3:24 PM Sunday21 - December 2025
ಬ್ರೇಕಿಂಗ್ ನ್ಯೂಸ್
ಗಾಂಧಿ ಭಾರತವನ್ನು ಗೋಡ್ಸೆ ಭಾರತವಾಗಿ ಮಾಡಲು ಬಿಡುವುದಿಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್ ಟಿಪ್ಪರ್ -ಬೊಲೆರೋ ಜೀಪ್ ಡಿಕ್ಕಿ: ಕರ್ತವ್ಯದಲ್ಲಿ ತೆರಳುತ್ತಿದ್ದ ಬಿಎಸ್ಸೆನ್ನೆಲ್ ಸಿಬ್ಬಂದಿಗಳಿಗೆ ಗಾಯ ಹೌದು…ವೈದ್ಯೋ ನಾರಾಯಣೋ ಹರಿ; ಆದರೆ, ದಾದಿಯರು ಎಲೆ ಮರೆಯ ಕಾಯಿ! ಪೌರ ಕಾರ್ಮಿಕರು ಸೇರಿ ಎಲ್ಲ ಕಾರ್ಮಿಕರಿಗೆ ಪಾಲಿಕೆಯಿಂದಲೇ ನೇರ ವೇತನ ಪಾವತಿಗೆ ಕ್ರಮ:… ಕ್ರೆಡಲ್‌ನಿಂದ ರಾಷ್ಟ್ರೀಯ ಇಂಧನ ಸಂರಕ್ಷಣಾ ದಿನಾಚರಣೆ: ಚಿತ್ರ ಬಿಡಿಸಿದ ಪ್ರೌಢಶಾಲೆ ಮಕ್ಕಳು ಮಡಿಕೇರಿ ಹನಿಟ್ರ್ಯಾಪ್ ಪ್ರಕರಣ: ನಾಪತ್ತೆಯಾಗಿದ್ದ ಮತ್ತಿಬ್ಬರು ಆರೋಪಗಳ ಬಂಧನ Belagavi | ಆರೋಗ್ಯ ಸೇತು-ಸಂಚಾರಿ ಆರೋಗ್ಯ ಘಟಕಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ ವಲಸಿಗರಿಂದ ಅಕ್ರಮ ಚಟುವಟಿಕೆ: ಗಡಿಪಾರಿಗೆ ಸದನದಲ್ಲಿ ಶಾಸಕ ಡಾ. ಮಂತರ್ ಗೌಡ ಆಗ್ರಹ ಉರುಳಿಗೆ ಸಿಲುಕಿ ಹುಲಿ ಸಾವಿನ ಪ್ರಕರಣ: ಆರೋಪಿಗಳ ಪತ್ತೆಗೆ ಅರಣ್ಯ ಇಲಾಖೆ ಕಾರ್ಯಾಚರಣೆ ನಕಲಿ‌ ದಾಖಲೆ ಸೃಷ್ಟಿಸಿ 512 ಎಕರೆ ಅರಣ್ಯ-ಕಂದಾಯ ಭೂಮಿ ಕಬಳಿಕೆ ಯತ್ನ: ಆರೋಪಿ…

ಇತ್ತೀಚಿನ ಸುದ್ದಿ

ಕೂಡ್ಲಿಗಿ ಕ್ಷೇತ್ರದ ಸರ್ವತೋಮುಖ ಅಭಿವೃದ್ಧಿಗೆ 550 ಕೋಟಿ ರೂ.ಅನುದಾನ: ಶಾಸಕ ಡಾ. ಎನ್.ಟಿ. ಶ್ರೀನಿವಾಸ್

08/03/2024, 20:01

ವಿ.ಜಿ.ವೃಷಭೇಂದ್ರ ಕೂಡ್ಲಿಗಿ ವಿಜಯನಗರ

info.reporterkarnataka@gmail.com

ಕ್ಷೇತ್ರದ ಸಮಗ್ರ ಅಭಿವೃದ್ಧಿಗಾಗಿ ರಾಜ್ಯ ಸರ್ಕಾರದಿಂದ ಎಲ್ಲಾ ಇಲಾಖೆಗಳನ್ನೊಳಗೊಂಡಂತೆ, ಕ್ಷೇತ್ರಕ್ಕೆ 550 ಕೋಟಿ ರೂ. ಅನುದಾನ ತಂದಿರುವುದಾಗಿ ಶಾಸಕ ಡಾ. ಎನ್.ಟಿ. ಶ್ರೀನಿವಾಸ್ ಹೇಳಿದರು.


ವಿಜಯ ನಗರ ಜಿಲ್ಲೆಯ ಕೂಡ್ಲಿಗಿ ಪಟ್ಟಣದ ಪ್ರವಾಸಿ ಮಂದಿರದಲ್ಲಿ ನಡೆದ ಎಲ್ಲಾ ಇಲಾಖೆಗಳ ತಾಲೂಕು ಪ್ರಗತಿ ಪರಿಶೀಲನಾ(ಕೆಡಿಪಿ) ಸಭೆಯಲ್ಲಿ ಅವರು ಮಾತನಾಡಿದರು.
ಕೃಷಿ ಇಲಾಖಾಧಿಕಾರಿ ಸುನಿಲ್ ಕುಮಾರ್ ಮಾತನಾಡಿ, ಕ್ಷೇತ್ರದ ರೈತರಿಗೆ ಬರ ಪರಿಹಾರದ ಅನುದಾನ ಮಂಜೂರಾಗಿರುವುದಾಗಿ ಸಭೆಗೆ ತಿಳಿಸಿದರು.
ಶಾಸಕರು ಅಧಿಕಾರಿಗಳನ್ನುದ್ಧೇಶಿಸಿ ಮಾತನಾಡಿ, ಕ್ಷೇತ್ರದಲ್ಲೆಡೆ ಕುಡಿಯುವ ನೀರಿನ ಸಮಸ್ಯೆ. ಹಾಗೂ ಧನ ಕರುಗಳಿಗೆ ಮೇವಿನ ಸಮಸ್ಯೆ ಇದ್ದಲ್ಲಿ, ಕೂಡಲೇ ನಮ್ಮ ಗಮನಕ್ಕೆ ತರುವ ಮೂಲಕ ಸಮಸ್ಯೆ ಬಿಗಡಾಯಿಸದಂತೆ ಜಾಗ್ರತೆ ವಹಿಸಬೇಕೆಂದು ಸೂಚಿಸಿದರು.
ಗ್ರಾಮಗಳಲ್ಲಿ ಕುಡಿಯುವ ನೀರು ಪೂರೈಕೆಗಾಗಿ, ಆಯಾ ಗ್ರಾಮ ಪಂಚಾಯ್ತಿಗಳಲ್ಲಿ ಹಾಲಿ ಇರುವಂತಹ ಬೋರ್ ವೆಲ್ ಗಳು ಕೆಟ್ಟಲ್ಲಿ ಪರ್ಯಾಯವಾಗಿ ಖಾಸಗಿ ಬೋರ್ ಮಾಲಿಕರೊಂದಿಗೆ ಒಪ್ಪಂದ ಮಾಡಿಕೊಂಡು ಕನಿಷ್ಠ 3-6 ತಿಂಗಳುಗಳ ವರಿಗೆ ತಿಂಗಳೊಂದಕ್ಕೆ 18 ಸಾವಿರ ಹಣ ಬಾಡಿಗೆ ಕೊಟ್ಟು, ಗ್ರಾಮಕ್ಕೆ ಕುಡಿಯುವ ನೀರು ಪೂರೈಸುವಂತೆ ಕ್ರಮ ಕೈಗೊಳ್ಳಬೇಕಿದೆ ಎಂದು ಪಿಡಿಒಗಳಿಗೆ ಸೂಚಿಸಿದರು. ರಾಜ್ಯ ಸರ್ಕಾರವು ಜನರ ಹಿತಕ್ಕಾಗಿ ಎಲ್ಲಾ ಗ್ಯಾರೆಂಟಿಗಳನ್ನು, ಸಮರ್ಪಕವಾಗಿ ಜಾರಿ ಮಾಡುವುದರ ಜೊತೆಗೆ ಕ್ಷೇತ್ರದ ಸರ್ವತೋಮುಖ ಅಭಿವೃದ್ಧಿಗೆ ಒಲವು ತೋರಿದೆ. ಅದಕ್ಕಾಗಿ ನಮ್ಮ ಕೂಡ್ಲಿಗಿ ಕ್ಷೇತ್ರಕ್ಕೆ ಸರ್ಕಾರ ರಚನೆಯಾಗಿ ವರ್ಷ ತುಂಬು ದೊರೊಳಗಾಗಿ, ಎಲ್ಲಾ ಇಲಾಖೆಗಳಿಗೆ ಒಳಗೊಂಡಂತೆ 550 ಕೋಟಿ ರೂ. ಅನುದಾನ ನೀಡಿದೆ. ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ, ಹಾಗೂ ಉಪಮುಖ್ಯಮಂತ್ರಿಗಳಾದ ಡಿ.ಕೆ.ಶಿವಕುಮಾರ ಅವರು ಬರ ಪೀಡಿತ ಹಣೆ ಪಟ್ಟಿಯಿಂದ ಕೂಡ್ಲಿಗಿ ಕ್ಷೇತ್ರವನ್ನು ತೆಗೆಯಲು, ಕ್ಷೇತ್ರದ ಸರ್ವತೋಮುಖ ಅಭಿವೃದ್ಧಿಗೆ ಹೆಚ್ಚು ಒತ್ತು ಕೊಟ್ಟಿದ್ದಾರೆ. ಈ ನಿಟ್ಟಿನಲ್ಲಿ ತಾವು ಕೂಡ ಹಗಲಿರುಳು ಶ್ರಮಿಸುವುದರೊಂದಿಗೆ, ಪ್ರಾಮಾಣಿಕವಾಗಿ ಪ್ರಯತ್ನ ಮಾಡುತ್ತಿರುವುದಾಗಿ ಶಾಸಕ ಡಾ. ಶ್ರೀನಿವಾಸ್ ತಿಳಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು