4:57 AM Monday22 - September 2025
ಬ್ರೇಕಿಂಗ್ ನ್ಯೂಸ್
ಮುಂದಿನ ಒಲಂಪಿಕ್ಸ್ ಪದಕ ವಿಜೇತರಿಗೆ ಸರ್ಕಾರದಿಂದ 6 ಕೋಟಿ ನಗದು ಬಹುಮಾನ: ಮುಖ್ಯಮಂತ್ರಿ… ಜಿಎಸ್ ಟಿ ಜಾರಿ ಮಾಡಿದ್ದೂ ಮೋದಿ, ಜಿಎಸ್ ಟಿ ಹೆಚ್ಚೆಚ್ಚು ವಿಧಿಸಿದ್ದೂ ಮೋದಿಯವರೇ,… ಅಂತಾರಾಷ್ಟ್ರೀಯ ಬಾಲ್ಯ ಕ್ಯಾನ್ಸರ್ ಜಾಗೃತಿ: ಬೆಂಗಳೂರು ಇಸ್ಕಾನ್ ದೇವಾಲಯಕ್ಕೆ ಚಿನ್ನದ ಬಣ್ಣದ ಬೆಳಕು ನವೆಂಬರ್ ನಿಂದ ಮಾಹಿತಿ ಹಕ್ಕು ಅದಾಲತ್: ಮಾಹಿತಿ ಹಕ್ಕು ಅರ್ಜಿಗಳನ್ನು ಶೂನ್ಯಕ್ಕಿಳಿಸಲು ಗುರಿ ಪಿಡಿಒ ಜೇಷ್ಠಾತಾ ಪಟ್ಟಿ ನ್ಯಾಯಸಮ್ಮತವಾಗಿ ಅಂತಿಮಗೊಳಿಸಲು ಸೂಕ್ತ ಕ್ರಮ: ಸಚಿವ ಪ್ರಿಯಾಂಕ್‌ ಖರ್ಗೆ ಮಂಗಳೂರಿನಲ್ಲಿ ಧರ್ಮದ ಹೆಸರಲ್ಲಿ ಜೈಲಿಗೆ ಹೋದವರು, ಕೊಲೆ ಆದವರೆಲ್ಲಾ ಹಿಂದುಳಿದವರೇ ಆಗಿದ್ದಾರೆ: ಸಿಎಂ… ವಿರಾಜಪೇಟೆ ಆರೆಂಜ್ ಸ್ಪಾ -ಬ್ಯೂಟಿ ಪಾರ್ಲರ್ ದಾಳಿ ಪ್ರಕರಣ: ನಾಲ್ವರು ಪ್ರಮುಖ ಆರೋಪಿಗಳ… Kodagu | ಕುಶಾಲನಗರ: ಕಾವೇರಿ ನದಿಯಲ್ಲಿ ಮುಳುಗಿ ಕಾಡಾನೆ ದಾರುಣ ಸಾವು ಮಡಿಕೇರಿ ನಗರಸಭೆಯ ಮೇಲೆ ಲೋಕಾಯುಕ್ತ ದಿಢೀರ್ ದಾಳಿ: ಸಾರ್ವಜನಿಕರ ದೂರಿಗೆ ಸ್ಪಂದನೆ ಮೈಸೂರು ದಸರಾ ಉದ್ಘಾಟನೆಗೆ ಬಾನು ಮುಸ್ತಾಕ್: ತಡೆ ಕೋರಿ ಸಲ್ಲಿಸಿದ ಅರ್ಜಿ ಸುಪ್ರೀಂಕೋರ್ಟ್…

ಇತ್ತೀಚಿನ ಸುದ್ದಿ

ಕುದ್ರೋಳಿ ದೇಗುಲದಲ್ಲಿ 900 ಕೆಜಿ ಧಾನ್ಯ ಬಳಸಿ ರಚಿಸಿದ ತ್ರಿವರ್ಣ ಧ್ವಜಕ್ಕೆ ಮುಖ್ಯಮಂತ್ರಿ ಮೆಚ್ಚುಗೆ: ಜಿಲ್ಲಾಧಿಕಾರಿ ಶ್ಲಾಘನೆ

15/08/2022, 23:15

ಚಿತ್ರ :ಅನುಷ್ ಪಂಡಿತ್ ಮಂಗಳೂರು
ಮಂಗಳೂರು(reporterkarnataka.com): ನಗರದ ಕುದ್ರೋಳಿಯ ಶ್ರೀ ಗೋಕರ್ಣಾನಾಥ ಕ್ಷೇತ್ರದ ಮುಂಭಾಗ ಗುರುಬೆಳದಿಂಗಳು ಸಮಿತಿಯ 30 ಸದಸ್ಯರು ಸೇರಿ 900 ಕೆಜಿ ಧಾನ್ಯಗಳನ್ನು ಬಳಸಿ ರಚಿಸಿದ ತ್ರಿವರ್ಣ ಧ್ವಜದ ಕುರಿತು ಸೋಮವಾರ ದೇಗುಲಕ್ಕೆ ಭೇಟಿ ನೀಡಿದ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ಮೆಚ್ಚುಗೆ ವ್ಯಕ್ತಪಡಿಸಿದರು.


ಗುರುಬೆಳದಿಂಗಳು ಸಮಿತಿ ಹಾಗು ದೇಗಲದ ಆಡಳಿತ ಸಮಿತಿಯ ಸದಸ್ಯರ ವಿನೂತನವಾದ ಪ್ರಯತ್ನಕ್ಕೆ ಜಿಲ್ಲಾಧಿಕಾರಿ ಸಂತಸಪಟ್ಟರು.


ಇದೇ ವೇಳೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ  ಅವರು ಧಾನ್ಯಗಳಿಂದ ರಚಿಸಲ್ಪಟ್ಟ ಚಿತ್ರಾಕೃತಿ ಕಂಡು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ ಎಂದರು.

ಈ ಬಾರಿ 5 ಲಕ್ಷಕ್ಕಿಂತ ಹೆಚ್ಚು ಜನ ತಮ್ಮ ಮನೆ-ಕಚೇರಿಗಳಲ್ಲಿ ತ್ರಿವರ್ಣ ಧ್ವಜ ಹಾರಿಸಿ ದಕ್ಷಿಣ ಕನ್ನಡ ಜನತೆ ದೇಶಾಭಿಮಾನವನ್ನು ತೋರಿಸಿದ್ದಾರೆ. ಎಲ್ಲರಿಗೂ 75ನೇ ಅಮೃತ ಮಹೋತ್ಸವದ ಸ್ವಾತಂತ್ರ್ಯೋತ್ಸವಕ್ಕೆ ಶುಭಾಶಯಗಳು ಎಂದು ಅವರು ನುಡಿದರು.

ಜಿಲ್ಲಾಧಿಕಾರಿಯವರು ಸಾಮಾನ್ಯರಂತೆ  ದೇವರ ದರ್ಶನ ಪಡೆದಿರುವುದು ವಿಶೇಷವಾಗಿತ್ತು.


ಈ ವೇಳೆ ಗುರುಬೆಳದಿಂಗಳು ಫೌಂಡೇಶನ್‌ನ ಅಧ್ಯಕ್ಷ ಹಾಗೂ ಕ್ಷೇತ್ರದ ಕೋಶಾಧಿಕಾರಿ ಆರ್.ಪದ್ಮರಾಜ್‌ ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು