2:49 AM Thursday9 - April 2026
ಬ್ರೇಕಿಂಗ್ ನ್ಯೂಸ್
ಫೇಲಾದವರಿಗೆ ಇನ್ನೊಂದು ಚಾನ್ಸ್: ದ್ವಿತೀಯ ಪಿಯುಸಿ ಪರೀಕ್ಷೆ-2 ದಿನಾಂಕ ಪ್ರಕಟ Suratkal | ಅಮಾನತುಗೊಂಡಿದ್ದ ಎನ್‌ಐಟಿಕೆ ಕುಲಸಚಿವ ರವೀಂದ್ರನಾಥ್ ಸೇವೆಯಿಂದ ವಜಾ ಪತಿಯ ಶವದ ಜತೆ 10 ದಿನ ಕಳೆದ ಪತ್ನಿ: ಮಲೆನಾಡು ಚಿಕ್ಕಮಗಳೂರಿನಲ್ಲಿ ವಿಚಿತ್ರ… ಕಾಂಗ್ರೆಸ್‌ನಿಂದ ಕೋಟ್ಯಂತರ ರೂಪಾಯಿ ಹಣ ಹಂಚಿಕೆ: ಬಿಜೆಪಿ ಅಭ್ಯರ್ಥಿ ವೀರಣ್ಣ ಚರಂತಿಮಠ ಆರೋಪ ಅಮ್ಮನ ಸಾವಿನ ದುಃಖದಲ್ಲೂ ಛಲ ಬಿಡದೆ ಪರೀಕ್ಷೆ ಬರೆದ ದಿಶಾ ಸ್ಟೇಟ್ ಗೆ… ದಾವಣಗೆರೆ ದಕ್ಷಿಣ: ಮತಗಟ್ಟೆ ಬಳಿ ಟೇಬಲ್ ವಿಚಾರವಾಗಿ ಕಾಂಗ್ರೆಸ್-ಎಸ್ ಡಿಪಿಐ ಕಾರ್ಯಕರ್ತರ ಜಟಾಪಟಿ ದಾವಣಗೆರೆ ದಕ್ಷಿಣ ಮತ್ತು ಬಾಗಲಕೋಟೆ ಉಪ ಚುನಾವಣೆ: ಬಹುತೇಕ ಶಾಂತಿಯುತ ಮತದಾನ ಬಿಳಿಗಿರಿರಂಗನ ಬೆಟ್ಟ ಹುಲಿ ಸಂರಕ್ಷಿತಾರಣ್ಯ ಪ್ರದೇಶದಲ್ಲಿ ಕಾಡ್ಗಿಚ್ಚು: 60 ಎಕರೆ ಅರಣ್ಯ ಪ್ರದೇಶ… ಎಲ್ಲ ಕಡೆ ಸಿದ್ದರಾಮಯ್ಯ ಬೇಕು ಎಂಬ ಬೇಡಿಕೆಯಿದೆ; ಕುಮಾರಸ್ವಾಮಿನಾ ಯಾರು ಎಂದು ಕೇಳ್ತಾರೆ:… ರಾಜ್ಯದಲ್ಲಿ ಬ್ಯಾನ್​​ ಆಗುತ್ತಾ ಸೋಲೋ ಟ್ರೆಕ್ಕಿಂಗ್?: ಅನುಭವವಿದ್ದರೂ ಅಪಾಯ ಫಿಕ್ಸ್​​; ಯಾಕೆ ಗೊತ್ತಾ?

ಇತ್ತೀಚಿನ ಸುದ್ದಿ

ಕೂಡ್ಲಿಗಿ: ಪಂಡರಾಪುರ ಶ್ರೀಪಾಂಡುರಂಗ ದರ್ಶನಕ್ಕೆ ಭಕ್ತರ ದಂಡು ಪಾದಯಾತ್ರೆ

27/10/2024, 23:37

ವಿ.ಜಿ.ವೃಷಭೇಂದ್ರ ಕೂಡ್ಲಿಗಿ ವಿಜಯನಗರ

info.reporterkarnataka@gmail.com

ಮಹಾರಾಷ್ಟ್ರದ ಪಂಡರಾಪುರ ಶ್ರೀಪಾಂಡುರಂಗ ದೇವರ ಸನ್ನಿದೆಗೆ, ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ. ತಳವಾರಹಟ್ಟಿ ಬಳಗಟ್ಟ ಗ್ರಾಮದ ಪಂಡರಾಪುರ ಶ್ರೀಪ‍ಾಂಡು ರಂಗ ಸ್ವಾಮಿ ಪಾದಯಾತ್ರೆ ಭಕ್ತರ ಸೇವಾ ಸಮಿತಿ, ಸತತ 11ನೇ ವರ್ಷದ ಪಾದಯಾತ್ರೆ ಹಮ್ಮಿಕೊಂಡಿದ್ದು. ಪಾದಾಯಾತ್ರೆ ಭಕ್ತರ ದಂಡು ಅಕ್ಟೋಬರ್‌ 26ರಂದು ಸಂಜೆ, ಕೂಡ್ಲಿಗಿ ಪಟ್ಟಣ ಪ್ರವೇಶಿಸಿ ಶ್ರೀಕೊತ್ತಲಾಂಜನೇಯ ಫೇವಸ್ಥಾನದಲ್ಲಿ ಕೆಲ ಹೊತ್ತು ವಿಶ್ರಮಿಸಿತ್ತು.


ಪಾದಯಾತ್ರೆ ತಂಡದಲ್ಲಿ ಮಹಿಳಾ ಭಕ್ತರು ಯುವಕರು ವೃದ್ಧರಾದಿ‌ಯಾಗಿ, ಒಟ್ಟು ಮೂವತ್ತು ಜನರುಳ್ಳ ಭಕ್ತರ ದಂಡು ಭಜನೆ ಮಾಡುತ್ತಲೆ ಪ‍ಾದಯಾತ್ರೆ ಮೂಲಕ ಮುಂದೆ ತೆರಳಿತು. ಪ್ರತಿ ದಿನ ಒಂದಕ್ಕೆ ಇಪ್ಪತ್ತೈದು ಮೂವತ್ತು ಕಿಲೋ ಮೀಟರ್ ದೂರಾ, ಪಾದಯಾತ್ರೆ ಮೂಲಕ ಕ್ರಮಿಸುವ ತಂಡ. ದಾರಿಯುದ್ದಕ್ಕೂ ಶ್ರೀರಂಗನ ಜಪ ತಪ ನಾಮಸ್ಮರಣೆ ಮಾಡುತ್ತ, ಪಂಡರಾಪುರ ಶ್ರೀರಂಗನ ಭಜನೆಗಳನ್ನು ಆಡುಗಳನ್ನು ಹಾಡುತ್ತ. ತಳಕ್ಕೆ ತಕ್ಕಬಹಾಗೆ ಕುಣಿಯುತ್ತ ನಲಿಯುತ್ತ, ಮಾರ್ಗ ಮದ್ಯದಲ್ಲಿ ಬರುವ ಗ್ರಾಮ ಪಟ್ಟಣಗಳ ಭಕ್ತರು. ಪಾದಯಾತ್ತಿಕರನ್ನು ಬರ ಮಾಡಿಕೊಂಡು, ಆಹ್ವಾನಿಸಿ ಭಕ್ತರು ನೀಡುವ ಆತಿಥ್ಯವನ್ನು ಸ್ವೀಕರಿಸಿ. ಅಗತ್ಯವಿದ್ದಲ್ಲಿ ಹತ್ತಿರದ ದೇವಸ್ಥಾನದಲ್ಲಿ ರಾತ್ರಿ ಹೊತ್ತಲ್ಲಿ ತಂಗಿ ಬೆಳಿಗ್ಗೆ ಹೊರಡುತ್ತಾರೆ, ಮಧ್ಯಾಹ್ನದ ಬಿರು ಬಿಸಿಲಿದ್ದಲ್ಲಿ ಊಟ ಉಪಹಾರಾದಿಗಳನ್ನು ಸ್ವೀಕರಿಸಿ. ಕೆಲ ಹೊತ್ತು ವಿಶ್ರಮಿಸಿ ಧಣಿವಾರಿದ ನಂತರ, ಮತ್ತೆ ಅವರ ಪಾದಯಾತ್ರೆ ಪುನರಾರಂಭಗೊಳ್ಳುತ್ತದೆ. ಹೀಗೆ ಪಂಡರಾ ಪುರಕ್ಕೆ ಬಹು ದೂರದೂರಿನ ಭಕ್ತರು, ಸಾವಿರಾರು ಕಿ ಮೀ ದೂರದಿಂದ. ನಿರಂತರ ಪಾದಯಾತ್ರೆ ಮೂಲಕ ಕ್ರಮಿಸಿ, ಶ್ರದ್ಧೆ ಭಕ್ತಿಯಿಂದ ಪಾಂಡುರಂಗನನ್ನು ಭಜಿಸುತ್ತ. ನೆರೆ ರ‍ಾಜ್ಯ ಮಹರಾಷ್ಟ್ರದಲ್ಲಿರುವ, ಪಂಡರಾಪುರ ಸುಕ್ಷೇತ್ರಕ್ಕೆ ಭಕ್ತರ ದಂಡು ತಮ್ಮ ಪಾದಯಾತ್ರೆ ಯಶಸ್ವೀಗೊಳಿಸಿ ಸಮಾಪ್ತಿ ಗೊಳಿಸುತ್ತಾರೆ. ಇದೇ ರೀತಿ ನೂರಾರು ಕಿಮೀ ದೂರದ ಕರ್ನಾಟಕದ ಮೂಲೆ ಮೂಲೆಯ ಗಡಿ ಗ್ರ‍ಾಮಗಳಿಂದ, ಸತತ ಹತ್ತಾರು ವರ್ಷಗಳಿಂದ ಪಾದಯಾತ್ರೆ ಹಮ್ಮಿಕೊಳ್ಳುತ್ತಾರೆ. ಗ್ರಾಮವೊಂದರಿಂದ ಇಪ್ಪತ್ತೇದು ಮೂವತ್ತು ಪಾಂಡು ರಂಗ ಭಕ್ತರ ದಂಡು, ನೆರೆ ಹೊರೆಯ ಗ್ರಾಮಗಳ ಭಕ್ತರೊಂದಿಗೆ ಸೇರಿ. ಐವತ್ತರಿಂದ ಎಪ್ಪತ್ತು ನೂರು ಭಕ್ತರಿರುವ ಪಾದಯಾತ್ರಿಕರ ದಂಡು, ಒಟ್ಟೊಟ್ಟಾಗಿ ಪಂಡರಾಪುರಕ್ಕೆ ಪಾದಯಾತ್ರೆ ಮೂಲಕ ತೆರಳಿ. ಶ್ರದ್ಧಾ ಭಕ್ತಿಯಿಂದ ‍ಅರಾಧಿಸಿ ದೇವರ ದರ್ಶನ ಪಡೆದು, ಧಾರ್ಮಿಕ ವಿಧಿ ವಿದಾನಗಳನ್ನು ಮುಗಿಸಿಕೊಂಡು ತಮ್ಮೂರಿಗೆ ಸಂಚಾರಿ ವಾಹನಗಳ ಮೂಲಕ ಪ್ರಯಾಣಿೆೆಸಿ ಮರಳುತ್ತಾರೆ.

ಇತ್ತೀಚಿನ ಸುದ್ದಿ

ಜಾಹೀರಾತು