8:38 PM Sunday24 - August 2025
ಬ್ರೇಕಿಂಗ್ ನ್ಯೂಸ್
Kodagu | ಸಿದ್ದಾಪುರ: ಕರಡಿಗೋಡು ವಂದನಾಪುರ ಎಸ್ಟೇಟ್ ಮನೆ ಆವರಣದಲ್ಲಿ ಕಾಡಾನೆಗಳ ದಾoಧಲೆ ಡಿಸ್ಕಸ್ ಥ್ರೋ ವೇಳೆ ಅವಘಡ: ವಿದ್ಯಾರ್ಥಿ ಗಂಭೀರ: ಮಂಗಳೂರು ಆಸ್ಪತ್ರೆಗೆ ದಾಖಲು ಬ್ರ್ಯಾಂಡ್ ಕರಾವಳಿ ಹೆಸರಲ್ಲಿ ಅಭಿವೃದ್ಧಿಗೆ ಒತ್ತು ನೀಡಬೇಕು: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಸ್ನೇಹಿತನ ಆಟೋ ತರಲು ಹೋಗಿದ್ದ ಚಾಲಕ ಅಪಘಾತದಲ್ಲಿ ದುರ್ಮರಣ: ಕಾರು ಡಿಕ್ಕಿ ಹೊಡೆದು… ವೈದ್ಯಕೀಯ ವಿದ್ಯಾರ್ಥಿನಿ ಅನನ್ಯಾ ಭಟ್ ನಾಪತ್ತೆ ಪ್ರಕರಣ: ಸುಜಾತ ಭಟ್ ದೂರು ಎಸ್ಐಟಿಗೆ… ಕುಶಾಲನಗರ: ರಾಷ್ಟ್ರ ರಕ್ಷಣಾ ಪಡೆ ಸಂಸ್ಥಾಪಕ ಪುನೀತ್ ಕೆರೇಹಳ್ಳಿ ಪೊಲೀಸ್ ವಶಕ್ಕೆ ದಲಿತ ಸಿಎಂ ಕೂಗು ತಪ್ಪಿಸಲು ಒಳ ಮೀಸಲಾತಿ ಜಾರಿ: ದಿಲ್ಲಿಯಲ್ಲಿ ಮಾಜಿ ಸಿಎಂ… ತೋಟದಲ್ಲಿ ಬಿದ್ದಿದ್ದ ತೆಂಗಿನಕಾಯಿ ಹೆಕ್ಕಿದ್ದಕ್ಕೆ ಮಾಲೀಕನಿಂದ ಅಮಾನುಷ ಹಲ್ಲೆ: ಯುವಕ ಸಾವು ಧರ್ಮಸ್ಥಳ ಪ್ರಕರಣವನ್ನು ಎನ್ಐಎ ತನಿಖೆಗೆ ವಹಿಸಬೇಕು: ಮಾಜಿ ಗೃಹ ಸಚಿವ ಆರಗ ಜ್ಞಾನೇಂದ್ರ ಮಟ್ಟು ಗುಳ್ಳ ನಂಟು ಉಡುಪಿ ಮಠಕ್ಕೂ ಉಂಟು: ವಾದಿರಾಜ ತೀರ್ಥರು ಬದನೆಗೆ ಹೆಸರಿಟ್ಟರಂತೆ!

ಇತ್ತೀಚಿನ ಸುದ್ದಿ

ಕೂಡ್ಲಿಗಿ: ವಿಶ್ವ ಸಾಮಾಜಿಕ ನ್ಯಾಯದಿನ; ತೃತೀಯ ಲಿಂಗಿ, ಸಾರ್ವಜನಿಕರಿಗೆ ಕಾನೂನು ಅರಿವು ನೆರವು

22/02/2022, 10:09

ವಿ.ಜಿ.ವೃಷಭೇಂದ್ರ ಕೂಡ್ಲಿಗಿ ವಿಜಯನಗರ

info.reporterkarnataka@gmail.com 

ಜಿಲ್ಲೆಯ ಕೂಡ್ಲಿಗಿ ನ್ಯಾಯಾಲಯದಲ್ಲಿ, ಫೆ21ರಂದು ಕೂಡ್ಲಿಗಿ ನ್ಯಾಯಾಲಯ ಇಲಾಖೆ, ಕಾನೂನು ಸೇವೆಗಳ ಸಮಿತಿ, ತಾಲೂಕು ವಕೀಲರ ಸಂಘ ಹಾಗೂ ತಾಲೂಕಾಡಳಿತ ಮತ್ತು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಹಯೋಗದಲ್ಲಿ.ವಿಶ್ವ ಸಾಮಾಜಿಕ ನ್ಯಾಯದಿನ ಆಚರಿಸಲಾಯಿತು,

ಇದರ ಪ್ರಯುಕ್ತ ತೃತೀಯ ಲಿಂಗಿಗಳಿಗೆ ಹಾಗೂ ಸಾರ್ವಜನಿಕರಿಗಾಗಿ ಕಾನೂನು ಅರಿವು ನೆರವು ಕಾರ್ಯಕ್ರಮ ಆಯೋಜಿಸಲಾಗಿತ್ತು. ಹಿರಿಯ ಶ್ರೇಣಿ ನ್ಯಾಯಾಧೀಶರಾದ ಕೆ.ಎ.ನಾಗೇಶರವರು ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ, ತೃತೀಯ ಲಿಂಗಿಗಳಿಗಾಗಿ ಸರ್ಕಾರ ಸಾಕಷ್ಟು ಯೋಜನೆಗಳನ್ನು ಜಾರಿ ಮಾಡಿದೆ. ಸೌಲಭ್ಯಗಳನ್ನು ಸಮರ್ಪಕವಾಗಿ ಬಳಸಿಕೊಳ್ಳಬೇಕು, ಎಲ್ಲರೂ ಶೈಕ್ಷಣಿಕಾಭಿವೃದ್ಧಿ ಹೊಂದಿ ಸ್ವಾವಲಂಬಿಗಳಾಗಬೇಕೆಂದು ಕರೆ ನೀಡಿದರು. ಪ್ಯಾನಲ್ ವಕೀಲರಾದ ಸಿ. ವಿರುಪಾಕ್ಷಪ್ಪ, “ವಿಶ್ವ ಸಾಮಾಜಿಕ ನ್ಯಾಯ ದಿನ” ಕುರಿತು ಉಪನ್ಯಾಸ ನೀಡಿದರು. ಕಿರಿಯ ಶ್ರೇಣಿ ನ್ಯಾಯಾಧೀಶರಾದ ಮುರುಗೇಂದ್ರ ತುಬಾಕೆ ರವರು, ಕಾರ್ಯಕ್ರಮದ ಅಧ್ಯಕ್ಷತೆ  ವಹಿಸಿ ಮಾತನಾಡಿದರು.ವಕೀಲರ ಸಂಘದ ಅಧ್ಯಕ್ಷ ಜಿ.ಹೊನ್ನೂರಪ್ಪ, ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿದರು. “ಮೈತ್ರಿ ಯೋಜನೆಯಡಿಯ ಫಲಾನುಭವಿಗಳಿಗೆ, ಕಂದಾಯ ಇಲಾಖೆಯಿಂದ ನೀಡಲ್ಪಡುವ,ಮೈತ್ರಿ ಯೋಜನೆಯ ಮಂಜೂರು ಪತ್ರ ನೀಡಲಾಯಿತು. ಸಹಾಯಕ ಸರ್ಕಾರಿ ಅಭಿಯೋಜಕರಾದ ಹೊಸವಡ್ರು ಅಣ್ಣೇಶ, ವಕೀಲರ ಸಂಘ ಕಾರ್ಯದರ್ಶಿ ಬಿ.ಸಿದ್ದಲಿಂಗಪ್ಪ, ಉಪ ತಹಶಿಲ್ದಾರರಾದ ಹಿರಿಯ ಮಹಿಳಾ ವಕೀಲರಾದ ಜಿ.ಎನ್.ಕುಮಾರಸ್ವಾಮಿ ಮತ್ತು ಅರುಂಧತಿ ನಾಗವಿ, ಸಿಡಿಪಿಓ ನಾಗನಗೌಡ ವೇದಿಕೆಯಲ್ಲಿದ್ದರು. ಹಿರಿಯ ಮಹಿಳಾ ವಕೀಲರಾದ ಕೆ.ಹೆಚ್.ಎಮ್.ಶೈಲಜಾ  ಸ್ವಾಗತಿಸಿದರು.ಪ್ಯಾನಲ್ ವಕೀಲರಾದ ಟಿ.ಮಲ್ಲಿಕಾರ್ಜುನ ನಿರೂಪಿಸಿದರು. ಜಿ.ಎಮ್.ಮಲ್ಲಿಕಾರ್ಜುನಸ್ವಾಮಿ ವಂದಿಸಿದರು. ಕಾನೂನು ಸೇವಾಸಮಿತಿಯ ಸಿಬ್ಬಂದಿ ಹಾಗೂ ನ್ಯಾಯಾಲಯ ಸಿಬ್ಬಂದಿ,ಪಟ್ಟಣ ಸೇರಿದಂತೆ ವಿವಿದೆಡೆಗಳಿಂದ ಆಗಮಿಸಿದ್ದ ತೃತೀಯಲಿಂಗಿಗಳು ಹಾಗೂ ಸಾರ್ವಜನಿಕರು ಕಾರ್ಯಕ್ರಮದಲ್ಲಿದ್ದರು. 

ಇತ್ತೀಚಿನ ಸುದ್ದಿ

ಜಾಹೀರಾತು