1:52 PM Monday7 - September 2026
ಬ್ರೇಕಿಂಗ್ ನ್ಯೂಸ್
ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ ಪುತ್ತೂರು ಶಾಸಕರ ಆರೋಪ | ಕೆಆರ್ ಐಡಿಎಲ್ ಸಂಸ್ಥೆಗೆ ಗುತ್ತಿಗೆ: ಉಸ್ತುವಾರಿ ಸಚಿವ… ಕ್ರೈಂ ಡೈರಿ | ಸೆರೆ ಸಿಕ್ಕ ‘ರಿಪ್ಪರ್ ಚಂದ್ರನ್’ ಎಂಬ ಸರಣಿ ಹಂತಕ:… ತುಮಕೂರು-ರಾಯದುರ್ಗ- ಚಿತ್ರದುರ್ಗ | 2027 ಡಿಸೆಂಬರ್ ಅಂತ್ಯಕ್ಕೆ ರೈಲು ಮಾರ್ಗ ಆರಂಭ ಕಸ್ತೂರಿ ರಂಗನ್ ವರದಿ ವಿರೋಧಿಸಿ ನವೆಂಬರ್ 16ರಿಂದ ತೀರ್ಥಹಳ್ಳಿ ಟು ಶಿವಮೊಗ್ಗ ಪಾದಯಾತ್ರೆ:… *ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;… ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ

ಇತ್ತೀಚಿನ ಸುದ್ದಿ

ಕೂಡ್ಲಿಗಿ ಪಪಂ ಸಭೆ: ಮೂಲಭೂತ ಸೌಕರ್ಯಗಳಿಗೆ ಆಧ್ಯತೆ, ವಸತಿ ಯೋಜನೆಯಲ್ಲಿ ಪಾರದರ್ಶಕತೆಗೆ ಸೂಚನೆ

20/01/2023, 15:36

ವಿ.ಜಿ.ವೃಷಭೇಂದ್ರ ಕೂಡ್ಲಿಗಿ ವಿಜಯನಗರ

info.reporterKarnataka@gmail.com

ವಿಜಯನಗರ ಜಿಲ್ಲೆ ಕೂಡ್ಲಿಗಿ ಪಟ್ಟಣ ಪಂಚಾಯ್ತಿ ಸಭೆ, ಜ19ರಂದು ಪಪಂ ಸಭಾಂಗಣದಲ್ಲಿ ಜರುಗಿತು. ಸಭೆಯಲ್ಲಿ ಪಟ್ಟಣದಲ್ಲಿ ಮೂಲಭೂತ ಸೌಕರ್ಯಗಳನ್ನು, ಸಾರ್ವಜನಿಕರಿಗೆ ಸಮರ್ಪಕವಾಗಿ ಒದಗಿಸಲು ಆಧ್ಯತೆ ನೀಡುವಂತೆ ಅದಿಕಾರಿಗೆ ಸದಸ್ಯರು ತಾಕೀತು ಮಾಡಿದರು. ವಸತಿ ಯೋಜನೆ ಸೇರಿದಂತೆ ಯಾವುದೇ ಯೋಜನೆಗಳ ಅನುಷ್ಠಾನದಲ್ಲಿ, ಎಲ್ಲಾ ಹಂತದಲ್ಲಿ ಪಾರದರ್ಶಕತೆ ಕಾಪಾಡಿಕೊಳ್ಳಬೇಕಿದೆ. ಉತ್ತಮ ಗುಣ ಮಟ್ಟದಲ್ಲಿ ಮನೆಗಳನ್ನು ನಿರ್ಮಾಣ ಮಾಡುಂತೆ, ಅಗತ್ಯ ಕ್ರಮಕ್ಕಾಗಿ ಸಭೆಯಲ್ಲಿ ನಿರ್ಣಯ ಕೈಗೊಳ್ಳಲಾಯಿತು. ಸುಮಾರು 16ಕ್ಕೂ ಹೆಚ್ಚು ವಿಷಯಗಳಿಗೆ ಅನುಮೋದನೆ, ಕಾಮಗಾರಿಗಳಿಗೆ ಪ್ರಸ್ಥಾವನೆಗಳ ಕುರಿತು ಚರ್ಚಿಸಲಾಯಿತು. ಕುಡಿಯೋ ನೀರು ಸಮಸ್ಯೆ ಉಲ್ಬಣವಾಗದಂತೆ, ಹಾಗೂ ಸಾಂಕ್ರಾಮಿಕ ರೋಗಗಳು ಹರಡದಂತೆ ಜಾಗ್ರತೆ ವಹಿಸುವಂತೆ ಸರ್ವ ಸದಸ್ಯರು ಒತ್ತಾಯಿಸಿದರು. ಸಭೆಯಲ್ಲಿ ಅಧ್ಯಕ್ಷೆ ಎಮ್.ಶಾರದಾಬಾಯಿ ಅಧ್ಯಕ್ಷತೆಯಲ್ಲಿ ಜರುಗಿತು, ಉಪಧ್ಯಕ್ಷೆ ರೇಣುಕಾ, ಸ್ಥಾಯಿ ಸಮಿತಿ ಅಧ್ಯಕ್ಷ ಪೂರ್ಯಾನಾಯ್ಕ, ಮುಖ್ಯಾಧಿಕಾರಿ ಫಿರೋಜ್ ಖಾನ್ ವೇದಿಕಯಲ್ಲಿದ್ದರು. ಸರ್ವ ಹಾಗೂ ನಾಮ ನಿರ್ದೇಶಿತ ಸದಸ್ಯರು ಸಭೆಯಲ್ಲಿ ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು