೀಚಿನ ಸುದ್ದಿ

ಜಾಹೀರಾತು