6:17 PM Thursday18 - June 2026
ಬ್ರೇಕಿಂಗ್ ನ್ಯೂಸ್
ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ… ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ… ದೆಹಲಿ ಮಟ್ಟದಲ್ಲಿ ಹೈವೋಲ್ಟೇಜ್ ಸಂಧಾನ: ಬೆಂಗಳೂರು ಅಭಿವೃದ್ಧಿ ಸಚಿವರಾಗಿ ಕೃಷ್ಣ ಬೈರೇಗೌಡ ಅಧಿಕಾರ… ತೀರ್ಪು ಮುನ್ನವೇ ಶಂಕಿತ ಉಗ್ರ ಕೊಡಗು ಮೂಲದ ಅಬ್ದುಲ್ ಖಾದರ್ ಸಾವು ಮೈಸೂರು ದುರಂತ: ಅಕ್ರಮ ಪಬ್, ಬಾರ್, ರೆಸ್ಟೋರೆಂಟ್‌ಗಳ ಮೇಲೆ ಕ್ರಮ: ಸಚಿವ ಡಾ.… ವಿಜಯಪುರ | ಭೀಕರ ರಸ್ತೆ ಅಪಘಾತ: ಟಿಪ್ಪರ್-ಬಸ್ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ 3… ವಿರಾಜಪೇಟೆ ಸಮೀಪದ ರೆಸಾರ್ಟ್ ಈಜುಕೋಳದಲ್ಲಿ ಬಿದ್ದು ಗೋವಾದ ಪ್ರವಾಸಿಗ ಸಾವು

ಇತ್ತೀಚಿನ ಸುದ್ದಿ

ಕೂಡ್ಲಿಗಿ: ವಿಜೃಂಭಣೆಯ ಶ್ರೀಕೊತ್ತಲ‍ಾಂಜನೇಯ ಕಾರ್ತೀಕೋತ್ಸವ; ರಸ್ತೆಯ ಇಕ್ಕೆಲೆಗಳಲ್ಲಿ ಎಣ್ಣೆ ದೀಪಗಳ ರಂಗು

19/12/2021, 16:14

ವಿ.ಜಿ.ವೃಷಭೇಂದ್ರ ಕೂಡ್ಲಿಗಿ ವಿಜಯನಗರ

info.reporterkarnataka@gmail.com 

ಜಿಲ್ಲೆಯ ಕೂಡ್ಲಿಗಿ ಪಟ್ಟಣದ ಶ್ರೀಕೊತ್ತಲಾಂಜನೇಯ ಸ್ವ‍‍ಾಮಿ ದೇವರ ಕಾರ್ತೀಕೋತ್ಸವ ಬಹು ಅದ್ಧೂರಿಯಾಗಿ ಹಾಗೂ ಧಾರ್ಮಿಕ ಶ್ರದ್ಧಾ ಭಕ್ತಿಯಿಂದ ಜರುಗಿತು.

ಪಟ್ಟಣ ಹಾಗೂ ಪಟ್ಟಣದ ನೆರೆ ಹೊರೆಯ ಗ್ರಾಮಗಳ ನಾಗರೀಕರು, ಸಾವಿರಾರು ಭಕ್ತರು ಶ್ರೀಆಂಜನೇಯ ಕಾರ್ತೀಕೋತ್ಸವದಲ್ಲಿ ಭಾಗಿಯಾಗಿದ್ದರು.ಮಹಿಳೆಯರು ಮಕ್ಕಳು ಯುವಕರು ಹಿರಿಯ ನಾಗರೀಕರು ಕಾರ್ತೀಕೋತ್ಸವದಲ್ಲಿ ಭಾಗಿಯಾಗಿ ದೀಪ ಬೆಳಗಿದರು. ದೇವಸ್ಥಾನದ ಭಕ್ತ ಮಂಡಳಿಯಿಂದ ಬಣ್ಣದ ಪಟಾಕಿ ಸಿಡಿಮದ್ದನ್ನು ಸಿಡಿಸಲಾಯಿತು. ಈ ಮೂಲಕ ಬಾನಂಗಳದಲ್ಲಿ ಬಣ್ಣ ಬಣ್ಣದ  ಬೆಳಕಿನ ರಂಗೋಲಿ ಹಾಕಿದಂತಿತ್ತು, ಇದರಿಂದಾಗಿ ಪಟ್ಟಣದಲ್ಲಿ ಹಬ್ಬದ ವಾತಾವರಣ ಸೃಷ್ಟಿಸಲಾಗಿತ್ತು. ನಾಗರೀಕ ಹಿತರಕ್ಷಣಾ ವೇದಿಕೆ ಅಧ್ಯಕ್ಷ,ವಾಲ್ಮೀಕಿ ಮುಖಂಡ ಹಾಗೂ ಪಟ್ಟಣ ಪಂಚಾಯ್ತಿ ಸದಸ್ಯ ಕಾವಲ್ಲಿ ಶಿವಪ್ಪನಾಯಕ ಹಾಗೂ ಕೆಲ ಹಿರಿಯ ನಾಗರೀಕರ ನೇತೃತ್ವದಲ್ಲಿ ಹಲವು ದೇವಸ್ಥ‍ಾನಗಳ ಸೇವಾಕರ್ತರು, ಶ್ರೀಕೊತ್ತಲಾಂಜನೇಯ ಭಕ್ತ ಮಂಡಳಿ ಪದಾಧಿಕಾರಿಗಳು ಹಾಗೂ ದೇವಸ್ಥಾನದ ಸೇವಾಕರ್ತರು ಕಾರ್ತೀಕೊತ್ಸವದಲ್ಲಿ ಸಕ್ರೀಯವಾಗಿ ಪಾಲ್ಗೊಂಡಿದ್ದರು. ದೇವಸ್ಥಾನದ ಆವರಣ ಹಾಗೂ ಪ್ರಮುಖ ರಸ್ಥೆಗಳ ಇಕ್ಕೆಲಗಳಲ್ಲಿ ಸಹಸ್ರಾರು ಎಣ್ಣೆದೀಪಗಳನ್ನು ಬೆಳಗಿಸಲಾಗಿತ್ತು. ಸಹಸ್ರಾರು ಮಣ್ಣಿನ ಪ್ರಣತಿಗಳನ್ನು ಹಾಗೂ ಎಣ್ಣೆ ಬತ್ತಿಯಿಂದ ದೀಪ ಬೆಳಗುವ ಮೂಲಕ ,ಬಹು ಅರ್ಥಪೂರ್ಣವಾಗಿ ಶ್ರದ್ಧಾಭಕ್ತಿಯಿಂದ ಕಾರ್ತೀಕೋತ್ಸವ ಆಯೋಜಿಸಿದ್ದರು.ಪಟ್ಟಣದ ಸಹಸ್ರಾರು ಭಕ್ತರು ತಮ್ಮ ಕುಟುಂಬ ಸದಸ್ಯರ ಸಮೇತವಾಗಿ ಶ್ರೀಕೊತ್ತಲ‌ಾಂಜನೇಯ ದರ್ಶನ ಪಡೆದು,ದೇವಸ್ಥ‍ಾನದ ಆವರಣದಲ್ಲಿ ವ್ಯವಸ್ಥೆಮಾಡಲಾಗಿದ್ದ ಸಹಸ್ರಾರು ಪ್ರಣತಿಗಳಲ್ಲಿ ದೀಪಬೆಳಗಿಸುವ ಮೂಲಕ ಮತ್ತು ಬಣ್ಣ ಬಣ್ಣದ ವಿದ್ಯುತ್ ದೀಪಗಳ ಅಲಂಕಾರದೊಂದಿಗೆ ದೇವಸ್ಥಾನ ಹಾಗೂ ಆವರಣವನ್ನು ಜಗಮಗಿಸುವಂತೆ ಅಲಂಕರಿಸಲಾಗಿತ್ತು.ಕಾರ್ತೀಕೋತ್ಸವದಲ್ಲಿ ಪಾಲ್ಗೊಂಡಿದ್ದ ಭಕ್ತರಿಗೆ ಪ್ರಸಾದ ವಿತರಿಸಲಾಯಿತು,ಪಟ್ಟಣದ  ಸಹಸ್ರಾರು ಭಕ್ತರು ಶ್ರೀಕೊತ್ತಲಾಂಜನೇಯ ಕಾರ್ತೀಕೋತ್ಸವವನ್ನು,ಬಹು ಶ್ರದ್ಧೆಯಿಂದ ಆಚರಿಸಿ ದೇವರ ಕೃಪೆಗೆ ಪಾತ್ರರಾದರು.

ಇತ್ತೀಚಿನ ಸುದ್ದಿ

ಜಾಹೀರಾತು