1:48 PM Thursday20 - August 2026
ಬ್ರೇಕಿಂಗ್ ನ್ಯೂಸ್
ವಿಜಯನಗರ: ಒಂದೇ ಕುಟುಂಬದ ಮೂವರು ಯುವಕರು ನೀರುಪಾಲು ದಾವಣಗೆರೆ: ಮಹಿಳೆಯ 9 ತಿಂಗಳ ಕೆಮ್ಮಿನ ರಹಸ್ಯ ಬಯಲಿಗೆಳೆದ ಆದಿಚುಂಚನಗಿರಿ ಆಸ್ಪತ್ರೆ ವೈದ್ಯರು ಕೊಡಗಿನಲ್ಲಿ ಮತ್ತೆ ಕಾಡಾನೆ ದಾಳಿ: ಕಾರ್ಮಿಕ ಬಲಿ; ಮತ್ತೋರ್ವ ಗಂಭೀರ ಗಾಯ ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ…

ಇತ್ತೀಚಿನ ಸುದ್ದಿ

ಕೂಡ್ಲಿಗಿ ತಾಲೂಕು ಕಾನಿಪ ಧ್ವನಿಯಿಂದ ಪತ್ರಿಕಾ ದಿನಾಚರಣೆ: ರಾಜದೇಶಿ ಕೇಂದ್ರ ಶಿವಾಚಾರ್ಯ ಮಹಾಸ್ವಾಮಿ ಉದ್ಘಾಟನೆ 

21/08/2022, 18:10

ವಿಜಯನಗರ(reporterkarnataka.com):ವಿಜಯನಗರ ಜಿಲ್ಲಾ ಕೂಡ್ಲಿಗಿ ತಾಲೂಕು ಕಾ.ನಿ.ಪ.ಧ್ವನಿ ಸಂಘಟನೆಯಿಂದ ಕೂಡ್ಲಿಗಿ ನಗರದ ಸಭಾಭವನದಲ್ಲಿ ನಡೆದ ಪತ್ರಿಕಾ ದಿನಾಚರಣೆಯ ಸಮಾರಂಭವನ್ನು ಶ್ರೀ 1008 ಜಗದ್ಗುರು ಸಿದ್ದಲಿಂಗ ರಾಜದೇಶಿ ಕೇಂದ್ರ ಶಿವಾಚಾರ್ಯ ಮಹಾಸ್ವಾಮಿಗಳು ದೀಪ ಬೆಳಗಿಸಿ ಉದ್ಘಾಟಿಸಿದರು.

ಚಾನುಕೋಟಿ ಮಠದ ಶ್ರೀಸಿದ್ದಲಿಂಗ ಶಿವಾಚಾರ್ಯ ಸ್ವಾಮಿಗಳು, ಕೂಡ್ಲಿಗಿ ಹಿರೇಮಠ ಸಂಸ್ಥಾನದ ಶ್ರೀಪ್ರಶಾಂತ ಸಾಗರ  ಸ್ವಾಮಿಗಳು, ನಂದಿಪುರ ಪುಣ್ಯ ಕ್ಷೇತ್ರದ ಶ್ರೀ ಮಹೇಶ್ವರ ಸ್ವಾಮೀಜಿಗಳು ಹಾಗೂ ಕಾನಮಡುಗು ದಾಸೋಹ ಮಠದ ಧರ್ಮಾಧಿಕಾರಿಗಳಾದ ಶ್ರೀಐಮಡಿ ಶರಣಾಚಾರ್ಯರು ಉಪಸ್ಥಿತರಿದ್ದರು.ವಿಶೇಷ ಉಪನ್ಯಾಸ ನೀಡಿದ  ಕಾ.ನಿ.ಪ.ಧ್ವನಿ ಸಂಘಟನೆಯ ರಾಜ್ಯಾಧ್ಯಕ್ಷ ಬಂಗ್ಲೆ ಮಲ್ಲಿಕಾರ್ಜುನ ಅವರು, ರಾಜ್ಯದ ಪತ್ರಕರ್ತರ ಏರಿಳಿತಗಳ ಬಗ್ಗೆ ವಿವರಿಸುವುದರ ಜೊತೆಗೆ ಸಮಾಜದಲ್ಲಿ ನಮ್ಮ ಭಾಷೆ ಹಾಗೂ ಬರವಣಿಗೆಯಲ್ಲಿ ಹಿಡಿತದೊಂದಿಗೆ ಪ್ರತಿಯೊಬ್ಬರ ಭಾವನೆಗಳಿಗೆ ಬೆಲೆ ನೀಡಬೇಕೆಂದು ಪತ್ರಕರ್ತರಿಗೆ ಕಿವಿ ಮಾತು ಹೇಳಿದರು. 


ಅಧ್ಯಕ್ಷತೆಯನ್ನು ತಾಲೂಕು ಅಧ್ಯಕ್ಷ ಎಲೆ ನಾಗರಾಜ್ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಕಾಂಗ್ರೆಸ್ ಮುಖಂಡರಾದ ಗುಜ್ಜಲ್ ರಘು, ಲೋಕೇಶ್ ನಾಯಕ್, ಕಾವಲಿ ಶಿವಪ್ಪ ನಾಯಕ್, ರಾಜ್ಯ ಕಾರ್ಯದರ್ಶಿಗಳಾದ ಎಂ.ಇಸಾಕ್ ಹಾಗೂ ಇನ್ನೀತರ ವೇದಿಕೆಯಲ್ಲಿ ಉಪಸ್ಥಿತರಿದ್ದರು. 

ಇದೇ ವೇದಿಕೆಯಲ್ಲಿ ಸಾಧಕರಿಗೆ ಸನ್ಮಾನ ಹಾಗೂ ವಿಧ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಿ ಗೌರವಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು