3:13 PM Tuesday16 - June 2026
ಬ್ರೇಕಿಂಗ್ ನ್ಯೂಸ್
ವಿರಾಜಪೇಟೆ ಸಮೀಪದ ರೆಸಾರ್ಟ್ ಈಜುಕೋಳದಲ್ಲಿ ಬಿದ್ದು ಗೋವಾದ ಪ್ರವಾಸಿಗ ಸಾವು ಇಂದಿರಾ ಲಂಕೇಶ್ ನಿಧನ: ಮಾಜಿ ಸಿಎಂ ಸಿದ್ಧರಾಮಯ್ಯ, ಖ್ಯಾತ ನಟ ಪ್ರಕಾಶ್ ರೈ… ಮೈಸೂರು ಪಬ್‌ನಲ್ಲಿ ಭೀಕರ ಅಗ್ನಿ ದುರಂತ: ಇಬ್ಬರು ಸಜೀವ ದಹನ; ಹಲವರ ಸ್ಥಿತಿ… ಶಬರಿಮಲೆ ಮಣಿಕಂಠನ ದರ್ಶನಕ್ಕಾಗಿ ಇರುಮುಡಿ ಹೊತ್ತು ಶಬರಿಮಲೆಗೆ ಹೊರಟ ಕೇಂದ್ರ ಸಚಿವ ಕುಮಾರಸ್ವಾಮಿ ಬಾಗಲಕೋಟೆ: ಭೂ ವ್ಯವಹಾರ ಸಂಬಂಧ ಅಧಿಕಾರಿಗೆ ರೈತನಿಂದ ಚಪ್ಪಲಿ ಸೇವೆ ಕುಶಾಲನಗರ: ನದಿ ಪಾಲಾಗಿದ್ದ ಮತ್ತೋರ್ವ ಯುವಕನ ಮೃತದೇಹ ಪತ್ತೆ ಸೋಮವಾರಪೇಟೆ:ತೋಟದಲ್ಲಿ ಒಣಗಿದ್ದ ಮರ ಬಿದ್ದು ಬೆಳೆಗಾರ ಸಾವು ಸೋಮವಾರಪೇಟೆ ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿ 2 ಲೀಟರ್‍ ಗಿಂತ ಕಡಿಮೆ ಪ್ರಮಾಣದ ಕುಡಿಯುವ… ಹುಣಸೂರು ತಾಲೂಕಿನ ಕೂಡ್ಲೂರಿನಲ್ಲಿ ವ್ಯಾಘ್ರ ಸೆರೆ: ಅರಣ್ಯ ಇಲಾಖೆಯ ಬೋನಿಗೆ ಬಿದ್ದ ಹುಲಿ 15 ಸಾವಿರ ಲಂಚ ಸ್ವೀಕಾರ: ಮೂಡಿಗೆರೆ ಸರ್ವೇ ಇಲಾಖೆ ಮಹಿಳಾ ಸಿಬ್ಬಂದಿ ಸುಮಾ…

ಇತ್ತೀಚಿನ ಸುದ್ದಿ

ಕೂಡ್ಲಿಗಿ: ವಾಹನ ಅಪಘಾತದಲ್ಲಿ ಮೃತಪಟ್ಟ ಅಪರಿಚಿತ ವ್ಯಕ್ತಿಯ ಶವ ಪತ್ತೆ; ವಿಳಾಸ ಪತ್ತೆಗೆ ಕೋರಿಕೆ

09/09/2021, 18:33

ವಿ.ಜಿ.ವೃಷಭೇಂದ್ರ ಕೂಡ್ಲಿಗಿ ವಿಜಯನಗರ

info.reporterkarnataka@gmail.com

ಜಿಲ್ಲೆಯ ಕೂಡ್ಲಿಗಿ ತಾಲೂಕು ಮೊರಬನಳ್ಳಿ ಕ್ರಾಸ್ ಬಳಿ ರಾಷ್ಟ್ರೀಯ ಹೆದ್ದಾರಿ50 ಕರೇಕಲ್ ಬಗಡಿಯಲ್ಲಿ ರಸ್ತೆ ಅಪಘಾತದಲ್ಲಿ ಮೃತಪಟ್ಟ ಅಂದಾಜು 45 ವರ್ಷ ಪ್ರಾಯ ಅಪರಿಚಿತ ವ್ಯಕ್ತಿಯ ಶವ ಪತ್ತೆಯಾಗಿದ್ದು, ಗುರುತು ಪತ್ತೆಗೆ ಸಾರ್ವಜನಿಕರಲ್ಲಿ ಕೂಡ್ಲಿಗಿ ಸಿಪಿಐ ವಸಂತ ಅಸೋದೆ ಕೋರಿದ್ದಾರೆ. 

ಮೇಲ್ನೋಟಕ್ಕೆ ಮೃತವ್ಯಕ್ತಿ ಮಾನಸಿಕ ಅಸ್ವಸ್ಥನೋ ಅಥವಾ ಭಿಕ್ಷುಕನ ತರಹ ಕಂಡು ಬಂದಿದೆ.

ಆತನು ನಡೆದುಕೊಂಡು ತೆರಳುವಾಗ ಯಾವುದೋ ವಾಹನ ಈತನಿಗೆ ಡಿಕ್ಕಿ ಹೊಡೆದಿದ್ದು ಪರಿಣಾಮ  ತಲೆ ಹಾಗೂ ಕಾಲು ತೀವ್ರ ಗಾಯಗೊಂಡು ಮೃತಪಟ್ಟಿದ್ದಾನೆ ಎಂದು ತಿಳಿದು ಬರುತ್ತಿದೆ ಎಂದು ಅವರು ತಿಳಿಸಿದ್ದಾರೆ.

ಈ ಸಂಬಂದಿಸಿದಂತೆ ಕೂಡ್ಲಿಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಮೃತ ವ್ಯಕ್ತಿಯ ವಿಳಾಸ ಪತ್ತೆಗಾಗಿ ಕೂಡ್ಲಿಗಿ ಸಿಪಿಐ ವಸಂತ ಅಸೋದೆಯವರು ಪ್ರಕಟಣೆ ನೀಡಿದ್ದು,ಚಹರೆ ಹಾಗೂ ವಿವರ ಗಳಿಂದ ಮೃತ ವ್ಯಕ್ತಿಯ  ವಿಳಾಸ ಅಥಾವ ಮಾಹಿತಿ ಯಾರಿಗಾದರೂ ತಿಳಿದು ಬಂದಲ್ಲಿ ಕೂಡಲೇ ಕೂಡ್ಲಿಗಿ ಪೊಲೀಸ್ ಠಾಣೆ ಅಥವಾ ಹತ್ತಿರದ ಪೊಲೀಸ್ ಠಾಣೆಯನ್ನ ಸಂಪರ್ಕಿಸಿ,ಅಗತ್ಯ ಮಾಹಿತಿ ನೀಡಿ ವಿಳಾಸ ಪತ್ತೆಗೆ ನೆರವು ನೀಡಬೇಕೆಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು