8:04 AM Monday1 - December 2025
ಬ್ರೇಕಿಂಗ್ ನ್ಯೂಸ್
ನಶಾಮುಕ್ತ, ದ್ವೇಷಮುಕ್ತ ಸಮಾಜ ನಿರ್ಮಿಸೋಣ: ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಕರೆ ಮಂಗಳೂರಿನ ಫುಡ್ ಡೆಲಿವರಿ ಬಾಯ್ ನಿಂದ ಸೋಮವಾರಪೇಟೆಯಲ್ಲಿ ಸರಗಳ್ಳತನ..! Kodagu | ನೇಣು ಬಿಗಿದು ಅಪ್ರಾಪ್ತ ವಯಸ್ಸಿನ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ Tarikere | ಚಿರತೆ ದಾಳಿಗೆ ಬಾಲಕಿ ಬಲಿಯಾದ ಘಟನೆ ಮಾಸುವ ಮುನ್ನವೇ ಮತ್ತೊಂದು… Kodagu | ಹುಣಸೂರು: ರೈತರ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಸೆರೆ; ನಿಟ್ಟುಸಿರು… Udupi | ನದಿ, ವೃಕ್ಷ ಸಂರಕ್ಷಣೆ ಸೇರಿದಂತೆ ನವ ಸಂಕಲ್ಪಗಳ ಪಾಲನೆಗೆ ಪ್ರಧಾನಿ… Udupi | ಕೃಷ್ಣನಗರಿಯಲ್ಲಿ ಪ್ರಧಾನಿ ಮೋದಿಗೆ ಬೆಳ್ಳಿ ಕಡೆಗೋಲು ಕೊಡುಗೆ Udupi | ‘ಜೈ ಶ್ರೀ ಕೃಷ್ಣ’ ಎಂದು ಕನ್ನಡದಲ್ಲೇ ಭಾಷಣ ಆರಂಭಿಸಿದ ಪ್ರಧಾನಿ… ಪ್ರಧಾನಿ ಮೋದಿ ಇಂದು ಉಡುಪಿಗೆ: ಶ್ರೀಕೃಷ್ಣ ಮಠದ ಲಕ್ಷ ಕಂಠ ಗೀತಾ ಪಾರಾಯಣದಲ್ಲಿ… ಉಡುಪಿಗೆ ಪ್ರಧಾನಿ ಭೇಟಿ: ಎಸ್‌ಪಿಜಿ ಜತೆಗೆ ಖಾಕಿ ಸರ್ಪಗಾವಲು: ನಿಗದಿತ ಸಮಯಕ್ಕೆ ಮುಂಚಿತವಾಗಿಯೇ…

ಇತ್ತೀಚಿನ ಸುದ್ದಿ

ಕೂಡ್ಲಿಗಿ ಬಡೇಲಡಕು ಕಟ್ಟಡ ಕಾರ್ಮಿಕರ ಎಐಟಿಯುಸಿ ಗ್ರಾಮ ಘಟಕ ಉದ್ಘಾಟನೆ

26/10/2021, 13:15

ವಿ.ಜಿ.ವೃಷಭೇಂದ್ರ ಕೂಡ್ಲಿಗಿ ವಿಜಯನಗರ

info.reporterkarnataka@gmail.com

ಜಿಲ್ಲೆಯ ಕೂಡ್ಲಿಗಿ ತಾಲೂಕಿನ ಬಡೇಲಡಕು ಗ್ರಾಮದಲ್ಲಿ ಕರ್ನಾಟಕ ರಾಜ್ಯ ಕಟ್ಟಡ ಕಟ್ಟುವ ಮತ್ತು ಕಲ್ಲು ಒಡೆಯುವ ಕ್ವಾರಿ ಕಾರ್ಮಿಕರ ಸಂಘ ಎಐಟಿಯುಸಿ ಗ್ರಾಮ ಘಟಕವನ್ನು ಕೂಡ್ಲಿಗಿ ತಾಲೂಕು ಅಧ್ಯಕ್ಷ ಯು. ಪೆನ್ನಪ್ಪ ಹಾಗೂ ಗ್ರಾಮದ ಹಿರಿಯರಾದ ನರಸಿಂಹಪ್ಪ ಉದ್ಘಾಟಿಸಿದರು.

ಕಾರ್ಮಿಕ ಮುಖಂಡ ಎಚ್. ವೀರಣ್ಣ ಮಾತನಾಡಿ ಮಂಡಳಿಯಲ್ಲಿ ಸಾವಿರಾರು ಕೋಟಿ ಅನುದಾನ ಇದ್ದು,ಆದ್ದರಿಂದ ರಾಜ್ಯದ ಕಾರ್ಮಿಕರಿಗೆ ಅನೇಕ ಸೌಲಭ್ಯಗಳು ನೀಡಲಿದ್ದು, ನಿಜವಾದ ಕಾರ್ಮಿಕರು ಸೌಲಭ್ಯಗಳನ್ನು ಪಡೆದುಕೊಳ್ಳಬೇಕಿದೆ.  ನಿಗದಿತ ಸಮಯದಲ್ಲಿ ಕಾರ್ಮಿಕರು ತಮ್ಮ ಕಾರ್ಡ್ ಗಳನ್ನು ನವೀಕರಣ ಮಾಡಿಸಿಕೊಂಡು ತಮ್ಮ ಕುಟುಂಬಕ್ಕೆ ಮಕ್ಕಳ ವಿದ್ಯಾಭ್ಯಾಸಕ್ಕೆ ಇನ್ನೂ ಅನೇಕ ಸೌಲಭ್ಯಗಳನ್ನು ಪಡೆದುಕೊಳ್ಳಬೇಕೆಂದರು. ಈಗಾಗಲೇ ಮಂಡಳಿ ಕಳಪೆ ಕಾರ್ಡ್ ಗಳನ್ನು ತಡೆಯಲು ಹೊಸ ನೀತಿಯನ್ನು ಜಾರಿಗೊಳಿಸಿದ್ದು, ಇದೇ ಸಂದರ್ಭದಲ್ಲಿ ತಾಲೂಕು ಸಂಚಾಲಕರಾದ ಡಿ.ಅಂತೇಶ್, ಗ್ರಾಮದ ಸಮಸ್ಥ ಕಟ್ಟಡ ಕಾರ್ಮಿಕರು ಹಾಗೂ ಗ್ರಾಮದ ಹಿರಿಯರು ಉಪಸ್ಥಿತರಿದ್ದರು. ಇದೇ ಸಂದರ್ಭದಲ್ಲಿ ಘಟಕದ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು,ಅಧ್ಯಕ್ಷರಾಗಿ ಸಿಎಂ ಮಲ್ಲೇಶ್ ಉಪಾಧ್ಯಕ್ಷರಾಗಿ ಕೆ. ಪ್ರಧಾನ ಕಾರ್ಯದರ್ಶಿ ಎರಿಸ್ವಾಮಿ, ಖಜಾಂಚಿ ಎಂ.ದುರ್ಗೇಶ, ಪ್ರಭುದೇವ್ ಸೇರಿದಂತೆ ಸದಸ್ಯರನ್ನೊಳಗೊಂಡ ಗ್ರಾಮ ಘಟಕ ಅಸ್ಥಿತ್ವಕ್ಕೆ ತರಲಾಯಿತು.

ಇತ್ತೀಚಿನ ಸುದ್ದಿ

ಜಾಹೀರಾತು