9:48 AM Wednesday5 - November 2025
ಬ್ರೇಕಿಂಗ್ ನ್ಯೂಸ್
Kodagu | ಮಡಿಕೇರಿ ತಾಳತ್ ಮನೆ ಬಳಿ ಡಸ್ಟ್ ರ್ ಕಾರಿಗೆ ಬೆಂಕಿ:… ರೈತರಿಗೆ ಅನ್ಯಾಯ ಆಗದಂತೆ ಕ್ರಮ: ಬೆಳಗಾವಿ ಕಬ್ಬು ಬೆಳೆಗಾರರ ಹೋರಾಟಕ್ಕೆ ಸಚಿವೆ ಹೆಬ್ಬಾಳ್ಕರ್… 40 ಸಾವಿರ ಲಂಚ ಸ್ವೀಕಾರ: ಮೆಸ್ಕಾಂ ಜೂನಿಯರ್ ಇಂಜಿನಿಯರ್ ಮಲ್ಲಿಕಾರ್ಜುನ ಸ್ವಾಮಿ ಲೋಕಾಯುಕ್ತ… ದೀಪಾಲಂಕೃತ ವಿಧಾನ ಸೌಧ ಈಗ ಟೂರಿಸ್ಟ್ ಎಟ್ರೆಕ್ಷನ್ ಸೆಂಟರ್: ಸ್ಪೀಕರ್ ಖಾದರ್ ನಡೆಗೆ… ರಾಜ್ಯ ಚಲನಚಿತ್ರ ಪ್ರಶಸ್ತಿ ಪ್ರದಾನ | ಕೇವಲ‌ ಸಬ್ಸಿಡಿಗಾಗಿ ಸಿನಿಮಾ ಮಾಡಬೇಡಿ; ಒಳ್ಳೆ… ಮಂಡ್ಯ ಜಿಲ್ಲೆಯ 50ಕ್ಕೂ ಹೆಚ್ಚು ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಇಸಿಜಿ ಯಂತ್ರ Chikkamagaluru | ಶೃಂಗೇರಿ: ನರಹಂತಕ ಕಾಡಾನೆ ಕೊನೆಗೂ ಸೆರೆ; ಸಾಕಾನೆಯ ಮೂಲಕ ಕಾರ್ಯಾಚರಣೆ Mysore | ಅಸಮಾನತೆ ನಿವಾರಣೆ ಪ್ರತಿಯೊಬ್ಬ ರಾಜಕಾರಣಿಯ ಜವಾಬ್ದಾರಿ: ಸಿಎಂ ಸಿದ್ದರಾಮಯ್ಯ ನವಕಲಬುರಗಿ ನಿರ್ಮಾಣಕ್ಕೆ ನೀಲಿ ನಕ್ಷೆ ಸಿದ್ದ, ಲೀಪ್ ಯೋಜನೆಯ ಅಡಿಯಲ್ಲಿ ಅಭಿವೃದ್ದಿಗೆ ಒತ್ತು:… ಡಿಜಿಟಲ್ ಅರೆಸ್ಟ್ ಮೂಲಕ ಹಣ ವರ್ಗಾವಣೆಯಾಗದಂತೆ ತಡೆದ ಪೊಲೀಸರು: ಮಂಗಳೂರು ಪೊಲೀಸರ ಕಾರ್ಯಕ್ಕೆ…

ಇತ್ತೀಚಿನ ಸುದ್ದಿ

ಕೂಡ್ಲಿಗಿ: ಶ್ರೀಪೇಟೆ ಬಸವೇಶ್ವರ ಕಾರ್ತೀಕೋತ್ಸವ; ಶ್ರೀವೀರಭದ್ರೇಶ್ವರ ಹಲಗೆ ಪ್ರಸ್ತ; ಹರಿದು ಬಂದ ಭಕ್ತಸಾಗರ

05/01/2024, 22:30

ವಿ.ಜಿ.ವೃಷಭೇಂದ್ರ ಕೂಡ್ಲಿಗಿ ವಿಜಯನಗರ

info.reporterkarnataka@gmail.com

ವಿಜಯನಗರ ಜಿಲ್ಲೆಯ ಕೂಡ್ಲಿಗಿಯ ಶ್ರೀಪೇಟೆ ಬಸವೇಶ್ವರ ದೇವಸ್ಥಾನದ ಸೇವಾ ಸಮಿತಿ ಹಾಗೂ ಪೇಟೆಯ ಸಮಸ್ತ ಭಕ್ತರ ಸಹಯೋಗದಲ್ಲಿ ರಾತ್ರಿ ಪಟ್ಟಣದ ಶ್ರೀಪೇಟೆ ಬಸವೇಶ್ವರ ದೇವರ ಕಾರ್ತೀಕೋತ್ಸವ ಜರುಗಿತು.


ಮಹಿಳೆಯರು ಮಕ್ಕಳು ಯುವಕರು ಪಟ್ಟಣದ ವಿವಿಧೆಡೆಯ ಭಕ್ತರು ದೇವರ ದರ್ಶನ ಪಡೆದರು, ಧಾರ್ಮಿಕ ವಿಧಿ ವಿಧಾನದಂತೆ ದೀಪ ಬೆಳಗಿ ಪುನೀತರಾದರು. ಜ. 5ರಂದು ಬೆಳಿಗ್ಗೆ ಶ್ರೀವೀರಭದ್ರೇಶ್ವರ ಹಲಗೆ ಪ್ರಸ್ತ ಜರುಗಿತು, ಶ್ರೀಊರಮ್ಮ ದೇವಿ ಹೊಂಡದಲ್ಲಿ ಶ್ರೀವೀರಭದ್ರೇಶ್ವರ ಸ್ವಾಮಿಯ ಹಲಗೆ ಗಳನ್ನು. ಶಾಸ್ತ್ರೋಕ್ತವಾಗಿ ಪೂಜಿಸಿ ನಂದಿಕೋಲು ಸಮ್ಮಾಳ ವಾದ್ಯಗಳೊಂದಿಗೆ, ಪ್ರಮುಖ ಬೀದಿಗಳ ಮೂಲಕ ಶ್ರೀ ಬಸವೈಶ್ವರ ದೇವರ ಪಲ್ಲಕ್ಕಿ ಜರುಗಿಸಲ‍ಾಯಿತು. ಭಕ್ತರು ಶ್ರೀವೀರಭದ್ರೇಶ್ವರ ದೇವರ ಸೂಸ್ತ್ರ ಹಾಕಿಸಿಕೊಂಡು, ಮಹಿಳೆಯರು ಮಕ್ಕಳು ಯುವಕರು ಭಕ್ತಿಯಿಂದ ಕಾರ್ತೀಕೋತ್ಸವ ಆಚರಿಸಿ ದೇವರ ಕೃಪೆಗೆ ಪಾತ್ರರಾದರು.

ಇತ್ತೀಚಿನ ಸುದ್ದಿ

ಜಾಹೀರಾತು