11:50 AM Friday13 - February 2026
ಬ್ರೇಕಿಂಗ್ ನ್ಯೂಸ್
ಒಟಿಪಿ ಸೋರಿಕೆ: ವಂಚನೆ ತಡೆಗಟ್ಟಲು ಏರ್‌ ಟೆಲ್‌ ನಿಂದ ಹೊಸ ಎಐ ಚಾಲಿತ… ಮಾಜಿ ಪ್ರಧಾನಿ ಎಚ್ಡಿಡಿ ಮಧ್ಯಪ್ರವೇಶ: ಕಾಫಿ ತೋಟಗಳ ಆನ್-ಲೈನ್ ಹರಾಜು ತಕ್ಷಣವೇ ಸ್ಥತಿತಗೊಳಿಸುವಂತೆ… ಕಾಲವೇ ಉತ್ತರ ಕೊಡುತ್ತೆ: ಸೋನಿಯಾ, ರಾಹುಲ್, ಪ್ರಿಯಾಂಕ ಭೇಟಿ ಬಳಿಕ ಡಿಸಿಎಂ ಡಿಕೆಶಿ… ಶಿವಣ್ಣನ ಶಿವಭಕ್ತಿ: ಶಿವರಾತ್ರಿಯ ಅಂಗವಾಗಿ 37 ವರ್ಷಗಳಿಂದ ಬೆಂಗಳೂರಿನಿಂದ ಧರ್ಮಸ್ಥಳಕ್ಕೆ ಪಾದಯಾತ್ರೆ! ದಕ್ಷಿಣ ಕೊಡಗಿನಲ್ಲಿ ಆತಂಕದ ಸೃಷ್ಟಿಸಿದ್ದ ವ್ಯಾಘ್ರ ಕೊನೆಗೂ ಸೆರೆ: ಬಲೆಗೆ ಬಿದ್ದ ಗಂಡು… ತೇಜಸ್ವಿ ಸೂರ್ಯ ಬಂಧನ ಮಾಡಿಸಿದ ಸಿದ್ದರಾಮಯ್ಯ ಪುಕ್ಕಲ ಸಿಎಂ: ಪ್ರತಾಪ್‌ ಸಿಂಹ ಕಿಡಿ ಚಿಕ್ಕಮಗಳೂರು: ಕಾಫಿ ತೋಟದ ಇಬ್ಬರು ಮಹಿಳಾ ಕಾರ್ಮಿಕರ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ… ಎಚ್ ಡಿ ಕೋಟೆ | ಕಂಚಮಳ್ಳಿ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಮೇಲೆ ಭಾರೀ… Kodagu | ಕುಶಾಲನಗರ: ರಸ್ತೆಯಲ್ಲೇ ಧಗಧಗನೆ ಹೊತ್ತಿ ಉರಿದ ಕ್ರೇಟಾ ಕಾರು; ಅದೃಷ್ಟವಶಾತ್… ಇ-ಸ್ವತ್ತು ತಂತ್ರಾಂಶದಲ್ಲಿ ಬದಲಾವಣೆ ಮೂಲಕ ಸಾರ್ವಜನಿಕರಿಗೆ ತ್ವರಿತ ಸೇವೆಗೆ ಕ್ರಮ: ಗ್ರಾಮೀಣಾಭಿವೃದ್ಧಿ ಸಚಿವ…

ಇತ್ತೀಚಿನ ಸುದ್ದಿ

ಕೂಡ್ಲಿಗಿ: ವಾಹನ ಅಪಘಾತದಲ್ಲಿ ಮೃತಪಟ್ಟ ಅಪರಿಚಿತ ವ್ಯಕ್ತಿಯ ಶವ ಪತ್ತೆ; ವಿಳಾಸ ಪತ್ತೆಗೆ ಕೋರಿಕೆ

09/09/2021, 18:33

ವಿ.ಜಿ.ವೃಷಭೇಂದ್ರ ಕೂಡ್ಲಿಗಿ ವಿಜಯನಗರ

info.reporterkarnataka@gmail.com

ಜಿಲ್ಲೆಯ ಕೂಡ್ಲಿಗಿ ತಾಲೂಕು ಮೊರಬನಳ್ಳಿ ಕ್ರಾಸ್ ಬಳಿ ರಾಷ್ಟ್ರೀಯ ಹೆದ್ದಾರಿ50 ಕರೇಕಲ್ ಬಗಡಿಯಲ್ಲಿ ರಸ್ತೆ ಅಪಘಾತದಲ್ಲಿ ಮೃತಪಟ್ಟ ಅಂದಾಜು 45 ವರ್ಷ ಪ್ರಾಯ ಅಪರಿಚಿತ ವ್ಯಕ್ತಿಯ ಶವ ಪತ್ತೆಯಾಗಿದ್ದು, ಗುರುತು ಪತ್ತೆಗೆ ಸಾರ್ವಜನಿಕರಲ್ಲಿ ಕೂಡ್ಲಿಗಿ ಸಿಪಿಐ ವಸಂತ ಅಸೋದೆ ಕೋರಿದ್ದಾರೆ. 

ಮೇಲ್ನೋಟಕ್ಕೆ ಮೃತವ್ಯಕ್ತಿ ಮಾನಸಿಕ ಅಸ್ವಸ್ಥನೋ ಅಥವಾ ಭಿಕ್ಷುಕನ ತರಹ ಕಂಡು ಬಂದಿದೆ.

ಆತನು ನಡೆದುಕೊಂಡು ತೆರಳುವಾಗ ಯಾವುದೋ ವಾಹನ ಈತನಿಗೆ ಡಿಕ್ಕಿ ಹೊಡೆದಿದ್ದು ಪರಿಣಾಮ  ತಲೆ ಹಾಗೂ ಕಾಲು ತೀವ್ರ ಗಾಯಗೊಂಡು ಮೃತಪಟ್ಟಿದ್ದಾನೆ ಎಂದು ತಿಳಿದು ಬರುತ್ತಿದೆ ಎಂದು ಅವರು ತಿಳಿಸಿದ್ದಾರೆ.

ಈ ಸಂಬಂದಿಸಿದಂತೆ ಕೂಡ್ಲಿಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಮೃತ ವ್ಯಕ್ತಿಯ ವಿಳಾಸ ಪತ್ತೆಗಾಗಿ ಕೂಡ್ಲಿಗಿ ಸಿಪಿಐ ವಸಂತ ಅಸೋದೆಯವರು ಪ್ರಕಟಣೆ ನೀಡಿದ್ದು,ಚಹರೆ ಹಾಗೂ ವಿವರ ಗಳಿಂದ ಮೃತ ವ್ಯಕ್ತಿಯ  ವಿಳಾಸ ಅಥಾವ ಮಾಹಿತಿ ಯಾರಿಗಾದರೂ ತಿಳಿದು ಬಂದಲ್ಲಿ ಕೂಡಲೇ ಕೂಡ್ಲಿಗಿ ಪೊಲೀಸ್ ಠಾಣೆ ಅಥವಾ ಹತ್ತಿರದ ಪೊಲೀಸ್ ಠಾಣೆಯನ್ನ ಸಂಪರ್ಕಿಸಿ,ಅಗತ್ಯ ಮಾಹಿತಿ ನೀಡಿ ವಿಳಾಸ ಪತ್ತೆಗೆ ನೆರವು ನೀಡಬೇಕೆಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು