1:17 AM Tuesday29 - July 2025
ಬ್ರೇಕಿಂಗ್ ನ್ಯೂಸ್
Bangaluru | ಪತ್ರಿಕಾ ಸಂಪಾದಕರ ಕೈಕಟ್ಟಿ ಹಾಕಲಾಗುತ್ತಿದೆ: ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ… Mandya | ಒಂದೇ ದಿನ 1146 ಕೋಟಿ ವೆಚ್ಚದ ಅಭಿವೃದ್ಧಿ ಕಾರ್ಯಗಳಿಗೆ ಚಾಲನೆ… ಬಾಳೆಬೈಲು – ಕುರುವಳ್ಳಿ ಬೈಪಾಸ್ ರಸ್ತೆಯಲ್ಲಿ ಕುಸಿಯುತ್ತಿರುವ ಗುಡ್ಡ: ಬ್ಯಾರಿಕೆಡ್ ಹಾಕಿರುವ ಪೊಲೀಸರು Shivamogga | ತೀರ್ಥಹಳ್ಳಿ: ಬೆಜ್ಜವಳ್ಳಿ ಸಮೀಪ ಸ್ಕೂಟಿಗೆ ಹಿಂಭಾಗದಿಂದ ಬಸ್ ಡಿಕ್ಕಿ; ಸವಾರ… ಮಡಿಕೇರಿ -ಮಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ತಡರಾತ್ರಿ ಒಂಟಿ ಸಲಗ ಪ್ರತ್ಯಕ್ಷ: ಪ್ರಯಾಣಿಕರಲ್ಲಿ ಭೀತಿ ಗದಗ -ಬಂಕಾಪುರ ರಾಷ್ಟ್ರೀಯ ಹೆದ್ದಾರಿಗೆ ಗಡ್ಕರಿ ಭರವಸೆ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ Koppa | ಬೃಹತ್ ಮರ ರಸ್ತೆಗೆ ಪತನ: ಜಯಪುರ- ಬಸರೀಕಟ್ಟೆ,- ಕಳಸ- ಹೊರನಾಡು… ಕೊಡಗಿನಲ್ಲಿ ಭಾರೀ ಮಳೆ: ತುಂಬಿ ತುಳುಕುತ್ತಿರುವ ಕಾವೇರಿ, ಕನ್ನಿಕೆ, ಸುಜ್ಜ್ಯತಿ ನದಿಗಳು; ತ್ರಿವೇಣಿ… ಕೊಡಗು: ಮಳೆ ಹಾನಿ ಪ್ರದೇಶಗಳಿಗೆ ಕಂದಾಯ ಸಚಿವ ಕೃಷ್ಣಬೈರೇ ಗೌಡ ಭೇಟಿ; ಪರಿಹಾರ… BJP Leader | ಚುನಾವಣಾ ಉದ್ದೇಶದಿಂದ ಬೆಂಗಳೂರು ಒಡೆದ ಕಾಂಗ್ರೆಸ್‌: ಪ್ರತಿಪಕ್ಷ ನಾಯಕ…

ಇತ್ತೀಚಿನ ಸುದ್ದಿ

ಕುದ್ರೋಳಿ ಗೋಕರ್ಣನಾಥ ಕ್ಷೇತ್ರಕ್ಕೆ ಸಂತ ಮದರ್ ತೆರೇಸಾ ವಿಚಾರ ವೇದಿಕೆಯಿಂದ ಸೌಹಾರ್ದ ಭೇಟಿ

21/10/2023, 20:37

ಮಂಗಳೂರು(reporterkarnataka.com):ಜಗತ್ಪ್ರಸಿದ್ಧ ಮಂಗಳೂರು ದಸರಾ ನಡೆಯುವ ಸೌಹಾರ್ದ ತಾಣ ಕುದ್ರೋಳಿ ಕ್ಷೇತ್ರಕ್ಕೆ ಸಂತ ಮದರ್ ತೆರೇಸಾ ವಿಚಾರ ವೇದಿಕೆಯ ಅಧ್ಯಕ್ಷ ರೋಯ್ ಕ್ಯಾಸ್ಟಲಿನೋ ಅವರು ವೇದಿಕೆಯ ಇತರ ಸದಸ್ಯರೊಂದಿಗೆ ಸೌಹಾರ್ದ ಭೇಟಿ ನೀಡಿ ಕ್ಷೇತ್ರದಲ್ಲಿ ನಡೆಯುತ್ತಿರುವ ಪೂಜೆ ಪುರಸ್ಕಾರ ಹಾಗೂ ಕಾರ್ಯಕ್ರಮಗಳನ್ನು ವೀಕ್ಷಿಸಿದರು.

ಒಂದೇ ಜಾತಿ ಒಂದೇ ಮತ ಒಂದೇ ದೇವರು ಎಂಬ ವಿಶ್ವ ಮಾನವ ಸಂದೇಶ ನೀಡಿದ ಬ್ರಹ್ಮಶ್ರೀ ನಾರಾಯಣ ಗುರುಗಳ ದಿವ್ಯ ಹಸ್ತದಿಂದ ಪ್ರತಿಷ್ಠಾಪನೆಗೊಂಡ ಶ್ರೀ ಗೋಕರ್ಣಾನಾಥ ಕ್ಷೇತ್ರವು ಸರ್ವ ಧರ್ಮದ ಜನತೆಯ ಪ್ರೀತಿ ವಿಶ್ವಾಸಗಳಿಸುವ ಮೂಲಕ ಸೌಹಾರ್ದತೆಯ ತಾಣವಾಗಿ ಜಗತ್ಪಸಿದ್ದಗೊಂಡಿದೆ. ಮಾತ್ರವಲ್ಲದೆ ನಾಡ ಹಬ್ಬವಾದ ದಸರಾದ ಇಲ್ಲಿನ ವೈಭವವು ಎಲ್ಲರ ಕಣ್ಮಣ ಸೆಳೆಯುತ್ತಿದೆ. ಮಂಗಳೂರು ದಸರಾ ಇಂದು ಜಾಗತಿಕ ಮನ್ನಣೆ ಪಡೆದಿದ್ದು, ಇಲ್ಲಿನ ದಸರಾ ಸಂಭ್ರಮದಲ್ಲಿ ದೇಶ ವಿದೇಶಗಳಿಂದ ಜನತೆ ಭಾಗವಹಿಸುವ ಮೂಲಕ ಕೂಡಿ ಬಾಳುವ ಸಂಸ್ಕ್ರತಿಯ ಪ್ರತೀಕವಾಗಿದೆ ಎಂದು ವೇದಿಕೆಯ ಅಧ್ಯಕ್ಷ ರೋಯ್ ಕ್ಯಾಸ್ಟಲಿನೋ ಅವರು ಈ ಸಂದರ್ಭದಲ್ಲಿ ನುಡಿದರು.
ಈ ಸಂದರ್ಭದಲ್ಲಿ ಕ್ಷೇತ್ರಾಡಳಿತ ಮಂಡಳಿಯ ಪ್ರಧಾನ ಕಾರ್ಯದರ್ಶಿ ಮಾಧವ ಸುವರ್ಣ, ಕ್ಷೇತ್ರಾಡಳಿತ ಮಂಡಳಿ ಸದಸ್ಯರಾದ ರವಿಶಂಕರ್ ಮಿಜಾರ್,ಸಂತ ಮದರ್ ತೆರೇಸಾ ವಿಚಾರ ವೇದಿಕೆಯ ಪ್ರಮುಖರಾದ ಸುನಿಲ್ ಕುಮಾರ್ ಬಜಾಲ್, ಮಂಜುಳಾ ನಾಯಕ್,ಅಶ್ರಫ್ ಕೆ, ಡೋಲ್ಫಿ ಡಿಸೋಜ, ಮಹೇಶ್ ನಾಯಕ್, ಮರ್ಲಿನ್ ರೇಗೋ, ಫ್ಲೇವಿ ಕ್ರಾಸ್ತಾ,ಡಯಾನ ಡಿಸೋಜ,ಫ್ಲೋರಿನ್ ಡಿಸೋಜ, ಸಂಜನಾ ಛಲವಾದಿ,ಸಮರ್ಥ್ ಭಟ್,ಸಿಲ್ವಿಯಾ ಸಿಕ್ವೇರಾ ಮುಂತಾದವರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು