6:34 AM Tuesday19 - May 2026
ಬ್ರೇಕಿಂಗ್ ನ್ಯೂಸ್
ಒಂದು ದೇಶ – ಒಂದು ಚುನಾವಣೆ: ವಿವಿಧ ವರ್ಗಗಳ ಅಭಿಪ್ರಾಯ ಆಲಿಸಿದ ಜಂಟಿ… ದುಬಾರೆಯಲ್ಲಿ ಆನೆಗಳ ಸ್ನಾನ ನಾಳೆಯಿಂದ 100 ಅಡಿ ದೂರದಲ್ಲಿ ನಿಂತು ನೋಡಲಷ್ಟೇ ಅವಕಾಶ:… ಕೊಡಗಿನ ತಮ್ಮ ಕಾಫಿ ಎಸ್ಟೇಟ್‌ಗೆ ನುಗ್ಗಿದ ಆನೆಗಳ ಹಿಂಡಿನ ವಿಡಿಯೋ ಹಂಚಿಕೊಂಡ ಉದ್ಯಮಿ… ಕುದುರೆಮುಖ ರಾಷ್ಟ್ರೀಯ ಉದ್ಯಾನವನ ಪುನರ್ವಸತಿಗೆ ಹೆಚ್ಚುವರಿಯಾಗಿ 20 ಕೋಟಿ: ಮಂಗಳೂರಿನಲ್ಲಿ ಸಚಿವ ಖಂಡ್ರೆ ಚಿಕ್ಕಮಗಳೂರು | ದೇವನಗುಲ್ ಕಾಡಿನೊಳಗೆ ಅನಾಥ ಸ್ಥಿತಿಯಲ್ಲಿ ವೃದ್ಧನ ಶವ ಪತ್ತೆ ಬಳ್ಳಾರಿ | ಆಗಸ್ಟ್ 2ರಂದು ‘ಸ್ಟೀಲ್ ಸಿಟಿ ರನ್ 2026’ 5ನೇ ಆವೃತ್ತಿ:… ತರೀಕೆರೆ | ರೆವೆನ್ಯೂ ಇನ್ಸ್‌ಪೆಕ್ಟರ್ ಲೋಕಾಯುಕ್ತ ಬಲೆಗೆ: ರೈತನಿಂದ 30 ಸಾವಿರ ಲಂಚ… ಸ್ಯಾಂಡಲ್‌ವುಡ್‌ಗೆ ಬಿಗ್ ಶಾಕ್: ಹೃದಯಘಾತಕ್ಕೆ ನಟ ದಿಲೀಪ್ ರಾಜ್ ಬಲಿ ಪ್ರಧಾನಿ ಮೋದಿ ಕರೆ ಬೆನ್ನಲ್ಲೆ, ಅಡುಗೆ ಎಣ್ಣೆ ದರದಲ್ಲಿ ಭಾರಿ ಇಳಿಕೆ: ಅಕ್ಕಿ… ವಿದ್ಯುತ್ ಕಂಬದಲ್ಲಿ ಶಾರ್ಟ್ ಸರ್ಕ್ಯೂಟ್: ಬೈಕ್ ಸವಾರರ ನಿರ್ಲಕ್ಷ್ಯದ ಸವಾರಿ; ಅಪಾಯದಿಂದ ಪಾರು.

ಇತ್ತೀಚಿನ ಸುದ್ದಿ

ಕೂಡ್ಲಿಗಿ ತಾಲೂಕು ಕಾನಿಪ ಧ್ವನಿಯಿಂದ ಪತ್ರಿಕಾ ದಿನಾಚರಣೆ: ರಾಜದೇಶಿ ಕೇಂದ್ರ ಶಿವಾಚಾರ್ಯ ಮಹಾಸ್ವಾಮಿ ಉದ್ಘಾಟನೆ 

21/08/2022, 18:10

ವಿಜಯನಗರ(reporterkarnataka.com):ವಿಜಯನಗರ ಜಿಲ್ಲಾ ಕೂಡ್ಲಿಗಿ ತಾಲೂಕು ಕಾ.ನಿ.ಪ.ಧ್ವನಿ ಸಂಘಟನೆಯಿಂದ ಕೂಡ್ಲಿಗಿ ನಗರದ ಸಭಾಭವನದಲ್ಲಿ ನಡೆದ ಪತ್ರಿಕಾ ದಿನಾಚರಣೆಯ ಸಮಾರಂಭವನ್ನು ಶ್ರೀ 1008 ಜಗದ್ಗುರು ಸಿದ್ದಲಿಂಗ ರಾಜದೇಶಿ ಕೇಂದ್ರ ಶಿವಾಚಾರ್ಯ ಮಹಾಸ್ವಾಮಿಗಳು ದೀಪ ಬೆಳಗಿಸಿ ಉದ್ಘಾಟಿಸಿದರು.

ಚಾನುಕೋಟಿ ಮಠದ ಶ್ರೀಸಿದ್ದಲಿಂಗ ಶಿವಾಚಾರ್ಯ ಸ್ವಾಮಿಗಳು, ಕೂಡ್ಲಿಗಿ ಹಿರೇಮಠ ಸಂಸ್ಥಾನದ ಶ್ರೀಪ್ರಶಾಂತ ಸಾಗರ  ಸ್ವಾಮಿಗಳು, ನಂದಿಪುರ ಪುಣ್ಯ ಕ್ಷೇತ್ರದ ಶ್ರೀ ಮಹೇಶ್ವರ ಸ್ವಾಮೀಜಿಗಳು ಹಾಗೂ ಕಾನಮಡುಗು ದಾಸೋಹ ಮಠದ ಧರ್ಮಾಧಿಕಾರಿಗಳಾದ ಶ್ರೀಐಮಡಿ ಶರಣಾಚಾರ್ಯರು ಉಪಸ್ಥಿತರಿದ್ದರು.ವಿಶೇಷ ಉಪನ್ಯಾಸ ನೀಡಿದ  ಕಾ.ನಿ.ಪ.ಧ್ವನಿ ಸಂಘಟನೆಯ ರಾಜ್ಯಾಧ್ಯಕ್ಷ ಬಂಗ್ಲೆ ಮಲ್ಲಿಕಾರ್ಜುನ ಅವರು, ರಾಜ್ಯದ ಪತ್ರಕರ್ತರ ಏರಿಳಿತಗಳ ಬಗ್ಗೆ ವಿವರಿಸುವುದರ ಜೊತೆಗೆ ಸಮಾಜದಲ್ಲಿ ನಮ್ಮ ಭಾಷೆ ಹಾಗೂ ಬರವಣಿಗೆಯಲ್ಲಿ ಹಿಡಿತದೊಂದಿಗೆ ಪ್ರತಿಯೊಬ್ಬರ ಭಾವನೆಗಳಿಗೆ ಬೆಲೆ ನೀಡಬೇಕೆಂದು ಪತ್ರಕರ್ತರಿಗೆ ಕಿವಿ ಮಾತು ಹೇಳಿದರು. 


ಅಧ್ಯಕ್ಷತೆಯನ್ನು ತಾಲೂಕು ಅಧ್ಯಕ್ಷ ಎಲೆ ನಾಗರಾಜ್ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಕಾಂಗ್ರೆಸ್ ಮುಖಂಡರಾದ ಗುಜ್ಜಲ್ ರಘು, ಲೋಕೇಶ್ ನಾಯಕ್, ಕಾವಲಿ ಶಿವಪ್ಪ ನಾಯಕ್, ರಾಜ್ಯ ಕಾರ್ಯದರ್ಶಿಗಳಾದ ಎಂ.ಇಸಾಕ್ ಹಾಗೂ ಇನ್ನೀತರ ವೇದಿಕೆಯಲ್ಲಿ ಉಪಸ್ಥಿತರಿದ್ದರು. 

ಇದೇ ವೇದಿಕೆಯಲ್ಲಿ ಸಾಧಕರಿಗೆ ಸನ್ಮಾನ ಹಾಗೂ ವಿಧ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಿ ಗೌರವಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು