11:10 AM Thursday15 - May 2025
ಬ್ರೇಕಿಂಗ್ ನ್ಯೂಸ್
Bangalore | ಗ್ರಾಹಕರ ದೂರು ನಿರ್ವಹಣೆಗೆ ಡಿಜಿಟಲ್ ಪೋರ್ಟಲ್: ಬೆಸ್ಕಾಂ ಎಂಡಿ ಡಾ.ಎನ್.… Bangalore | ಮೇ 15ರಂದು ಬಿಜೆಪಿಯಿಂದ ತಿರಂಗಾ ಯಾತ್ರೆ, ಪಕ್ಷದ ಚಿಹ್ನೆ ಪ್ರದರ್ಶನವಿಲ್ಲ Bangalore | ರಾಜ್ಯದ ಯೋಜನೆಗಳಿಗೆ ಕೇಂದ್ರ ಸರ್ಕಾರದ ಅನುದಾನ ಬಿಡುಗಡೆ: ಮಹತ್ವದ ಸಭೆ Bangalore | ಅಕ್ಟೋಬರ್ ನಲ್ಲಿ ಅಂಗನವಾಡಿ ಸುವರ್ಣ ಮಹೋತ್ಸವ ಆಚರಣೆ: ಸಚಿವೆ ಲಕ್ಷ್ಮೀ… ಮೋಸ್ಟ್‌ ವಾಂಟೆಡ್‌ ಉಗ್ರರನ್ನು ನಿರ್ನಾಮ ಮಾಡಿದ್ದೇವೆ: ಹುಬ್ಬಳ್ಳಿ ಎಬಿವಿಪಿ ಕಾರ್ಯಕ್ರಮದಲ್ಲಿ ಪ್ರಹ್ಲಾದ್ ಜೋಶಿ Chitradurga | ಕಂದಾಯ ಗ್ರಾಮ ರಚನೆ ಪ್ರಕ್ರಿಯೆ ಪೂರ್ಣಗೊಳಿಸಲು ಜೂನ್ 30ರ ಗಡುವು ಎಲ್ಲರನ್ನೂ ನಗಿಸುತ್ತಿದ್ದ ಆತ ಇಂದು ಎಲ್ಲರೂ ಅಳುವಂತೆ ಮಾಡಿದ: ನಗು ನಗುತಲೇ ಹೊರಟು… Bangalore | ಕ್ಯಾನ್ಸರ್ ತಡೆಗೆ ಪರಿಣಾಮಕಾರಿ ಕಾರ್ಯಕ್ರಮ ಅವಶ್ಯ: ಮಾಜಿ ಡಿಸಿಎಂ ಡಾ.… ಶ್ರೀನಗರದಲ್ಲಿ ಸಿಲುಕಿದ್ದ ರಾಜ್ಯದ 13 ಕೃಷಿ ವಿದ್ಯಾರ್ಥಿಗಳು ಸುರಕ್ಷಿತ ವಾಪಸ್: ಪ್ರಧಾನಿ ಸೂಚನೆ… Bangalore | ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ಎನ್ಐಎ ತನಿಖೆಗೆ ಹಸ್ತಾಂತರ: ರಾಜ್ಯಪಾಲರ…

ಇತ್ತೀಚಿನ ಸುದ್ದಿ

ಕೂಡ್ಲಿಗಿಯಲ್ಲಿ ಸರ್ವಂ ಕೃಷ್ಣಮಯ: ಮಕ್ಕಳಿಗೆ ವಾಸುದೇವನ ವೇಷ ತೊಡಿಸಿ ಸಂಭ್ರಮಿಸಿದ ಭಕ್ತ ಜನ

01/09/2021, 16:22

ವಿ.ಜಿ.ವೃಷಭೇಂದ್ರ ಕೂಡ್ಲಿಗಿ ವಿಜಯನಗರ

info.reporterkarnataka@gmail.com

ಕೂಡ್ಲಿಗಿ ತಾಲೂಕಿನ ಬಹುತೇಕ ಕಡೆ ಕೃಷ್ಣ ದೇವನ ಪರ್ವ ಜರುಗಿದೆ.ಕೂಡ್ಲಿಗಿ ಪಟ್ಟಣದ ಶ್ರೀವೆಂಕಟೇಶ್ವರ ದೇವಸ್ಥಾನ ಮತ್ತು ಶ್ರೀಕೊತ್ತಲಾಂಜನೇಯ ದೇವಸ್ಥಾನ, ಬಂಡೇ ಬಸಾಪುರ ತಾಂಡದ ಶ್ರೀವಿಠಲದೇವರ ದೇವಸ್ಥಾನದಲ್ಲಿ, ಬೊಪ್ಪಲಾಪುರ ಗ್ರಾಮದಲ್ಲಿ ಶ್ರೀಕೃಷ್ಣ ನ ವಿಶೇಷ ಆರಾಧನೆ ಜರುಗಿತು.

ಭಕ್ತರು ಶ್ರೀಕೃಷ್ಣಲೀಲೆಗಳನ್ನು ಸಾರುವ ವೇಷಗಳನ್ನು ತಮ್ಮ ಮಕ್ಕಳಿಗೆ ತೊಡಿಸಿ ಕೃಷ್ಣನನ್ನು ಕಂಡು ನಲಿದರು. ಕೂಡ್ಲಿಗಿ ಪಟ್ಟಣ ಸೇರಿದಂತೆ ತಾಲೂಕಿನ ವಿವಿಧ ದೇವಸ್ಥಾನಗಳಲ್ಲಿ ಶ್ರೀಕೃಷ್ಣ ದೇವನ ಆರಾಧನೆ ಭರ್ಜರಿ ನಡೆಯಿತು.

ಹಿರಿಯರು, ದೇವಸ್ಥಾನದ ಕಾರ್ಯಕರ್ತರು, ಮಹಿಳೆಯರು ಹಾಗೂ ಮಕ್ಕಳು ಕಾರ್ಯಕ್ರಮಗಳಲ್ಲಿ ಭಾಗಿಯಾಗಿದ್ದರು.
oo
ಹಲವು ಗ್ರಾಮಗಳಲ್ಲಿನ ವಿಠಲ ದೇವಸ್ಥಾನ  ಹಾಗೂ ವಿಷ್ಣು ದೇವಸ್ಥಾನಗಳಲ್ಲಿ ಶ್ರೀಕೃಷ್ಣ ದೇವರ ಭಜನೆ ಆರಾಧನೆ ವಿಶೇಷ ಪೂಜಾ ಕೈಂಕರ್ಯಗಳನ್ನು ಜರುಗಿಸಲಾಯಿತು. ಈ ಮೂಲಕ ಕೂಡ್ಲಿಗಿ ಪಟ್ಟಣ ಸೇರಿದಂತೆ ತಾಲೂಕಿನೆಲ್ಲೆಡೆಗಳಲ್ಲಿ,ಶ್ರೀಕೃಷ್ಣ ದೇವರ ದರುಷನ ಭಾಗ್ಯ ಅಸ್ತಿಕರಿಗೆ ದೊರಕಿ ಜಗವೆಲ್ಲಾ ಕೃಷ್ಣಮಯ ಎಂಬತಿತ್ತು.

ಇತ್ತೀಚಿನ ಸುದ್ದಿ

ಜಾಹೀರಾತು