12:25 AM Friday24 - April 2026
ಬ್ರೇಕಿಂಗ್ ನ್ಯೂಸ್
ಬೆಂಗಳೂರಿನಲ್ಲಿ ಭೀಕರ ಅಗ್ನಿ ದುರಂತ: 10 ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ ತುಮಕೂರು: ಒಂದು ವಾರದ ಅಂತರದಲ್ಲಿ 32 ನವಿಲುಗಳು ಸಾವು; ತಾಪಮಾನ ಕಾರಣ? ಬಳ್ಳಾರಿ ಜಿಲ್ಲಾಡಳಿತದಿಂದ ಸರಕಾರಿ ಜಮೀನು ಒತ್ತುವರಿ ವಿರುದ್ಧ 3ನೇ ಹಂತದ ಕಾರ್ಯಾಚರಣೆ Chikkamagaluru | ಸಿಇಟಿ ಬರೆಯಲು ಬಂದ ವಿದ್ಯಾರ್ಥಿನಿಯರಿಗೆ ಶಾಕ್: ಮೂಗುತಿಗೆ ಬಿತ್ತು ಗಮ್… ತಮಿಳುನಾಡಿನಲ್ಲಿ 84% ದಾಟಿದ ಮತದಾನ: ಬಂಗಾಳದಲ್ಲಿ 91% ದಾಖಲೆ ಪ್ರಮಾಣದ ವೋಟಿಂಗ್ ತೀರ್ಥಹಳ್ಳಿ | ಆಗುಂಬೆಯ ಲಕ್ಕುಂದದಲ್ಲಿ ವೃದ್ದೆಯ ಕಟ್ಟಿ ಹಾಕಿ ಲಕ್ಷಾಂತರ ರೂ. ಮೌಲ್ಯದ… ಪಕ್ಷ ಕಟ್ಟಲು ಕಾರ್ಯಕರ್ತರು ಇದ್ದಾರೆ, ಜಮೀರ್ ಜೆಡಿಎಸ್‌ಗೆ ಬರೋ ಅವಶ್ಯಕತೆ ಇಲ್ಲ: ನಿಖಿಲ್… ವಿದೇಶಿ ಮಹಿಳೆಯ ಅತ್ಯಾಚಾರ ದೌರ್ಜನ್ಯ ಪ್ರಕರಣ: ‘ದೇವಿ ವಿಲ್ಲಾ’ ಹೋಂಸ್ಟೇ ಪರವಾನಗಿ ರದ್ದು ಬಸವಕಲ್ಯಾಣ ಬಸವೇಶ್ವರ ರಥೋತ್ಸವದಲ್ಲಿ ಭೀಕರ ದುರಂತ: ರಥದ ಚಕ್ರಕ್ಕೆ ಸಿಲುಕಿ ಭಕ್ತನ ಎರಡು… ತಮಿಳುನಾಡಿನಲ್ಲಿ ಮತದಾನ: ಸಿಎಂ ಸ್ಟಾಲಿನ್, ಸೂಪರ್ ಸ್ಟಾರ್ ರಜನೀಕಾಂತ್, ಪ್ರಸಿದ್ಧ ನಟ ವಿಜಯ್…

ಇತ್ತೀಚಿನ ಸುದ್ದಿ

ಕೂಡ್ಲಿಗಿ ಸರ್ಕಾರಿ ಮೆಟ್ರಿಕ್ ನಂತರದ ಬಾಲಕರ ವಸತಿ ನಿಲಯದಲ್ಲಿ ಕಾನೂನು ಅರಿವು ಕಾರ್ಯಕ್ರಮ

23/03/2022, 09:49

ವಿ.ಜಿ.ವೃಷಭೇಂದ್ರ ಕೂಡ್ಲಿಗಿ ವಿಜಯನಗರ

info.reporterkarnataka@gmail.com  

ಜಿಲ್ಲೆಯ ಕೂಡ್ಲಿಗಿ ಪಟ್ಟಣದ ಸರ್ಕಾರಿ ಮೆಟ್ರಿಕ್ ನಂತರದ ಬಾಲಕರ ವಸತಿ ನಿಲಯದಲ್ಲಿ,ಕಾನೂನು ತಿಳುವಳಿಕೆ ಕಾರ್ಯಾಗಾರ ಜರುಗಿತು. 

ನ್ಯಾಯಾಲಯ ಇಲಾಖೆ, ತಾಲೂಕು ಕಾನೂನು ಸೇವೆಗಳ ಸಮಿತಿ ಹಾಗೂ ವಕೀಲರ ಸಂಘದ ಸಹಯೋಗದಲ್ಲಿ ಕಾರ್ಯಕ್ರಮ ಜರುಗಿತು.”ಗ್ರಾಹಕ ರಕ್ಷಣಾ ಕಾಯ್ದೆ ಗ್ರಾಹಕರ ಹಕ್ಕುಗಳು ಮತ್ತು ಜವಾಬ್ದಾರಿ ಗಳು”ಕುರಿತು ಪ್ಯಾನಲ್  ವಕೀಲರಾದ ಜಿ.ಎಮ್.ಮಲ್ಲಿಕಾರ್ಜುನ ಸ್ವಾಮಿ ಉಪನ್ಯಾಸ ನೀಡಿದರು.

ನಂತರ ವಕೀಲರಾದ ಕರಿಬಸವರಾಜ ಮೋಟಾರು ವಾಹನ ಕಾಯ್ದೆ, ವಕೀಲರ ಸಂಘದ ಕಾರ್ಯದರ್ಶಿ ಬಿ.ಸಿದ್ದಲಿಂಗಪ್ಪ ಜನನ ಮತ್ತು ಮರಣ ಪ್ರಮಾಣ ಪತ್ರಗಳ ಮಹತ್ವ ಕುರಿತು ಮಾತನಾಡಿದರು. ಹಿರಿಯ ವಕೀಲರಾದ ಭಾಷಾ ಸಾಹೇಬ್ ಯುವಕರು ಶಿಕ್ಷಣ ಜೊತೆಗೆ ನೈತಿಕ ಶಿಕ್ಷಣ ಹಾಗೂ ನಾಡ ಭಕ್ತಿ ದೇಶಭಕ್ತಿ ಹೊಂದುವಂತೆ ಯುವಕರಿಗೆ ಕರೆ ನೀಡಿ ಜಾಗ್ರತೆ ಮೂಡಿಸುವ ನಿಟ್ಟಿನಲ್ಲಿ ಮಾತನಾಡಿದರು.

ವಕೀಲರ ಸಂಘದ ಅಧ್ಯಕ್ಷ ಜಿ.ಹೊನ್ನೂರಪ್ಪ ಕಾರ್ಯಕ್ರಮ ಉದ್ಘಾಟಿಸಿದರು. ತಾಲೂಕು ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ಪಂಪಾಪತಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಸರ್ಕಾರಿ ಹೆಚ್ಚುವರಿ ವಕೀಲರಾದ ಕೆ.ಜಿ.ಶಿವಪ್ರಸಾದ್, ವಕೀಲರಾದ ಮಲ್ಲಿಕಾರ್ಜುನ ವೇದಿಕೆಯಲ್ಲಿದ್ದರು.

ಪ್ಯಾನಲ್ ವಕೀಲರಾದ ಸಿ.ವಿರುಪಾಕ್ಷಪ್ಪ ಸ್ವಾಗತ, ನಿರೂಪಣೆ ಹಾಗೂ ವಂದನಾರ್ಪಣೆ ನಿರ್ವಹಿಸಿದರು. ಕಾನೂನು ಸೇವೆಗಳ ಸಮಿತಿ ಸಿಬ್ಬಂದಿ,ನಿಲಯ ಮೇಲ್ವಿಚಾರಕ ಕುಮಾರಸ್ವಾಮಿ ಹಾಗೂ ಸಿಬ್ಬಂದಿ ಹಾಜರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು