1:10 PM Friday13 - February 2026
ಬ್ರೇಕಿಂಗ್ ನ್ಯೂಸ್
ಒಟಿಪಿ ಸೋರಿಕೆ: ವಂಚನೆ ತಡೆಗಟ್ಟಲು ಏರ್‌ ಟೆಲ್‌ ನಿಂದ ಹೊಸ ಎಐ ಚಾಲಿತ… ಮಾಜಿ ಪ್ರಧಾನಿ ಎಚ್ಡಿಡಿ ಮಧ್ಯಪ್ರವೇಶ: ಕಾಫಿ ತೋಟಗಳ ಆನ್-ಲೈನ್ ಹರಾಜು ತಕ್ಷಣವೇ ಸ್ಥತಿತಗೊಳಿಸುವಂತೆ… ಕಾಲವೇ ಉತ್ತರ ಕೊಡುತ್ತೆ: ಸೋನಿಯಾ, ರಾಹುಲ್, ಪ್ರಿಯಾಂಕ ಭೇಟಿ ಬಳಿಕ ಡಿಸಿಎಂ ಡಿಕೆಶಿ… ಶಿವಣ್ಣನ ಶಿವಭಕ್ತಿ: ಶಿವರಾತ್ರಿಯ ಅಂಗವಾಗಿ 37 ವರ್ಷಗಳಿಂದ ಬೆಂಗಳೂರಿನಿಂದ ಧರ್ಮಸ್ಥಳಕ್ಕೆ ಪಾದಯಾತ್ರೆ! ದಕ್ಷಿಣ ಕೊಡಗಿನಲ್ಲಿ ಆತಂಕದ ಸೃಷ್ಟಿಸಿದ್ದ ವ್ಯಾಘ್ರ ಕೊನೆಗೂ ಸೆರೆ: ಬಲೆಗೆ ಬಿದ್ದ ಗಂಡು… ತೇಜಸ್ವಿ ಸೂರ್ಯ ಬಂಧನ ಮಾಡಿಸಿದ ಸಿದ್ದರಾಮಯ್ಯ ಪುಕ್ಕಲ ಸಿಎಂ: ಪ್ರತಾಪ್‌ ಸಿಂಹ ಕಿಡಿ ಚಿಕ್ಕಮಗಳೂರು: ಕಾಫಿ ತೋಟದ ಇಬ್ಬರು ಮಹಿಳಾ ಕಾರ್ಮಿಕರ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ… ಎಚ್ ಡಿ ಕೋಟೆ | ಕಂಚಮಳ್ಳಿ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಮೇಲೆ ಭಾರೀ… Kodagu | ಕುಶಾಲನಗರ: ರಸ್ತೆಯಲ್ಲೇ ಧಗಧಗನೆ ಹೊತ್ತಿ ಉರಿದ ಕ್ರೇಟಾ ಕಾರು; ಅದೃಷ್ಟವಶಾತ್… ಇ-ಸ್ವತ್ತು ತಂತ್ರಾಂಶದಲ್ಲಿ ಬದಲಾವಣೆ ಮೂಲಕ ಸಾರ್ವಜನಿಕರಿಗೆ ತ್ವರಿತ ಸೇವೆಗೆ ಕ್ರಮ: ಗ್ರಾಮೀಣಾಭಿವೃದ್ಧಿ ಸಚಿವ…

ಇತ್ತೀಚಿನ ಸುದ್ದಿ

ಕೂಡ್ಲಿಗಿ ಬಡೇಲಡಕು ಕಟ್ಟಡ ಕಾರ್ಮಿಕರ ಎಐಟಿಯುಸಿ ಗ್ರಾಮ ಘಟಕ ಉದ್ಘಾಟನೆ

26/10/2021, 13:15

ವಿ.ಜಿ.ವೃಷಭೇಂದ್ರ ಕೂಡ್ಲಿಗಿ ವಿಜಯನಗರ

info.reporterkarnataka@gmail.com

ಜಿಲ್ಲೆಯ ಕೂಡ್ಲಿಗಿ ತಾಲೂಕಿನ ಬಡೇಲಡಕು ಗ್ರಾಮದಲ್ಲಿ ಕರ್ನಾಟಕ ರಾಜ್ಯ ಕಟ್ಟಡ ಕಟ್ಟುವ ಮತ್ತು ಕಲ್ಲು ಒಡೆಯುವ ಕ್ವಾರಿ ಕಾರ್ಮಿಕರ ಸಂಘ ಎಐಟಿಯುಸಿ ಗ್ರಾಮ ಘಟಕವನ್ನು ಕೂಡ್ಲಿಗಿ ತಾಲೂಕು ಅಧ್ಯಕ್ಷ ಯು. ಪೆನ್ನಪ್ಪ ಹಾಗೂ ಗ್ರಾಮದ ಹಿರಿಯರಾದ ನರಸಿಂಹಪ್ಪ ಉದ್ಘಾಟಿಸಿದರು.

ಕಾರ್ಮಿಕ ಮುಖಂಡ ಎಚ್. ವೀರಣ್ಣ ಮಾತನಾಡಿ ಮಂಡಳಿಯಲ್ಲಿ ಸಾವಿರಾರು ಕೋಟಿ ಅನುದಾನ ಇದ್ದು,ಆದ್ದರಿಂದ ರಾಜ್ಯದ ಕಾರ್ಮಿಕರಿಗೆ ಅನೇಕ ಸೌಲಭ್ಯಗಳು ನೀಡಲಿದ್ದು, ನಿಜವಾದ ಕಾರ್ಮಿಕರು ಸೌಲಭ್ಯಗಳನ್ನು ಪಡೆದುಕೊಳ್ಳಬೇಕಿದೆ.  ನಿಗದಿತ ಸಮಯದಲ್ಲಿ ಕಾರ್ಮಿಕರು ತಮ್ಮ ಕಾರ್ಡ್ ಗಳನ್ನು ನವೀಕರಣ ಮಾಡಿಸಿಕೊಂಡು ತಮ್ಮ ಕುಟುಂಬಕ್ಕೆ ಮಕ್ಕಳ ವಿದ್ಯಾಭ್ಯಾಸಕ್ಕೆ ಇನ್ನೂ ಅನೇಕ ಸೌಲಭ್ಯಗಳನ್ನು ಪಡೆದುಕೊಳ್ಳಬೇಕೆಂದರು. ಈಗಾಗಲೇ ಮಂಡಳಿ ಕಳಪೆ ಕಾರ್ಡ್ ಗಳನ್ನು ತಡೆಯಲು ಹೊಸ ನೀತಿಯನ್ನು ಜಾರಿಗೊಳಿಸಿದ್ದು, ಇದೇ ಸಂದರ್ಭದಲ್ಲಿ ತಾಲೂಕು ಸಂಚಾಲಕರಾದ ಡಿ.ಅಂತೇಶ್, ಗ್ರಾಮದ ಸಮಸ್ಥ ಕಟ್ಟಡ ಕಾರ್ಮಿಕರು ಹಾಗೂ ಗ್ರಾಮದ ಹಿರಿಯರು ಉಪಸ್ಥಿತರಿದ್ದರು. ಇದೇ ಸಂದರ್ಭದಲ್ಲಿ ಘಟಕದ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು,ಅಧ್ಯಕ್ಷರಾಗಿ ಸಿಎಂ ಮಲ್ಲೇಶ್ ಉಪಾಧ್ಯಕ್ಷರಾಗಿ ಕೆ. ಪ್ರಧಾನ ಕಾರ್ಯದರ್ಶಿ ಎರಿಸ್ವಾಮಿ, ಖಜಾಂಚಿ ಎಂ.ದುರ್ಗೇಶ, ಪ್ರಭುದೇವ್ ಸೇರಿದಂತೆ ಸದಸ್ಯರನ್ನೊಳಗೊಂಡ ಗ್ರಾಮ ಘಟಕ ಅಸ್ಥಿತ್ವಕ್ಕೆ ತರಲಾಯಿತು.

ಇತ್ತೀಚಿನ ಸುದ್ದಿ

ಜಾಹೀರಾತು