12:24 AM Friday18 - April 2025
ಬ್ರೇಕಿಂಗ್ ನ್ಯೂಸ್
Mangaluru | ವಕ್ಫ್ ತಿದ್ದುಪಡಿ ಕಾಯ್ದೆ ವಿರುದ್ಧ ಬೃಹತ್ ಪ್ರತಿಭಟನೆ; ಅಡ್ಯಾರ್ ಮೈದಾನದಲ್ಲಿ… Karnataka BJP | ಕಲಬುರ್ಗಿಯಲ್ಲಿ ಬಿಜೆಪಿ ಜನಾಕ್ರೋಶ ಯಾತ್ರೆ: ಕಾಂಗ್ರೆಸ್ ತುಘಲಕ್ ದರ್ಬಾರ್… Bagalkote | ಅನುಭವ ಮಂಟಪ-ಬಸವಾದಿ ಶರಣರ ವೈಭವದ ರಥಯಾತ್ರೆ: ಸಿಎಂ ಸಿದ್ದರಾಮಯ್ಯ ಚಾಲನೆ Kolara | ಮಾವು ಸುಗ್ಗಿ ಅಂತ್ಯಕ್ಕೆ ದಿನಗಣನೆ ಆರಂಭ: ಈ ವರ್ಷ ಇಳುವರಿಯೂ… Mangaluru | ಸರಕಾರದ ಆಶಯ ಅರಿತು ಕೆಲಸ ಮಾಡಿ: ಮುಂಗಾರು ಹಂಗಾಮು ಉದ್ಘಾಟಿಸಿ… ಮಹಿಳೆ ಮೇಲೆ ಲೈಂಗಿಕ ಕಿರುಕುಳ ಹಾಗೂ ಹಲ್ಲೆ: ಬಣಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ… ಭಾರತದಲ್ಲಿ ಪ್ರಪ್ರಥಮವಾಗಿ ಮುಳಿಯದ ಮತ್ತೊಂದು ಸಾಧನೆ: ಲ್ಯಾಬ್ ಗ್ರೋನ್ ಡೈಮಂಡ್ ಟೆಸ್ಟಿಂಗ್ ಮಿಷನ್… Police Encounter | ಹುಬ್ಬಳ್ಳಿ: 5 ವರ್ಷದ ಬಾಲಕಿಯ ಅಪಹರಿಸಿ ಕೊಲೆ: ಆರೋಪಿ… DCM | ಬಿಜೆಪಿಗರು ತಮ್ಮ ಹೋರಾಟ ಕೇಂದ್ರ ಸರಕಾರದ ವಿರುದ್ಧ ಎಂದು ಬೋರ್ಡ್… CET | ಪಿಯುಸಿ ಅಂಕ ಕಡಿಮೆ ಬಂತೆಂದು ಸಿಇಟಿ ಮಿಸ್ ಮಾಡ್ಕೊಬೇಡಿ: ಕರ್ನಾಟಕ…

ಇತ್ತೀಚಿನ ಸುದ್ದಿ

ಕೂಡ್ಲಿಗಿ: ವಿಶ್ವ ಸಾಮಾಜಿಕ ನ್ಯಾಯದಿನ; ತೃತೀಯ ಲಿಂಗಿ, ಸಾರ್ವಜನಿಕರಿಗೆ ಕಾನೂನು ಅರಿವು ನೆರವು

22/02/2022, 10:09

ವಿ.ಜಿ.ವೃಷಭೇಂದ್ರ ಕೂಡ್ಲಿಗಿ ವಿಜಯನಗರ

info.reporterkarnataka@gmail.com 

ಜಿಲ್ಲೆಯ ಕೂಡ್ಲಿಗಿ ನ್ಯಾಯಾಲಯದಲ್ಲಿ, ಫೆ21ರಂದು ಕೂಡ್ಲಿಗಿ ನ್ಯಾಯಾಲಯ ಇಲಾಖೆ, ಕಾನೂನು ಸೇವೆಗಳ ಸಮಿತಿ, ತಾಲೂಕು ವಕೀಲರ ಸಂಘ ಹಾಗೂ ತಾಲೂಕಾಡಳಿತ ಮತ್ತು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಹಯೋಗದಲ್ಲಿ.ವಿಶ್ವ ಸಾಮಾಜಿಕ ನ್ಯಾಯದಿನ ಆಚರಿಸಲಾಯಿತು,

ಇದರ ಪ್ರಯುಕ್ತ ತೃತೀಯ ಲಿಂಗಿಗಳಿಗೆ ಹಾಗೂ ಸಾರ್ವಜನಿಕರಿಗಾಗಿ ಕಾನೂನು ಅರಿವು ನೆರವು ಕಾರ್ಯಕ್ರಮ ಆಯೋಜಿಸಲಾಗಿತ್ತು. ಹಿರಿಯ ಶ್ರೇಣಿ ನ್ಯಾಯಾಧೀಶರಾದ ಕೆ.ಎ.ನಾಗೇಶರವರು ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ, ತೃತೀಯ ಲಿಂಗಿಗಳಿಗಾಗಿ ಸರ್ಕಾರ ಸಾಕಷ್ಟು ಯೋಜನೆಗಳನ್ನು ಜಾರಿ ಮಾಡಿದೆ. ಸೌಲಭ್ಯಗಳನ್ನು ಸಮರ್ಪಕವಾಗಿ ಬಳಸಿಕೊಳ್ಳಬೇಕು, ಎಲ್ಲರೂ ಶೈಕ್ಷಣಿಕಾಭಿವೃದ್ಧಿ ಹೊಂದಿ ಸ್ವಾವಲಂಬಿಗಳಾಗಬೇಕೆಂದು ಕರೆ ನೀಡಿದರು. ಪ್ಯಾನಲ್ ವಕೀಲರಾದ ಸಿ. ವಿರುಪಾಕ್ಷಪ್ಪ, “ವಿಶ್ವ ಸಾಮಾಜಿಕ ನ್ಯಾಯ ದಿನ” ಕುರಿತು ಉಪನ್ಯಾಸ ನೀಡಿದರು. ಕಿರಿಯ ಶ್ರೇಣಿ ನ್ಯಾಯಾಧೀಶರಾದ ಮುರುಗೇಂದ್ರ ತುಬಾಕೆ ರವರು, ಕಾರ್ಯಕ್ರಮದ ಅಧ್ಯಕ್ಷತೆ  ವಹಿಸಿ ಮಾತನಾಡಿದರು.ವಕೀಲರ ಸಂಘದ ಅಧ್ಯಕ್ಷ ಜಿ.ಹೊನ್ನೂರಪ್ಪ, ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿದರು. “ಮೈತ್ರಿ ಯೋಜನೆಯಡಿಯ ಫಲಾನುಭವಿಗಳಿಗೆ, ಕಂದಾಯ ಇಲಾಖೆಯಿಂದ ನೀಡಲ್ಪಡುವ,ಮೈತ್ರಿ ಯೋಜನೆಯ ಮಂಜೂರು ಪತ್ರ ನೀಡಲಾಯಿತು. ಸಹಾಯಕ ಸರ್ಕಾರಿ ಅಭಿಯೋಜಕರಾದ ಹೊಸವಡ್ರು ಅಣ್ಣೇಶ, ವಕೀಲರ ಸಂಘ ಕಾರ್ಯದರ್ಶಿ ಬಿ.ಸಿದ್ದಲಿಂಗಪ್ಪ, ಉಪ ತಹಶಿಲ್ದಾರರಾದ ಹಿರಿಯ ಮಹಿಳಾ ವಕೀಲರಾದ ಜಿ.ಎನ್.ಕುಮಾರಸ್ವಾಮಿ ಮತ್ತು ಅರುಂಧತಿ ನಾಗವಿ, ಸಿಡಿಪಿಓ ನಾಗನಗೌಡ ವೇದಿಕೆಯಲ್ಲಿದ್ದರು. ಹಿರಿಯ ಮಹಿಳಾ ವಕೀಲರಾದ ಕೆ.ಹೆಚ್.ಎಮ್.ಶೈಲಜಾ  ಸ್ವಾಗತಿಸಿದರು.ಪ್ಯಾನಲ್ ವಕೀಲರಾದ ಟಿ.ಮಲ್ಲಿಕಾರ್ಜುನ ನಿರೂಪಿಸಿದರು. ಜಿ.ಎಮ್.ಮಲ್ಲಿಕಾರ್ಜುನಸ್ವಾಮಿ ವಂದಿಸಿದರು. ಕಾನೂನು ಸೇವಾಸಮಿತಿಯ ಸಿಬ್ಬಂದಿ ಹಾಗೂ ನ್ಯಾಯಾಲಯ ಸಿಬ್ಬಂದಿ,ಪಟ್ಟಣ ಸೇರಿದಂತೆ ವಿವಿದೆಡೆಗಳಿಂದ ಆಗಮಿಸಿದ್ದ ತೃತೀಯಲಿಂಗಿಗಳು ಹಾಗೂ ಸಾರ್ವಜನಿಕರು ಕಾರ್ಯಕ್ರಮದಲ್ಲಿದ್ದರು. 

ಇತ್ತೀಚಿನ ಸುದ್ದಿ

ಜಾಹೀರಾತು