4:04 AM Thursday5 - March 2026
ಬ್ರೇಕಿಂಗ್ ನ್ಯೂಸ್
ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ನವೀಕೃತ, ವಿಸ್ತೃತ, ಹವಾನಿಯಂತ್ರಿತ ಬಿ.ಸಿ. ರೋಡ್ ಶಾಖೆ… ವಿಜಯ್ ದೇವರಕೊಂಡ ಹಾಗೂ ರಶ್ಮಿಕಾ ಮಂದಣ್ಣ ಆರತಕ್ಷತೆ: ಶುಭ ಹಾರೈಸಿದ ಡಿಕೆಶಿ- ಪೊನ್ನಣ್ಣ ಬೇಡ್ತಿ ಸಮೀಪ ಕೆಎಸ್ಸಾರ್ಟಿಸಿ ಬಸ್ -ಕಾರು ಡಿಕ್ಕಿ,: ಮಂಗಳೂರಿನ ಉದ್ಯಮಿ ಸಾವು ದನದ ಅವಶೇಷ ಪತ್ತೆ: ಕೊಪ್ಪ-ತೀರ್ಥಹಳ್ಳಿ ರಾಷ್ಟಿಯ ಹೆದ್ದಾರಿ ತಡೆದು ಭಜರಂಗ ದಳ ಕಾರ್ಯಕರ್ತರ… ಡಿಕೆಶಿ ಮೇಲೆ ಕಣ್ಗಾವಲು | ಎಚ್ ಡಿಕೆ, ಆರ್. ಅಶೋಕ್ ಹೇಳಿಕೆ ‘’ತಾ… ಚೆನ್ನೈ ವಿಶೇಷ ಸಮಾವೇಶದಲ್ಲಿ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್: ಸಾರ್ವಜನಿಕ ಆರೋಗ್ಯ ಮೂಲಸೌಕರ್ಯ ಕುರಿತು… ಚೆನ್ನಪಟ್ಟಣ | ಕೊಡಗಿನ ಸಾಕಾನೆಗಳ ಯಶಸ್ವಿ ಕಾರ್ಯಾಚರಣೆ: ನಿರಂತರ ಉಪಟಳ ನೀಡುತ್ತಿದ್ದ ಮಕ್ನಾ… ಬೆಂಗಳೂರಿನ ನೈಜೆಲ್ ಫೆರ್ನಾಂಡಿಸ್‌ಗೆ ಅಪರೂಪದ ‘ಪಾಪಲ್ ನೈಟ್‌ಹುಡ್’ ಗೌರವ ಪ್ರದಾನ ತಂತ್ರಜ್ಞಾನ ಕ್ಷೇತ್ರದಲ್ಲಿ ಭಾರತ ಜಾಗತಿಕ ಮುಂಚೂಣಿಯತ್ತ ಸಾಗಿದೆ: ಕೃಷಿ ವಿಜ್ಞಾನಿ ಡಾ. ತಿಮಕಾಪುರ ನಿರಂತರ ಕಾಡಾನೆ ದಾಳಿಗೆ ಕಂಗಾಲಾದ ಮಲೆನಾಡಿಗರು: ಕಳೆದೊಂದು ವರ್ಷದಲ್ಲಿ 9 ಜನ ಕಾಡಾನೆ…

ಇತ್ತೀಚಿನ ಸುದ್ದಿ

ಕೂಡ್ಲಿಗಿಯಲ್ಲಿ ವಿಶ್ವ ರೈತರ ದಿನಾಚರಣೆ; ಕೃಷಿ ಮಾಡುವವರ ಸಂಖ್ಯೆ ಗಣನೀಯ ಇಳಿಕೆಗೆ ಆತಂಕ; ರೈತರಿಗೆ ಸನ್ಮಾನ

25/12/2023, 15:26

ವಿ.ಜಿ.ವೃಷಭೇಂದ್ರ ಕೂಡ್ಲಿಗಿ ವಿಜಯನಗರ

info.reporterkarnataka@gmail.com

ವಿಜಯನಗರ ಜಿಲ್ಲೆಯ ಕೂಡ್ಲಿಗಿ ಪಟ್ಟಣದ ಕೃಷಿ ಇಲಾಖೆಯ ಕಚೇರಿ ಆವರಣದಲ್ಲಿ, ಕೃಷಿ ಇಲಾಖೆ ಹಾಗೂ ರೈತರಿಂದ ವಿಶ್ವ ರೈತರ ದಿನಾಚರಣೆಯನ್ನು ಆಚರಿಸಲಾಯಿತು. ಕೃಷಿ ಸಮಾಜದ ಪ್ರದಾನ ಕಾರ್ಯದರ್ಶಿ ಎಮ್.ಬಸವರಾಜ್ ಮಾತನಾಡಿ, ಇತ್ತಿಚಿನ ದಿನಗಳಲ್ಲಿ ಕೃಷಿ ಮಾಡುವವರ ಸಂಖ್ಯೆ ಗಣನೀಯ ಪ್ರಮಾಣದಲ್ಲಿ ಕಡಿಮೆಯಾಗಿದೆ ಎಂದು ಆತಂಕ ವ್ಯಕ್ತಪಡಿಸಿದರು.

ರೈತ ಮುಖಂಡ ಕೆಕೆ ಹಟ್ಟಿ ದೇವರಮನಿ ಮಹೇಶ, ಕಾಯಕಲ್ಪ ರೈತ ಉತ್ಪಾದಕರ ಸಂಘದ ಸಿ.ಇ ಒ.ನಾಗರಾಜ್ ಮಾತನಾಡಿದರು.ಕೃಷಿ ಇಲಾಖೆಯು ಸಹಾಯಕ ನಿರ್ದೆಶಕರಾದ ಸುನೀಲ್ ಕುಮಾರ ಪ್ರಾಸ್ತಾವಿಕ ಮಾತನಾಡಿದರು. ಅಧಿಕಾರಿ ಶ್ರವಣ ಕುಮಾರ್ ನಿರೂಪಿಸಿದರು, ನೀಲಾ ನಾಯ್ಕ್ ಸ್ವಾಗತಿಸಿದರು. ಕೃಷಿ ಕ್ಷೇತ್ರದಲ್ಲಿ ವಿವಿಧ ರೀತಿಯ ಗಣನೀಯ ಸಾಧನೆ ಗೈದ, ರೈತರನ್ನು ಗುರುತಿಸಿ ವೇದಿಕೆಯಲ್ಲಿ ಸನ್ಮಾನಿಸಿ ಗೌರವಿಸಲಾಯಿತು.ವೇದಿಕೆಯಲ್ಲಿ ಹಿರಿಯ ವಕೀಲರು ಹಾಗೂ ನೋಟರಿ ಸಿದ್ದಪ್ಪ, ಪ್ರಗತಿಪರ ರೈತರಾದ ಬಣವಿಕಲ್ಲು ಎರ್ರಿಸ್ವಾಮಿ, ಶಾಂತನಹಳ್ಳಿ ಎಂ.ಜಿ.
ಸಿದ್ದನಗೌಡ,ಬೊಮ್ಮಯ್ಯ, ಹನುಮಂತಪ್ಪ,ನಾಗರಾಜ,ಬಸವರಾಜಪ್ಪ. ಭರ್ಮಪ್ಪ, ಒಂಟಿಪಾಲಪ್ಪ, ಗುರುಬಸವರಾಜ,ಹೆಗ್ಗಪ್ಪ, ರೈತ ಮುಖಂಡ ಜಂಗಮ ಸೋವೆನಹಳ್ಳಿ ನಂದಿ ಜಂಬಣ್ಣ. ರೈತ ಮಹಿಳೆಯರಾದ ಹೊಸಹಳ್ಳಿ ನೇತ್ರಾವತಿ, ಪೂಜಾರಹಳ್ಳಿ ಈಶ್ವರಮ್ಮ, ಸೇರಿದಂತೆ ಅನೇಕ ರೈತ ಮುಖಂಡರು. ಪಟ್ಟಣ ಸೇರಿದಂತೆ ವಿವಿಧೆಡೆಗಳಿಂದ ಆಗಮಿಸಿದ್ದ, ರೈತರು ಕೃಷಿ ಇಲಾಖಾ ಸಿಬ್ಬಂದಿ ಇದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು