5:55 AM Sunday3 - May 2026
ಬ್ರೇಕಿಂಗ್ ನ್ಯೂಸ್
ಅಂಜನಾದ್ರಿ ದರ್ಶನಕ್ಕೆ ಹೊರಟಿದ್ದ ಭಕ್ತರ ವಾಹನದ ಟಯರ್ ಬ್ಲಾಸ್ಟ್: ಓರ್ವ ಸಾವು, 7… ಶೃಂಗೇರಿ ವಿಧಾನಸಭಾ ಕ್ಷೇತ್ರ: ಮರು ಮತ ಎಣಿಕೆಯಲ್ಲೂ ಕಾಂಗ್ರೆಸ್ ಶಾಸಕ ಟಿ.ಡಿ. ರಾಜೇಗೌಡಗೆ… ರಾಜ್ಯದಲ್ಲಿರುವ ಹೊರ ರಾಜ್ಯ ನೋಂದಣಿ ವಾಹನಗಳಿಗೆ ಹೊಸ ತೆರಿಗೆ: ಸುಗ್ರೀವಾಜ್ಞೆ ಜಾರಿ ಕೃಷಿ ಅಧಿಕಾರಿಗಳ ದಾಳಿ: ಅಕ್ರಮ ಯೂರಿಯಾ ದಾಸ್ತಾನು ಪತ್ತೆ; 399 ಬ್ಯಾಗ್ ರಸಗೊಬ್ಬರ… ಜ್ಯುವೆಲ್ಲರಿ ಶಾಪ್ ಗೋಡೆ ಕೊರೆದು 1.20 ಕೋಟಿ ರೂಪಾಯಿ ಮೌಲ್ಯದ ಬೆಳ್ಳಿ ಆಭರಣ,… Mangaluru | ಪರಪ್ಪನ ಅಗ್ರಹಾರ ಜೈಲ್ ನಲ್ಲಿ ಕೈದಿಯಿಂದ ಮೊಬೈಲ್ ನಲ್ಲೇ ಪತ್ನಿಯ… ಮಗಳ ಮದುವೆ ಸಾಲ ತೀರಿಸಲು ಅಳಿಯನ ಮನೆಗೆ ಅತ್ತೆ ಕನ್ನ: 110 ಗ್ರಾಂ… ಹೇಮಾವತಿ ನಾಲೆಗೆ ಉರುಳಿ ಬಿದ್ದ ಕಾರು: ತಾಯಿ- ಮಗು ಸಾವು; ಧರ್ಮಸ್ಥಳದಿಂದ ದೇವನಹಳ್ಳಿಗೆ… ಧಾರವಾಡದಲ್ಲಿ ಟಿಬೇಟಿಯನ್ ಬಿಕ್ಕು ಹತ್ಯೆ: ಬೇರೆ ಕಡೆ ಕೊಲೆ ಮಾಡಿ ಎಸೆದಿರುವ ಶಂಕೆ ಉದ್ಯೋಗ ಖಾತ್ರಿ ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ವ್ಯಕ್ತಿ ಸಾವು: ಬಿಸಿಲಿನ ತಾಪಮಾನಕ್ಕೆ…

ಇತ್ತೀಚಿನ ಸುದ್ದಿ

ಕೂಡ್ಲಿಗಿ ಸಾರ್ವಜನಿಕ ಆಸ್ಪತ್ರೆಗೆ ಆರೋಗ್ಯ ಇಲಾಖೆಯ ಜಂಟಿ ನಿರ್ದೇಶಕ ಭೇಟಿ: ಕಡತಗಳ ಪರಿಶೀಲನೆ

26/01/2024, 20:42

ವಿ.ಜಿ.ವೃಷಭೇಂದ್ರ ಕೂಡ್ಲಿಗಿ ವಿಜಯನಗರ

info.reporterkarnataka@gmail.com

ವಿಜಯನಗರ ಜಿಲ್ಲೆ ಕೂಡ್ಲಿಗಿ ಆರೋಗ್ಯ ಇಲಾಖಾ ಜಂಟಿ ನಿರ್ಧೇಶಕರು ಪಟ್ಟಣದ ಸಾರ್ವಜನಿಕ ಆಸ್ಪತ್ರೆಗೆ ದಿಢೀರ್ ಭೇಟಿ ನೀಡಿ ಪರಿಶೀಲಿಸಿದರು.

ಜಂಟಿ ನಿರ್ದೇಶಕರಾದ ಡಾ. ಶಂಕ್ರಪ್ಪ ಅವರು, ತಾಲೂಕು ವೈದ್ಯಾಧಿಕಾರಿಗಳ ಸಮ್ಮುಖದಲ್ಲಿ, ಆಸ್ಪತ್ರೆಯನ್ನು ಕೂಲಂಕುಷವಾಗಿ ಪರಿಶೀಲನೆ ನಡೆಸಿದರು. ಕಡತ ಹಾಗೂ ದಾಖಲುಗಳನ್ನು ಪರಿವೀಕ್ಷಿಸಿದರು. ಅವರು ಹೆರಿಗೆ ಕೊಠಡಿಗೆ ಸಂಬಂಧಪಟ್ಟಂತೆ ಹಾಗೂ ಮಕ್ಕಳ ಕೊಠಡಿಗೆ ಸಂಬಂಧಪಟ್ಟಂತೆ ಮತ್ತು ಹೊರ ರೋಗಿಗಳ ಕೊಠಡಿಗಳನ್ನು ಹಾಗೂ ಸಲಕರಣೆಗಳ ಸ್ಥಿತಿ ಗತಿಯನ್ನು ವೀಕ್ಷಿಸಿದರು. ತಾಲೂಕು ವೈದ್ಯಾಧಿಕಾರಿ ಡಾ.ಪ್ರದೀಪ್ ಕುಮಾರ್, ಆಸ್ಪತ್ರೆ ಆಡಳಿತಾಧಿಕಾರಿ ಡಾ. ಮಧು, ಸ್ತ್ರೀರೋಗ ತಜ್ಞರಾದ ಜೆ.ಸಿ.ನಾಗರಾಜ್, ಮಕ್ಕಳ ತಜ್ಞರಾದ ಡಾ. ನಿರಂಜನ ಸೇರಿದಂತೆ ಆಸ್ಪತ್ರೆಯ ಇತರೆ ಅಧಿಕಾರಿಗಳು ಹಾಗೂ ಸಿಬ್ಬಂದಿ ವರ್ಗದವರು ಹಾಜರಿದ್ದರು. ಸಮಾಜ ಸೇವಕರಾದ ಕೆ.ಕೆ.ಹಟ್ಟಿ ರಾಜು,ಸುರೇಂದ್ರ, ಕಾಶಿನಾಥ ಮತ್ತಿತರರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು