8:26 AM Wednesday8 - July 2026
ಬ್ರೇಕಿಂಗ್ ನ್ಯೂಸ್
ಮೂಗ್ರಹಳ್ಳಿ ಸೇತುವೆ ಕಾಮಗಾರಿಯಲ್ಲಿ ಸುರಕ್ಷತೆ ನಿರ್ಲಕ್ಷ್ಯ ಆರೋಪ; ಕಾಮಗಾರಿ ತಾತ್ಕಾಲಿಕ ಸ್ಥಗಿತಕ್ಕೆ ಗ್ರಾಮಸ್ಥರ… ಮರದ ದಿಮ್ಮಿ ಸಾಗಾಟ | ದಸರಾ ಅಂಬಾರಿ ಆನೆ ಕ್ಯಾಪ್ಟನ್ ಅಭಿಮನ್ಯು ದಂತ… ಬೇಲೂರು | SIR ಕರ್ತವ್ಯದ ಒತ್ತಡಕ್ಕೆ ಕುಸಿದು ಬಿದ್ದ ನಿವೃತ್ತಿಯಂಚಿನಲ್ಲಿರುವ 60ರ ಹರೆಯದ… ಕೊಡಗು ಜಿಲ್ಲೆಯಲ್ಲಿ ಅತಿವೃಷ್ಟಿ ಮತ್ತು ಅನಾವೃಷ್ಟಿ ಎದುರಿಸಲು ಸಜ್ಜಾಗಿ: ಮೇಲುಸ್ತುವಾರಿ ಸಚಿವ ಯು.ಟಿ.… ಕಳಸ: ಬೈಕಿಗೆ ಸೈಡ್ ಕೊಡಲು ಹೋಗಿ ತೋಟಕ್ಕೆ ನುಗ್ಗಿದ ಕಾರು; ಪ್ರಯಾಣಿಕರು ಪಾರು ತೀರ್ಥಹಳ್ಳಿ | ಅರಳಾಪುರದ ಕೊಪ್ಪಲು ಗ್ರಾಮದಲ್ಲಿ ಗಾಳಿ ಮಳೆಗೆ ಬಿದ್ದ ಬೃಹತ್ ಮರ:… Raichuru | ಮಸ್ಕಿ: ಅತಿಥಿ ಶಿಕ್ಷಕರ ಭದ್ರತೆ ಸೇರಿದಂತೆ ವಿವಿಧ ಬೇಡಿಕೆ ಆಗ್ರಹಿಸಿ… ಮಡಿಕೇರಿ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಕ್ರಮವಾಗಿ ಜೂಜಾಟ: 28 ಜನರ ಬಂಧನ;… ಮತ ಪರಿಷ್ಕರಣೆ ವಿಚಾರದಲ್ಲಿ ಅಧಿಕಾರಿಗಳ ಕಳ್ಳಾಟ..!?: ಮನೆ ಮನೆಗೆ ಹೋಗುವ ಬದಲಾಗಿ ಜನರನ್ನೇ… ಮುಂದಿನ ಪೀಳಿಗೆಗೆ ಹಿಂಸೆ, ದ್ವೇಷ, ಸುಳ್ಳಿನ ಭಾರತವನ್ನು ಕೊಡಬಾರದು: ಕೆಪಿಸಿಸಿ ಅಧ್ಯಕ್ಷ ಬಿ.ಕೆ.…

ಇತ್ತೀಚಿನ ಸುದ್ದಿ

ಕೂಡ್ಲಿಗಿ ಪಟ್ಟಣ ಪಂಚಾಯಿತಿ: ಬ್ರೋಕರ್ ಹಾವಳಿ ತಪ್ಪಿಸಲು ಖಾತಾ ನಕಲು ವಿತರಣಾ ಅಭಿಯಾನ

09/11/2023, 10:40

ವಿ.ಜಿ.ವೃಷಭೇಂದ್ರ ಕೂಡ್ಲಿಗಿ ವಿಜಯನಗರ

info.reporterkarnataka@gmail.com

ವಿಜಯನಗರ ಜಿಲ್ಲೆಯ ಕೂಡ್ಲಿಗಿ ಪಟ್ಟಣ ಪಂಚಾಯ್ತಿ ಅಧಿಕಾರಿಗಳ ಹೆಸರು ದುರ್ಬಳಕೆ ಮಾಡಿ, ಹಣ ಮಾಡುವ ಮಧ್ಯವರ್ತಿಗಳ ಹಾವಳಿ ತಪ್ಪಿಸುವ ಉದ್ದೇಶದಿಂದ ವಿಜಯನಗರ ಜಿಲ್ಲೆಯ ಜಿಲ್ಲಾಧಿಕಾರಿಗಳ ಆದೇಶದಂತೆ ಕೂಡ್ಲಿಗಿ ಪಟ್ಟಣ ಪಂಚಾಯತಿ ವತಿಯಿಂದ ಇಂದು ಮುಖ್ಯಾಧಿಕಾರಿಗಳು , ಕಂದಾಯ ನಿರೀಕ್ಷಕರು ಹಾಗೂ ಸಂಬಂಧಪಟ್ಟ ವಾರ್ಡನ ಕರವಸೂಲಿಗಾರರ ನೇತೃತ್ವದಲ್ಲಿ ಮನೆ ಮನೆಗೆ ತೆರಳಿ ಖಾತಾ ನಕಲು ವಿತರಣಾ ಅಭಿಯಾನ ಪ್ರಾರಂಭಿಸಲಾಯಿತು.
ಅಭಿಯಾನಕ್ಕೆ ಚಾಲನೆ ನೀಡಿ ಮಾತನಾಡಿದ ಕೂಡ್ಲಿಗಿ ಪಟ್ಟಣ ಪಂಚಾಯತಿ ಮುಖ್ಯಾಧಿಕಾರಿ ಫಿರೋಜ್ ಖಾನ್ ಮಾತನಾಡಿ, ಖಾತಾ ನಕಲು (ಫಾರ್ಮ್ -3) ಪಡೆಯಲು ಬಂದ ಸಾರ್ವಜನಿಕರು ಸಕಾಲದಲ್ಲಿ ಅರ್ಜಿ ಸಲ್ಲಿಸಿದಲ್ಲಿ ಅದರ ನಿಯಮ ಪಾಲನೆ ಮಾಡಿ ಕೊಡಲು 7 ದಿನದ ಸಮಯ ಇರುತ್ತದೆ, ತೆರಿಗೆ ಕಟ್ಟಿದ ರಸೀದಿ ಪ್ರತಿಗಳು ಸೇರಿದಂತೆ ಹಕ್ಕು ನಿರೂಪಿಸುವ ದಾಖಲಾತಿಗಳು ಸರಿ ಇದ್ದಲ್ಲಿ ನಿಗದಿತ ಸಮಯಕ್ಕಿಂತ ಮುಂಚಿತವಾಗಿ ಖಾತಾ ನಕಲು ನೀಡಲಾಗುವುದು. ಸಾರ್ವಜನಿಕರು ಖಾತಾ ನಕಲು ಪಡೆಯಲು ನೇರವಾಗಿ ಬಂದು ಅಧಿಕಾರಿಗಳಲ್ಲಿ ಇದರ ಮಾಹಿತಿ ಪಡೆದುಕೊಳ್ಳುವುದು ಒಳ್ಳೆಯದು. ಯಾರೋ ಮಧ್ಯವರ್ತಿಗಳ ನಡುವೆ ಹೆಚ್ಚಿನ ಹಣ ಕೊಟ್ಟು ಅಧಿಕಾರಿಗಳ ಹೆಸರು ಸಹ ಈ ವಿಚಾರದಲ್ಲಿ ದುರ್ಬಳಕೆ ಮಾಡಿ ಹಣ ವಸೂಲಿ ಮಾಡುವುದನ್ನು ಅರಿತು ವಿಜಯನಗರ ಜಿಲ್ಲಾಧಿಕಾರಿಯವರು ಪಪಂ ಅಧಿಕಾರಿಗಳ ಸಭೆ ಕರೆದು ಅದರಲ್ಲಿ ಖಾತಾ ನಕಲು ವಿತರಣೆ ಅಭಿಯಾನ ಮಾಡಿ ಮನೆಮನೆಗೆ ತೆರಳಿ ಫಾರ್ಮ್ 3 ವಿತರಣೆ ಮಾಡುವಂತೆ ಆದೇಶಿಸಿದಂತೆ ಮಧ್ಯವರ್ತಿಗಳ ಹಾವಳಿ ತಪ್ಪಿಸಿ ನೇರವಾಗಿ ಬಡವರ ಮನೆ ಸೇರುವಲ್ಲಿ ಈ ಅಭಿಯಾನದಿಂದ ಉತ್ತಮ ಕಾರ್ಯವಾಗಿದೆ ಎಂದರು.
ಅಭಿಯಾನದಿಂದಾಗುವ ಅನುಕೂಲಗಳು : ಈ ಅಭಿಯಾನದಿಂದ ಮಧ್ಯವರ್ತಿಗಳ ಹಾವಳಿ ತಪ್ಪುತ್ತದೆ, ಹಣ ಪಾವತಿ ಮಾಡಿ ತೆರಿಗೆ ಕಟ್ಟಿದ ರಸೀದಿ ಪ್ರತಿಗಳಿದ್ದಲ್ಲಿ ಹಾಗೂ ಹಕ್ಕು ನಿರೂಪಿಸುವ ದಾಖಲಾತಿಗಳಿದ್ದಲ್ಲಿ ಬಡವರ ಮನೆಗೆ ನೇರವಾಗಿ ಖಾತಾ ನಕಲು ಪ್ರತಿ ತಲುಪುತ್ತದೆ, ಹಣ ಮಾಡುವ ಉದ್ದೇಶದಲ್ಲಿ ಮದ್ಯವರ್ತಿಗಳು ಅಧಿಕಾರಿಗಳ ಹೆಸರು ದುರ್ಬಳಕೆ ಮಾಡುವುದು ದೂರವಾಗುತ್ತದೆ, ಕಚೇರಿ ಅಲೆದಾಟ ತಪ್ಪುತ್ತದೆ ಅಲ್ಲದೆ ಇತರೆ ಅನುಕೂಲತೆಗಳು ಸಾರ್ವಜನಿಕರಿಗೆ ಈ ಅಭಿಯಾನದಿಂದ ಸಿಗಬೇಕು ಎನ್ನುವ ನಿಟ್ಟಿನಲ್ಲಿ ವಿಜಯನಗರ ಜಿಲ್ಲಾಧಿಕಾರಿಗಳು ಆದೇಶಿಸಿದಂತೆ ಈ ಅಭಿಯಾನವನ್ನು ಇಂದಿನಿಂದಲೇ ಪ್ರಾರಂಭಮಾಡಿರುವುದಾಗಿ ಮುಖ್ಯಾಧಿಕಾರಿ ಫಿರೋಜ್ ಖಾನ್ ತಿಳಿಸಿದರು.
ಈ ಸಂದರ್ಭದಲ್ಲಿ ಮುಖ್ಯಾಧಿಕಾರಿಗಳು , ಕಂದಾಯ ನಿರೀಕ್ಷಕರು ಹಾಗೂ ಸಂಬಂಧಪಟ್ಟ ವಾರ್ಡನ ಕರವಸೂಲಿಗಾರರು ಇದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು