1:26 AM Saturday2 - May 2026
ಬ್ರೇಕಿಂಗ್ ನ್ಯೂಸ್
ಅಂಜನಾದ್ರಿ ದರ್ಶನಕ್ಕೆ ಹೊರಟಿದ್ದ ಭಕ್ತರ ವಾಹನದ ಟಯರ್ ಬ್ಲಾಸ್ಟ್: ಓರ್ವ ಸಾವು, 7… ಶೃಂಗೇರಿ ವಿಧಾನಸಭಾ ಕ್ಷೇತ್ರ: ಮರು ಮತ ಎಣಿಕೆಯಲ್ಲೂ ಕಾಂಗ್ರೆಸ್ ಶಾಸಕ ಟಿ.ಡಿ. ರಾಜೇಗೌಡಗೆ… ರಾಜ್ಯದಲ್ಲಿರುವ ಹೊರ ರಾಜ್ಯ ನೋಂದಣಿ ವಾಹನಗಳಿಗೆ ಹೊಸ ತೆರಿಗೆ: ಸುಗ್ರೀವಾಜ್ಞೆ ಜಾರಿ ಕೃಷಿ ಅಧಿಕಾರಿಗಳ ದಾಳಿ: ಅಕ್ರಮ ಯೂರಿಯಾ ದಾಸ್ತಾನು ಪತ್ತೆ; 399 ಬ್ಯಾಗ್ ರಸಗೊಬ್ಬರ… ಜ್ಯುವೆಲ್ಲರಿ ಶಾಪ್ ಗೋಡೆ ಕೊರೆದು 1.20 ಕೋಟಿ ರೂಪಾಯಿ ಮೌಲ್ಯದ ಬೆಳ್ಳಿ ಆಭರಣ,… Mangaluru | ಪರಪ್ಪನ ಅಗ್ರಹಾರ ಜೈಲ್ ನಲ್ಲಿ ಕೈದಿಯಿಂದ ಮೊಬೈಲ್ ನಲ್ಲೇ ಪತ್ನಿಯ… ಮಗಳ ಮದುವೆ ಸಾಲ ತೀರಿಸಲು ಅಳಿಯನ ಮನೆಗೆ ಅತ್ತೆ ಕನ್ನ: 110 ಗ್ರಾಂ… ಹೇಮಾವತಿ ನಾಲೆಗೆ ಉರುಳಿ ಬಿದ್ದ ಕಾರು: ತಾಯಿ- ಮಗು ಸಾವು; ಧರ್ಮಸ್ಥಳದಿಂದ ದೇವನಹಳ್ಳಿಗೆ… ಧಾರವಾಡದಲ್ಲಿ ಟಿಬೇಟಿಯನ್ ಬಿಕ್ಕು ಹತ್ಯೆ: ಬೇರೆ ಕಡೆ ಕೊಲೆ ಮಾಡಿ ಎಸೆದಿರುವ ಶಂಕೆ ಉದ್ಯೋಗ ಖಾತ್ರಿ ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ವ್ಯಕ್ತಿ ಸಾವು: ಬಿಸಿಲಿನ ತಾಪಮಾನಕ್ಕೆ…

ಇತ್ತೀಚಿನ ಸುದ್ದಿ

ಕುದ್ರೋಳಿ ಗೋಕರ್ಣನಾಥ ಕ್ಷೇತ್ರಕ್ಕೆ ಸಂತ ಮದರ್ ತೆರೇಸಾ ವಿಚಾರ ವೇದಿಕೆಯಿಂದ ಸೌಹಾರ್ದ ಭೇಟಿ

21/10/2023, 20:37

ಮಂಗಳೂರು(reporterkarnataka.com):ಜಗತ್ಪ್ರಸಿದ್ಧ ಮಂಗಳೂರು ದಸರಾ ನಡೆಯುವ ಸೌಹಾರ್ದ ತಾಣ ಕುದ್ರೋಳಿ ಕ್ಷೇತ್ರಕ್ಕೆ ಸಂತ ಮದರ್ ತೆರೇಸಾ ವಿಚಾರ ವೇದಿಕೆಯ ಅಧ್ಯಕ್ಷ ರೋಯ್ ಕ್ಯಾಸ್ಟಲಿನೋ ಅವರು ವೇದಿಕೆಯ ಇತರ ಸದಸ್ಯರೊಂದಿಗೆ ಸೌಹಾರ್ದ ಭೇಟಿ ನೀಡಿ ಕ್ಷೇತ್ರದಲ್ಲಿ ನಡೆಯುತ್ತಿರುವ ಪೂಜೆ ಪುರಸ್ಕಾರ ಹಾಗೂ ಕಾರ್ಯಕ್ರಮಗಳನ್ನು ವೀಕ್ಷಿಸಿದರು.

ಒಂದೇ ಜಾತಿ ಒಂದೇ ಮತ ಒಂದೇ ದೇವರು ಎಂಬ ವಿಶ್ವ ಮಾನವ ಸಂದೇಶ ನೀಡಿದ ಬ್ರಹ್ಮಶ್ರೀ ನಾರಾಯಣ ಗುರುಗಳ ದಿವ್ಯ ಹಸ್ತದಿಂದ ಪ್ರತಿಷ್ಠಾಪನೆಗೊಂಡ ಶ್ರೀ ಗೋಕರ್ಣಾನಾಥ ಕ್ಷೇತ್ರವು ಸರ್ವ ಧರ್ಮದ ಜನತೆಯ ಪ್ರೀತಿ ವಿಶ್ವಾಸಗಳಿಸುವ ಮೂಲಕ ಸೌಹಾರ್ದತೆಯ ತಾಣವಾಗಿ ಜಗತ್ಪಸಿದ್ದಗೊಂಡಿದೆ. ಮಾತ್ರವಲ್ಲದೆ ನಾಡ ಹಬ್ಬವಾದ ದಸರಾದ ಇಲ್ಲಿನ ವೈಭವವು ಎಲ್ಲರ ಕಣ್ಮಣ ಸೆಳೆಯುತ್ತಿದೆ. ಮಂಗಳೂರು ದಸರಾ ಇಂದು ಜಾಗತಿಕ ಮನ್ನಣೆ ಪಡೆದಿದ್ದು, ಇಲ್ಲಿನ ದಸರಾ ಸಂಭ್ರಮದಲ್ಲಿ ದೇಶ ವಿದೇಶಗಳಿಂದ ಜನತೆ ಭಾಗವಹಿಸುವ ಮೂಲಕ ಕೂಡಿ ಬಾಳುವ ಸಂಸ್ಕ್ರತಿಯ ಪ್ರತೀಕವಾಗಿದೆ ಎಂದು ವೇದಿಕೆಯ ಅಧ್ಯಕ್ಷ ರೋಯ್ ಕ್ಯಾಸ್ಟಲಿನೋ ಅವರು ಈ ಸಂದರ್ಭದಲ್ಲಿ ನುಡಿದರು.
ಈ ಸಂದರ್ಭದಲ್ಲಿ ಕ್ಷೇತ್ರಾಡಳಿತ ಮಂಡಳಿಯ ಪ್ರಧಾನ ಕಾರ್ಯದರ್ಶಿ ಮಾಧವ ಸುವರ್ಣ, ಕ್ಷೇತ್ರಾಡಳಿತ ಮಂಡಳಿ ಸದಸ್ಯರಾದ ರವಿಶಂಕರ್ ಮಿಜಾರ್,ಸಂತ ಮದರ್ ತೆರೇಸಾ ವಿಚಾರ ವೇದಿಕೆಯ ಪ್ರಮುಖರಾದ ಸುನಿಲ್ ಕುಮಾರ್ ಬಜಾಲ್, ಮಂಜುಳಾ ನಾಯಕ್,ಅಶ್ರಫ್ ಕೆ, ಡೋಲ್ಫಿ ಡಿಸೋಜ, ಮಹೇಶ್ ನಾಯಕ್, ಮರ್ಲಿನ್ ರೇಗೋ, ಫ್ಲೇವಿ ಕ್ರಾಸ್ತಾ,ಡಯಾನ ಡಿಸೋಜ,ಫ್ಲೋರಿನ್ ಡಿಸೋಜ, ಸಂಜನಾ ಛಲವಾದಿ,ಸಮರ್ಥ್ ಭಟ್,ಸಿಲ್ವಿಯಾ ಸಿಕ್ವೇರಾ ಮುಂತಾದವರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು