5:54 PM Wednesday26 - August 2026
ಬ್ರೇಕಿಂಗ್ ನ್ಯೂಸ್
ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;… ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ ತುಳುನಾಡಿನ ದೈವಗಳಿಗೆ ನಟ ದರ್ಶನ್ ಪತ್ನಿ ಮೊರೆ: ಪತಿಯ ಸಂಕಷ್ಟದಿಂದ ಪಾರು ಮಾಡಲು… ಭಾರತ್ ಸಿನಿಮಾಸ್ ಗೆ ‘ವರ್ಷದ ಪ್ರಾದೇಶಿಕವಾಗಿ ಉದಯೋನ್ಮುಖ ಸಿನಿಮಾ ಸರಣಿ’ ಪ್ರಶಸ್ತಿ ಡಿ.ಕೆ. ಸುರೇಶ್, ಸಚಿವ ಬಾಲಕೃಷ್ಣ ಅವರದ್ದು ಸೂಟ್‌ಕೇಸ್ ಬೃಂದಾವನ: ಕೇಂದ್ರ ಸಚಿವ ಎಚ್.ಡಿ.… *ದುಬಾರಿ ಹಣ ಕೊಟ್ಟು ಜನ ನೀರಿನ ಬಾಟಲಿ ಖರೀದಿಸುತ್ತಾರೆ, 50 ರೂ. ಕೊಟ್ಟು… ವಾಕಿಂಗ್ ಮಾಡುತ್ತಿದ್ದ ಇಬ್ಬರಿಗೆ ಕಾರು ಡಿಕ್ಕಿ: ಓರ್ವ ದುರ್ಮರಣ; ಇನ್ನೋರ್ವ ಗಂಭೀರ ವಿರಾಜಪೇಟೆ: ಪುತ್ರನ ಬಿಟ್ಟು ನಾಪತ್ತೆಯಾಗಿದ್ದ ವ್ಯಕ್ತಿ ಬಾವಿಯಲ್ಲಿ ಶವವಾಗಿ ಪತ್ತೆ ಉಡುಪಿ | ಬಾಳೆಹಣ್ಣಿಗೆ ಹಾನಿಕಾರಕ ರಾಸಾಯನಿಕ ಬಳಕೆ: ದಾಸ್ತಾನು ಕೇಂದ್ರಗಳ ಮೇಲೆ ಎಸಿ…

ಇತ್ತೀಚಿನ ಸುದ್ದಿ

ಕೂಡ್ಲಿಗಿ: ವಿಶ್ವ ಸಾಮಾಜಿಕ ನ್ಯಾಯದಿನ; ತೃತೀಯ ಲಿಂಗಿ, ಸಾರ್ವಜನಿಕರಿಗೆ ಕಾನೂನು ಅರಿವು ನೆರವು

22/02/2022, 10:09

ವಿ.ಜಿ.ವೃಷಭೇಂದ್ರ ಕೂಡ್ಲಿಗಿ ವಿಜಯನಗರ

info.reporterkarnataka@gmail.com 

ಜಿಲ್ಲೆಯ ಕೂಡ್ಲಿಗಿ ನ್ಯಾಯಾಲಯದಲ್ಲಿ, ಫೆ21ರಂದು ಕೂಡ್ಲಿಗಿ ನ್ಯಾಯಾಲಯ ಇಲಾಖೆ, ಕಾನೂನು ಸೇವೆಗಳ ಸಮಿತಿ, ತಾಲೂಕು ವಕೀಲರ ಸಂಘ ಹಾಗೂ ತಾಲೂಕಾಡಳಿತ ಮತ್ತು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಹಯೋಗದಲ್ಲಿ.ವಿಶ್ವ ಸಾಮಾಜಿಕ ನ್ಯಾಯದಿನ ಆಚರಿಸಲಾಯಿತು,

ಇದರ ಪ್ರಯುಕ್ತ ತೃತೀಯ ಲಿಂಗಿಗಳಿಗೆ ಹಾಗೂ ಸಾರ್ವಜನಿಕರಿಗಾಗಿ ಕಾನೂನು ಅರಿವು ನೆರವು ಕಾರ್ಯಕ್ರಮ ಆಯೋಜಿಸಲಾಗಿತ್ತು. ಹಿರಿಯ ಶ್ರೇಣಿ ನ್ಯಾಯಾಧೀಶರಾದ ಕೆ.ಎ.ನಾಗೇಶರವರು ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ, ತೃತೀಯ ಲಿಂಗಿಗಳಿಗಾಗಿ ಸರ್ಕಾರ ಸಾಕಷ್ಟು ಯೋಜನೆಗಳನ್ನು ಜಾರಿ ಮಾಡಿದೆ. ಸೌಲಭ್ಯಗಳನ್ನು ಸಮರ್ಪಕವಾಗಿ ಬಳಸಿಕೊಳ್ಳಬೇಕು, ಎಲ್ಲರೂ ಶೈಕ್ಷಣಿಕಾಭಿವೃದ್ಧಿ ಹೊಂದಿ ಸ್ವಾವಲಂಬಿಗಳಾಗಬೇಕೆಂದು ಕರೆ ನೀಡಿದರು. ಪ್ಯಾನಲ್ ವಕೀಲರಾದ ಸಿ. ವಿರುಪಾಕ್ಷಪ್ಪ, “ವಿಶ್ವ ಸಾಮಾಜಿಕ ನ್ಯಾಯ ದಿನ” ಕುರಿತು ಉಪನ್ಯಾಸ ನೀಡಿದರು. ಕಿರಿಯ ಶ್ರೇಣಿ ನ್ಯಾಯಾಧೀಶರಾದ ಮುರುಗೇಂದ್ರ ತುಬಾಕೆ ರವರು, ಕಾರ್ಯಕ್ರಮದ ಅಧ್ಯಕ್ಷತೆ  ವಹಿಸಿ ಮಾತನಾಡಿದರು.ವಕೀಲರ ಸಂಘದ ಅಧ್ಯಕ್ಷ ಜಿ.ಹೊನ್ನೂರಪ್ಪ, ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿದರು. “ಮೈತ್ರಿ ಯೋಜನೆಯಡಿಯ ಫಲಾನುಭವಿಗಳಿಗೆ, ಕಂದಾಯ ಇಲಾಖೆಯಿಂದ ನೀಡಲ್ಪಡುವ,ಮೈತ್ರಿ ಯೋಜನೆಯ ಮಂಜೂರು ಪತ್ರ ನೀಡಲಾಯಿತು. ಸಹಾಯಕ ಸರ್ಕಾರಿ ಅಭಿಯೋಜಕರಾದ ಹೊಸವಡ್ರು ಅಣ್ಣೇಶ, ವಕೀಲರ ಸಂಘ ಕಾರ್ಯದರ್ಶಿ ಬಿ.ಸಿದ್ದಲಿಂಗಪ್ಪ, ಉಪ ತಹಶಿಲ್ದಾರರಾದ ಹಿರಿಯ ಮಹಿಳಾ ವಕೀಲರಾದ ಜಿ.ಎನ್.ಕುಮಾರಸ್ವಾಮಿ ಮತ್ತು ಅರುಂಧತಿ ನಾಗವಿ, ಸಿಡಿಪಿಓ ನಾಗನಗೌಡ ವೇದಿಕೆಯಲ್ಲಿದ್ದರು. ಹಿರಿಯ ಮಹಿಳಾ ವಕೀಲರಾದ ಕೆ.ಹೆಚ್.ಎಮ್.ಶೈಲಜಾ  ಸ್ವಾಗತಿಸಿದರು.ಪ್ಯಾನಲ್ ವಕೀಲರಾದ ಟಿ.ಮಲ್ಲಿಕಾರ್ಜುನ ನಿರೂಪಿಸಿದರು. ಜಿ.ಎಮ್.ಮಲ್ಲಿಕಾರ್ಜುನಸ್ವಾಮಿ ವಂದಿಸಿದರು. ಕಾನೂನು ಸೇವಾಸಮಿತಿಯ ಸಿಬ್ಬಂದಿ ಹಾಗೂ ನ್ಯಾಯಾಲಯ ಸಿಬ್ಬಂದಿ,ಪಟ್ಟಣ ಸೇರಿದಂತೆ ವಿವಿದೆಡೆಗಳಿಂದ ಆಗಮಿಸಿದ್ದ ತೃತೀಯಲಿಂಗಿಗಳು ಹಾಗೂ ಸಾರ್ವಜನಿಕರು ಕಾರ್ಯಕ್ರಮದಲ್ಲಿದ್ದರು. 

ಇತ್ತೀಚಿನ ಸುದ್ದಿ

ಜಾಹೀರಾತು